Homeಮುಖಪುಟಕೇಜ್ರಿವಾಲ್‌ ಧ್ವನಿ ಹತ್ತಿಕ್ಕಲು ಮೋದಿ ಸರ್ಕಾರ ಸಿಬಿಐ ಬಿಟ್ಟು ಹೆದರಿಸುತ್ತಿದೆ; ನಾವು ಹೆದರುವುದಿಲ್ಲ: ಎಎಪಿ ನಾಯಕಿ...

ಕೇಜ್ರಿವಾಲ್‌ ಧ್ವನಿ ಹತ್ತಿಕ್ಕಲು ಮೋದಿ ಸರ್ಕಾರ ಸಿಬಿಐ ಬಿಟ್ಟು ಹೆದರಿಸುತ್ತಿದೆ; ನಾವು ಹೆದರುವುದಿಲ್ಲ: ಎಎಪಿ ನಾಯಕಿ ಅತಿಶಿ

- Advertisement -
- Advertisement -

ದೆಹಲಿ ಅಬಕಾರಿ ನೀತಿಯ ಕುರಿತು ನಡೆಯುತ್ತಿರುವ ತನಿಖೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ. ಮೋದಿ ಸರ್ಕಾರದ ವಿರುದ್ಧ ಕೇಜ್ರಿವಾಲ್ ಧ್ವನಿಯೆತ್ತಿದ್ದರು, ಅವರ ಧ್ವನಿಯನ್ನು ದಮನ ಮಾಡಲು ಕೇಂದ್ರ ಸರ್ಕಾರ ಈ ರೀತಿ ಮಾಡುತ್ತಿದೆ ಎಂದು ದೆಹಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಅತಿಶಿ  ಹೇಳಿದ್ದಾರೆ.

ಶನಿವಾರ ಮಾಧ್ಯಮ ಪ್ರತಿನಿಧಿಗಳನ್ನುದ್ದೇಶಿಸಿ ಮಾತನಾಡಿದ ಅತಿಶಿ, ”ದೆಹಲಿ ಸಿಎಂಗೆ ನಾಳೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿದೆ. ಯಾಕೆ ವಿಚಾರಣೆಗೆ ಕರೆದಿದ್ದಾರೆ, ಕೇಜ್ರಿವಾಲ್ ಮನೆಯಲ್ಲಿ ಕೋಟ್ಯಂತರ ರೂಪಾಯಿ ಸಿಕ್ಕಿತ್ತಾ…? ಚಿನ್ನದ ಬಿಸ್ಕತ್ ಸಿಕ್ಕಿದೆಯೇ..? ಯಾವ ಪುರಾವೆಗಳೂ ಇಲ್ಲದಿದ್ದರೂ ವಿಚಾರಣೆಗೆ ಕರೆಯಲಾಗಿದೆ. ಈ ತನಿಖಾ ಸಂಸ್ಥೆಗಳು ಕೇಜ್ರಿವಾಲ್ ಅವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಿರುವ ಕಾರಣ ಅವರನ್ನು ಕರೆಯುತ್ತಿವೆ” ಎಂದು ಹೇಳಿದರು.

ಇಂದು ಕೇಂದ್ರ ಮತ್ತು ಪ್ರಧಾನಿ ವಿರುದ್ಧ ಧ್ವನಿ ಎತ್ತುತ್ತಿರುವವರು ನಾಯಕ ಅರವಿಂದ್ ಕೇಜ್ರಿವಾಲ್ ಅವರು ಎಂದು ಅವರು ಹೇಳಿದರು.

”ಮೋದಿ ಅವರು ಸುಮಾರು 10 ವರ್ಷಗಳ ಕಾಲ ಸರ್ಕಾರ ನಡೆಸುತ್ತಿದ್ದಾರೆ. ಅವರು ಹಣದುಬ್ಬರವನ್ನು ಕಡಿಮೆ ಮಾಡುವ ಬಗ್ಗೆ ಮಾತನಾಡುತ್ತಾರೆ. ಆದರೆ ಎಲ್ಲದರ ಬೆಲೆ ಹೆಚ್ಚಾಗಿದೆ. ಅದರ ವಿರುದ್ದ ಅರವಿಂದ್ ಕೇಜ್ರಿವಾಲ್ ಮಾತ್ರ ಧ್ವನಿ ಎತ್ತುತ್ತಿದ್ದಾರೆ” ಎಂದು ಅತಿಶಿ ಹೇಳಿದರು.

ಉದ್ಯೋಗವಿಲ್ಲ ಮತ್ತು 5 ಕೋಟಿಗೂ ಹೆಚ್ಚು ಯುವಕರು ನಿರುದ್ಯೋಗಿಗಳಾಗಿದ್ದಾರೆ. ದೇಶದಲ್ಲಿ ಸುಮಾರು 22 ಕೋಟಿ ಜನರು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳ ಬಗ್ಗೆ ಕೇಜ್ರಿವಾಲ್ ಧ್ವನಿ ಎತ್ತುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅಬಕಾರಿ ನೀತಿ ಅಕ್ರಮ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್‌ಗೆ ಸಿಬಿಐ ಸಮನ್ಸ್

”ದೇಶದ ಹಣ ಎಲ್ಲಿಗೆ ಹೋಗುತ್ತಿದೆ ಎಂಬುದು ಪ್ರಶ್ನೆಯಾಗಿದೆ. ಮೋದಿಜಿ ಪ್ರಧಾನಿಯಾದ ನಂತರ, ಅವರ ಆತ್ಮೀಯ ಸ್ನೇಹಿತನ ನಿವ್ವಳ ಮೌಲ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಭ್ರಷ್ಟಾಚಾರವನ್ನು ಕೇಜ್ರಿವಾಲ್ ಅವರು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಡಿಸಿಟ್ಟಿದ್ದರು. ಅದೇ ಕಾರಣಕ್ಕಾಗಿ ಮೋದಿ ಅವರು ಕೇಜ್ರಿವಾಲ್ ಅವರ ಧ್ವನಿಯನ್ನು ಹತ್ತಿಕ್ಕಲು ಬಯಸುತ್ತಾರೆ” ಎಂದು ಅತಿಶಿ ಹೇಳಿದರು.

ಕೇಂದ್ರವು ಕೇಜ್ರಿವಾಲ್‌ಗೆ ಎಷ್ಟೇ ಬೆದರಿಕೆ ಹಾಕಿದರೂ ಎಎಪಿ ಭ್ರಷ್ಟಾಚಾರದ ವಿರುದ್ಧ ಜನರ ಪರವಾಗಿ ಧ್ವನಿ ಎತ್ತುವುದನ್ನು ಮುಂದುವರಿಸುತ್ತದೆ ಎಂದರು.

”ಸಿಬಿಐ ಮತ್ತು ಇಡಿ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಮೌನಗೊಳಿಸಬಹುದು ಎಂದು ಅವರು ಭಾವಿಸಿದರೆ ಎಎಪಿ ಹೆದರುವುದಿಲ್ಲ” ಎಂದು ಅವರು ಹೇಳಿದರು.

ದೆಹಲಿ ಅಬಕಾರಿ ನೀತಿ ಪ್ರಕರಣದ ಪ್ರಮುಖ ಬೆಳವಣಿಗೆಯಲ್ಲಿ, ಸಿಬಿಐ ಏಪ್ರಿಲ್ 16 ರಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.

ಕೇಜ್ರಿವಾಲ್ ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಎಎಪಿ ನಾಯಕರು ಹೇಳಿದ್ದಾರೆ. ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ರಮಗಳ ಆರೋಪದಲ್ಲಿ ಜೈಲಿನಲ್ಲಿದ್ದಾರೆ.

ದೆಹಲಿಯಲ್ಲಿ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಅಕ್ರಮಗಳಿಗೆ ಸಂಬಂಧಿಸಿದ ಪ್ರಕರಣದ ತನಿಖೆಯಲ್ಲಿ ಸಿಸೋಡಿಯಾ ಅವರನ್ನು ಇಡಿ ಮತ್ತು ಸಿಬಿಐ ಬಂಧಿಸಿದೆ.

ಫೆಬ್ರವರಿ 26, 2023 ರಂದು ಸಿಬಿಐ ಸಿಸೋಡಿಯಾ ಅವರನ್ನು ಬಂಧಿಸಿತು. ನಂತರ ಮಾರ್ಚ್ 9 ರಂದು, ತಿಹಾರ್ ಜೈಲಿನಲ್ಲಿ ಗಂಟೆಗಳ ವಿಚಾರಣೆಯ ನಂತರ ಇಡಿ ಅವರನ್ನು ಬಂಧಿಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...