Homeಮುಖಪುಟಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗ: ಎಎಪಿಯಿಂದ ದೆಹಲಿಯಾದ್ಯಂತ 2,500 ಸಭೆ

- Advertisement -
- Advertisement -

”ಬಿಜೆಪಿಯು ಸಿಬಿಐ ಇಲಾಖೆಯನ್ನು ದುರುಪಯೋಗಪಡಿಸಿಕೊಂಡು ನಮ್ಮ ಪಕ್ಷದ ಹಿರಿಯ ನಾಯಕ ಮತ್ತು ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದೆ. ಬಿಜೆಪಿಯ ಈ ಸರ್ವಾಧಿಕಾರದ ಧೋರಣೆ ಬಗ್ಗೆ ಜನರಿಗೆ ತಿಳಿಸಲು ನಾವು ದೆಹಲಿಯಾದ್ಯಂತ 2,500 ಬೀದಿ ಸಭೆಗಳನ್ನು ನಡೆಸಲ್ಲಿದ್ದೇವೆ” ಎಂದು ಆಮ್‌ ಆದ್ಮಿ ಪಕ್ಷ ಹೇಳಿದೆ.

ಗುರುವಾರ, ದೆಹಲಿ ರಾಜ್ಯ ಸಂಚಾಲಕ ಗೋಪಾಲ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಂಸ್ಥಿಕ ಸಭೆಯಲ್ಲಿ,  ”ಮೋದಿ ಸರ್ಕಾರದಿಂದ ಕೇಂದ್ರೀಯ ಸಂಸ್ಥೆಗಳ ದುರುಪಯೋಗದ ಬಗ್ಗೆ” ಜನರಿಗೆ ತಿಳಿಸಲು ಬಹಿರಂಗ ಸಭೆಗಳು ಮತ್ತು ಬೀದಿ ಸಭೆಗಳನ್ನು ಆಯೋಜಿಸಲು ರಾಜ್ಯ ಘಟಕ ನಿರ್ಧರಿಸಿದೆ.

ಮಾರ್ಚ್ 3ರಂದು ದೆಹಲಿಯ ಎಲ್ಲಾ 70 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ವಯಂಸೇವಕ ಸಭೆ ನಡೆಸುವ ಮೂಲಕ ಬಿಜೆಪಿಯ ನಡೆಯನ್ನು ಬಹಿರಂಗಪಡಿಸುತ್ತೇವೆ ಎಂದು ರೈ ಹೇಳಿದರು.

”ಮಾರ್ಚ್ 4ರಂದು, ಪಕ್ಷವು ರಾಜ್ಯ ಮಟ್ಟದಲ್ಲಿ ಬಹಿರಂಗ ಸಭೆಗಳನ್ನು ನಡೆಸುತ್ತದೆ ಮತ್ತು ಮಾರ್ಚ್ 6 ಮತ್ತು 7ರಂದು ದೆಹಲಿಯ ಪ್ರತಿ ಮತಗಟ್ಟೆ ವ್ಯಾಪ್ತಿಗಳಲ್ಲಿ ಸಭೆಗಳನ್ನು ಆಯೋಜಿಸುತ್ತದೆ. ಅಂತಿಮವಾಗಿ ಮಾರ್ಚ್ 10ರಂದು, ದೆಹಲಿಯ ಪ್ರತಿ ಬೀದಿಗಳಲ್ಲಿ ಸಭೆಗಳನ್ನು ಆಯೋಜಿಸುವ ಮೂಲಕ ಎಲ್ಲರನ್ನೂ ತಲುಪುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಸಿಸೋಡಿಯಾ, ಜೈನ್ ಬಿಜೆಪಿ ಸೇರಿದರೆ ನಾಳೆಯೇ ಜೈಲಿನಿಂದ ಹೊರಬರುತ್ತಾರೆ: ಅರವಿಂದ್ ಕೇಜ್ರಿವಾಲ್

ಎಎಪಿ ದೆಹಲಿಯಲ್ಲಿ 2,500ಕ್ಕೂ ಹೆಚ್ಚು ಸಭೆಗಳನ್ನು ನಡೆಸಲಿದ್ದು, ಅಲ್ಲಿ ಬಿಜೆಪಿಯ ಸರ್ವಾಧಿಕಾರದ ಬಗ್ಗೆ ಜನರಿಗೆ ತಿಳಿಸಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ವಾಧಿಕಾರಿ ಧೋರಣೆ ಅನುಸರಿಸಿ ದೇಶದ ಅತ್ಯುತ್ತಮ ಶಿಕ್ಷಣ ಸಚಿವ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿದ್ದಾರೆ ಮತ್ತು ಸತ್ಯೇಂದ್ರ ಜೈನ್ ಅವರನ್ನು ಜೈಲಿನಲ್ಲಿಡಲು ಕೇಂದ್ರೀಯ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ” ಎಂದು ನಗರಾಡಳಿತದಲ್ಲಿ ಪರಿಸರ ಸಚಿವರೂ ಆಗಿರುವ ರೈ ಹೇಳಿದರು.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಎಲ್ಲಾ ಶಾಸಕರು ಮತ್ತು ಕೌನ್ಸಿಲರ್‌ಗಳೊಂದಿಗೆ ಸಭೆ ನಡೆಸಿ, ಜನರನ್ನು ತಲುಪಿ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಸುವಂತೆ ಕೇಳಿಕೊಂಡರು. ಬಿಜೆಪಿಯ ಪ್ರತಿಯೊಂದು ಸಂಚು ಮತ್ತು ಷಡ್ಯಂತ್ರವನ್ನು ಜನರಿಗೆ ತಲುಪಿಸುವ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು.

”ನಾವು ದೆಹಲಿಯ ಪ್ರತಿ ಮೂಲೆಮೂಲೆಗಳಲ್ಲಿ ಸಭೆಗಳನ್ನು ಆಯೋಜಿಸುತ್ತೇವೆ ಮತ್ತು ಆಮ್ ಆದ್ಮಿ ಪಕ್ಷವನ್ನು ತಡೆಯಲು ಪ್ರಧಾನಿ ಹಮ್ಮಿಕೊಂಡಿರುವ ಪಿತೂರಿಯನ್ನು ಜನರಿಗೆ ಬಹಿರಂಗಪಡಿಸುತ್ತೇವೆ. ನಮ್ಮ ನಾಯಕರನ್ನು ಬಂಧಿಸಲು ಸುಳ್ಳು ಆರೋಪಗಳನ್ನು ಮಾಡಿರುವ ಬಗ್ಗೆ ಜನರಿಗೆ ತಿಳಿಸುತ್ತೇವೆ ಎಂದು ಕೇಜ್ರಿವಾಲ್ ಹೇಳಿದರು.

”ಸದ್ಯಕ್ಕೆ ರಾಜ್ಯ ಮಟ್ಟದಲ್ಲಿ ಈ ಕಾರ್ಯಕ್ರಮ ನಡೆಯುತ್ತಿದ್ದು, ಶೀಘ್ರದಲ್ಲಿಯೇ ರಾಷ್ಟ್ರಮಟ್ಟದಲ್ಲಿಯೂ ಕಾರ್ಯಕ್ರಮ ನಡೆಸಲಿದೆ” ಎಂದು ಹಿರಿಯ ಮುಖಂಡರು ತಿಳಿಸಿದ್ದಾರೆ.

”ನಮ್ಮ ಪಕ್ಷದ ನಾಯಕರನ್ನು ಜೈಲಿಗೆ ಯಾಕೆ ಕಳುಹಿಸಿದ್ದಾರೆ? ನಿಜವಾಗಿಯೂ ಏನಾಗುತ್ತಿದೆ ಎಂಬುದನ್ನೂ  ಜನರಿಗೆ ತಿಳಿಸುತ್ತೇವೆ” ಎಂದು ಅರವಿಂದ್ ಕೇಜ್ರಿವಾಲ್ ಬುಧವಾರ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...