Homeಮುಖಪುಟಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

- Advertisement -
- Advertisement -

ಸೋಂಕಿನ ಹೊಸ ಮತ್ತು ಹೆಚ್ಚು ಆಕ್ರಮಣಕಾರಿ ಅಲೆಯನ್ನು ನಿಭಾಯಿಸಲು ಹೆಚ್ಚಿನ ವಿದೇಶಿ ಕೋವಿಡ್-19 ಲಸಿಕೆಗಳನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಮೋದಿ ಸರ್ಕಾರ ತೊಡಗಿದೆ. ಹಲವಾರು ಲಸಿಕೆ ತಯಾರಿಕೆ ಕಂಪನಿಗಳಿಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದು ಕಾರ್ಯರೂಪಕ್ಕೆ ಬರಲು ಸಮಯ ತೆಗೆದುಕೊಳ್ಳಬಹುದು ಎಂದು ದಿ ಪ್ರಿಂಟ್ ವರದಿ ಮಾಡಿದೆ.
ಫಿಜರ್ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಮಾಡುವಂತೆ ಕೇಳುವ ಸಾಧ್ಯತೆಯಿದೆ ಮತ್ತು ಮಾಡರ್ನಾ ತನ್ನ “ಕೈಗಳು ತುಂಬಿದೆ’ ಸಾಕಷ್ಟು ಆರ್ಡರ್‌ಗಳಿವೆ ಎಂದು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಅಮೆರಿಕ, ಬ್ರಿಟನ್, ಯುರೋಪ್, ಜಪಾನ್‌ಗಳಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತತೆ ಪಡೆದ ಲಸಿಕೆಗಳಿಗೆ ತುರ್ತು ಪರವಾನಗಿ ನೀಡಲು ಸರ್ಕಾರ ಮಂಗಳವಾರ ಅನುಮತಿ ನೀಡಿತು.

ರಾಹುಲ್ ಗಾಂಧಿ ಈ ಕ್ರಮ ಕೈಗೊಳ್ಳಲು ಹಲವು ಸಲ ಸರ್ಕಾರವನ್ನು ಒತ್ತಾಯಿಸಿದ ನಂತರ ಮಂಗಳವಾರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಅಮೆರಿಕದ ಫಾರ್ಮಾ ದೈತ್ಯ, ಭಾರತದಲ್ಲಿ ತನ್ನ ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಆದರೆ ಈ ವರ್ಷದ ಆರಂಭದಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲಗಳ ಪ್ರಕಾರ, ನಷ್ಟ ಪರಿಹಾರ ಬಾಂಡ್‌ಗಳಿಗೆ ಸಹಿ ಹಾಕಲು ಭಾರತ ಸರ್ಕಾರ ನಿರಾಕರಿಸಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. ಲಸಿಕೆ ಯಾವುದೇ ಅಡ್ಡಪರಿಣಾಮಗಳಿಗೆ ಕಾರಣವಾದರೆ ಕಂಪನಿಯ ಮೇಲೆ ಮೊಕದ್ದಮೆ ಹೂಡದಂತೆ ರಕ್ಷಿಸುವ ಕಾನೂನು ಬಾಂಡ್‌ಗಳು ಇವಾಗಿವೆ.

ಈ ಮಧ್ಯೆ, ಜಾನ್ಸನ್ & ಜಾನ್ಸನ್ ಭಾರತಕ್ಕೆ ಬರಲು ಉತ್ಸುಕವಾಗಿದೆ. ಅದು ಇತ್ತೀಚೆಗೆ ಕೇಂದ್ರೀಯ ಔಷಧಿ ಪ್ರಮಾಣಿಕೆ ನಿಯಂತ್ರಣ ಸಂಸ್ಥೆಗೆ (ಸಿಡಿಎಸ್‌ಸಿಒ) ಮಾಹಿತಿ ನೀಡಿ ಕ್ಲಿನಿಕಲ್ ಟ್ರಯಲ್ಸ್ ಯೋಜನೆ ಆರಂಭಿಸುವುದಾಗಿ ತಿಳಿಸಿದೆ. ಆದರೆ ಜಾನ್ಸನ್ & ಜಾನ್ಸನ್ ಸಿಂಗಲ್-ಡೋಸ್ ಲಸಿಕೆ ಪಡೆದ ಹಲವರು ಮಹಿಳೆಯರ ಮೇಲೆ ಅಡ್ಡಪರಿಣಾಮಗಳು ಉಂಟಾದ ನಂತರ ಅದರ ಬಳಕೆಯನ್ನು ತಕ್ಷಣ ತಾತ್ಕಾಲಿಕವಾಗಿ ನಿಲ್ಲಿಸಲು ಅಮೆರಿಕ ಸರ್ಕಾರ ಕರೆ ನೀಡಿದ್ದರಿಂದ ಕಂಪನಿ ತೊಂದರೆಗೆ ಸಿಲುಕಿದೆ.

ಫಿಜರ್ ತನ್ನ ಲಸಿಕೆಯನ್ನು ಭಾರತಕ್ಕೆ ಕಳುಹಿಸುವ ಒಪ್ಪಂದಕ್ಕೆ ಒಪ್ಪುವ ಮೊದಲು ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಬೇಕು ಎಂದು ಷರತ್ತು ವಿಧಿಸಿದೆ ಎನ್ನಲಾಗಿದೆ.
“ಫಿಜರ್ ತನ್ನ ಕೋವಿಡ್ -19 ಲಸಿಕೆಯನ್ನು ಪೂರೈಸುತ್ತಿರುವ ಪ್ರತಿ ದೇಶದೊಂದಿಗೆ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಿದೆ. ಬಾಂಡ್‌ಗೆ ಸಹಿ ಹಾಕಲು ಭಾರತ ಒಪ್ಪಿಕೊಂಡಾಗ ಮಾತ್ರ ಬೆಲೆಗಳ ಚರ್ಚೆ ಪ್ರಾರಂಭವಾಗುತ್ತದೆ ”ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಜನವರಿಯಲ್ಲಿ, ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು, ಯಾವುದೇ ಗಂಭೀರ ಅಡ್ಡಪರಿಣಾಮಗಳು ಅಥವಾ ಪ್ರತಿಕೂಲ ಪ್ರತಿಕ್ರಿಯೆಗಳ ಸಂದರ್ಭದಲ್ಲಿ ಯಾವುದೇ ಹೊಣೆಗಾರಿಕೆಯಿಂದ ನಷ್ಟ ಪರಿಹಾರ ಅಥವಾ ವಿನಾಯಿತಿ ನೀಡುವ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ.

“ಜಾಗತಿಕವಾಗಿ, ಹೆಚ್ಚಿನ ದೇಶಗಳು ಲಸಿಕೆ ತಯಾರಕರ ಜೊತೆಗೆ ಬಾಂಡ್‌ಗಳಿಗೆ ಸಹಿ ಹಾಕಿವೆ.. ಭಾರತವು ಇದನ್ನು ಇಲ್ಲಿವರೆಗೆ ಮಾಡಿಲ್ಲ.. ನಾವು ಈಗಲಾದರೂ ಇದನ್ನು ಮಾಡಬೇಕು. ನಿರ್ದಿಷ್ಟ ತಯಾರಕರಿಗೆ ಬದಲು ಎಲ್ಲ ತಯಾರಕರೊಂದಿಗೂ ಬಾಂಡ್‌ಗಳಿಗೆ ಸಹಿ ಮಾಡಬೇಕು ಎಂದು ವೆಲ್ಲೂರು ಆಸ್ಪತ್ರೆಯ ಲಸಿಕಾ ತಜ್ಞ ಗಗನದೀಪ್ ಹೇಳಿದ್ದಾರೆ.

ಮಾಡರ್ನಾ ಭಾರತಕ್ಕೆ ಪ್ರವೇಶಿಸಲು ಉತ್ಸುಕವಾಗಿಲ್ಲ

ಲಸಿಕೆ ತಯಾರಕರು ಲಭ್ಯವಿರುವ ಸಾಮರ್ಥ್ಯಗಳನ್ನು ಆಧರಿಸಿ ತಮ್ಮ ಕಾರ್ಯತಂತ್ರಗಳನ್ನು ವಿನ್ಯಾಸಗೊಳಿಸುವ ಸಾಧ್ಯತೆಯಿದೆ ಮತ್ತು ಅವರು ಸಾಕಷ್ಟು ಗಾತ್ರವನ್ನು ಹೊಂದಿರುವ ಭಾರತೀಯ ಮಾರುಕಟ್ಟೆಗೆ ಎಷ್ಟು ಒದಗಿಸಬೇಕು ಎಂದು ಲೆಕ್ಕ ಹಾಕುತ್ತಾರೆ.
ಮಾಡರ್ನಾದ ವಕ್ತಾರ ರೇ ಜೋರ್ಡಾನ್ ಅವರು ದಿ ಪ್ರಿಂಟ್‌ಗೆ ಪ್ರತಿಕ್ರಿಯೆ ನೀಡಿ, “ಪೂರೈಕೆಯ ಬಗ್ಗೆ ಯಾವುದೇ ಸಂಭಾವ್ಯ ಚರ್ಚೆಗಳು ಅಥವಾ ಮಾತುಕತೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಅಡಿಯಲ್ಲಿರುವ ಸೆಂಟರ್ ಫಾರ್ ಸೆಲ್ಯುಲರ್ ಮತ್ತು ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಲಸಿಕೆಯನ್ನು ಭಾರತಕ್ಕೆ ತರಲು ಕಳೆದ ಆರು ತಿಂಗಳಿನಿಂದ ಅಮೆರಿಕದ ಮಾಡರ್ನಾ ಕೊತೆ ಮಾತುಕತೆ ನಡೆಸುತ್ತ ಬಂದಿದೆ.

“ಹಲವಾರು ತಿಂಗಳುಗಳ ಕಾಲ ಅವರೊಂದಿಗೆ ಮಾತನಾಡುತ್ತಿದ್ದರೂ, ಕಂಪನಿಯು ತನ್ನ ಕೋವಿಡ್ -19 ಲಸಿಕೆಯನ್ನು ಭಾರತದಲ್ಲಿ ತರಲು ನಿಜವಾಗಿಯೂ ಉತ್ಸುಕವಾಗಿಲ್ಲ. ಬಹುಶಃ ಅವರ ಕೈಗಳು ಪೂರ್ಣವಾಗಿರುವುದರಿಂದ ಅಂದರೆ ಆರ್ಡರ್‌ಗಳು ಹೆಚ್ಚು ಇರುವುದರಿಂದ ಹೀಗಾಗಿರಬಹುದು. ಈಗ ವಿದೇಶಿ ಲಸಿಕೆಗಳಿಗೆ ತ್ವರಿತ ಪರವಾನಗಿ ನೀಡಲು ಸರ್ಕಾರ ಒಪ್ಪಿದ ನಂತರ, ಮರಳಿ ಸಿಎಸ್‌ಐಆರ್ ಮೂಲಕ ಮಾಡೆರ್ನಾವನ್ನು ಭಾರತಕ್ಕೆ ತರಲು ಯತ್ನಿಸಬಹುದು” ಎಂದು ಸಿಎಸ್‌ಐಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಂಪನಿಯು ಈಗಾಗಲೇ ಸಹಿ ಮಾಡಿರುವ ಬದ್ಧ ಆರ್ಡರ್‌ಗಳ ಪೂರೈಕೆ ಒಪ್ಪಂದಗಳನ್ನು ಮಾಡರ್ನಾ ತನ್ನ ಇಮೇಲ್‌ನಲ್ಲಿ ಪಟ್ಟಿ ಮಾಡಿದೆ. ಅಮೆರಿಕ, ಯುರೋಪಿಯನ್ ಒಕ್ಕೂಟ, ಕೆನಡಾ, ಕೊರಿಯಾ, ಜಪಾನ್, ಸ್ವಿಟ್ಜರ್ಲೆಂಡ್, ಕೊಲಂಬಿಯಾ, ಇಸ್ರೇಲ್, ತೈವಾನ್, ಸಿಂಗಾಪುರ್ ಮತ್ತು ಕತಾರ್ ದೇಶಗಳಿಗೆ ಪೂರೈಕೆ ಆರ್ಡರ್‌ಗಳು ಒಟ್ಟು 1,000 ಮಿಲಿಯನ್ (100 ಕೋಟಿ) ಪ್ರಮಾಣವನ್ನು ಮೀರಿವೆ ಎನ್ನಲಾಗಿದೆ.

ಅಮೆರಿಕದಲ್ಲಿ ಮಾಡರ್ನಾ ಲಸಿಕೆ ಎರಡು ಡೋಸ್‌ಗಳಿಗೆ 30 ಡಾಲರ್ (2,250 ರೂ.) ದರ ಹೊಂದಿದೆ. “ಮಾಡರ್ನಾ ನಮ್ಮೊಂದಿಗೆ ಬಂದು ನಮ್ಮ ಫಾರ್ಮಾ ಕಂಪೆನಿಗಳಿಗೆ ಇಲ್ಲಿ ಲಸಿಕೆ ತಯಾರಿಸಲು ಅವಕಾಶ ನೀಡಿದರೆ ಭಾರತದಲ್ಲಿ ಎಂ-ಆರ್‌ಎನ್‌ಎ ಲಸಿಕೆಯ ಬೆಲೆ ಸಾಕಷ್ಟು ಕಡಿಮೆಯಾಗಲಿದೆ. ಈ ತಂತ್ರಜ್ಞಾನವು ತುಂಬಾ ಸರಳವಾಗಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಲು 8-9 ತಿಂಗಳು ಬೇಕಾಗಬಹುದು”ಎಂದು ಸಿಎಸ್‌ಐಆರ್ ತಿಳಿಸಿದೆ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ: ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...