Homeಮುಖಪುಟಕೇಜ್ರಿವಾಲ್‌ ಧ್ವನಿ ಹತ್ತಿಕ್ಕಲು ಮೋದಿ ಸರ್ಕಾರ ಸಿಬಿಐ ಬಿಟ್ಟು ಹೆದರಿಸುತ್ತಿದೆ; ನಾವು ಹೆದರುವುದಿಲ್ಲ: ಎಎಪಿ ನಾಯಕಿ...

ಕೇಜ್ರಿವಾಲ್‌ ಧ್ವನಿ ಹತ್ತಿಕ್ಕಲು ಮೋದಿ ಸರ್ಕಾರ ಸಿಬಿಐ ಬಿಟ್ಟು ಹೆದರಿಸುತ್ತಿದೆ; ನಾವು ಹೆದರುವುದಿಲ್ಲ: ಎಎಪಿ ನಾಯಕಿ ಅತಿಶಿ

- Advertisement -
- Advertisement -

ದೆಹಲಿ ಅಬಕಾರಿ ನೀತಿಯ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಮೋದಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಧ್ವನಿಯೆತ್ತಿದ್ದರು, ಅವರ ಧ್ವನಿಯನ್ನು ದಮನ ಮಾಡಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ದೆಹಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ  ಹೇಳಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅತಿಶಿ, ”ದೆಹಲಿ ಸಿಎಂಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಯಾಕೆ ವಿಚಾರಣೆಗೆ ಕರೆದಿದ್ದಾರೆ, ಕೇಜ್ರಿವಾಲ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕಿತ್ತಾ…? ಚಿನ್ನದ ಬಿಸ್ಕತ್ ಸಿಕ್ಕಿದೆಯೇ..? ಯಾವ ಪುರಾವೆಗಳೂ ಇಲ್ಲದಿದ್ದರೂ ವಿಚಾರಣೆಗೆ ಕರೆಯಲಾಗಿದೆ. ಈ ತನಿಖಾ ಸಂಸ್ಥೆಗಳು ಕೇಜ್ರಿವಾಲ್ ಅವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಿರುವ ಕಾರಣ ಅವರನ್ನು ಕರೆಯುತ್ತಿವೆ” ಎಂದು ಹೇಳಿದರು.

ಇಂದು ಕೇಂದ್ರ ಮತ್ತು ಪ್ರಧಾನಿ ವಿರುದ್ಧ ಧ್ವನಿ ಎತ್ತುತ್ತಿರುವವರು ನಾಯಕ ಅರವಿಂದ್ ಕೇಜ್ರಿವಾಲ್ ಅವರು ಎಂದು ಅವರು ಹೇಳಿದರು.

”ಮೋದಿ ಅವರು ಸುಮಾರು 10 ವರ್ಷಗಳ ಕಾಲ ಸರ್ಕಾರ ನಡೆಸುತ್ತಿದ್ದಾರೆ. ಅವರು ಹಣದುಬ್ಬರವನ್ನು ಕಡಿಮೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಎಲ್ಲದರ ಬೆಲೆ ಹೆಚ್ಚಾಗಿದೆ. ಅದರ ವಿರುದ್ದ ಅರವಿಂದ್ ಕೇಜ್ರಿವಾಲ್ ಮಾತ್ರ ಧ್ವನಿ ಎತ್ತುತ್ತಿದ್ದಾರೆ” ಎಂದು ಅತಿಶಿ ಹೇಳಿದರು.

ಉದ್ಯೋಗವಿಲ್ಲ ಮತ್ತು 5 ಕೋಟಿಗೂ ಹೆಚ್ಚು ಯುವಕರು ನಿರುದ್ಯೋಗಿಗಳಾಗಿದ್ದಾರೆ. ದೇಶದಲ್ಲಿ ಸುಮಾರು 22 ಕೋಟಿ ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಕೇಜ್ರಿವಾಲ್ ಧ್ವನಿ ಎತ್ತುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

”ದೇಶದ ಹಣ ಎಲ್ಲಿಗೆ ಹೋಗುತ್ತಿದೆ ಎಂಬುದು ಪ್ರಶ್ನೆಯಾಗಿದೆ. ಮೋದಿಜಿ ಪ್ರಧಾನಿಯಾದ ನಂತರ, ಅವರ ಆತ್ಮೀಯ ಸ್ನೇಹಿತನ ನಿವ್ವಳ ಮೌಲ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಭ್ರಷ್ಟಾಚಾರವನ್ನು ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟಿದ್ದರು. ಅದೇ ಕಾರಣಕ್ಕಾಗಿ ಮೋದಿ ಅವರು ಕೇಜ್ರಿವಾಲ್ ಅವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ” ಎಂದು ಅತಿಶಿ ಹೇಳಿದರು.

ಕೇಂದ್ರವು ಕೇಜ್ರಿವಾಲ್‌ಗೆ ಎಷ್ಟೇ ಬೆದರಿಕೆ ಹಾಕಿದರೂ ಎಎಪಿ ಭ್ರಷ್ಟಾಚಾರದ ವಿರುದ್ಧ ಜನರ ಪರವಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತದೆ ಎಂದರು.

”ಸಿಬಿಐ ಮತ್ತು ಇಡಿ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮೌನಗೊಳಿಸಬಹುದು ಎಂದು ಅವರು ಭಾವಿಸಿದರೆ ಎಎಪಿ ಹೆದರುವುದಿಲ್ಲ” ಎಂದು ಅವರು ಹೇಳಿದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ಸಿಬಿಐ ಏಪ್ರಿಲ್ 16 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.

ಕೇಜ್ರಿವಾಲ್ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮಗಳ ಆರೋಪದಲ್ಲಿ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಇಡಿ ಮತ್ತು ಸಿಬಿಐ ಬಂಧಿಸಿದೆ.

ಫೆಬ್ರವರಿ 26, 2023 ರಂದು ಸಿಬಿಐ ಸಿಸೋಡಿಯಾ ಅವರನ್ನು ಬಂಧಿಸಿತು. ನಂತರ ಮಾರ್ಚ್ 9 ರಂದು, ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಅವರನ್ನು ಬಂಧಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...