Homeಮುಖಪುಟಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ - ರಾಹುಲ್

ಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ – ರಾಹುಲ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಪೆಟ್ರೋಲ್ ಡೀಸೆಲ್ ಬೆಲೆ ಎರಡನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳು ಮತ್ತು ಪೆಟ್ರೋಲ್ ಡೀಸೆಲ್ ಬೆಲೆಯ ಗ್ರಾಫ್ ಒಂದನ್ನು ಪೋಸ್ಟ್ ಮಾಡಿರುವ ಅವರು ಜೂನ್ ತಿಂಗಳವರೆಗೆ ಲಾಕ್ ಆಗಿದ್ದ ಇವುಗಳನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ. ಅದಕ್ಕಾಗಿ ತೀವ್ರಗತಿಯಲ್ಲಿ ಏರುತ್ತಿವೆ ಎಂದು ಲೇವಡಿ ಮಾಡಿದ್ದಾರೆ.

ಕೊರೊನಾ ವೈರಸ್‌ ಪ್ರಕರಣಗಳು ಮಾತ್ರ ಏರುತ್ತಿಲ್ಲ ಎಂದು ಶೀರ್ಷಿಕೆ ನೀಡಿರುವ ಅವರು  ಪೆಟ್ರೋಲ್-ಡೀಸೆಲ್ ದರಗಳು ಸಹ ಅದೇ ವೇಗದಲ್ಲಿ ಏರುತ್ತಿವೆ ಎನ್ನುವುದನ್ನು ಸೂಚಿಸಿದ್ದಾರೆ.

ಇಷ್ಟು ದಿನ ಲಡಾಖ್‌ ಗಡಿಯಲ್ಲಿನ ಉದ್ವಿಗ್ನತೆ ನಿಭಾಯಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂಬುದರ ಮೇಲೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಅವರು ಇಂದು ಕೊರೊನಾ ವೈರಸ್ ಮತ್ತು ಪೆಟ್ರೋಲ್ ಡೀಸೆಲ್‌ ಬೆಲೆಗಳ ಮೇಲೆ ತಮ್ಮ ಗಮನ ಕೇಂದ್ರೀಕರಿಸಿ ಟೀಕಾಪ್ರಹಾರ ಮಾಡಿದ್ದಾರೆ.

ಜೂನ್ 1 ರಿಂದ ಅನ್ಲಾಕ್ ಹಂತ 1 ಪ್ರಾರಂಭವಾದ ನಂತರ ಸ್ಥಿರ ಏರಿಕೆಯನ್ನು ಹೇಗೆ ಕಂಡಿದೆ ಎಂಬುದನ್ನು ತೋರಿಸುತ್ತದೆ.

ಕರೋನಾವೈರಸ್ ಹರಡುವುದನ್ನು ತಡೆಯಲು ಮೂರು ತಿಂಗಳ ಹಿಂದೆ ವಿಧಿಸಲಾಗಿದ್ದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತೆಗೆದುಹಾಕುವ ಉದ್ದೇಶದಿಂದ ಮೂರು ಹಂತದ ಅನ್‌ಲಾಕ್‌ ಇದು ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಜೂನ್‌ 7ರವರೆಗೆ ಸುಮಾರು 82 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೈನಂದಿನ ಏರಿಕೆ ಇಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಯಿತು. ಆದರೆ ಜೂನ್ 7 ರ ನಂತರ ಮೊದಲಿನ ರೀತಿಯ ದೈನಂದಿನ ದರ ನಿಗಧಿಗೆ ಮರಳಿದಾಗಿನಿಂದ ಸತತ 18ನೇ ದಿನವೂ ಸಹ ಪೆಟ್ರೋಲ್ ಡೀಸೆಲ್‌ ಬೆಲೆಗಳಲ್ಲಿ ಏರಿಕೆಯಾಗಿದೆ.  ಜೂನ್ 7 ರಂದು ಡೀಸೆಲ್ ಬೆಲೆ ಲೀಟರ್‌ಗೆ 69 ರೂ ಇದ್ದರೆ ಪೆಟ್ರೋಲ್ ಬೆಲೆ ಲೀಟರ್‌ 71 ಇತ್ತು. ಆದರೆ ಇಂದಿಗೆ ಎರಡರ ಬೆಲೆಯಲ್ಲಿಯೂ ಅತಿ ಹೆಚ್ಚಿನ ಬೆಲೆ ಏರಿಕೆಯಾಗಿದ್ದು ದೆಹಲಿಯಲ್ಲಿ ಎರಡರ ಬೆಲೆಯೂ 79 ರೂಗಳಿಗೆ ಅಧಿಕವಾಗಿದೆ.

ಅದೇ ರೀತಿ ಜೂನ್ 1 ರಂದು ನರೇಂದ್ರ ಮೋದಿಯವರು ಮೊದಲ ಹಂತದ ಅನ್‌ಲಾಕ್‌ ಘೋಷಿಸಿದಾಗ 7000-8000 ದಿನಕ್ಕೆ ವರದಿಯಾಗುವ ಕೋವಿಡ್‌ ಪ್ರಕರಣಗಳಿದ್ದರೆ ಇಂದಿಗೆ ಅದರ ಎರಡು ಪಟ್ಟು ಹೆಚ್ಚಳವಾಗುತ್ತಿದೆ. ಇಂದು ದೇಶವು 15,968 ಹೊಸ ಪ್ರಕರಣಗಳು ಮತ್ತು 465 ಸಾವುಗಳನ್ನು ವರದಿ ಮಾಡಿದ್ದು, ಇದುವರೆಗಿನ ಅತಿ ಹೆಚ್ಚು ಏಕದಿನ ಜಿಗಿತವಾಗಿದೆ. ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,56,183 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಇಂಧನ ಬೆಲೆಗಳ ದೈನಂದಿನ ಹೆಚ್ಚಳದ ಬಗ್ಗೆ ಸರ್ಕಾರವು ಪ್ರತಿಪಕ್ಷಗಳ ತೀವ್ರ ಟೀಕೆಯನ್ನು ಎದುರಿಸುತ್ತಿದೆ. ಬೆಲೆ ಹೆಚ್ಚಳದ ವಿರುದ್ಧ ಶೀಘ್ರದಲ್ಲೇ ದೇಶಾದ್ಯಂತ ‘ಜನ ಆಂದೋಲನ್’ (ಜನರ ಆಂದೋಲನ) ಪ್ರಾರಂಭಿಸುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿದೆ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...