Homeಮುಖಪುಟಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

ಮೋದಿ ಸರ್ಕಾರಕ್ಕೆ ಅಧಿಕ ಲಸಿಕೆ ಬೇಕಾಗಿದೆ: ಆದರೆ ಮಾಡೆರ್ನಾಕ್ಕೆ ಆಸಕ್ತಿಯಿಲ್ಲ, ಫಿಜರ್ ಷರತ್ತು ವಿಧಿಸುತ್ತಿದೆ!

- Advertisement -
- Advertisement -

ಸೋಂಕಿನ ಹೊಸ ಮತ್ತು ಹೆಚ್ಚು ಆಕ್ರಮಣಕಾರಿ ಅಲೆಯನ್ನು ನಿಭಾಯಿಸಲು ಹೆಚ್ಚಿನ ವಿದೇಶಿ ಕೋವಿಡ್-19 ಲಸಿಕೆಗಳನ್ನು ಭಾರತಕ್ಕೆ ತರುವ ಪ್ರಯತ್ನದಲ್ಲಿ ಮೋದಿ ಸರ್ಕಾರ ತೊಡಗಿದೆ. ಹಲವಾರು ಲಸಿಕೆ ತಯಾರಿಕೆ ಕಂಪನಿಗಳಿಗೆ ಸರ್ಕಾರ ಆಹ್ವಾನ ನೀಡಿದೆ. ಆದರೆ ಇದು ಕಾರ್ಯರೂಪಕ್ಕೆ ಬರಲು ಸಮಯ ತೆಗೆದುಕೊಳ್ಳಬಹುದು ಎಂದು ದಿ ಪ್ರಿಂಟ್ ವರದಿ ಮಾಡಿದೆ.
ಫಿಜರ್ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಮಾಡುವಂತೆ ಕೇಳುವ ಸಾಧ್ಯತೆಯಿದೆ ಮತ್ತು ಮಾಡರ್ನಾ ತನ್ನ “ಕೈಗಳು ತುಂಬಿದೆ’ ಸಾಕಷ್ಟು ಆರ್ಡರ್‌ಗಳಿವೆ ಎಂದು ಆಸಕ್ತಿ ತೋರುತ್ತಿಲ್ಲ ಎನ್ನಲಾಗಿದೆ.

ಅಮೆರಿಕ, ಬ್ರಿಟನ್, ಯುರೋಪ್, ಜಪಾನ್‌ಗಳಲ್ಲಿ ಅಥವಾ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಧಿಕೃತತೆ ಪಡೆದ ಲಸಿಕೆಗಳಿಗೆ ತುರ್ತು ಪರವಾನಗಿ ನೀಡಲು ಸರ್ಕಾರ ಮಂಗಳವಾರ ಅನುಮತಿ ನೀಡಿತು.

ರಾಹುಲ್ ಗಾಂಧಿ ಈ ಕ್ರಮ ಕೈಗೊಳ್ಳಲು ಹಲವು ಸಲ ಸರ್ಕಾರವನ್ನು ಒತ್ತಾಯಿಸಿದ ನಂತರ ಮಂಗಳವಾರ ಸರ್ಕಾರ ಈ ನಿರ್ಧಾರ ಪ್ರಕಟಿಸಿದೆ.

ಅಮೆರಿಕದ ಫಾರ್ಮಾ ದೈತ್ಯ, ಭಾರತದಲ್ಲಿ ತನ್ನ ಲಸಿಕೆಯ ತುರ್ತು ಬಳಕೆ ದೃಢೀಕರಣಕ್ಕಾಗಿ (ಇಯುಎ) ಅರ್ಜಿ ಸಲ್ಲಿಸಿತ್ತು. ಆದರೆ ಈ ವರ್ಷದ ಆರಂಭದಲ್ಲಿ ತನ್ನ ಅರ್ಜಿಯನ್ನು ಹಿಂತೆಗೆದುಕೊಂಡಿದೆ. ಮೂಲಗಳ ಪ್ರಕಾರ, ನಷ್ಟ ಪರಿಹಾರ ಬಾಂಡ್‌ಗಳಿಗೆ ಸಹಿ ಹಾಕಲು ಭಾರತ ಸರ್ಕಾರ ನಿರಾಕರಿಸಿದ್ದು ಇದಕ್ಕೆ ಕಾರಣ ಎನ್ನಲಾಗಿದೆ. ಲಸಿಕೆ ಯಾವುದೇ ಅಡ್ಡಪರಿಣಾಮಗಳಿಗೆ ಕಾರಣವಾದರೆ ಕಂಪನಿಯ ಮೇಲೆ ಮೊಕದ್ದಮೆ ಹೂಡದಂತೆ ರಕ್ಷಿಸುವ ಕಾನೂನು ಬಾಂಡ್‌ಗಳು ಇವಾಗಿವೆ.

ಈ ಮಧ್ಯೆ, ಜಾನ್ಸನ್ & ಜಾನ್ಸನ್ ಭಾರತಕ್ಕೆ ಬರಲು ಉತ್ಸುಕವಾಗಿದೆ. ಅದು ಇತ್ತೀಚೆಗೆ ಕೇಂದ್ರೀಯ ಔಷಧಿ ಪ್ರಮಾಣಿಕೆ ನಿಯಂತ್ರಣ ಸಂಸ್ಥೆಗೆ (ಸಿಡಿಎಸ್‌ಸಿಒ) ಮಾಹಿತಿ ನೀಡಿ ಕ್ಲಿನಿಕಲ್ ಟ್ರಯಲ್ಸ್ ಯೋಜನೆ ಆರಂಭಿಸುವುದಾಗಿ ತಿಳಿಸಿದೆ. ಆದರೆ ಜಾನ್ಸನ್ & ಜಾನ್ಸನ್ ಸಿಂಗಲ್-ಡೋಸ್ ಲಸಿಕೆ ಪಡೆದ ಹಲವರು ಮಹಿಳೆಯರ ಮೇಲೆ ಅಡ್ಡಪರಿಣಾಮಗಳು ಉಂಟಾದ ನಂತರ ಅದರ ಬಳಕೆಯನ್ನು ತಕ್ಷಣ ತಾತ್ಕಾಲಿಕವಾಗಿ ನಿಲ್ಲಿಸಲು ಅಮೆರಿಕ ಸರ್ಕಾರ ಕರೆ ನೀಡಿದ್ದರಿಂದ ಕಂಪನಿ ತೊಂದರೆಗೆ ಸಿಲುಕಿದೆ.

ಫಿಜರ್ ತನ್ನ ಲಸಿಕೆಯನ್ನು ಭಾರತಕ್ಕೆ ಕಳುಹಿಸುವ ಒಪ್ಪಂದಕ್ಕೆ ಒಪ್ಪುವ ಮೊದಲು ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಬೇಕು ಎಂದು ಷರತ್ತು ವಿಧಿಸಿದೆ ಎನ್ನಲಾಗಿದೆ.
“ಫಿಜರ್ ತನ್ನ ಕೋವಿಡ್ -19 ಲಸಿಕೆಯನ್ನು ಪೂರೈಸುತ್ತಿರುವ ಪ್ರತಿ ದೇಶದೊಂದಿಗೆ ನಷ್ಟ ಪರಿಹಾರ ಬಾಂಡ್‌ಗೆ ಸಹಿ ಹಾಕಿದೆ. ಬಾಂಡ್‌ಗೆ ಸಹಿ ಹಾಕಲು ಭಾರತ ಒಪ್ಪಿಕೊಂಡಾಗ ಮಾತ್ರ ಬೆಲೆಗಳ ಚರ್ಚೆ ಪ್ರಾರಂಭವಾಗುತ್ತದೆ ”ಎಂದು ಉದ್ಯಮದ ಮೂಲಗಳು ತಿಳಿಸಿವೆ.

ಜನವರಿಯಲ್ಲಿ, ಆರ್‌ಟಿಐ ಅರ್ಜಿಗೆ ಪ್ರತಿಕ್ರಿಯೆಯಾಗಿ ಕೇಂದ್ರವು, ಯಾವುದೇ ಗಂಭೀರ ಅಡ್ಡಪರಿಣಾಮಗಳು ಅಥವಾ ಪ್ರತಿಕೂಲ ಪ್ರತಿಕ್ರಿಯೆಗಳ ಸಂದರ್ಭದಲ್ಲಿ ಯಾವುದೇ ಹೊಣೆಗಾರಿಕೆಯಿಂದ ನಷ್ಟ ಪರಿಹಾರ ಅಥವಾ ವಿನಾಯಿತಿ ನೀಡುವ ಪ್ರಸ್ತಾಪವನ್ನು ಸರ್ಕಾರ ಹೊಂದಿಲ್ಲ ಎಂದು ಹೇಳಿದೆ.

“ಜಾಗತಿಕವಾಗಿ, ಹೆಚ್ಚಿನ ದೇಶಗಳು ಲಸಿಕೆ ತಯಾರಕರ ಜೊತೆಗೆ ಬಾಂಡ್‌ಗಳಿಗೆ ಸಹಿ ಹಾಕಿವೆ.. ಭಾರತವು ಇದನ್ನು ಇಲ್ಲಿವರೆಗೆ ಮಾಡಿಲ್ಲ.. ನಾವು ಈಗಲಾದರೂ ಇದನ್ನು ಮಾಡಬೇಕು. ನಿರ್ದಿಷ್ಟ ತಯಾರಕರಿಗೆ ಬದಲು ಎಲ್ಲ ತಯಾರಕರೊಂದಿಗೂ ಬಾಂಡ್‌ಗಳಿಗೆ ಸಹಿ ಮಾಡಬೇಕು ಎಂದು ವೆಲ್ಲೂರು ಆಸ್ಪತ್ರೆಯ ಲಸಿಕಾ ತಜ್ಞ ಗಗನದೀಪ್ ಹೇಳಿದ್ದಾರೆ.

ಮಾಡರ್ನಾ ಭಾರತಕ್ಕೆ ಪ್ರವೇಶಿಸಲು ಉತ್ಸುಕವಾಗಿಲ್ಲ

ಲಸಿಕೆ ತಯಾರಕರು ಲಭ್ಯವಿರುವ ಸಾಮರ್ಥ್ಯಗಳನ್ನು ಆಧರಿಸಿ ತಮ್ಮ ಕಾರ್ಯತಂತ್ರಗಳನ್ನು ವಿನ್ಯಾಸಗೊಳಿಸುವ ಸಾಧ್ಯತೆಯಿದೆ ಮತ್ತು ಅವರು ಸಾಕಷ್ಟು ಗಾತ್ರವನ್ನು ಹೊಂದಿರುವ ಭಾರತೀಯ ಮಾರುಕಟ್ಟೆಗೆ ಎಷ್ಟು ಒದಗಿಸಬೇಕು ಎಂದು ಲೆಕ್ಕ ಹಾಕುತ್ತಾರೆ.
ಮಾಡರ್ನಾದ ವಕ್ತಾರ ರೇ ಜೋರ್ಡಾನ್ ಅವರು ದಿ ಪ್ರಿಂಟ್‌ಗೆ ಪ್ರತಿಕ್ರಿಯೆ ನೀಡಿ, “ಪೂರೈಕೆಯ ಬಗ್ಗೆ ಯಾವುದೇ ಸಂಭಾವ್ಯ ಚರ್ಚೆಗಳು ಅಥವಾ ಮಾತುಕತೆಗಳ ಬಗ್ಗೆ ಪ್ರತಿಕ್ರಿಯೆಯನ್ನು ನೀಡಲು ಸಾಧ್ಯವಿಲ್ಲ’ ಎಂದು ತಿಳಿಸಿದ್ದಾರೆ.

ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‌ಐಆರ್) ಅಡಿಯಲ್ಲಿರುವ ಸೆಂಟರ್ ಫಾರ್ ಸೆಲ್ಯುಲರ್ ಮತ್ತು ಮಾಲಿಕ್ಯುಲರ್ ಬಯಾಲಜಿ (ಸಿಸಿಎಂಬಿ) ಲಸಿಕೆಯನ್ನು ಭಾರತಕ್ಕೆ ತರಲು ಕಳೆದ ಆರು ತಿಂಗಳಿನಿಂದ ಅಮೆರಿಕದ ಮಾಡರ್ನಾ ಕೊತೆ ಮಾತುಕತೆ ನಡೆಸುತ್ತ ಬಂದಿದೆ.

“ಹಲವಾರು ತಿಂಗಳುಗಳ ಕಾಲ ಅವರೊಂದಿಗೆ ಮಾತನಾಡುತ್ತಿದ್ದರೂ, ಕಂಪನಿಯು ತನ್ನ ಕೋವಿಡ್ -19 ಲಸಿಕೆಯನ್ನು ಭಾರತದಲ್ಲಿ ತರಲು ನಿಜವಾಗಿಯೂ ಉತ್ಸುಕವಾಗಿಲ್ಲ. ಬಹುಶಃ ಅವರ ಕೈಗಳು ಪೂರ್ಣವಾಗಿರುವುದರಿಂದ ಅಂದರೆ ಆರ್ಡರ್‌ಗಳು ಹೆಚ್ಚು ಇರುವುದರಿಂದ ಹೀಗಾಗಿರಬಹುದು. ಈಗ ವಿದೇಶಿ ಲಸಿಕೆಗಳಿಗೆ ತ್ವರಿತ ಪರವಾನಗಿ ನೀಡಲು ಸರ್ಕಾರ ಒಪ್ಪಿದ ನಂತರ, ಮರಳಿ ಸಿಎಸ್‌ಐಆರ್ ಮೂಲಕ ಮಾಡೆರ್ನಾವನ್ನು ಭಾರತಕ್ಕೆ ತರಲು ಯತ್ನಿಸಬಹುದು” ಎಂದು ಸಿಎಸ್‌ಐಆರ್‌ನ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕಂಪನಿಯು ಈಗಾಗಲೇ ಸಹಿ ಮಾಡಿರುವ ಬದ್ಧ ಆರ್ಡರ್‌ಗಳ ಪೂರೈಕೆ ಒಪ್ಪಂದಗಳನ್ನು ಮಾಡರ್ನಾ ತನ್ನ ಇಮೇಲ್‌ನಲ್ಲಿ ಪಟ್ಟಿ ಮಾಡಿದೆ. ಅಮೆರಿಕ, ಯುರೋಪಿಯನ್ ಒಕ್ಕೂಟ, ಕೆನಡಾ, ಕೊರಿಯಾ, ಜಪಾನ್, ಸ್ವಿಟ್ಜರ್ಲೆಂಡ್, ಕೊಲಂಬಿಯಾ, ಇಸ್ರೇಲ್, ತೈವಾನ್, ಸಿಂಗಾಪುರ್ ಮತ್ತು ಕತಾರ್ ದೇಶಗಳಿಗೆ ಪೂರೈಕೆ ಆರ್ಡರ್‌ಗಳು ಒಟ್ಟು 1,000 ಮಿಲಿಯನ್ (100 ಕೋಟಿ) ಪ್ರಮಾಣವನ್ನು ಮೀರಿವೆ ಎನ್ನಲಾಗಿದೆ.

ಅಮೆರಿಕದಲ್ಲಿ ಮಾಡರ್ನಾ ಲಸಿಕೆ ಎರಡು ಡೋಸ್‌ಗಳಿಗೆ 30 ಡಾಲರ್ (2,250 ರೂ.) ದರ ಹೊಂದಿದೆ. “ಮಾಡರ್ನಾ ನಮ್ಮೊಂದಿಗೆ ಬಂದು ನಮ್ಮ ಫಾರ್ಮಾ ಕಂಪೆನಿಗಳಿಗೆ ಇಲ್ಲಿ ಲಸಿಕೆ ತಯಾರಿಸಲು ಅವಕಾಶ ನೀಡಿದರೆ ಭಾರತದಲ್ಲಿ ಎಂ-ಆರ್‌ಎನ್‌ಎ ಲಸಿಕೆಯ ಬೆಲೆ ಸಾಕಷ್ಟು ಕಡಿಮೆಯಾಗಲಿದೆ. ಈ ತಂತ್ರಜ್ಞಾನವು ತುಂಬಾ ಸರಳವಾಗಿದೆ ಮತ್ತು ಉತ್ಪಾದನೆಯನ್ನು ಪ್ರಾರಂಭಿಸಲು 8-9 ತಿಂಗಳು ಬೇಕಾಗಬಹುದು”ಎಂದು ಸಿಎಸ್‌ಐಆರ್ ತಿಳಿಸಿದೆ.

ಕೃಪೆ: ದಿ ಪ್ರಿಂಟ್


ಇದನ್ನೂ ಓದಿ: ಕೊರೊನಾ ಲಸಿಕೆ ಪೇಟೆಂಟ್‌ ಬಿಟ್ಟುಬಿಡಲು ನೊಬೆಲ್ ಪ್ರಶಸ್ತಿ ವಿಜೇತರು, ವಿಶ್ವದ ಮಾಜಿ ನಾಯಕರಿಂದ ಜೋ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...