Homeಮುಖಪುಟಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

- Advertisement -
- Advertisement -

ಸೋಂಕಿನ ಹೊಸ ಮತ್ತು ಹೆಚ್ಚು ಆಕ್ರಮಣಕಾರಿ ಅಲೆಯನ್ನು ನಿಭಾಯಿಸಲು ಹೆಚ್ಚಿನ ವಿದೇಶಿ ಕೋವಿಡ್-19 ಲಸಿಕೆಗಳನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಮೋದಿ ಸರ್ಕಾರ ತೊಡಗಿದೆ. ಹಲವಾರು ಲಸಿಕೆ ತಯಾರಿಕೆ ಕಂಪನಿಗಳಿಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದು ಕಾರ್ಯರೂಪಕ್ಕೆ ಬರಲು ಸಮಯ ತೆಗೆದುಕೊಳ್ಳಬಹುದು ಎಂದು ದಿ ಪ್ರಿಂಟ್ ವರದಿ ಮಾಡಿದೆ.
ಫಿಜರ್ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಮಾಡುವಂತೆ ಕೇಳುವ ಸಾಧ್ಯತೆಯಿದೆ ಮತ್ತು ಮಾಡರ್ನಾ ತನ್ನ “ಕೈಗಳು ತುಂಬಿದೆ’ ಸಾಕಷ್ಟು ಆರ್ಡರ್‌ಗಳಿವೆ ಎಂದು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಅಮೆರಿಕ, ಬ್ರಿಟನ್, ಯುರೋಪ್, ಜಪಾನ್‌ಗಳಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತತೆ ಪಡೆದ ಲಸಿಕೆಗಳಿಗೆ ತುರ್ತು ಪರವಾನಗಿ ನೀಡಲು ಸರ್ಕಾರ ಮಂಗಳವಾರ ಅನುಮತಿ ನೀಡಿತು.

ರಾಹುಲ್ ಗಾಂಧಿ ಈ ಕ್ರಮ ಕೈಗೊಳ್ಳಲು ಹಲವು ಸಲ ಸರ್ಕಾರವನ್ನು ಒತ್ತಾಯಿಸಿದ ನಂತರ ಮಂಗಳವಾರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಅಮೆರಿಕದ ಫಾರ್ಮಾ ದೈತ್ಯ, ಭಾರತದಲ್ಲಿ ತನ್ನ ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಆದರೆ ಈ ವರ್ಷದ ಆರಂಭದಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲಗಳ ಪ್ರಕಾರ, ನಷ್ಟ ಪರಿಹಾರ ಬಾಂಡ್‌ಗಳಿಗೆ ಸಹಿ ಹಾಕಲು ಭಾರತ ಸರ್ಕಾರ ನಿರಾಕರಿಸಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. ಲಸಿಕೆ ಯಾವುದೇ ಅಡ್ಡಪರಿಣಾಮಗಳಿಗೆ ಕಾರಣವಾದರೆ ಕಂಪನಿಯ ಮೇಲೆ ಮೊಕದ್ದಮೆ ಹೂಡದಂತೆ ರಕ್ಷಿಸುವ ಕಾನೂನು ಬಾಂಡ್‌ಗಳು ಇವಾಗಿವೆ.

ಈ ಮಧ್ಯೆ, ಜಾನ್ಸನ್ & ಜಾನ್ಸನ್ ಭಾರತಕ್ಕೆ ಬರಲು ಉತ್ಸುಕವಾಗಿದೆ. ಅದು ಇತ್ತೀಚೆಗೆ ಕೇಂದ್ರೀಯ ಔಷಧಿ ಪ್ರಮಾಣಿಕೆ ನಿಯಂತ್ರಣ ಸಂಸ್ಥೆಗೆ (ಸಿಡಿಎಸ್‌ಸಿಒ) ಮಾಹಿತಿ ನೀಡಿ ಕ್ಲಿನಿಕಲ್ ಟ್ರಯಲ್ಸ್ ಯೋಜನೆ ಆರಂಭಿಸುವುದಾಗಿ ತಿಳಿಸಿದೆ. ಆದರೆ ಜಾನ್ಸನ್ & ಜಾನ್ಸನ್ ಸಿಂಗಲ್-ಡೋಸ್ ಲಸಿಕೆ ಪಡೆದ ಹಲವರು ಮಹಿಳೆಯರ ಮೇಲೆ ಅಡ್ಡಪರಿಣಾಮಗಳು ಉಂಟಾದ ನಂತರ ಅದರ ಬಳಕೆಯನ್ನು ತಕ್ಷಣ ತಾತ್ಕಾಲಿಕವಾಗಿ ನಿಲ್ಲಿಸಲು ಅಮೆರಿಕ ಸರ್ಕಾರ ಕರೆ ನೀಡಿದ್ದರಿಂದ ಕಂಪನಿ ತೊಂದರೆಗೆ ಸಿಲುಕಿದೆ.

ಫಿಜರ್ ತನ್ನ ಲಸಿಕೆಯನ್ನು ಭಾರತಕ್ಕೆ ಕಳುಹಿಸುವ ಒಪ್ಪಂದಕ್ಕೆ ಒಪ್ಪುವ ಮೊದಲು ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಬೇಕು ಎಂದು ಷರತ್ತು ವಿಧಿಸಿದೆ ಎನ್ನಲಾಗಿದೆ.
“ಫಿಜರ್ ತನ್ನ ಕೋವಿಡ್ -19 ಲಸಿಕೆಯನ್ನು ಪೂರೈಸುತ್ತಿರುವ ಪ್ರತಿ ದೇಶದೊಂದಿಗೆ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಿದೆ. ಬಾಂಡ್‌ಗೆ ಸಹಿ ಹಾಕಲು ಭಾರತ ಒಪ್ಪಿಕೊಂಡಾಗ ಮಾತ್ರ ಬೆಲೆಗಳ ಚರ್ಚೆ ಪ್ರಾರಂಭವಾಗುತ್ತದೆ ”ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಜನವರಿಯಲ್ಲಿ, ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು, ಯಾವುದೇ ಗಂಭೀರ ಅಡ್ಡಪರಿಣಾಮಗಳು ಅಥವಾ ಪ್ರತಿಕೂಲ ಪ್ರತಿಕ್ರಿಯೆಗಳ ಸಂದರ್ಭದಲ್ಲಿ ಯಾವುದೇ ಹೊಣೆಗಾರಿಕೆಯಿಂದ ನಷ್ಟ ಪರಿಹಾರ ಅಥವಾ ವಿನಾಯಿತಿ ನೀಡುವ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ.

“ಜಾಗತಿಕವಾಗಿ, ಹೆಚ್ಚಿನ ದೇಶಗಳು ಲಸಿಕೆ ತಯಾರಕರ ಜೊತೆಗೆ ಬಾಂಡ್‌ಗಳಿಗೆ ಸಹಿ ಹಾಕಿವೆ.. ಭಾರತವು ಇದನ್ನು ಇಲ್ಲಿವರೆಗೆ ಮಾಡಿಲ್ಲ.. ನಾವು ಈಗಲಾದರೂ ಇದನ್ನು ಮಾಡಬೇಕು. ನಿರ್ದಿಷ್ಟ ತಯಾರಕರಿಗೆ ಬದಲು ಎಲ್ಲ ತಯಾರಕರೊಂದಿಗೂ ಬಾಂಡ್‌ಗಳಿಗೆ ಸಹಿ ಮಾಡಬೇಕು ಎಂದು ವೆಲ್ಲೂರು ಆಸ್ಪತ್ರೆಯ ಲಸಿಕಾ ತಜ್ಞ ಗಗನದೀಪ್ ಹೇಳಿದ್ದಾರೆ.

ಮಾಡರ್ನಾ ಭಾರತಕ್ಕೆ ಪ್ರವೇಶಿಸಲು ಉತ್ಸುಕವಾಗಿಲ್ಲ

ಲಸಿಕೆ ತಯಾರಕರು ಲಭ್ಯವಿರುವ ಸಾಮರ್ಥ್ಯಗಳನ್ನು ಆಧರಿಸಿ ತಮ್ಮ ಕಾರ್ಯತಂತ್ರಗಳನ್ನು ವಿನ್ಯಾಸಗೊಳಿಸುವ ಸಾಧ್ಯತೆಯಿದೆ ಮತ್ತು ಅವರು ಸಾಕಷ್ಟು ಗಾತ್ರವನ್ನು ಹೊಂದಿರುವ ಭಾರತೀಯ ಮಾರುಕಟ್ಟೆಗೆ ಎಷ್ಟು ಒದಗಿಸಬೇಕು ಎಂದು ಲೆಕ್ಕ ಹಾಕುತ್ತಾರೆ.
ಮಾಡರ್ನಾದ ವಕ್ತಾರ ರೇ ಜೋರ್ಡಾನ್ ಅವರು ದಿ ಪ್ರಿಂಟ್‌ಗೆ ಪ್ರತಿಕ್ರಿಯೆ ನೀಡಿ, “ಪೂರೈಕೆಯ ಬಗ್ಗೆ ಯಾವುದೇ ಸಂಭಾವ್ಯ ಚರ್ಚೆಗಳು ಅಥವಾ ಮಾತುಕತೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಅಡಿಯಲ್ಲಿರುವ ಸೆಂಟರ್ ಫಾರ್ ಸೆಲ್ಯುಲರ್ ಮತ್ತು ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಲಸಿಕೆಯನ್ನು ಭಾರತಕ್ಕೆ ತರಲು ಕಳೆದ ಆರು ತಿಂಗಳಿನಿಂದ ಅಮೆರಿಕದ ಮಾಡರ್ನಾ ಕೊತೆ ಮಾತುಕತೆ ನಡೆಸುತ್ತ ಬಂದಿದೆ.

“ಹಲವಾರು ತಿಂಗಳುಗಳ ಕಾಲ ಅವರೊಂದಿಗೆ ಮಾತನಾಡುತ್ತಿದ್ದರೂ, ಕಂಪನಿಯು ತನ್ನ ಕೋವಿಡ್ -19 ಲಸಿಕೆಯನ್ನು ಭಾರತದಲ್ಲಿ ತರಲು ನಿಜವಾಗಿಯೂ ಉತ್ಸುಕವಾಗಿಲ್ಲ. ಬಹುಶಃ ಅವರ ಕೈಗಳು ಪೂರ್ಣವಾಗಿರುವುದರಿಂದ ಅಂದರೆ ಆರ್ಡರ್‌ಗಳು ಹೆಚ್ಚು ಇರುವುದರಿಂದ ಹೀಗಾಗಿರಬಹುದು. ಈಗ ವಿದೇಶಿ ಲಸಿಕೆಗಳಿಗೆ ತ್ವರಿತ ಪರವಾನಗಿ ನೀಡಲು ಸರ್ಕಾರ ಒಪ್ಪಿದ ನಂತರ, ಮರಳಿ ಸಿಎಸ್‌ಐಆರ್ ಮೂಲಕ ಮಾಡೆರ್ನಾವನ್ನು ಭಾರತಕ್ಕೆ ತರಲು ಯತ್ನಿಸಬಹುದು” ಎಂದು ಸಿಎಸ್‌ಐಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಂಪನಿಯು ಈಗಾಗಲೇ ಸಹಿ ಮಾಡಿರುವ ಬದ್ಧ ಆರ್ಡರ್‌ಗಳ ಪೂರೈಕೆ ಒಪ್ಪಂದಗಳನ್ನು ಮಾಡರ್ನಾ ತನ್ನ ಇಮೇಲ್‌ನಲ್ಲಿ ಪಟ್ಟಿ ಮಾಡಿದೆ. ಅಮೆರಿಕ, ಯುರೋಪಿಯನ್ ಒಕ್ಕೂಟ, ಕೆನಡಾ, ಕೊರಿಯಾ, ಜಪಾನ್, ಸ್ವಿಟ್ಜರ್ಲೆಂಡ್, ಕೊಲಂಬಿಯಾ, ಇಸ್ರೇಲ್, ತೈವಾನ್, ಸಿಂಗಾಪುರ್ ಮತ್ತು ಕತಾರ್ ದೇಶಗಳಿಗೆ ಪೂರೈಕೆ ಆರ್ಡರ್‌ಗಳು ಒಟ್ಟು 1,000 ಮಿಲಿಯನ್ (100 ಕೋಟಿ) ಪ್ರಮಾಣವನ್ನು ಮೀರಿವೆ ಎನ್ನಲಾಗಿದೆ.

ಅಮೆರಿಕದಲ್ಲಿ ಮಾಡರ್ನಾ ಲಸಿಕೆ ಎರಡು ಡೋಸ್‌ಗಳಿಗೆ 30 ಡಾಲರ್ (2,250 ರೂ.) ದರ ಹೊಂದಿದೆ. “ಮಾಡರ್ನಾ ನಮ್ಮೊಂದಿಗೆ ಬಂದು ನಮ್ಮ ಫಾರ್ಮಾ ಕಂಪೆನಿಗಳಿಗೆ ಇಲ್ಲಿ ಲಸಿಕೆ ತಯಾರಿಸಲು ಅವಕಾಶ ನೀಡಿದರೆ ಭಾರತದಲ್ಲಿ ಎಂ-ಆರ್‌ಎನ್‌ಎ ಲಸಿಕೆಯ ಬೆಲೆ ಸಾಕಷ್ಟು ಕಡಿಮೆಯಾಗಲಿದೆ. ಈ ತಂತ್ರಜ್ಞಾನವು ತುಂಬಾ ಸರಳವಾಗಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಲು 8-9 ತಿಂಗಳು ಬೇಕಾಗಬಹುದು”ಎಂದು ಸಿಎಸ್‌ಐಆರ್ ತಿಳಿಸಿದೆ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ: ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...