Homeಮುಖಪುಟಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ - ರಾಹುಲ್

ಕೊರೊನಾ ಮತ್ತು ಪೆಟ್ರೋಲ್-ಡೀಸೆಲ್ ಬೆಲೆಯನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ – ರಾಹುಲ್

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ಮತ್ತು ಪೆಟ್ರೋಲ್ ಡೀಸೆಲ್ ಬೆಲೆ ಎರಡನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ ಎಂದು ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಏರುತ್ತಿರುವ ಕೊರೊನಾ ಸೋಂಕಿನ ಪ್ರಕರಣಗಳು ಮತ್ತು ಪೆಟ್ರೋಲ್ ಡೀಸೆಲ್ ಬೆಲೆಯ ಗ್ರಾಫ್ ಒಂದನ್ನು ಪೋಸ್ಟ್ ಮಾಡಿರುವ ಅವರು ಜೂನ್ ತಿಂಗಳವರೆಗೆ ಲಾಕ್ ಆಗಿದ್ದ ಇವುಗಳನ್ನು ಮೋದಿ ಸರ್ಕಾರ ಅನ್‌ಲಾಕ್ ಮಾಡಿದೆ. ಅದಕ್ಕಾಗಿ ತೀವ್ರಗತಿಯಲ್ಲಿ ಏರುತ್ತಿವೆ ಎಂದು ಲೇವಡಿ ಮಾಡಿದ್ದಾರೆ.

ಕೊರೊನಾ ವೈರಸ್‌ ಪ್ರಕರಣಗಳು ಮಾತ್ರ ಏರುತ್ತಿಲ್ಲ ಎಂದು ಶೀರ್ಷಿಕೆ ನೀಡಿರುವ ಅವರು  ಪೆಟ್ರೋಲ್-ಡೀಸೆಲ್ ದರಗಳು ಸಹ ಅದೇ ವೇಗದಲ್ಲಿ ಏರುತ್ತಿವೆ ಎನ್ನುವುದನ್ನು ಸೂಚಿಸಿದ್ದಾರೆ.

ಇಷ್ಟು ದಿನ ಲಡಾಖ್‌ ಗಡಿಯಲ್ಲಿನ ಉದ್ವಿಗ್ನತೆ ನಿಭಾಯಿಸಲು ಮೋದಿ ಸರ್ಕಾರ ವಿಫಲವಾಗಿದೆ ಎಂಬುದರ ಮೇಲೆ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿದ್ದ ಅವರು ಇಂದು ಕೊರೊನಾ ವೈರಸ್ ಮತ್ತು ಪೆಟ್ರೋಲ್ ಡೀಸೆಲ್‌ ಬೆಲೆಗಳ ಮೇಲೆ ತಮ್ಮ ಗಮನ ಕೇಂದ್ರೀಕರಿಸಿ ಟೀಕಾಪ್ರಹಾರ ಮಾಡಿದ್ದಾರೆ.

ಜೂನ್ 1 ರಿಂದ ಅನ್ಲಾಕ್ ಹಂತ 1 ಪ್ರಾರಂಭವಾದ ನಂತರ ಸ್ಥಿರ ಏರಿಕೆಯನ್ನು ಹೇಗೆ ಕಂಡಿದೆ ಎಂಬುದನ್ನು ತೋರಿಸುತ್ತದೆ.

ಕರೋನಾವೈರಸ್ ಹರಡುವುದನ್ನು ತಡೆಯಲು ಮೂರು ತಿಂಗಳ ಹಿಂದೆ ವಿಧಿಸಲಾಗಿದ್ದ ಕಟ್ಟುನಿಟ್ಟಿನ ನಿರ್ಬಂಧಗಳನ್ನು ತೆಗೆದುಹಾಕುವ ಉದ್ದೇಶದಿಂದ ಮೂರು ಹಂತದ ಅನ್‌ಲಾಕ್‌ ಇದು ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.

ಜೂನ್‌ 7ರವರೆಗೆ ಸುಮಾರು 82 ದಿನಗಳ ಕಾಲ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ದೈನಂದಿನ ಏರಿಕೆ ಇಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಾಯಿತು. ಆದರೆ ಜೂನ್ 7 ರ ನಂತರ ಮೊದಲಿನ ರೀತಿಯ ದೈನಂದಿನ ದರ ನಿಗಧಿಗೆ ಮರಳಿದಾಗಿನಿಂದ ಸತತ 18ನೇ ದಿನವೂ ಸಹ ಪೆಟ್ರೋಲ್ ಡೀಸೆಲ್‌ ಬೆಲೆಗಳಲ್ಲಿ ಏರಿಕೆಯಾಗಿದೆ.  ಜೂನ್ 7 ರಂದು ಡೀಸೆಲ್ ಬೆಲೆ ಲೀಟರ್‌ಗೆ 69 ರೂ ಇದ್ದರೆ ಪೆಟ್ರೋಲ್ ಬೆಲೆ ಲೀಟರ್‌ 71 ಇತ್ತು. ಆದರೆ ಇಂದಿಗೆ ಎರಡರ ಬೆಲೆಯಲ್ಲಿಯೂ ಅತಿ ಹೆಚ್ಚಿನ ಬೆಲೆ ಏರಿಕೆಯಾಗಿದ್ದು ದೆಹಲಿಯಲ್ಲಿ ಎರಡರ ಬೆಲೆಯೂ 79 ರೂಗಳಿಗೆ ಅಧಿಕವಾಗಿದೆ.

ಅದೇ ರೀತಿ ಜೂನ್ 1 ರಂದು ನರೇಂದ್ರ ಮೋದಿಯವರು ಮೊದಲ ಹಂತದ ಅನ್‌ಲಾಕ್‌ ಘೋಷಿಸಿದಾಗ 7000-8000 ದಿನಕ್ಕೆ ವರದಿಯಾಗುವ ಕೋವಿಡ್‌ ಪ್ರಕರಣಗಳಿದ್ದರೆ ಇಂದಿಗೆ ಅದರ ಎರಡು ಪಟ್ಟು ಹೆಚ್ಚಳವಾಗುತ್ತಿದೆ. ಇಂದು ದೇಶವು 15,968 ಹೊಸ ಪ್ರಕರಣಗಳು ಮತ್ತು 465 ಸಾವುಗಳನ್ನು ವರದಿ ಮಾಡಿದ್ದು, ಇದುವರೆಗಿನ ಅತಿ ಹೆಚ್ಚು ಏಕದಿನ ಜಿಗಿತವಾಗಿದೆ. ಭಾರತದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,56,183 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳು ತಿಳಿಸಿವೆ.

ಇಂಧನ ಬೆಲೆಗಳ ದೈನಂದಿನ ಹೆಚ್ಚಳದ ಬಗ್ಗೆ ಸರ್ಕಾರವು ಪ್ರತಿಪಕ್ಷಗಳ ತೀವ್ರ ಟೀಕೆಯನ್ನು ಎದುರಿಸುತ್ತಿದೆ. ಬೆಲೆ ಹೆಚ್ಚಳದ ವಿರುದ್ಧ ಶೀಘ್ರದಲ್ಲೇ ದೇಶಾದ್ಯಂತ ‘ಜನ ಆಂದೋಲನ್’ (ಜನರ ಆಂದೋಲನ) ಪ್ರಾರಂಭಿಸುವುದಾಗಿ ಕಾಂಗ್ರೆಸ್ ಮಂಗಳವಾರ ಹೇಳಿದೆ.


ಇದನ್ನೂ ಓದಿ: ನಾವು ನಂಬರ್ ಒನ್… ಯಾವುದರಲ್ಲಿ – ದೇಶ ಮಾರುವುದರಲ್ಲಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...