Homeಕರೋನಾ ತಲ್ಲಣಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

ಕೋವಿಡ್ ನಿರ್ವಹಣೆಗೆ ಕಾರ್ಯಪಡೆ ನೇಮಿಸಿದ ಸುಪ್ರೀಂ: ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ!

- Advertisement -
- Advertisement -

ವೈದ್ಯಕೀಯ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನು ನಿರ್ಣಯಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯೊಂದನ್ನು ಸುಪ್ರೀಂ ಕೋರ್ಟ್ ಸ್ಥಾಪಿಸಿದೆ. ವೈಜ್ಞಾನಿಕವಾಗಿ, ತರ್ಕಬದ್ಧವಾಗಿ ಮತ್ತು ನ್ಯಾಯಯುತವಾಗಿ ದೇಶಾದ್ಯಂತ ಕೋವಿಡ್‌ಗೆ ಚಿಕಿತ್ಸೆ ನೀಡಲು ಅಗತ್ಯವಾದ ಔಷಧಿಗಳ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಕ್ರಮಗಳನ್ನು ಕಾರ್ಯಪಡೆ ಸೂಚಿಸುತ್ತದೆ.

ಕಳೆದ ತಿಂಗಳಿನಿಂದ ಸುಪ್ರೀಂಕೋರ್ಟ್, ದೆಹಲಿ ಹೈಕೋರ್ಟ್, ಕರ್ನಾಟಕ ಹೈಕೋರ್ಟ್ ಸೇರಿದಂತೆ ಹಲವು ಕೋರ್ಟ್‌ಗಳು ಕೇಂದ್ರ ಸರ್ಕಾರದ ವೈಫಲ್ಯವನ್ನು ಟೀಕಿಸುತ್ತ ಬಂದಿದ್ದು, ಈಗ ಕಾರ್ಯಪಡೆ ನೇಮಕವು ಕೇಂದ್ರದ ಸತತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂಬ ಅಭಿಪ್ರಾಯಗಳು ಕೇಳಿ ಬರುತ್ತಿವೆ.

‘ಅದೇನು ಮಾಡುತ್ತೀರೋ ಗೊತ್ತಿಲ್ಲ, ಆಮ್ಲಜನಕ ಒದಗಿಸಿ…. ಭಿಕ್ಷೆಯನ್ನಾದರೂ ಬೇಡಿ, ಸಾಲವನ್ನಾದರೂ ಮಾಡಿ, ಕೊನೆಗೆ ಕದ್ದಾದರೂ ತನ್ನಿ’ ಎಂದು ದೆಹಲಿ ಹೈಕೋರ್ಟ್ ಈ ಹಿಂದೆ ಕಿಡಿಕಾರಿತ್ತು.

ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಿ ಎಂದು ಕೇಂದ್ರಕ್ಕೆ ರಾಜ್ಯ ಹೈಕೋರ್ಟ್ ಆದೇಶಿಸಿತ್ತು. ಆದರೆ ಇದರ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗಿದ್ದ ಕೇಂದ್ರ ಸರ್ಕಾರದ ಅರ್ಜಿಯನ್ನು ತಿರಸ್ಕರಿಸಿದ ಸುಪ್ರೀಂಕೋರ್ಟ್ ರಾಜ್ಯ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿತ್ತು.

ಪ್ರತಿದಿನವೂ ದೆಹಲಿ ಹೈಕೋರ್ಟ್ ಮತ್ತು ಸುಪ್ರೀಕೋರ್ಟಿನಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದ ಕನಿಷ್ಠ ಒಂದಾರೂ ವಿಚಾರಣೆ ನಡೆಯುತ್ತ ಬಂದಿವೆ. ಪ್ರತಿ ಸಲವೂ ಈ ಕೋರ್ಟುಗಳು ಕೇಂದ್ರದ ಜವಾಬ್ದಾರಿಯನ್ನು ನೆನಪಿಸುತ್ತ, ಕೆಲವೊಮ್ಮೆ ಎಚ್ಚರಿಸುತ್ತ ಬಂದಿದ್ದವು. ಆದರೆ ಕೇಂದ್ರ ಸರ್ಕಾರದ ಸತತ ವೈಫಲ್ಯಗಳು, ತಾರತಮ್ಯ ನೀತಿಗಳನ್ನು ನೋಡಿ ರೋಸಿದ ಸುಪ್ರೀಂಕೋರ್ಟ್ 12 ತಜ್ಞರ ಕಾರ್ಯಪಡೆಯನ್ನು ನೇಮಕ ಮಾಡಿದೆ.

ವಿವಿಧ ರಾಜ್ಯಗಳಿಗೆ ಕೇಂದ್ರದ ಆಮ್ಲಜನಕದ ಹಂಚಿಕೆಯನ್ನು ಪುನರುಜ್ಜೀವನಗೊಳಿಸುವಂತೆ ಕಾರ್ಯಪಡೆ ಸ್ಥಾಪಿಸಲು ಉನ್ನತ ನ್ಯಾಯಾಲಯ ಆದೇಶಿಸಿದೆ. ಆ ಸಮಯದಲ್ಲಿ ಕೇಂದ್ರವು ಒಪ್ಪಿಗೆ ನೀಡಿತು, ಆದರೆ ಲೆಕ್ಕಪರಿಶೋಧನೆ ನಡೆಸಬೇಕೆಂದು ಬಯಸಿತ್ತು, ಆದರೆ ದೆಹಲಿ ಸರ್ಕಾರ ಇದನ್ನು ವಿರೋಧಿಸಿತ್ತು.

ಈ ಆದೇಶ ನೀಡಿದ ಪೀಠದ ನ್ಯಾಯಾಧೀಶರಾದ ಚಂದ್ರಚೂಡ್ ಮತ್ತು ಎಂ.ಆರ್ ಶಾ ಕಾರ್ಯಪಡೆಯ ಪ್ರತಿಯೊಬ್ಬ ಸದಸ್ಯರೊಂದಿಗೆ ಮಾತನಾಡಿದ್ದು, ಒಂದು ವಾರದಲ್ಲಿ ಕೆಲಸ ಪ್ರಾರಂಭವಾಗುವ ನಿರೀಕ್ಷೆಯಿದೆ, ಈ ಕಾರ್ಯಪಡೆ ಕೇಂದ್ರ ಮತ್ತು ನ್ಯಾಯಾಲಯಕ್ಕೆ ವರದಿಗಳನ್ನು ನೀಡಲಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

“ಇದು ದುರಂತಮಯ ಮಾನವ ಬಿಕ್ಕಟ್ಟನ್ನು ಎದುರಿಸಲು ವಿವಿಧ ಬಗೆಯ ತಜ್ಞತೆ ಉಳ್ಳ ಕಾರ್ಯಪಡೆ ಸದಸ್ಯರು ವೈಜ್ಞಾನಿಕ ಕಾರ್ಯತಂತ್ರಗಳನ್ನು ರೂಪಿಸಲು ಅನುಕೂಲವಾಗಲಿದೆ” ಎಂದು ನ್ಯಾಯಾಲಯವು ಹೇಳಿದೆ.

ಆಂಬ್ಯುಲೆನ್ಸ್‌ಗಳು, ಕೆಳ ಹಂತದ ಕೋವಿಡ್ ಆರೈಕೆ ಸೌಲಭ್ಯಗಳು ಮತ್ತು ಹೋಂ ಐಸೋಲೆಷನ್ ಹೊಂದಿರುವ ರೋಗಿಗಳನ್ನು ಪರಿಗಣಿಸಲು ಕೇಂದ್ರವು ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ವಿಚಾರಣೆಯಲ್ಲಿ ಹೇಳಿದೆ.

ಅಂದರೆ, ಸರ್ಕಾರದ ವಿಫಲತೆಯ ಕಾರಣಕ್ಕೆ ಸುಪ್ರೀಂಕೋರ್ಟ್ ರೋಸಿ ಹೋಗಿ ಅನಿವಾರ್ಯವಾಗಿ ಮಧ್ಯಪ್ರವೇಶ ಮಾಡಬೇಕಾಯ್ತು ಅಲ್ಲವೇ? ಸಂಸದೀಯ ಅಥವಾ ಶಾಸಕಾಂಗದ ಕೆಲಸದಲ್ಲಿ ಸುಪ್ರೀಂಕೋರ್ಟ್ ಸಾಧಾರಣವಾಗಿ ಹಸ್ತಕ್ಷೇಪ ಮಾಡುವುದಿಲ್ಲ, ಮಾಡಲೂಬಾರದು ಎಂಬುದು ಸಂವಿಧಾನ ಹೇಳುವ ಪಾಠ. ಆದರೆ, ಪದೇ ಪದೇ ವಿಫಲವಾಗುತ್ತಿರುವ ಸರ್ಕಾರ, ತೀವ್ರವಾಗಿ ಉಲ್ಬಣಗೊಳ್ಳುತ್ತಿರುವ ಸಾಂಕ್ರಾಮಿಕತೆ ಮತ್ತು ವಿವಿಧ ರಾಜ್ಯಗಳಿಂದ ಕೇಳಿ ಬರುತ್ತಿರುವ ಆಕ್ಷೇಪಗಳನ್ನು ಗಮನಿಸಿ ಸುಪ್ರೀಂಕೋರ್ಟ್ ಪೀಠ ಈ ತೀರ್ಮಾನಕ್ಕೆ ಬಂದಿದೆ. ಇದು ಮೋದಿ ಸರ್ಕಾರದ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ.
ಕಳೆದ ವರ್ಷದಿಂದ ಕೇಂದ್ರ ಸರ್ಕಾರವೇ ಒಂದು ತಜ್ಞರ ಸಮಿತಿ ನೇಮಿಸಿದೆ. ಅದು ಕಾಲಕಾಲಕ್ಕೆ ಸಲಹೆ ನೀಡುತ್ತ ಬಂದಿದೆ. ಇನ್ನೊಂದು ಕಡೆ ನೀತಿ ಆಯೋಗ ಕೂಡ ಕೇಂದ್ರ ಸರ್ಕಾರಕ್ಕೆ ನಿರಂತರ ವರದಿಗಳನ್ನು ಸಲ್ಲಿಸುತ್ತಲೇ ಬಂದಿದೆ. ಹಿರಿಯ ತಜ್ಞರು, ಪತ್ರಕರ್ತರು ತಮ್ಮ ಬರಹಗಳಲ್ಲಿ ಕೇಂದ್ರವನ್ನು ಎಚ್ಚರಿಸುತ್ತಲೇ ಬಂದಿದ್ದಾರೆ. ಆದರೂ ಈ ಸರ್ಕಾರದ ತೀರ್ಮಾನಗಳು ಸಾಂಕ್ರಾಮಿಕ ನಿರ್ವಹಣೆಯಲ್ಲಿ ವಿಫಲವಾಗಿವೆ.

ಈ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಬೆಂಗಳೂರಿನ ಸಾಮಾಜಿಕ ಕಳಕಳಿಯ ವಕೀಲರಾದ ರಾಜಲಕ್ಷ್ಮಿ ಅಂಕಲಗಿ, “ಸುಪ್ರೀಂಕೋರ್ಟಿನ ಈ ಮಧ್ಯಸ್ಥಿಕೆಯನ್ನು ಶಾಸಕಾಂಗ-ಕಾರ್ಯಾಂಗದಲ್ಲಿ ಹಸ್ತಕ್ಷೇಪ ಎಂದು ನೋಡಲಾಗದು. ಈ ಮಾನವೀಯ ಬಿಕ್ಕಟ್ಟಿನ ಸಮಯದಲ್ಲಿ ಉನ್ನತ ನ್ಯಾಯಾಲಯ ಸರಿಯಾದ ತೀರ್ಮಾನವನ್ನೇ ಮಾಡಿದೆ. ಇದು ಈ ಸರ್ಕಾರದ ವೈಫಲ್ಯತೆಗೆ ಸಾಕ್ಷಿ ಕೂಡ. ಈ ದೇಶದಲ್ಲಿ ಹಿಂದಿನಿಂದಲೂ ನ್ಯಾಯಾಂಗವು ಆಗಾಗ ‘ನ್ಯಾಯಾಂಗೀಯ ಕ್ರಿಯಾಶೀಲತೆ’ (ಜುಡಿಷಿಯಲ್ ಆಕ್ಟಿವಿಸಂ) ಅನ್ನು ತೋರುತ್ತಲೇ ಬಂದಿದೆ. ಕಳೆದ 7-8 ವರ್ಷಗಳಲ್ಲಿ ಈ ಕ್ರಿಯಾಶೀಲತೆಗೆ ಗರ ಬಡಿದಿತ್ತು. ಈಗ ಅದು ಮತ್ತೆ ಪುನಶ್ಚೇತನಗೊಂಡ ಹಾಗೆ ಕಾಣುತ್ತಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

‘ರಫೇಲ್ ವಿಷಯ ಸೇರಿದಂತೆ ಹಲವು ಆಡಳಿತಾತ್ಮಕ ವಿವಾದಗಳಲ್ಲಿ ಸುಪ್ರೀಂ ನಿಲುವು ಟೀಕೆಗಳಿಗೆ ಒಳಗಾಗಿತ್ತು. ಇತ್ತೀಚೆಗೆ ಹಲವು ಹೈಕೋರ್ಟ್‌ಗಳು (ಉದಾಹರಣೆಗೆ, ಚುನಾವಣಾ ಆಯೋಗದ ವಿರುದ್ಧ ಕೊಲೆ ಮೊಕದ್ದಮೆ ಹೂಡಬೇಕು ಎಂಬ ಮದ್ರಾಸ್ ಹೈಕೋರ್ಟ್ ಅಭಿಪ್ರಾಯ) ತುಂಬ ಆಕ್ಟೀವ್ ಆದ ಕಾರಣಕ್ಕೆ ಸುಪ್ರೀಂಕೋರ್ಟ್ ಎಚ್ಚೆತ್ತುಕೊಂಡಿರಬಹುದು ಅಥವಾ ಈ ಮಾನವೀಯ ದುರಂತದ ಚಿತ್ರಗಳು ನ್ಯಾಯಾಧೀಶರ ಮನಕ್ಕೆ ತಟ್ಟಿರಬಹುದು’ ಎಂದು ಅವರು ತಿಳಿಸಿದ್ದಾರೆ.

ತಮ್ಮ ಸುತ್ತಲಿನ ಕೆಲವೇ ಐಎಎಸ್‌ಗಳ ಮಾತನ್ನು ಕೇಳಿಕೊಂಡು ಪ್ರಧಾನಿ ನಿರ್ಣಯ ತೆಗೆದುಕೊಳ್ಳುತ್ತ ಬಂದಿದ್ದಾರೆ. ‘ಪ್ರಧಾನಿಯನ್ನು ಹೊಗಳುವ, ಪ್ರಧಾನಿ ಮನದಾಳದ ಅಭಿಪ್ರಾಯಗಳನ್ನೇ ಹೇಳಿ ಖುಷಿ ಪಡಿಸುವ ಅಧಿಕಾರಿಗಳ ದಂಡು ಪ್ರಧಾನಿಯ ಸುತ್ತ ಇದೆ. ಇದರಲ್ಲಿ ಪ್ರಧಾನಿ ಗುಜರಾತಿನಿಂದ ಕರೆಸಿಕೊಂಡ ‘ನಿಷ್ಠ’ ಅಧಿಕಾರಿಗಳೇ ಜಾಸ್ತಿ ಇದ್ದಾರೆ. ಪಿಎಂಒ ಕೂಡ ಇಂತಹ ಅಧಿಕಾರಿಗಳಿಂದಲೇ ತುಂಬಿದೆ’ ಎಂದು ಕಳೆದ ತಿಂಗಳು ರಾಜಕೀಯ ವಿಶ್ಲೇಷಕ ರಾಮಚಂದ್ರ ಗುಹಾ (ನಾನುಗೌರಿ.ಕಾಂ ನಲ್ಲಿ ಇದರ ಅನುವಾದ ಪ್ರಕಟಿಸಿದ್ದೆವು) ಬರೆದಿದ್ದರು.
ಆಮ್ಲಜನಕ, ಔಷಧಿಗಳು ಮತ್ತು ಆಸ್ಪತ್ರೆಯ ಹಾಸಿಗೆಗಳಲ್ಲಿನ ತೀವ್ರ ಕೊರತೆಯನ್ನು ಇನ್ನಷ್ಟು ಹದಗೆಡಿಸಬಹುದಾದ ಮೂರನೇ ಕೋವಿಡ್ ಅಲೆಗೆ ಕೇಂದ್ರವು ಸಿದ್ಧತೆ ನಡೆಸುತ್ತಿದೆಯೇ ಎಂದು ತಿಳಿಯಲು ನ್ಯಾಯಾಲಯವು ಒತ್ತಾಯಿಸಿತ್ತು ಎಂಬುದನ್ನು ಗಮನಿಸಿದರೆ, ಈ ಸರ್ಕಾರದ ಬಗ್ಗೆ ನ್ಯಾಯಾಲಯಕ್ಕೆ ವಿಶ್ವಾಸವೇ ಹೋದಂತಿದೆ.

ವಿದೇಶಿ ಮಾಧ್ಯಮಗಳು ಮತ್ತು ದೇಸಿ ಸ್ವತಂತ್ರ ಮಾಧ್ಯಮಗಳು ಮೋದಿ ಸರ್ಕಾರದ ವೈಫಲ್ಯಗಳ ವಿರುದ್ಧ ಸುದ್ದಿ ಮಾಡುತ್ತಲೇ ಬಂದಿವೆ. ಆದರೆ ಮೋದಿ ಸರ್ಕಾರ ಇನ್ನು ಎಚ್ಚೆತ್ತುಕೊಂಡಿಲ್ಲದಿರುವುದು ದುರಂತವಾಗಿದೆ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ; ಕೊರೊನಾ ಎದುರಿಸಲು ನೆಹರು-ಇಂದಿರಾ-ಮನಮೋಹನ್‌ ಸಿಂಗ್‌ ಕಟ್ಟಿದ ವ್ಯವಸ್ಥೆಯೆ ದೇಶಕ್ಕೆ ಸಹಾಯ ಮಾಡಿದೆ: ಶಿವಸೇನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...