Homeಮುಖಪುಟಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

- Advertisement -
- Advertisement -

“ಮೋದಿ ಸರ್ಕಾರವು ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ. ಅವರು ಭವಿಷ್ಯದ ಬಗ್ಗೆ ಭಯಪಡುತ್ತಾರೆ ಜೊತೆಗೆ ವರ್ತಮಾನವನ್ನೂ ನಂಬುವುದಿಲ್ಲ” ಎಂದು ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾಷಣ ದೇಶದಲ್ಲಿ ಹೆಚ್ಚು ಚರ್ಚೆಗೆ ಬಂದ ಒಂದು ದಿನದ ಬಳಿಕ ಸಂಸದೆ ಮಹುವಾ ಮೊಯಿತ್ರಾ ತಮ್ಮ ಭಾಷಣದಲ್ಲಿ ಒಕ್ಕೂಟ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

80% ವರ್ಸಸ್‌ 20% ಜನರ ನಡುವಿನ ಯುದ್ಧವು ನಮ್ಮ ಗಣರಾಜ್ಯವನ್ನು ನಾಶಮಾಡುವ ಅಪಾಯಕ್ಕೆ ಈ ಸರ್ಕಾರ ದೂಡಿದೆ ಎಂದು ಒಕ್ಕೂಟ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಸಂಸದೆಯ ಭಾಷಣ  ಐತಿಹಾಸಿಕ ರೈತರ ಆಂದೋಲನ, ಮುಸ್ಲಿಂ ಮಹಿಳೆಯರನ್ನು ಹರಾಜು ಹಾಕಿದ್ದ ‘ಬುಲ್ಲಿ ಡೀಲ್ಸ್’ ಅಪ್ಲಿಕೇಶನ್ ಮತ್ತು ಪೆಗಾಸಸ್ ಸ್ಪೈವೇರ್ ವಿವಾದಗಳನ್ನು ಒಳಗೊಂಡಿತ್ತು.

ನರೇಂದ್ರ ಮೋದಿ ಸರ್ಕಾರದಿಂದ ಕಳೆದ ಕೆಲವು ವರ್ಷಗಳಲ್ಲಿ ನಡೆದಿರುವ ಹಲವಾರು ಮಾನವ ಹಕ್ಕುಗಳ ಉಲ್ಲಂಘನೆಗಳ ಬಗ್ಗೆ ಮಹುವಾ ಧ್ವನಿ ಎತ್ತಿದ್ದಾರೆ. ಭಾರತವು ಮಾನವ ಸ್ವಾತಂತ್ರ್ಯ ಸೂಚ್ಯಂಕದಲ್ಲಿ 160 ದೇಶಗಳಲ್ಲಿ 17 ಸ್ಥಾನಗಳನ್ನು ಕುಸಿದು 111 ನೇ ಸ್ಥಾನಕ್ಕೆ ಬಂದಿರುವ ಬಗ್ಗೆ, ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಭಾರತವು 180 ದೇಶಗಳಲ್ಲಿ 142 ನೇ ಸ್ಥಾನದಲ್ಲಿರುವುದು, ದೇಶವು ಇಂದು ಪತ್ರಕರ್ತರಿಗೆ ಅತ್ಯಂತ ಅಪಾಯಕಾರಿ ಸ್ಥಳಗಳಲ್ಲಿ ಒಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅದಾನಿ-ಮಮತಾ ಬ್ಯಾನರ್ಜಿ ಭೇಟಿ: ಅದಾನಿ ಕುರಿತ ತಮ್ಮ ಟ್ವೀಟ್‌ಗಳಿಗೆ ಬದ್ದ ಎಂದ ಮಹುವಾ ಮೊಯಿತ್ರಾ

“ಸರ್ಕಾರವು ತನ್ನ ಸ್ವಂತ ನಾಗರಿಕರ ಮೇಲೆ ವರ್ಷಗಳ ಕಾಲ ಕಣ್ಣಿಡಲು ತಂತ್ರಜ್ಞಾನವನ್ನು ಖರೀದಿಸಲು ತೆರಿಗೆದಾರರ ಹಣವನ್ನು ಖರ್ಚು ಮಾಡಿದೆ. ಇವರ ಪ್ರಕಾರ ಹೇಳುವುದಾದರೆ, ನ್ಯೂಯಾರ್ಕ್ ಟೈಮ್ಸ್ ಸುಳ್ಳು ಹೇಳುತ್ತಿದೆ, ದಿ ವೈರ್ ಸುಳ್ಳು ಹೇಳುತ್ತಿದೆ, ಆಮ್ನೆಸ್ಟಿ ಸುಳ್ಳು ಹೇಳುತ್ತಿದೆ, ಫ್ರೆಂಚ್ ಸರ್ಕಾರ ಸುಳ್ಳು ಹೇಳುತ್ತಿದೆ, ಜರ್ಮನ್ ಸರ್ಕಾರ ಸುಳ್ಳು ಹೇಳುತ್ತಿದೆ, ಯುಎಸ್ ಸರ್ಕಾರ ಸುಳ್ಳು ಹೇಳುತ್ತಿದೆ, NSO ವಿರುದ್ಧ ಮೊಕದ್ದಮೆ ಹೂಡಿರುವ WhatsApp ಮತ್ತು Apple ಸುಳ್ಳು ಹೇಳುತ್ತಿದೆ. ಆದರೆ, ಈ ಸರ್ಕಾರ ಮಾತ್ರ ಪೆಗಾಸಸ್‌ನ ಸತ್ಯ ತಿಳಿದಿದೆ. ಈ ಸರ್ಕಾರ ಸುಪ್ರೀಂ ಕೋರ್ಟ್‌ನನ್ನೂ ದಾರಿ ತಪ್ಪಿಸಿದೆ” ಎಂದು ಕಿಡಿ ಕಾರಿದ್ದಾರೆ.

ಚುನಾವಣೆಗೆ ಮುನ್ನ ವಿರೋಧ ಪಕ್ಷದ ನಾಯಕರ ಮೇಲೆ ದಾಳಿಗಳು, ಹಿಂದೂ ಮೂಲಭೂತವಾದಿಗಳಿಂದ ಮುಸ್ಲಿಮರನ್ನು ಗುರಿಯಾಗಿಸುವುದು. ದೇಶದ 19 ಪಟ್ಟಣಗಳಲ್ಲಿ ಅದೇ ಗುಂಪುಗಳಿಂದ ಕ್ರಿಶ್ಚಿಯನ್ನರ ಮೇಲೆ ಇತ್ತೀಚಿಗೆ ನಡೆಸಿದ ದಾಳಿಗಳು. ಹರಿದ್ವಾರದ ಧರ್ಮ ಸಂಸದ್‌ನಲ್ಲಿ ಮುಸ್ಲಿಮರ ನರಹತ್ಯೆಗೆ ಕರೆ. ಐಎಎಸ್ ಕೇಡರ್ ನಿಯಮಗಳನ್ನು ಬದಲಾಯಿಸುವ ಕೇಂದ್ರ ಸರ್ಕಾರದ ಪ್ರಯತ್ನಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಹುವಾ ಭಾಷಣಕ್ಕೆ ಪ್ರತಿಕ್ರಿಯಿಸಿ ಸಂಸದೆ ರಮಾ ದೇವಿ, ದಯವಿಟ್ಟು ಮೃದುವಾಗಿ ಮಾತನಾಡಿ, ಕೋಪಗೊಳ್ಳಬೇಡಿ. ಒಳ್ಳೆಯ ರೀತಿಯಲ್ಲಿ ಹೇಳಿ (ಮಹುವಾ ಜೀ, ಥೋಡಾ ಸಾ ಪ್ರೇಮ್ ಸೆ ಬೋಲಿಯೇ. ಇತ್ನಾ ಗುಸ್ಸಾ ಮತ್ ಕರಿಯಾ. ಆಚೆ ಸೆ ಬೋಲಿಯೇ) ಎಂದಿದ್ದರು. ಇದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಟಿಎಂಸಿ ಸಂಸದೆ ,”ನಾನು ಕೋಪ ಅಥವಾ ಪ್ರೀತಿಯಿಂದ ಮಾತನಾಡಬೇಕು ಎಂದು ನನಗೆ ಉಪನ್ಯಾಸ ನೀಡಲು, ನನಗೆ ಅಡ್ಡಿಪಡಿಸಲು ಅಧ್ಯಕ್ಷರು ಯಾರು..? ಇದಕ್ಕೂ ನಿಮಗೂ ಸಂಬಂಧವಿಲ್ಲ. ನೀವು ಲೋಕಸಭೆಯ ನೈತಿಕ ವಿಜ್ಞಾನ ಶಿಕ್ಷಕರಲ್ಲ” ಎಂದು ಹರಿಹಾಯ್ದಿದ್ದಾರೆ.

ಇನ್ನು ಸಂಸದೆಯ ಭಾಷಣ ಮಧ್ಯದಲ್ಲಿರುವಾಗಲೇ ಲೋಕಸಭೆಯ ಅಧ್ಯಕ್ಷೆ, ಬಿಜೆಪಿ ಸಂಸದೆ ರಮಾ ದೇವಿ ನಿಗದಿತ ಸಮಯಕ್ಕಿಂತ ಮುಂಚೆಯೇ ಭಾಷಣವನ್ನು ಹಠಾತ್ ಆಗಿ ಮೊಟಕುಗೊಳಿಸಿದ್ದಾರೆ. ಇದರಿಂದ ಕೋಪಗೊಂಡ ಮಹುವಾ ಮೊಯಿತ್ರಾ ಲೋಕಸಭೆಯ ಹೊರಗೆ ಮಾಧ್ಯಮಗಳ ಮುಂದೆ ಭಾಷಣ ಮಾಡಿ, ಪ್ರತಿಭಟನೆ ನಡೆಸಿದ್ದಾರೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ವೈರಲ್‌ ವಿಡಿಯೊದಲ್ಲಿರುವ ಈ ಮಹಿಳೆ ಮುಸ್ಲಿಂ ಅಲ್ಲ, ಪಂಜಾಬಿ ಹಿಂದೂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...