Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....