Homeಮುಖಪುಟ'ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..'; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

‘ಪ್ರತಿಪಕ್ಷಗಳನ್ನು ಆರ್ಥಿಕವಾಗಿ ಕತ್ತು ಹಿಸುಕಲು ಮೋದಿ ಸರ್ಕಾರ ಬಯಸಿದೆ..’; ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

- Advertisement -
- Advertisement -

₹1,700 ಕೋಟಿ ಪಾಔತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ನೀಡಿರುವ ನೋಟಿಸ್‌ಗೆ ಪಕ್ಷವು ಶುಕ್ರವಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. “ಅಧಿಕಾರಿಗಳನ್ನು ಆಡಳಿತ ಪಕ್ಷದ ಗುಂಡಾಗಳಾಗಿ ಬಳಸಿಕೊಳ್ಳಲಾಗುತ್ತಿದೆ” ಎಂದು ಕಿಡಿಕಾರಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ‘ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಚುನಾವಣಾ ಸಮಯದಲ್ಲಿ ವಿರೋಧ ಪಕ್ಷಗಳನ್ನು “ಆರ್ಥಿಕವಾಗಿ ಕತ್ತು ಹಿಸುಕಲು” ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.

“ನಾವು ಚುನಾವಣೆ ಎದುರಿಸುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಕ್ಷವನ್ನು ದಿವಾಳಿ ಮಾಡುವ ನಿರ್ದಿಷ್ಟ ಉದ್ದೇಶದಿಂದ ನರೇಂದ್ರ ಮೋದಿ ಸರ್ಕಾರ ಇದನ್ನು ಮಾಡುತ್ತಿದೆ” ಎಂದು ಅವರು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಸಾಮಾನ್ಯವಾಗಿ ತೆರಿಗೆ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ. ಆದರೆ, ಈ ದಂಡವು ರಿಟರ್ನ್ಸ್ ಸಲ್ಲಿಸುವಲ್ಲಿ ವಿಳಂಬದ ಹೆಸರಿನಲ್ಲಿದೆ ಎಂದು ಅವರು ತಿಳಿಸಿದರು.

ಇದರ ಬೆನ್ನಲ್ಲೇ, ವಿರೋಧ ಪಕ್ಷಗಳನ್ನು ಗುರಿಯಾಗಿಸಲು ಬಿಜೆಪಿಯ ಕೇಂದ್ರೀಯ ಸಂಸ್ಥೆಗಳ ಶೋಷಣೆಯ ವಿರುದ್ಧ ಕಾಂಗ್ರೆಸ್ ಮಾರ್ಚ್ 30ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಯನ್ನು ಘೋಷಿಸಿತು.

ಅವರು ಸರ್ಕಾರದ ಕಾರ್ಯವಿಧಾನವನ್ನು ಬಳಸಿಕೊಂಡು ವಿರೋಧ ಪಕ್ಷಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವವನ್ನು ಕಸಿಯುವ ಕ್ರಮವಾಗಿದೆ. ಬಿಜೆಪಿ ಕೂಡ ಯಾವುದೇ ರಿಟರ್ನ್ಸ್ ಪಾವತಿಸಿಲ್ಲ. ಆದರೆ, ಅವರು ಐಟಿ ಇಲಾಖೆ ನೋಟಿಸ್‌ನಿಂದ ಸುರಕ್ಷಿತವಾಗಿದ್ದಾರೆ ಎಂದು ಅವರು ಹೇಳಿದರು.

ಆದಾಯ ತೆರಿಗೆ ಇಲಾಖೆ ಶುಕ್ರವಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ₹1,700 ಕೋಟಿ ಬೇಡಿಕೆಯ ನೋಟಿಸ್ ನೀಡಿದೆ. ಹೊಸ ಬೇಡಿಕೆಯ ಸೂಚನೆಯು 2017-18 ರಿಂದ 2020-21 ರ ಮೌಲ್ಯಮಾಪನ ವರ್ಷಗಳಿಗೆ ದಂಡ ಮತ್ತು ಬಡ್ಡಿಯನ್ನು ಒಳಗೊಂಡಿರುತ್ತದೆ. 2018-19ರ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಕೆಯಲ್ಲಿ ಕೇಂದ್ರೀಯ ಸಂಸ್ಥೆ ಈ ಹಿಂದೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದೆ.

ನೋಟಿಸ್ ಪ್ರಕಾರ ₹1,076.35 ಕೋಟಿ ದಂಡ ಮತ್ತು ₹692 ಬಡ್ಡಿ ಪಾವತಿಸುವಂತೆ ಕಾಂಗ್ರೆಸ್‌ಗೆ ತಿಳಿಸಲಾಗಿದೆ ಎಂದು ವೇಣುಗೋಪಾಲ್ ಉಲ್ಲೇಖಿಸಿದ್ದಾರೆ.

ತೆರಿಗೆ ಅಧಿಕಾರಿಗಳು ನಾಲ್ಕು ವರ್ಷಗಳ ಕಾಲ ತನ್ನ ವಿರುದ್ಧ ತೆರಿಗೆ ಮರುಮೌಲ್ಯಮಾಪನ ಪ್ರಕ್ರಿಯೆಗಳನ್ನು ಪ್ರಾರಂಭಿಸುವುದನ್ನು ಪ್ರಶ್ನಿಸಿ ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗುರುವಾರ ತಿರಸ್ಕರಿಸಿದೆ. ಪ್ರಸ್ತುತ ವಿಷಯವು 2017 ರಿಂದ 2021 ರ ಮೌಲ್ಯಮಾಪನ ವರ್ಷಗಳಿಗೆ ಸಂಬಂಧಿಸಿದೆ.

ಮಾರ್ಚ್ 8 ರಂದು, ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಐಟಿಎಟಿ) ಕಾಂಗ್ರೆಸ್ ಪಕ್ಷವು ಸಲ್ಲಿಸಿದ ಮನವಿಯನ್ನು ವಜಾಗೊಳಿಸಿತು. ಆದಾಯ ತೆರಿಗೆ ಇಲಾಖೆಯು ಅವರ ಬ್ಯಾಂಕ್ ಖಾತೆಗಳನ್ನು ವಸೂಲಿ ಮತ್ತು ಫ್ರೀಜ್ ಮಾಡುವ ಪ್ರಕ್ರಿಯೆಗಳ ವಿರುದ್ಧ ತಡೆಯಾಜ್ಞೆ ಕೋರಿದ್ದ ತಡೆ ಅರ್ಜಿಯು ಅರ್ಹವಲ್ಲ ಎಂದು ಹೇಳಿದೆ.

ಇದನ್ನೂ ಓದಿ; ಕಾಂಗ್ರೆಸ್‌ ನಂತರ ಕಮ್ಯುನಿಸ್ಟ್‌ ಪಾರ್ಟಿಗೆ ನೋಟಿಸ್ ಕೊಟ್ಟ ಐಟಿ; ₹11 ಕೋಟಿ ಬಾಕಿ ಪಾವತಿಸುವಂತೆ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...