Homeಮುಖಪುಟಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ...

ಚೀನಾ- ಭಾರತ ಗಡಿ ಸಮಸ್ಯೆ ಚರ್ಚೆಗೆ ಸಂಸತ್‌ನಲ್ಲಿ ಅವಕಾಶ ನೀಡದ ಮೋದಿ ಸರ್ಕಾರ: ಸೋನಿಯಾ ಗಾಂಧಿ ವಾಗ್ದಾಳಿ

ಚೀನಾ- ಭಾರತ ಗಡಿ ವಿವಾದದ ಕುರಿತು ಸಂಸತ್‌ನಲ್ಲಿ ಚರ್ಚಿಸಲು ಅವಕಾಶ ನೀಡಬೇಕೆಂದು ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿವೆ

- Advertisement -
- Advertisement -

“ಚೀನಾ-ಭಾರತ ಗಡಿ ಸಂಘರ್ಷ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡದ ನರೇಂದ್ರ ಮೋದಿ ಸರ್ಕಾರವು ಪ್ರಜಾಪ್ರಭುತ್ವದ ಬಗೆಗೆ ಅಗೌರವವನ್ನು ತೋರಿಸುತ್ತಿದೆ ಮತ್ತು ರಾಷ್ಟ್ರವನ್ನು ಒಗ್ಗೂಡಿಸಲು ತನಗಿರುವ ಅಸಮರ್ಥತೆಯನ್ನು ಪ್ರದರ್ಶಿಸಿದೆ” ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಬುಧವಾರ ಹೇಳಿದ್ದಾರೆ.

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, “ಗಂಭೀರ ಕಾಳಜಿಯ ವಿಷಯಗಳ ಬಗ್ಗೆ ಬಿಜೆಪಿ ಮೌನವಹಿಸಿದೆ. ಇದು ಬಿಜೆಪಿ ಅಧಿಕಾರಾವಧಿಯ ನಿರ್ಣಾಯಕ ಲಕ್ಷಣವಾಗಿದೆ” ಎಂದು ಟೀಕಿಸಿದ್ದಾರೆ.

ಡಿಸೆಂಬರ್ 9ರಂದು ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ಉಭಯ ದೇಶಗಳ ಸೈನಿಕರ ನಡುವೆ ಘರ್ಷಣೆ ನಡೆದಾಗಿನಿಂದ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಬೇಕೆಂದು ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ.

ಜೂನ್ 2020ರಲ್ಲಿ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಘರ್ಷಣೆ ಏರ್ಪಟ್ಟಿತ್ತು. ನಂತರದಲ್ಲಿ ಉಭಯ ದೇಶಗಳ ನಡುವೆ ನಡೆದ ಘಟನೆ ಇದಾಗಿದೆ. ಗಾಲ್ವಾನ್ ಘಟನೆಯು 20 ಭಾರತೀಯ ಸೈನಿಕರ ಸಾವಿಗೆ ಕಾರಣವಾಯಿತು ಎಂದು ಚೀನಾ ಹೇಳಿಕೊಂಡಿದೆ.

“ಸಂಸತ್ತಿನಲ್ಲಿ ಈ ವಿಷಯದ ಬಗ್ಗೆ ಚರ್ಚೆ ಮಾಡಲು ಅವಕಾಶ ನೀಡಿದರೆ ಹಲವಾರು ನಿರ್ಣಾಯಕ ಪ್ರಶ್ನೆಗಳಿಗೆ ಉತ್ತರ ಸಿಗುತ್ತದೆ” ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾದ ಸೋನಿಯಾ ಪ್ರತಿಕ್ರಿಯೆ ನೀಡಿದ್ದಾರೆ.

“ಚೀನಾ ನಮ್ಮ ಮೇಲೆ ನಿರಂತರವಾಗಿ ದಾಳಿ ಮಾಡಲು ಏಕೆ ಧೈರ್ಯ ಮಾಡುತ್ತದೆ?” ಎಂದು ಸಭೆಯಲ್ಲಿ ಅವರು ಪ್ರಶ್ನಿಸಿದ್ದಾರೆ. “ಈ ದಾಳಿಗಳನ್ನು ಹಿಮ್ಮೆಟ್ಟಿಸಲು ಯಾವ ಸಿದ್ಧತೆಗಳನ್ನು ಮಾಡಲಾಗಿದೆ? ಇನ್ನೂ ಏನು ಮಾಡಬೇಕಾಗಿದೆ? ಭವಿಷ್ಯದಲ್ಲಿ ಆಕ್ರಮಣಗಳು ಆಗದಂತೆ ಚೀನಾವನ್ನು ತಡೆಯಲು ಸರ್ಕಾರ ಯಾವ ನೀತಿ ರೂಪಿಸಿದೆ? ನಾವು ಚೀನಾದೊಂದಿಗೆ ತೀವ್ರ ವ್ಯಾಪಾರ ಕೊರತೆಯನ್ನು ಹೊಂದಿದ್ದೇವೆ. ನಾವು ರಫ್ತು ಮಾಡುವುದಕ್ಕಿಂತ ಹೆಚ್ಚಿನದನ್ನು ಆಮದು ಮಾಡಿಕೊಳ್ಳುತ್ತಿದ್ದೇವೆ. ಚೀನಾ ಸಾಧಿಸುತ್ತಿರುವ ಮಿಲಿಟರಿ ಹಗೆತನಕ್ಕೆ ನಮ್ಮ ಆರ್ಥಿಕ ಪ್ರತಿಕ್ರಿಯೆ ಏಕೆ ಇಲ್ಲ?” ಎಂದು ಸೋನಿಯಾ ಅವರು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

“ತನ್ನ ನೀತಿಗಳು ಮತ್ತು ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುವುದು ಕೇಂದ್ರ ಸರ್ಕಾರದ ಕರ್ತವ್ಯ” ಎಂದಿರುವ ಸೋನಿಯಾ ಗಾಂಧಿ, “ಸ್ಪಷ್ಟವಾದ ಚರ್ಚೆಯು ದೇಶದ ಪ್ರತಿಕ್ರಿಯೆಯನ್ನು ಬಲಪಡಿಸುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ಇದಕ್ಕೆ ವಿರುದ್ಧವಾಗಿ ಸರ್ಕಾರ ಕೆಲಸ ಮಾಡುತ್ತಿದೆ. ವಿಭಜಕ ನೀತಿಗಳನ್ನು ಅನುಸರಿಸುತ್ತಿದೆ, ದ್ವೇಷವನ್ನು ಹರಡುತ್ತಿದೆ, ನಮ್ಮ ಸಮಾಜದ ಕೆಲವು ವರ್ಗಗಳನ್ನು ಟಾರ್ಗೆಟ್ ಮಾಡುತ್ತಿದೆ. ಆದರೆ ವಿದೇಶಿ ಬೆದರಿಕೆಗಳ ವಿರುದ್ಧ ದೇಶವು ಒಂದಾಗಿ ನಿಲ್ಲುವುದಕ್ಕೆ ಸರ್ಕಾರ ತಡೆಯಾಗಿದೆ” ಎಂದು ಅವರು ದೂರಿದ್ದಾರೆ.

“ಇಂತಹ ಸಮಯದಲ್ಲಿ ನಮ್ಮ ಜನರನ್ನು ಒಗ್ಗೂಡಿಸುವುದು ಸರ್ಕಾರದ ಪ್ರಯತ್ನ ಮತ್ತು ಜವಾಬ್ದಾರಿಯಾಗಿರಬೇಕು. ಕಳೆದ ಹಲವಾರು ವರ್ಷಗಳಿಂದ ಮಾಡುತ್ತಿರುವಂತೆ ಜನರನ್ನು ವಿಭಜಿಸಬಾರದು” ಎಂದು ಮನವಿ ಮಾಡಿದ್ದಾರೆ.

ಪ್ರತಿಪಕ್ಷಗಳನ್ನು ಟಾರ್ಗೆಟ್ ಮಾಡುವಲ್ಲಿ, ಭಿನ್ನಧ್ವನಿಗಳನ್ನು ಪ್ರಶ್ನಿಸುವಲ್ಲಿ, ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳುವಲ್ಲಿ, ಸಂಸ್ಥೆಗಳನ್ನು ದುರ್ಬಲಗೊಳಿಸುವಲ್ಲಿ ಬಿಜೆಪಿ ಸರ್ಕಾರ ತೊಡಗಿದೆ ಎಂದು ಆರೋಪಿಸಿದ್ದಾರೆ. “ಇದು ಕೇಂದ್ರದಲ್ಲಿ ಮಾತ್ರವಲ್ಲ, ಬಿಜೆಪಿ ಆಡಳಿತ ನಡೆಸುವ ಪ್ರತಿಯೊಂದು ರಾಜ್ಯದಲ್ಲೂ ನಡೆಯುತ್ತಿದೆ” ಎಂದು ವಿಷಾದಿಸಿದ್ದಾರೆ.

ಪ್ರತಿಪಕ್ಷಗಳಿಂದ ಪ್ರತಿಭಟನೆ

ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯ ನಂತರ, ಸೋನಿಯಾ ಗಾಂಧಿ ಮತ್ತು ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಸಂಸತ್ತಿನ ಮಹಾತ್ಮ ಗಾಂಧಿ ಪ್ರತಿಮೆ ಬಳಿ ನಡೆದ ವಿರೋಧ ಪಕ್ಷಗಳ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು. ಚಳಿಗಾಲದ ಅಧಿವೇಶನದಲ್ಲಿ ಭಾರತ ಮತ್ತು ಚೀನಾ ನಡುವಿನ ಗಡಿ ವಿವಾದದ ಬಗ್ಗೆ ಚರ್ಚೆ ನಡೆಸಬೇಕು ಎಂದು ಒತ್ತಾಯಿಸಿದರು.

ಶಿವಸೇನೆ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ದ್ರಾವಿಡ ಮುನ್ನೇತ್ರ ಕಳಗಂ, ರಾಷ್ಟ್ರೀಯ ಜನತಾದಳ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಸೇರಿದಂತೆ ಸುಮಾರು 12 ಪ್ರತಿಪಕ್ಷಗಳ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಮೋದಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

“ನಾವು ಚೀನಾದ ಬಗ್ಗೆ ಚರ್ಚೆಯನ್ನು ಬಯಸುತ್ತೇವೆ, ನಾವು ಮಿಲಿಟರಿ ರಹಸ್ಯಗಳನ್ನು ಕೇಳುತ್ತಿಲ್ಲ” ಎಂದು ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

“ಭಾರತ ಮತ್ತು ಚೀನಾ ಸೇನೆಗಳ ಕಮಾಂಡರ್‌ಗಳ ನಡುವಿನ 16 ಸುತ್ತಿನ ಮಾತುಕತೆ ಏನು ಸಾಧಿಸಿದೆ?” ಎಂದು ಅವರು ಪ್ರಶ್ನಿಸಿದ್ದಾರೆ.

ಖರ್ಗೆಯವರು ಮಾತನಾಡಿ, “ಚರ್ಚೆಯನ್ನು ನಡೆಸದಿದ್ದರೆ ಮತ್ತು ಕೇವಲ ಏಕಪಕ್ಷೀಯ ಪ್ರತಿಕ್ರಿಯೆ ಇದ್ದರೆ, ಅದು ಯಾವ ಅರ್ಥವನ್ನು ಸೂಚಿಸುತ್ತದೆ?” ಖರ್ಗೆ ಕೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...