Homeಮುಖಪುಟಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

- Advertisement -
- Advertisement -

“ಮೋದಿ ಸರ್ಕಾರವು ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ. ಅವರು ಭವಿಷ್ಯದ ಬಗ್ಗೆ ಭಯಪಡುತ್ತಾರೆ ಜೊತೆಗೆ ವರ್ತಮಾನವನ್ನೂ ನಂಬುವುದಿಲ್ಲ” ಎಂದು ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾಷಣ ದೇಶದಲ್ಲಿ ಹೆಚ್ಚು ಚರ್ಚೆಗೆ ಬಂದ ಒಂದು ದಿನದ ಬಳಿಕ ಸಂಸದೆ ಮಹುವಾ ಮೊಯಿತ್ರಾ ತಮ್ಮ ಭಾಷಣದಲ್ಲಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

80% ವರ್ಸಸ್‌ 20% ಜನರ ನಡುವಿನ ಯುದ್ಧವು ನಮ್ಮ ಗಣರಾಜ್ಯವನ್ನು ನಾಶಮಾಡುವ ಅಪಾಯಕ್ಕೆ ಈ ಸರ್ಕಾರ ದೂಡಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಸಂಸದೆಯ ಭಾಷಣ  ಐತಿಹಾಸಿಕ ರೈತರ ಆಂದೋಲನ, ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಿದ್ದ ‘ಬುಲ್ಲಿ ಡೀಲ್ಸ್’ ಅಪ್ಲಿಕೇಶನ್ ಮತ್ತು ಪೆಗಾಸಸ್ ಸ್ಪೈವೇರ್ ವಿವಾದಗಳನ್ನು ಒಳಗೊಂಡಿತ್ತು.

ನರೇಂದ್ರ ಮೋದಿ ಸರ್ಕಾರದಿಂದ ಕಳೆದ ಕೆಲವು ವರ್ಷಗಳಲ್ಲಿ ನಡೆದಿರುವ ಹಲವಾರು ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಮಹುವಾ ಧ್ವನಿ ಎತ್ತಿದ್ದಾರೆ. ಭಾರತವು ಮಾನವ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 160 ದೇಶಗಳಲ್ಲಿ 17 ಸ್ಥಾನಗಳನ್ನು ಕುಸಿದು 111 ನೇ ಸ್ಥಾನಕ್ಕೆ ಬಂದಿರುವ ಬಗ್ಗೆ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 180 ದೇಶಗಳಲ್ಲಿ 142 ನೇ ಸ್ಥಾನದಲ್ಲಿರುವುದು, ದೇಶವು ಇಂದು ಪತ್ರಕರ್ತರಿಗೆ ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಒಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

“ಸರ್ಕಾರವು ತನ್ನ ಸ್ವಂತ ನಾಗರಿಕರ ಮೇಲೆ ವರ್ಷಗಳ ಕಾಲ ಕಣ್ಣಿಡಲು ತಂತ್ರಜ್ಞಾನವನ್ನು ಖರೀದಿಸಲು ತೆರಿಗೆದಾರರ ಹಣವನ್ನು ಖರ್ಚು ಮಾಡಿದೆ. ಇವರ ಪ್ರಕಾರ ಹೇಳುವುದಾದರೆ, ನ್ಯೂಯಾರ್ಕ್ ಟೈಮ್ಸ್ ಸುಳ್ಳು ಹೇಳುತ್ತಿದೆ, ದಿ ವೈರ್ ಸುಳ್ಳು ಹೇಳುತ್ತಿದೆ, ಆಮ್ನೆಸ್ಟಿ ಸುಳ್ಳು ಹೇಳುತ್ತಿದೆ, ಫ್ರೆಂಚ್ ಸರ್ಕಾರ ಸುಳ್ಳು ಹೇಳುತ್ತಿದೆ, ಜರ್ಮನ್ ಸರ್ಕಾರ ಸುಳ್ಳು ಹೇಳುತ್ತಿದೆ, ಯುಎಸ್ ಸರ್ಕಾರ ಸುಳ್ಳು ಹೇಳುತ್ತಿದೆ, NSO ವಿರುದ್ಧ ಮೊಕದ್ದಮೆ ಹೂಡಿರುವ WhatsApp ಮತ್ತು Apple ಸುಳ್ಳು ಹೇಳುತ್ತಿದೆ. ಆದರೆ, ಈ ಸರ್ಕಾರ ಮಾತ್ರ ಪೆಗಾಸಸ್‌ನ ಸತ್ಯ ತಿಳಿದಿದೆ. ಈ ಸರ್ಕಾರ ಸುಪ್ರೀಂ ಕೋರ್ಟ್‌ನನ್ನೂ ದಾರಿ ತಪ್ಪಿಸಿದೆ” ಎಂದು ಕಿಡಿ ಕಾರಿದ್ದಾರೆ.

ಚುನಾವಣೆಗೆ ಮುನ್ನ ವಿರೋಧ ಪಕ್ಷದ ನಾಯಕರ ಮೇಲೆ ದಾಳಿಗಳು, ಹಿಂದೂ ಮೂಲಭೂತವಾದಿಗಳಿಂದ ಮುಸ್ಲಿಮರನ್ನು ಗುರಿಯಾಗಿಸುವುದು. ದೇಶದ 19 ಪಟ್ಟಣಗಳಲ್ಲಿ ಅದೇ ಗುಂಪುಗಳಿಂದ ಕ್ರಿಶ್ಚಿಯನ್ನರ ಮೇಲೆ ಇತ್ತೀಚಿಗೆ ನಡೆಸಿದ ದಾಳಿಗಳು. ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ. ಐಎಎಸ್ ಕೇಡರ್ ನಿಯಮಗಳನ್ನು ಬದಲಾಯಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹುವಾ ಭಾಷಣಕ್ಕೆ ಪ್ರತಿಕ್ರಿಯಿಸಿ ಸಂಸದೆ ರಮಾ ದೇವಿ, ದಯವಿಟ್ಟು ಮೃದುವಾಗಿ ಮಾತನಾಡಿ, ಕೋಪಗೊಳ್ಳಬೇಡಿ. ಒಳ್ಳೆಯ ರೀತಿಯಲ್ಲಿ ಹೇಳಿ (ಮಹುವಾ ಜೀ, ಥೋಡಾ ಸಾ ಪ್ರೇಮ್ ಸೆ ಬೋಲಿಯೇ. ಇತ್ನಾ ಗುಸ್ಸಾ ಮತ್ ಕರಿಯಾ. ಆಚೆ ಸೆ ಬೋಲಿಯೇ) ಎಂದಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ,”ನಾನು ಕೋಪ ಅಥವಾ ಪ್ರೀತಿಯಿಂದ ಮಾತನಾಡಬೇಕು ಎಂದು ನನಗೆ ಉಪನ್ಯಾಸ ನೀಡಲು, ನನಗೆ ಅಡ್ಡಿಪಡಿಸಲು ಅಧ್ಯಕ್ಷರು ಯಾರು..? ಇದಕ್ಕೂ ನಿಮಗೂ ಸಂಬಂಧವಿಲ್ಲ. ನೀವು ಲೋಕಸಭೆಯ ನೈತಿಕ ವಿಜ್ಞಾನ ಶಿಕ್ಷಕರಲ್ಲ” ಎಂದು ಹರಿಹಾಯ್ದಿದ್ದಾರೆ.

ಇನ್ನು ಸಂಸದೆಯ ಭಾಷಣ ಮಧ್ಯದಲ್ಲಿರುವಾಗಲೇ ಲೋಕಸಭೆಯ ಅಧ್ಯಕ್ಷೆ, ಬಿಜೆಪಿ ಸಂಸದೆ ರಮಾ ದೇವಿ ನಿಗದಿತ ಸಮಯಕ್ಕಿಂತ ಮುಂಚೆಯೇ ಭಾಷಣವನ್ನು ಹಠಾತ್ ಆಗಿ ಮೊಟಕುಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಮಹುವಾ ಮೊಯಿತ್ರಾ ಲೋಕಸಭೆಯ ಹೊರಗೆ ಮಾಧ್ಯಮಗಳ ಮುಂದೆ ಭಾಷಣ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...