Homeಮುಖಪುಟಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

- Advertisement -
- Advertisement -

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. “ಶಾಂತಿಯುತ ಪ್ರತಿಭಟನೆಗಳನ್ನು ನರೇಂದ್ರ ಮೋದಿ ಸರ್ಕಾರ ಹತ್ತಿಕ್ಕುತ್ತಿದೆ” ಎಂದು ಆರೋಪಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, “ನರೇಂದ್ರ ಮೋದಿ ಸರ್ಕಾರದ ಮೂಲ ತತ್ವಗಳು ಅಸತ್ಯ ಮತ್ತು ಹಿಂಸೆ, ಅಹಿಂಸಾತ್ಮಕ ಉಪವಾಸ ಸತ್ಯಾಗ್ರಹದಲ್ಲಿದ್ದಾಗ ವಾಂಗ್‌ಚುಕ್ ಅವರನ್ನು ಅಲ್ಲಿಂದ ತೆರವುಗೊಳಿಸಲಾಗಿದೆ, ಇದು ತಪ್ಪು” ಎಂದು ಹೇಳಿದ್ದಾರೆ.

“ಪ್ರಶ್ನೆಪತ್ರಿಕೆ ಸೋರಿಕೆ, ಹೆಚ್ಚುತ್ತಿರುವ ಶಿಕ್ಷಣ ವೆಚ್ಚ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗಳು ದೇಶ ಎದುರಿಸುತ್ತಿರುವ ಅತ್ಯಂತ ಒತ್ತುವ ಸವಾಲುಗಳಲ್ಲಿ ಸೇರಿವೆ. ಇಂಥಹ ಬಲಪ್ರಯೋಗವು ದೇಶದ ವಿದ್ಯಾರ್ಥಿಗಳು ಅಥವಾ ಅವರ ಜೊತೆ ನಿಂತವರನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳುವ ಮೂಲಕ ವಾಂಗ್‌ಚುಕ್ ಅವರ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಬೆಂಬಲವನ್ನು ಸೂಚಿಸಿದ್ದಾರೆ.

ಜುಲೈ 18 ರ ಬೆಳಿಗ್ಗೆ, ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಆರೋಗ್ಯದ ಕಾರಣದಿಂದ ದೆಹಲಿ ಪೊಲೀಸರು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಸ್ಥಳಾಂತರಿಸಿದರು. ದೆಹಲಿ ಹೈಕೋರ್ಟ್ ನಿರ್ದೇಶನಗಳನ್ನು ಪಾಲಿಸಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದಗೆಟ್ಟ ಕಾರಣ ಹೈಕೋರ್ಟ್ ಆದೇಶ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ, ಅಗತ್ಯ ವೈದ್ಯಕೀಯ ಆರೈಕೆಗಾಗಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಹೈಕೋರ್ಟ್ ಆದೇಶಗಳನ್ನು ಪಾಲಿಸುವಾಗ, ಪ್ರತಿಭಟನಾಕಾರರು ಅಡಚಣೆಯನ್ನು ಸೃಷ್ಟಿಸಲು ಪ್ರಯತ್ನಿಸಿದರು, ಈ ಸಮಯದಲ್ಲಿ ಸ್ವಲ್ಪ ಗದ್ದಲ ಉಂಟಾಯಿತು. ಆದರೂ, ಪೊಲೀಸರು ಗರಿಷ್ಠ ಸಂಯಮವನ್ನು ಕಾಯ್ದುಕೊಂಡು ಸುರಕ್ಷಿತವಾಗಿ ಕಾರ್ಯಾಚರಣೆಯನ್ನು ಕೈಗೊಂಡರು” ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದೆಹಲಿ ಪೊಲೀಸರಿಂದ ವಾಂಗ್‌ಚುಕ್ ‘ಅಪಹರಣ’

ಪೊಲೀಸರ ಹೇಳಿಕೆಯನ್ನು ಸಿಜೆಪಿ ತಿರಸ್ಕರಿಸಿದೆ. ವಾಂಗ್‌ಚುಕ್ ಅವರ ಉಪವಾಸ ಸತ್ಯಾಗ್ರಹದ 21 ನೇ ದಿನದಂದು ಅವರ ಆರೋಗ್ಯದಲ್ಲಿ ಗಮನಾರ್ಹ ಕ್ಷೀಣತೆ ಕಂಡುಬಂದಿಲ್ಲ ಎಂದು ವಾದಿಸಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಿರುವ ರೀತಿಯನ್ನು ಸಿಜೆಪಿ ಪೊಲೀಸರಿಂದ ‘ಅಪಹರಣ’ ಎಂದು ಕರೆದಿದೆ. ಸರ್ಕಾರ “ಬಲವಂತವಾಗಿ ಅಪಹರಿಸಿದೆ” ಎಂದು ಸಿಜೆಪಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ಆರೋಪಿಸಿದೆ

ವಾಂಗ್‌ಚುಕ್ ಅವರನ್ನು ‘ಅವರ ಅಥವಾ ಅವರ ಕುಟುಂಬದ ಒಪ್ಪಿಗೆಯಿಲ್ಲದೆ’, ಸಂಸತ್ತಿಗೆ ಮುತ್ತಿಗೆ ಹಾಕುವ ಮೆರವಣಿಗೆಯ ಕೇವಲ ಎರಡು ದಿನಗಳ ಮೊದಲು ಬಂಧಿಸಲಾಗಿದೆ ಎಂದು ಹೇಳಿದೆ.

ಸಿಜೆಪಿಯ ಮುಖ್ಯ ವಕ್ತಾರ ಸೌರವ್ ದಾಸ್ ಕೂಡ ಪೊಲೀಸರ ಹೇಳಿಕೆಯನ್ನು ಪ್ರಶ್ನಿಸಿದ್ದು, ಹೈಕೋರ್ಟ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಸ್ಥಳಾಂತರಿಸಲು ಆದೇಶಿಸಿಲ್ಲ ಎಂದು ಹೇಳಿದರು. “ವಾಂಗ್‌ಚುಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ಮೊದಲು ಯಾವುದೇ ವೈದ್ಯರು ಅವರನ್ನು ಪರೀಕ್ಷಿಸಲಿಲ್ಲ. ಅಧಿಕಾರಿಗಳು ತೀವ್ರಗೊಳ್ಳುತ್ತಿದ್ದ ಪ್ರತಿಭಟನಾ ಚಳುವಳಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

ಸೋನಮ್ ವಾಂಗ್‌ಚುಕ್ ಅವರ ಪತ್ನಿ ಗೀತಾಂಜಲಿ ಜೆ ಆಂಗ್ಮೋ, “ತಮ್ಮ ಪತಿ ಇನ್ನೂ ಉಪವಾಸ ಸತ್ಯಾಗ್ರಹದಲ್ಲಿದ್ದಾರೆ. ಜುಲೈ 20 ರಂದು ಸಂಸತ್ತಿಗೆ ಯೋಜಿತ ಮೆರವಣಿಗೆ ಮುಂದುವರಿಯುತ್ತದೆ. ವಾಂಗ್‌ಚುಕ್ ಭಾಗವಹಿಸಲು ಸಾಧ್ಯವಾಗದಿದ್ದರೆ, ಅವರ ಸ್ಥಾನದಲ್ಲಿ ಮೆರವಣಿಗೆಯನ್ನು ಮುನ್ನಡೆಸುತ್ತೇನೆ” ಎಂದು ಅವರು ಹೇಳಿದರು.

ಉಪವಾಸ ಸತ್ಯಾಗ್ರಹ ಮುಂದುವರೆಸಿದ ಜೆಎನ್‌ಯು ವಿದ್ಯಾರ್ಥಿನಿ ನೇಹಾ ಬೋರಾ

ದೆಹಲಿ ಪೊಲೀಸರು ಜಂತರ್ ಮಂತರ್‌ನಿಂದ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಕರೆದುಕೊಂಡು ಹೋದ ನಂತರ ಪ್ರತಿಭಟನಾಕಾರರನ್ನು ಬಂಧಿಸಲು ಪ್ರಯತ್ನಿಸಿದ್ದಾರೆ ಎಂದು ವಿದ್ಯಾರ್ಥಿ ಕಾರ್ಯಕರ್ತನೊಬ್ಬ ಶನಿವಾರ ಹೇಳಿಕೊಂಡಿದ್ದಾರೆ. ಜೆಎನ್‌ಯುನಲ್ಲಿ ಪಿಎಚ್‌ಡಿ ವಿದ್ಯಾರ್ಥಿನಿ ನೇಹಾ ಬೋರಾ ಕೂಡ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಶನಿವಾರ 21 ದಿನಗಳ ಉಪವಾಸ ಸತ್ಯಾಗ್ರಹವನ್ನು ಪೂರ್ಣಗೊಳಿಸಿದ್ದಾರೆ.

ಪೊಲೀಸ್ ಕ್ರಮದ ಹೊರತಾಗಿಯೂ ತಾನು ಅನಿರ್ದಿಷ್ಟ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಅವರು ಹೇಳಿದರು.

“ವಾಂಗ್‌ಚುಕ್ ಅವರನ್ನು ಇಂದು ಮುಂಜಾನೆ ಪೊಲೀಸರು ಕರೆದೊಯ್ದರು. ನಂತರ ಅವರು ಪ್ರತಿಭಟನಾ ಪ್ರದೇಶಕ್ಕೆ ಪ್ರವೇಶಿಸಿ ಉಪವಾಸ ನಡೆಸುತ್ತಿರುವ ಇತರ ವಿದ್ಯಾರ್ಥಿಗಳನ್ನು ತೆರವುಗೊಳಿಸಲು ಪ್ರಯತ್ನಿಸಿದರು” ಎಂದು ನೇಹಾ ಹೇಳಿದರು.

“ಬೆಳಿಗ್ಗೆ 7 ಗಂಟೆಯ ಸುಮಾರಿಗೆ, ಸಾಮಾನ್ಯ ಉಡುಪಿನಲ್ಲಿ ಕೆಲವರು ವೇದಿಕೆ ಪ್ರದೇಶವನ್ನು ಪ್ರವೇಶಿಸಿದರು. ಐದರಿಂದ ಹತ್ತು ನಿಮಿಷಗಳ ನಂತರ, ಭಾರೀ ಪೊಲೀಸ್ ನಿಯೋಜನೆ ವೇದಿಕೆ ಪ್ರದೇಶದ ಕಡೆಗೆ ತೆರಳಿತು. 21 ನೇ ದಿನ ಉಪವಾಸ ಸತ್ಯಾಗ್ರಹದಲ್ಲಿದ್ದ ಸೋನಮ್ ವಾಂಗ್‌ಚುಕ್ ಅವರನ್ನು ವೈದ್ಯಕೀಯ ಚಿಕಿತ್ಸೆ ನೀಡುವ ಹೆಸರಿನಲ್ಲಿ ಇಲ್ಲಿಂದ ಬಲವಂತವಾಗಿ ತೆಗೆದುಹಾಕಲಾಯಿತು” ಎಂದು ಅವರು ಹೇಳಿದರು.

“ಅದರ ನಂತರ, ಸಮವಸ್ತ್ರದಲ್ಲಿದ್ದ ಆರ್‌ಎಫ್‌ ಮತ್ತು ಪೊಲೀಸ್ ಸಿಬ್ಬಂದಿ ನಮ್ಮ ಐಎಸ್‌ಎ ಟೆಂಟ್ ಸುತ್ತಲಿನ ಹಗ್ಗದ ಬೇಲಿಯನ್ನು ಭೇದಿಸಿ ಇಲ್ಲಿಗೆ ಪ್ರವೇಶಿಸಲು ಪ್ರಯತ್ನಿಸಿದರು. ಅವರು ಹಸಿವಿನಿಂದ ಬಳಲುತ್ತಿದ್ದ ನಮ್ಮನ್ನು ಬಂಧಿಸಲು ಪ್ರಯತ್ನಿಸಿದರು. ಅಲ್ಲಿ ಅನೇಕ ಸ್ವಯಂಸೇವಕರು ಇದ್ದ ಕಾರಣ, ನಮ್ಮನ್ನು ಬಂಧಿಸಲು ಸಾಧ್ಯವಾಗಲಿಲ್ಲ. ಆದರೆ ಪ್ರಜಾಪ್ರಭುತ್ವ ಮತ್ತು ಶಾಂತಿಯುತ ಪ್ರತಿಭಟನೆಯನ್ನು ಬಲವಂತವಾಗಿ ಕೊನೆಗೊಳಿಸಲು ದೆಹಲಿ ಪೊಲೀಸರು ಮಾಡಿದ ಪ್ರಯತ್ನ ನಾಚಿಕೆಗೇಡಿನ ಸಂಗತಿ” ಎಂದು ತಿಳಿಸಿದ್ದಾರೆ ಎಂದು ಹಿಂದೂಸ್ಥಾನ್ ಟೈಮ್ಸ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...