Homeರಾಜಕೀಯಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆಗಳನ್ನು ಮಂಡಿಸಲಿರುವ ಮೋದಿ ಸರ್ಕಾರ

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ 24 ಹೊಸ ಮಸೂದೆಗಳನ್ನು ಮಂಡಿಸಲಿರುವ ಮೋದಿ ಸರ್ಕಾರ

- Advertisement -
- Advertisement -

ಜುಲೈ 18 ರಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ಹಲವಾರು ಮಸೂದೆಗಳನ್ನು ಮಂಡಿಸಲು ಪ್ರಯತ್ನಿಸಲಿದ್ದು, ಸರ್ಕಾರದ ಶಾಸಕಾಂಗ ಕಾರ್ಯಸೂಚಿಯು ಅಂಗೀಕಾರಕ್ಕಾಗಿ 24 ಮಸೂದೆಗಳನ್ನು ಒಳಗೊಂಡಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಮುಂಗಾರು ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ಚುನಾವಣೆಗೆ ಮತದಾನ ನಡೆಯಲಿದೆ.

ಕಂಟೋನ್ಮೆಂಟ್ ಮಸೂದೆ, ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆ ಮತ್ತು ದಿವಾಳಿತನ ಸಂಹಿತೆ (ತಿದ್ದುಪಡಿ) ಮಸೂದೆಗಳು ಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಪರಿಚಯಿಸಲಾಗುವ ಕೆಲವು ಮಸೂದೆಗಳಾಗಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಲೋಕಸಭೆಯ ಸೆಕ್ರೆಟರಿಯೇಟ್ ಹೊರಡಿಸಿದ ಬುಲೆಟಿನ್ ಪ್ರಕಾರ, ಕಂಟೋನ್ಮೆಂಟ್ ಮಸೂದೆಯು ದೇಶಾದ್ಯಂತದ ಪುರಸಭೆಗಳೊಂದಿಗೆ ಹೊಂದಾಣಿಕೆ ಮಾಡಿ ಹೆಚ್ಚಿನ ಅಭಿವೃದ್ಧಿ ಉದ್ದೇಶಗಳನ್ನು ಸಾಧಿಸುವ ಬಗ್ಗೆ ಪ್ರಸ್ತಾಪಿಸುತ್ತದೆ ಮತ್ತು ಕಂಟೋನ್ಮೆಂಟ್‌ಗಳಲ್ಲಿ ‘ಜೀವನ’ ವನ್ನು ಸುಗಮಗೊಳಿಸುತ್ತದೆ.

ಬಹು-ರಾಜ್ಯ ಸಹಕಾರ ಸಂಘಗಳ (ತಿದ್ದುಪಡಿ) ಮಸೂದೆಯು, ಸಹಕಾರಿ ಸಂಸ್ಥೆಗಳಲ್ಲಿ ಸರ್ಕಾರದ ಪಾತ್ರವನ್ನು ತರ್ಕಬದ್ಧಗೊಳಿಸಲು ಮತ್ತು ಬಹು-ರಾಜ್ಯ ಸಹಕಾರ ಸಂಘಗಳ ಕೆಲಸದಲ್ಲಿ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಮತ್ತು ಇದರಿಂದಾಗಿ ಈ ಸಂಘಗಳಲ್ಲಿ ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸಲು ಮತ್ತು ಅವರ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಅನುಕೂಲಕರ ವಾತಾವರಣವನ್ನು ಸೃಷ್ಟಿಸಲು ಪ್ರಯತ್ನಿಸುತ್ತದೆ.

ಪರಿಚಯಕ್ಕಾಗಿ ಪಟ್ಟಿ ಮಾಡಲಾದ ಇತರ ಕೆಲವು ಮಸೂದೆಗಳೆಂದರೆ, ಕಾಫಿ (ಪ್ರಚಾರ ಮತ್ತು ಅಭಿವೃದ್ಧಿ) ಮಸೂದೆ, ಉದ್ಯಮಗಳು ಮತ್ತು ಸೇವೆಗಳ ಕೇಂದ್ರಗಳ ಅಭಿವೃದ್ಧಿ ಮಸೂದೆ, ಇದು ವಿಶೇಷ ಆರ್ಥಿಕ ವಲಯಗಳ ಕಾಯಿದೆ, 2005 ಮತ್ತು ಚೌಕಟ್ಟಿನ ನಿಯಮಗಳನ್ನು ಪರಿಷ್ಕರಿಸಲು ಪ್ರಸ್ತಾಪಿಸುತ್ತದೆ. ಸರಕುಗಳ ಭೌಗೋಳಿಕ ಸೂಚನೆಗಳು (ನೋಂದಣಿ ಮತ್ತು ರಕ್ಷಣೆ) (ತಿದ್ದುಪಡಿ) ಮಸೂದೆ, ಉಗ್ರಾಣ (ಅಭಿವೃದ್ಧಿ ಮತ್ತು ನಿಯಂತ್ರಣ) (ತಿದ್ದುಪಡಿ) ಮಸೂದೆ ಮತ್ತು ಸ್ಪರ್ಧೆ (ತಿದ್ದುಪಡಿ) ಮಸೂದೆ.

ಇದನ್ನೂ ಓದಿ: ‘ಧರ್ಮ ಸಂಸತ್‌‌’ ದ್ವೇಷ ಭಾಷಣ ಕುರಿತ ಪ್ರಶ್ನೆಗೆ ಸಿಟ್ಟಾಗಿ ಸಂದರ್ಶನ ಅರ್ಧಕ್ಕೆ ನಿಲ್ಲಿಸಿದ ಯುಪಿ ಉಪಮುಖ್ಯಮಂತ್ರಿ

ಸರ್ಕಾರವು ಪ್ರಾಚೀನ ಸ್ಮಾರಕಗಳು ಮತ್ತು ಪುರಾತತ್ವ ಸ್ಥಳಗಳು ಮತ್ತು ಅವಶೇಷಗಳ (ತಿದ್ದುಪಡಿ) ಮಸೂದೆಯನ್ನು ಪಟ್ಟಿ ಮಾಡಿದೆ. ಇದು ನಿಷೇಧಿತ ಪ್ರದೇಶಗಳನ್ನು ತರ್ಕಬದ್ಧಗೊಳಿಸಲು ಮತ್ತು ಇತರ ತಿದ್ದುಪಡಿಗಳನ್ನು ತರಲು ಪ್ರಸ್ತಾಪಿಸುತ್ತದೆ.

ಕಲಾಕ್ಷೇತ್ರ ಪ್ರತಿಷ್ಠಾನ (ತಿದ್ದುಪಡಿ) ಮಸೂದೆ, ಹಳೆಯ ಅನುದಾನ (ನಿಯಂತ್ರಣ) ಮಸೂದೆ, ಅರಣ್ಯ (ಸಂರಕ್ಷಣೆ) (ತಿದ್ದುಪಡಿ) ಮಸೂದೆ, ರಾಷ್ಟ್ರೀಯ ದಂತ ಆಯೋಗದ ಮಸೂದೆ, ರಾಷ್ಟ್ರೀಯ ನರ್ಸಿಂಗ್ ಮತ್ತು ಮಿಡ್‌ವೈಫರಿ ಆಯೋಗದ ಮಸೂದೆ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ತಿದ್ದುಪಡಿ) ಮಸೂದೆ ಮತ್ತು ಕೇಂದ್ರೀಯ ವಿಶ್ವವಿದ್ಯಾಲಯಗಳ (ತಿದ್ದುಪಡಿ) ಮಸೂದೆಯನ್ನು ಸಹ ಪರಿಚಯಿಸಲು ಪಟ್ಟಿ ಮಾಡಲಾಗಿದೆ.

ನಿಯತಕಾಲಿಕಗಳ ಪತ್ರಿಕಾ ಮತ್ತು ನೋಂದಣಿ ಮಸೂದೆ, ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) (ತಿದ್ದುಪಡಿ) ಮಸೂದೆ, ಇಂಧನ ಸಂರಕ್ಷಣೆ (ತಿದ್ದುಪಡಿ) ಮಸೂದೆ, ವ್ಯಕ್ತಿಗಳ ಕಳ್ಳಸಾಗಣೆ (ರಕ್ಷಣೆ, ಆರೈಕೆ ಮತ್ತು ಪುನರ್ವಸತಿ) ಮಸೂದೆ ಮತ್ತು ಕೌಟುಂಬಿಕ ನ್ಯಾಯಾಲಯಗಳು (ತಿದ್ದುಪಡಿ) ಅಧಿವೇಶನದಲ್ಲಿ ಪರಿಚಯಕ್ಕಾಗಿ ಸಹ ಪಟ್ಟಿಮಾಡಲಾಗಿದೆ.

ಇದನ್ನೂ ಓದಿ: ಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

ಛತ್ತೀಸ್‌ಗಢ ಮತ್ತು ತಮಿಳುನಾಡಿಗೆ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಯನ್ನು ಪರಿಷ್ಕರಿಸಲು ಸಂವಿಧಾನ ತಿದ್ದುಪಡಿಗಾಗಿ ಎರಡು ಪ್ರತ್ಯೇಕ ಮಸೂದೆಗಳನ್ನು ಸಹ ಪರಿಚಯಿಸಲು ಪಟ್ಟಿ ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...