Homeಮುಖಪುಟಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

- Advertisement -
- Advertisement -

ಟ್ವಿಟರ್ ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಭಾರತದಲ್ಲಿ ಟ್ವಿಟರ್ ಕಚೇರಿಯನ್ನು ಸ್ಥಗಿತಗೊಳಿಸುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಈ ಬಗ್ಗೆ ಟಿಎಂಸಿ ನಾಯಕ, ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸರಣಿ ಟ್ವಿಟ್ ಮಾಡಿದ್ದು, ಟ್ವಿಟರ್ ಬಳಿ ಕೇಂದ್ರ ಸರ್ಕಾರ ಹಲವು ಖಾತೆಗಳ ಮಾಹಿತಿಯನ್ನು ಕೇಳಿತ್ತು ಎಂಬುವುದನ್ನು ಸೂಚಿಸುವ ದಾಖಲೆಯನ್ನು ಹಂಚಿಕೊಂಡಿದ್ದಾರೆ.

ಜಾಕ್ ಡೋರ್ಸೆ ಅವರ ಬೇಹುಗಾರಿಕೆ ಹಾಗೂ ಸೆನ್ಸಾರ್‌ಶಿಪ್ ಆರೋಪಗಳನ್ನು ಮೋದಿ ಸರ್ಕಾರವು ಸುಳ್ಳು ಎಂದು ಹೇಳಿ ನಿರಾಕರಿಸಿದೆ. ಆದರೆ, ಟ್ವಿಟರ್ ನ ಪಾರದರ್ಶಕತೆ ವರದಿಗಳ ಡೇಟಾವನ್ನು ಆಧರಿಸಿದ ಸತ್ಯ ಇಲ್ಲಿದೆ ಎಂದು ಸಿಎಎ ವಿರೋಧಿ ಪ್ರತಿಭಟನೆ, ರೈತರ ಪ್ರತಿಭಟನೆ ಹಾಗೂ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಟ್ವಿಟರ್ ಬಳಕೆದಾರರ ಮಾಹಿತಿಯನ್ನು ಮೋದಿ ಸರ್ಕಾರವು ಟ್ವಿಟರ್ ಬಳಿ ಕೇಳಿತ್ತು ಎಂದು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಾಕೇತ್ ಗೋಖಲೆ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

”ಈಗ ಕೆಳಗಿನ ಟ್ವೀಟ್‌ಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ರೈತ ಪ್ರತಿಭಟನೆಗಳ (2020-2021) ಅವಧಿಯ ಡೇಟಾ ಇಲ್ಲಿದೆ. 👇

CAA ವಿರೋಧಿ ಮತ್ತು ರೈತರ ಪ್ರತಿಭಟನೆಯ ಅವಧಿಯಲ್ಲಿ ಭಾರತ ಸರ್ಕಾರವು ಜಾಗತಿಕವಾಗಿ ಅತಿ ಹೆಚ್ಚು ಮಾಹಿತಿಗಳನ್ನು ಕೇಳಿದ ಸರ್ಕಾರವಾಗಿದೆ.

ಈ ಅವಧಿಯಲ್ಲಿ ಜಾಗತಿಕವಾಗಿ ಸಲ್ಲಿಸಿದ ವಿನಂತಿಗಳಲ್ಲಿ 25% ವಿನಂತಿಗಳನ್ನು ಭಾರತ ಸರ್ಕಾರವೇ ಸಲ್ಲಿಸಿದೆ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

2019ರ ಜನವರಿ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ 1,057 ಖಾತೆದಾರರ ಮಾಹಿತಿ ಹಾಗೂ ವಿವರಗಳನ್ನು ಭಾರತ ಸರ್ಕಾರ ಕೇಳಿದೆ.

2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಮೋದಿ ಸರ್ಕಾರವು 5,830 ಟ್ವಿಟರ್ ಬಳಕೆದಾರರ ಮಾಹಿತಿ ಹಾಗೂ ವಿವರಗಳನ್ನು ನೀಡುವಂತೆ ಟ್ವಿಟರ್ ಸಂಸ್ಥೆಯನ್ನು ಒತ್ತಾಯಿಸಿದೆ ಎಂದು ದತ್ತಾಂಶಗಳೊಡನೆ ಸಾಕೇತ್ ಗೋಖಲೆ ಹೇಳಿದ್ದಾರೆ.

👉ತದನಂತರ, 2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಸಿಎಎ ಮತ್ತು ರೈತ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ, ಮೋದಿ ಸರ್ಕಾರವು 5830 ಖಾತೆಗಳಿಗೆ ಮಾಹಿತಿ ಮತ್ತು ಬಳಕೆದಾರರ ವಿವರಗಳನ್ನು ಕೋರಿತು.

ಇದು 452% ರಷ್ಟು ಹೆಚ್ಚಳವಾಗಿದೆ!”

2021 (ಕೋವಿಡ್) ಕಾಲದಲ್ಲಿ ಬಳಕೆದಾರರ ವಿವರಗಳಿಗಾಗಿ ಸಲ್ಲಿಕೆಯಾದ ಒಟ್ಟು ಜಾಗತಿಕ ವಿನಂತಿಗಳಲ್ಲಿ 19% ವಿನಂತಿಗಳನ್ನು ಭಾರತ ಸರ್ಕಾರವೇ ಮಾಡಿದೆ. ಇದೇ ಅವಧಿಯಲ್ಲಿ ಯುನೈಟೆಡ್ ಕಿಂಗ್‌ಡಂ 4% ವಿನಂತಿಗಳನ್ನು ಮಾಡಿದ್ದರೆ, ಜರ್ಮನಿ 6%, ಬ್ರೆಝಿಲ್ 2% ವಿನಂತಿಗಳನ್ನಷ್ಟೇ ಮಾಡಿತ್ತು. ಪಾಕಿಸ್ತಾನ ಕೇವಲ 1% ಕಡಿಮೆ ವಿನಂತಿ ಮಾಡಿದೆ ಎಂದು ಸಾಕೇತ್ ಗೋಖಲೆ ಟ್ವಿಟರ್ ನೀಡಿರುವ ವರದಿಯನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಇನ್ನು, ಟ್ವಿಟರ್ ಖಾತೆಯನ್ನು ಅಮಾನತು ಮಾಡುವುದು ಮತ್ತು ವಿಷಯಗಳನ್ನು ಡಿಲಿಟ್ ಮಾಡುವಂತೆಯೂ ಭಾರತ ಸರ್ಕಾರ ನೀಡಿದ ಆದೇಶಗಳ ಮಾಹಿತಿಯನ್ನು ಟ್ವಿಟರ್ ನೀಡಿದೆ. ಅದರಲ್ಲಿ ಕೋರ್ಟ್‌ ನಿರ್ದೇಶನದ ಪ್ರಕಾರ ಸರ್ಕಾರ ನೀಡಿದ ಆದೇಶಗಳು ಹಾಗೂ ಲೀಗಲ್ ನೋಟಿಸ್ ಇಲ್ಲದೆ ಪೊಲೀಸ್ ಹಾಗೂ ಸರ್ಕಾರಿ ಏಜನ್ಸಿಗಳು ನೀಡಿದ ಆದೇಶಗಳು ಎಂದು ಎರಡು ವಿಭಾಗ ಮಾಡಬಹುದು. 2020 ರಲ್ಲಿ, ವಿಷಯವನ್ನು ತೆಗೆದುಹಾಕುವಿಕೆ ಹಾಗೂ ಖಾತೆಗಳ ಅಮಾನತು ಸೇರಿದಂತೆ 9,724 ಆದೇಶಗಳನ್ನು ಮೋದಿ ಸರ್ಕಾರ ನೀಡಿದೆ. ಅದರಲ್ಲಿ ಕೇವಲ 19 ಮಾತ್ರ ಕೋರ್ಟ್ ನಿರ್ದೇಶನದಂತೆ ಆದೇಶಿಸಲಾಗಿದೆ. ಉಳಿದ ಎಲ್ಲವನ್ನೂ ಮೋದಿ ಸರ್ಕಾರವೇ ಆದೇಶಿಸಿದೆ. 2021 ರಲ್ಲಿ 8,863 ಆದೇಶಗಳನ್ನು ಮೋದಿ ಸರ್ಕಾರ ನೀಡಿದರೆ, ಅದರಲ್ಲಿ ಕೇವಲ 32 ಮಾತ್ರ ಕೋರ್ಟ್ ಆದೇಶಗಳಾಗಿತ್ತು ಎಂದು ಗೋಖಲೆ ಟ್ವಿಟ್ ನಲ್ಲಿ ಹೇಳಿದ್ದಾರೆ.

ಭಾರತ ಸರ್ಕಾರವು 12,916 ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲು 3,992 ಆದೇಶಗಳನ್ನು ನೀಡಿದ್ದು, ಇದು ಜಾಗತಿಕವಾಗಿ 8% ಆಗಿದೆ. ಅದೇ ವೇಳೆ UK ಕೇವಲ 16 ಆದೇಶ ನೀಡಿದ್ದರೆ, ಅಮೇರಿಕ 32 ಆದೇಶಗಳನ್ನು, ಇಸ್ರೇಲ್ 7 ಆದೇಶಗಳನ್ನು ಮಾತ್ರ ನೀಡಿದೆ. ಇವೆಲ್ಲವೂ ಜಾಗತಿಕ ಆದೇಶಗಳ 1% ವೂ ಇಲ್ಲ. ನೆರೆಯ ಪಾಕಿಸ್ತಾನ 489 ಆದೇಶಗಳನ್ನು ನೀಡಿದ್ದು, ಜಾಗತಿಕವಾಗಿ 1% ಆದೇಶಗಳನ್ನು ನೀಡಿದೆ. ಬಾಂಗ್ಲಾದೇಶ ಟ್ವಿಟರ್ ಖಾತೆ ಅಮಾನತು ಹಾಗೂ ವಿಷಯ ತೆಗೆದುಹಾಕುವಿಕೆ ಕುರಿತಂತೆ ಯಾವುದೇ ಆದೇಶವನ್ನೂ ನೀಡಿಲ್ಲ. ಅದೇ ವೇಳೆ, ಭಾರತ ಸರ್ಕಾರವು 12,919 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಆದೇಶಿಸಿದೆ ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಈ ಡೇಟಾಗಳ ಪ್ರಕಾರ ಸಿಎಎ ವಿರೋಧಿ ಹಾಗೂ ರೈತರ ಆಂದೋಲನದ ಸಂದರ್ಭದಲ್ಲಿ ಮೋದಿ ಸರ್ಕಾರವು ಟ್ವಿಟರ್ ಖಾತೆದಾರರ ಮಾಹಿತಿ ನೀಡುವಂತೆ ಹಾಗೂ ಖಾತೆಗಳ ನಿಷೇಧಕ್ಕೆ ಒತ್ತಡ ಹೇರಿದೆ ಎನ್ನುವುದು ಖಚಿತವಾಗಿದೆ. ಕೋಮುವಾದಿ ದ್ವೇಷ ಹರಡುವಿಕೆ, ಮಹಿಳಾ ಖಾತೆದಾರರ ಮೇಲೆ ಸೈಬರ್ ನಿಂದನೆ ದಾಳಿ, ಬಿಜೆಪಿ ಐಟಿ ಸೆಲ್ ಗಳು ಮುಕ್ತವಾಗಿ ಸುಳ್ಳು ಸುದ್ದಿ ಹರಡುತ್ತಿರುವ ಸಂದರ್ಭದಲ್ಲೇ ಮೋದಿ ಸರ್ಕಾರವು ಇಷ್ಟೆಲ್ಲಾ ಆದೇಶಗಳನ್ನು ನೀಡಿದೆ. ಬಿಜೆಪಿ ನಾಯಕರ ಟ್ವಿಟ್‌ಗಳನ್ನು ‘ತಿರುಚಿದ ಸುದ್ದಿ’ ಎಂದು ಸ್ವತಃ ಟ್ವಿಟರ್ ಫ್ಲ್ಯಾಗ್ ಮಾಡಿದ್ದರೂ ಸಹ ಅವುಗಳನ್ನು ತೆಗೆದುಹಾಕಿರಲಿಲ್ಲ. ಮೋದಿ ಸರಕಾರ ಟೀಕೆಗಳನ್ನು ಹತ್ತಿಕ್ಕುತ್ತದೆ ಎಂಬುದು ಈ ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಈ ಅಧಿಕೃತ ಡೇಟಾವನ್ನು ನಿರಾಕರಿಸುವ ಮತ್ತು ಆರೋಪಗಳನ್ನು “ಸುಳ್ಳು” ಮತ್ತು “ವಿದೇಶಿ ಪಿತೂರಿ” ಎಂದು ಹೇಳುವ ಧೈರ್ಯವನ್ನು ಮೋದಿ ಸರ್ಕಾರ ಹೊಂದಿದೆಯೇ? ಸಚಿವ ರಾಜೀವ್ ಅವರೇ ನಿಮ್ಮ ಉತ್ತರಕ್ಕಾಗಿ ಕಾಯುತ್ತಿದ್ದೇನೆ ಏಕೆಂದರೆ ಈಗ ನೀವು ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಸಾಕೇತ್ ಗೋಖಲೆ ಟ್ವಿಟ್ ನಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...