Homeಮುಖಪುಟಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ - ರಾಹುಲ್

ಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ – ರಾಹುಲ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಪೆಟ್ರೋಲ್ ಡೀಸೆಲ್ ಬೆಲೆ ಎರಡನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳು ಮತ್ತು ಪೆಟ್ರೋಲ್ ಡೀಸೆಲ್ ಬೆಲೆಯ ಗ್ರಾಫ್ ಒಂದನ್ನು ಪೋಸ್ಟ್ ಮಾಡಿರುವ ಅವರು ಜೂನ್ ತಿಂಗಳವರೆಗೆ ಲಾಕ್ ಆಗಿದ್ದ ಇವುಗಳನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ. ಅದಕ್ಕಾಗಿ ತೀವ್ರಗತಿಯಲ್ಲಿ ಏರುತ್ತಿವೆ ಎಂದು ಲೇವಡಿ ಮಾಡಿದ್ದಾರೆ.

ಕೊರೊನಾ ವೈರಸ್‌ ಪ್ರಕರಣಗಳು ಮಾತ್ರ ಏರುತ್ತಿಲ್ಲ ಎಂದು ಶೀರ್ಷಿಕೆ ನೀಡಿರುವ ಅವರು  ಪೆಟ್ರೋಲ್-ಡೀಸೆಲ್ ದರಗಳು ಸಹ ಅದೇ ವೇಗದಲ್ಲಿ ಏರುತ್ತಿವೆ ಎನ್ನುವುದನ್ನು ಸೂಚಿಸಿದ್ದಾರೆ.

ಇಷ್ಟು ದಿನ ಲಡಾಖ್‌ ಗಡಿಯಲ್ಲಿನ ಉದ್ವಿಗ್ನತೆ ನಿಭಾಯಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂಬುದರ ಮೇಲೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಅವರು ಇಂದು ಕೊರೊನಾ ವೈರಸ್ ಮತ್ತು ಪೆಟ್ರೋಲ್ ಡೀಸೆಲ್‌ ಬೆಲೆಗಳ ಮೇಲೆ ತಮ್ಮ ಗಮನ ಕೇಂದ್ರೀಕರಿಸಿ ಟೀಕಾಪ್ರಹಾರ ಮಾಡಿದ್ದಾರೆ.

ಜೂನ್ 1 ರಿಂದ ಅನ್ಲಾಕ್ ಹಂತ 1 ಪ್ರಾರಂಭವಾದ ನಂತರ ಸ್ಥಿರ ಏರಿಕೆಯನ್ನು ಹೇಗೆ ಕಂಡಿದೆ ಎಂಬುದನ್ನು ತೋರಿಸುತ್ತದೆ.

ಕರೋನಾವೈರಸ್ ಹರಡುವುದನ್ನು ತಡೆಯಲು ಮೂರು ತಿಂಗಳ ಹಿಂದೆ ವಿಧಿಸಲಾಗಿದ್ದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತೆಗೆದುಹಾಕುವ ಉದ್ದೇಶದಿಂದ ಮೂರು ಹಂತದ ಅನ್‌ಲಾಕ್‌ ಇದು ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಜೂನ್‌ 7ರವರೆಗೆ ಸುಮಾರು 82 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೈನಂದಿನ ಏರಿಕೆ ಇಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಯಿತು. ಆದರೆ ಜೂನ್ 7 ರ ನಂತರ ಮೊದಲಿನ ರೀತಿಯ ದೈನಂದಿನ ದರ ನಿಗಧಿಗೆ ಮರಳಿದಾಗಿನಿಂದ ಸತತ 18ನೇ ದಿನವೂ ಸಹ ಪೆಟ್ರೋಲ್ ಡೀಸೆಲ್‌ ಬೆಲೆಗಳಲ್ಲಿ ಏರಿಕೆಯಾಗಿದೆ.  ಜೂನ್ 7 ರಂದು ಡೀಸೆಲ್ ಬೆಲೆ ಲೀಟರ್‌ಗೆ 69 ರೂ ಇದ್ದರೆ ಪೆಟ್ರೋಲ್ ಬೆಲೆ ಲೀಟರ್‌ 71 ಇತ್ತು. ಆದರೆ ಇಂದಿಗೆ ಎರಡರ ಬೆಲೆಯಲ್ಲಿಯೂ ಅತಿ ಹೆಚ್ಚಿನ ಬೆಲೆ ಏರಿಕೆಯಾಗಿದ್ದು ದೆಹಲಿಯಲ್ಲಿ ಎರಡರ ಬೆಲೆಯೂ 79 ರೂಗಳಿಗೆ ಅಧಿಕವಾಗಿದೆ.

ಅದೇ ರೀತಿ ಜೂನ್ 1 ರಂದು ನರೇಂದ್ರ ಮೋದಿಯವರು ಮೊದಲ ಹಂತದ ಅನ್‌ಲಾಕ್‌ ಘೋಷಿಸಿದಾಗ 7000-8000 ದಿನಕ್ಕೆ ವರದಿಯಾಗುವ ಕೋವಿಡ್‌ ಪ್ರಕರಣಗಳಿದ್ದರೆ ಇಂದಿಗೆ ಅದರ ಎರಡು ಪಟ್ಟು ಹೆಚ್ಚಳವಾಗುತ್ತಿದೆ. ಇಂದು ದೇಶವು 15,968 ಹೊಸ ಪ್ರಕರಣಗಳು ಮತ್ತು 465 ಸಾವುಗಳನ್ನು ವರದಿ ಮಾಡಿದ್ದು, ಇದುವರೆಗಿನ ಅತಿ ಹೆಚ್ಚು ಏಕದಿನ ಜಿಗಿತವಾಗಿದೆ. ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,56,183 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಇಂಧನ ಬೆಲೆಗಳ ದೈನಂದಿನ ಹೆಚ್ಚಳದ ಬಗ್ಗೆ ಸರ್ಕಾರವು ಪ್ರತಿಪಕ್ಷಗಳ ತೀವ್ರ ಟೀಕೆಯನ್ನು ಎದುರಿಸುತ್ತಿದೆ. ಬೆಲೆ ಹೆಚ್ಚಳದ ವಿರುದ್ಧ ಶೀಘ್ರದಲ್ಲೇ ದೇಶಾದ್ಯಂತ ‘ಜನ ಆಂದೋಲನ್’ (ಜನರ ಆಂದೋಲನ) ಪ್ರಾರಂಭಿಸುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿದೆ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...