Homeಮುಖಪುಟಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ...

ಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ ವಾಗ್ದಾಳಿ

ಚೀನಾ- ಭಾರತ ಗಡಿ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ

- Advertisement -
- Advertisement -

“ಚೀನಾ-ಭಾರತ ಗಡಿ ಸಂಘರ್ಷ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವದ ಬಗೆಗೆ ಅಗೌರವವನ್ನು ತೋರಿಸುತ್ತಿದೆ ಮತ್ತು ರಾಷ್ಟ್ರವನ್ನು ಒಗ್ಗೂಡಿಸಲು ತನಗಿರುವ ಅಸಮರ್ಥತೆಯನ್ನು ಪ್ರದರ್ಶಿಸಿದೆ” ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಗಂಭೀರ ಕಾಳಜಿಯ ವಿಷಯಗಳ ಬಗ್ಗೆ ಬಿಜೆಪಿ ಮೌನವಹಿಸಿದೆ. ಇದು ಬಿಜೆಪಿ ಅಧಿಕಾರಾವಧಿಯ ನಿರ್ಣಾಯಕ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಾಗಿನಿಂದ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ನಂತರದಲ್ಲಿ ಉಭಯ ದೇಶಗಳ ನಡುವೆ ನಡೆದ ಘಟನೆ ಇದಾಗಿದೆ. ಗಾಲ್ವಾನ್ ಘಟನೆಯು 20 ಭಾರತೀಯ ಸೈನಿಕರ ಸಾವಿಗೆ ಕಾರಣವಾಯಿತು ಎಂದು ಚೀನಾ ಹೇಳಿಕೊಂಡಿದೆ.

“ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಿದರೆ ಹಲವಾರು ನಿರ್ಣಾಯಕ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಪ್ರತಿಕ್ರಿಯೆ ನೀಡಿದ್ದಾರೆ.

“ಚೀನಾ ನಮ್ಮ ಮೇಲೆ ನಿರಂತರವಾಗಿ ದಾಳಿ ಮಾಡಲು ಏಕೆ ಧೈರ್ಯ ಮಾಡುತ್ತದೆ?” ಎಂದು ಸಭೆಯಲ್ಲಿ ಅವರು ಪ್ರಶ್ನಿಸಿದ್ದಾರೆ. “ಈ ದಾಳಿಗಳನ್ನು ಹಿಮ್ಮೆಟ್ಟಿಸಲು ಯಾವ ಸಿದ್ಧತೆಗಳನ್ನು ಮಾಡಲಾಗಿದೆ? ಇನ್ನೂ ಏನು ಮಾಡಬೇಕಾಗಿದೆ? ಭವಿಷ್ಯದಲ್ಲಿ ಆಕ್ರಮಣಗಳು ಆಗದಂತೆ ಚೀನಾವನ್ನು ತಡೆಯಲು ಸರ್ಕಾರ ಯಾವ ನೀತಿ ರೂಪಿಸಿದೆ? ನಾವು ಚೀನಾದೊಂದಿಗೆ ತೀವ್ರ ವ್ಯಾಪಾರ ಕೊರತೆಯನ್ನು ಹೊಂದಿದ್ದೇವೆ. ನಾವು ರಫ್ತು ಮಾಡುವುದಕ್ಕಿಂತ ಹೆಚ್ಚಿನದನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಚೀನಾ ಸಾಧಿಸುತ್ತಿರುವ ಮಿಲಿಟರಿ ಹಗೆತನಕ್ಕೆ ನಮ್ಮ ಆರ್ಥಿಕ ಪ್ರತಿಕ್ರಿಯೆ ಏಕೆ ಇಲ್ಲ?” ಎಂದು ಸೋನಿಯಾ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ತನ್ನ ನೀತಿಗಳು ಮತ್ತು ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದಿರುವ ಸೋನಿಯಾ ಗಾಂಧಿ, “ಸ್ಪಷ್ಟವಾದ ಚರ್ಚೆಯು ದೇಶದ ಪ್ರತಿಕ್ರಿಯೆಯನ್ನು ಬಲಪಡಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇದಕ್ಕೆ ವಿರುದ್ಧವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ, ದ್ವೇಷವನ್ನು ಹರಡುತ್ತಿದೆ, ನಮ್ಮ ಸಮಾಜದ ಕೆಲವು ವರ್ಗಗಳನ್ನು ಟಾರ್ಗೆಟ್ ಮಾಡುತ್ತಿದೆ. ಆದರೆ ವಿದೇಶಿ ಬೆದರಿಕೆಗಳ ವಿರುದ್ಧ ದೇಶವು ಒಂದಾಗಿ ನಿಲ್ಲುವುದಕ್ಕೆ ಸರ್ಕಾರ ತಡೆಯಾಗಿದೆ” ಎಂದು ಅವರು ದೂರಿದ್ದಾರೆ.

“ಇಂತಹ ಸಮಯದಲ್ಲಿ ನಮ್ಮ ಜನರನ್ನು ಒಗ್ಗೂಡಿಸುವುದು ಸರ್ಕಾರದ ಪ್ರಯತ್ನ ಮತ್ತು ಜವಾಬ್ದಾರಿಯಾಗಿರಬೇಕು. ಕಳೆದ ಹಲವಾರು ವರ್ಷಗಳಿಂದ ಮಾಡುತ್ತಿರುವಂತೆ ಜನರನ್ನು ವಿಭಜಿಸಬಾರದು” ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡುವಲ್ಲಿ, ಭಿನ್ನಧ್ವನಿಗಳನ್ನು ಪ್ರಶ್ನಿಸುವಲ್ಲಿ, ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ, ಸಂಸ್ಥೆಗಳನ್ನು ದುರ್ಬಲಗೊಳಿಸುವಲ್ಲಿ ಬಿಜೆಪಿ ಸರ್ಕಾರ ತೊಡಗಿದೆ ಎಂದು ಆರೋಪಿಸಿದ್ದಾರೆ. “ಇದು ಕೇಂದ್ರದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ನಡೆಸುವ ಪ್ರತಿಯೊಂದು ರಾಜ್ಯದಲ್ಲೂ ನಡೆಯುತ್ತಿದೆ” ಎಂದು ವಿಷಾದಿಸಿದ್ದಾರೆ.

ಪ್ರತಿಪಕ್ಷಗಳಿಂದ ಪ್ರತಿಭಟನೆ

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ ನಂತರ, ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ವಿರೋಧ ಪಕ್ಷಗಳ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದಂತೆ ಸುಮಾರು 12 ಪ್ರತಿಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ನಾವು ಚೀನಾದ ಬಗ್ಗೆ ಚರ್ಚೆಯನ್ನು ಬಯಸುತ್ತೇವೆ, ನಾವು ಮಿಲಿಟರಿ ರಹಸ್ಯಗಳನ್ನು ಕೇಳುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

“ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್‌ಗಳ ನಡುವಿನ 16 ಸುತ್ತಿನ ಮಾತುಕತೆ ಏನು ಸಾಧಿಸಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಖರ್ಗೆಯವರು ಮಾತನಾಡಿ, “ಚರ್ಚೆಯನ್ನು ನಡೆಸದಿದ್ದರೆ ಮತ್ತು ಕೇವಲ ಏಕಪಕ್ಷೀಯ ಪ್ರತಿಕ್ರಿಯೆ ಇದ್ದರೆ, ಅದು ಯಾವ ಅರ್ಥವನ್ನು ಸೂಚಿಸುತ್ತದೆ?” ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...