Homeಮುಖಪುಟಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

ಟ್ವಿಟರ್‌ಗೆ ಮೋದಿ ಸರ್ಕಾರ ಬೆದರಿಕೆ ಹಾಕಿದ ವಿಚಾರ: ದಾಖಲೆ ಸಮೇತ ಮಾಹಿತಿ ಹಂಚಿಕೊಂಡ ಟಿಎಂಸಿ ವಕ್ತಾರ

- Advertisement -
- Advertisement -

ಟ್ವಿಟರ್ ಮಾಜಿ ಸಿಇಒ ಜಾಕ್ ಡೋರ್ಸೆ ಅವರು ಭಾರತದಲ್ಲಿ ಟ್ವಿಟರ್ ಕಚೇರಿಯನ್ನು ಸ್ಥಗಿತಗೊಳಿಸುವುದಾಗಿ ಭಾರತ ಸರ್ಕಾರ ಬೆದರಿಕೆ ಹಾಕಿತ್ತು ಎಂದು ಸಂದರ್ಶನವೊಂದರಲ್ಲಿ ಹೇಳಿದ್ದರು. ಈ ಬಗ್ಗೆ ಟಿಎಂಸಿ ನಾಯಕ, ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಅವರು ಸರಣಿ ಟ್ವಿಟ್ ಮಾಡಿದ್ದು, ಟ್ವಿಟರ್ ಬಳಿ ಕೇಂದ್ರ ಸರ್ಕಾರ ಹಲವು ಖಾತೆಗಳ ಮಾಹಿತಿಯನ್ನು ಕೇಳಿತ್ತು ಎಂಬುವುದನ್ನು ಸೂಚಿಸುವ ದಾಖಲೆಯನ್ನು ಹಂಚಿಕೊಂಡಿದ್ದಾರೆ.

ಜಾಕ್ ಡೋರ್ಸೆ ಅವರ ಬೇಹುಗಾರಿಕೆ ಹಾಗೂ ಸೆನ್ಸಾರ್‌ಶಿಪ್ ಆರೋಪಗಳನ್ನು ಮೋದಿ ಸರ್ಕಾರವು ಸುಳ್ಳು ಎಂದು ಹೇಳಿ ನಿರಾಕರಿಸಿದೆ. ಆದರೆ, ಟ್ವಿಟರ್ ನ ಪಾರದರ್ಶಕತೆ ವರದಿಗಳ ಡೇಟಾವನ್ನು ಆಧರಿಸಿದ ಸತ್ಯ ಇಲ್ಲಿದೆ ಎಂದು ಸಿಎಎ ವಿರೋಧಿ ಪ್ರತಿಭಟನೆ, ರೈತರ ಪ್ರತಿಭಟನೆ ಹಾಗೂ ಕೋವಿಡ್ ಸಂದರ್ಭದಲ್ಲಿ ಸಾವಿರಾರು ಟ್ವಿಟರ್ ಬಳಕೆದಾರರ ಮಾಹಿತಿಯನ್ನು ಮೋದಿ ಸರ್ಕಾರವು ಟ್ವಿಟರ್ ಬಳಿ ಕೇಳಿತ್ತು ಎಂದು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಾಕೇತ್ ಗೋಖಲೆ ಟ್ವಿಟ್ ಮಾಡಿದ್ದಾರೆ.

ಇದನ್ನೂ ಓದಿ: ಈ ದೇಶದ ಪ್ರಧಾನಿಗೆ ಯಾಕೆ ಇಷ್ಟೊಂದು ಹೇಡಿತನ?: ಟ್ವಿಟರ್‌ನ ಮಾಜಿ ಸಿಇಒ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಪ್ರಶ್ನೆ

”ಈಗ ಕೆಳಗಿನ ಟ್ವೀಟ್‌ಗಳಲ್ಲಿ ಸಿಎಎ ವಿರೋಧಿ ಪ್ರತಿಭಟನೆಗಳು ಮತ್ತು ರೈತ ಪ್ರತಿಭಟನೆಗಳ (2020-2021) ಅವಧಿಯ ಡೇಟಾ ಇಲ್ಲಿದೆ. 👇

CAA ವಿರೋಧಿ ಮತ್ತು ರೈತರ ಪ್ರತಿಭಟನೆಯ ಅವಧಿಯಲ್ಲಿ ಭಾರತ ಸರ್ಕಾರವು ಜಾಗತಿಕವಾಗಿ ಅತಿ ಹೆಚ್ಚು ಮಾಹಿತಿಗಳನ್ನು ಕೇಳಿದ ಸರ್ಕಾರವಾಗಿದೆ.

ಈ ಅವಧಿಯಲ್ಲಿ ಜಾಗತಿಕವಾಗಿ ಸಲ್ಲಿಸಿದ ವಿನಂತಿಗಳಲ್ಲಿ 25% ವಿನಂತಿಗಳನ್ನು ಭಾರತ ಸರ್ಕಾರವೇ ಸಲ್ಲಿಸಿದೆ” ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

2019ರ ಜನವರಿ ಮತ್ತು ಡಿಸೆಂಬರ್ ನಡುವಿನ ಅವಧಿಯಲ್ಲಿ 1,057 ಖಾತೆದಾರರ ಮಾಹಿತಿ ಹಾಗೂ ವಿವರಗಳನ್ನು ಭಾರತ ಸರ್ಕಾರ ಕೇಳಿದೆ.

2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಮೋದಿ ಸರ್ಕಾರವು 5,830 ಟ್ವಿಟರ್ ಬಳಕೆದಾರರ ಮಾಹಿತಿ ಹಾಗೂ ವಿವರಗಳನ್ನು ನೀಡುವಂತೆ ಟ್ವಿಟರ್ ಸಂಸ್ಥೆಯನ್ನು ಒತ್ತಾಯಿಸಿದೆ ಎಂದು ದತ್ತಾಂಶಗಳೊಡನೆ ಸಾಕೇತ್ ಗೋಖಲೆ ಹೇಳಿದ್ದಾರೆ.

👉ತದನಂತರ, 2020 ರ ಜನವರಿ ಹಾಗೂ ಡಿಸೆಂಬರ್ ಅವಧಿಯಲ್ಲಿ ಸಿಎಎ ಮತ್ತು ರೈತ ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ, ಮೋದಿ ಸರ್ಕಾರವು 5830 ಖಾತೆಗಳಿಗೆ ಮಾಹಿತಿ ಮತ್ತು ಬಳಕೆದಾರರ ವಿವರಗಳನ್ನು ಕೋರಿತು.

ಇದು 452% ರಷ್ಟು ಹೆಚ್ಚಳವಾಗಿದೆ!”

2021 (ಕೋವಿಡ್) ಕಾಲದಲ್ಲಿ ಬಳಕೆದಾರರ ವಿವರಗಳಿಗಾಗಿ ಸಲ್ಲಿಕೆಯಾದ ಒಟ್ಟು ಜಾಗತಿಕ ವಿನಂತಿಗಳಲ್ಲಿ 19% ವಿನಂತಿಗಳನ್ನು ಭಾರತ ಸರ್ಕಾರವೇ ಮಾಡಿದೆ. ಇದೇ ಅವಧಿಯಲ್ಲಿ ಯುನೈಟೆಡ್ ಕಿಂಗ್‌ಡಂ 4% ವಿನಂತಿಗಳನ್ನು ಮಾಡಿದ್ದರೆ, ಜರ್ಮನಿ 6%, ಬ್ರೆಝಿಲ್ 2% ವಿನಂತಿಗಳನ್ನಷ್ಟೇ ಮಾಡಿತ್ತು. ಪಾಕಿಸ್ತಾನ ಕೇವಲ 1% ಕಡಿಮೆ ವಿನಂತಿ ಮಾಡಿದೆ ಎಂದು ಸಾಕೇತ್ ಗೋಖಲೆ ಟ್ವಿಟರ್ ನೀಡಿರುವ ವರದಿಯನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಇನ್ನು, ಟ್ವಿಟರ್ ಖಾತೆಯನ್ನು ಅಮಾನತು ಮಾಡುವುದು ಮತ್ತು ವಿಷಯಗಳನ್ನು ಡಿಲಿಟ್ ಮಾಡುವಂತೆಯೂ ಭಾರತ ಸರ್ಕಾರ ನೀಡಿದ ಆದೇಶಗಳ ಮಾಹಿತಿಯನ್ನು ಟ್ವಿಟರ್ ನೀಡಿದೆ. ಅದರಲ್ಲಿ ಕೋರ್ಟ್‌ ನಿರ್ದೇಶನದ ಪ್ರಕಾರ ಸರ್ಕಾರ ನೀಡಿದ ಆದೇಶಗಳು ಹಾಗೂ ಲೀಗಲ್ ನೋಟಿಸ್ ಇಲ್ಲದೆ ಪೊಲೀಸ್ ಹಾಗೂ ಸರ್ಕಾರಿ ಏಜನ್ಸಿಗಳು ನೀಡಿದ ಆದೇಶಗಳು ಎಂದು ಎರಡು ವಿಭಾಗ ಮಾಡಬಹುದು. 2020 ರಲ್ಲಿ, ವಿಷಯವನ್ನು ತೆಗೆದುಹಾಕುವಿಕೆ ಹಾಗೂ ಖಾತೆಗಳ ಅಮಾನತು ಸೇರಿದಂತೆ 9,724 ಆದೇಶಗಳನ್ನು ಮೋದಿ ಸರ್ಕಾರ ನೀಡಿದೆ. ಅದರಲ್ಲಿ ಕೇವಲ 19 ಮಾತ್ರ ಕೋರ್ಟ್ ನಿರ್ದೇಶನದಂತೆ ಆದೇಶಿಸಲಾಗಿದೆ. ಉಳಿದ ಎಲ್ಲವನ್ನೂ ಮೋದಿ ಸರ್ಕಾರವೇ ಆದೇಶಿಸಿದೆ. 2021 ರಲ್ಲಿ 8,863 ಆದೇಶಗಳನ್ನು ಮೋದಿ ಸರ್ಕಾರ ನೀಡಿದರೆ, ಅದರಲ್ಲಿ ಕೇವಲ 32 ಮಾತ್ರ ಕೋರ್ಟ್ ಆದೇಶಗಳಾಗಿತ್ತು ಎಂದು ಗೋಖಲೆ ಟ್ವಿಟ್ ನಲ್ಲಿ ಹೇಳಿದ್ದಾರೆ.

ಭಾರತ ಸರ್ಕಾರವು 12,916 ಟ್ವಿಟರ್ ಖಾತೆಗಳನ್ನು ನಿಷ್ಕ್ರಿಯಗೊಳಿಸಲು 3,992 ಆದೇಶಗಳನ್ನು ನೀಡಿದ್ದು, ಇದು ಜಾಗತಿಕವಾಗಿ 8% ಆಗಿದೆ. ಅದೇ ವೇಳೆ UK ಕೇವಲ 16 ಆದೇಶ ನೀಡಿದ್ದರೆ, ಅಮೇರಿಕ 32 ಆದೇಶಗಳನ್ನು, ಇಸ್ರೇಲ್ 7 ಆದೇಶಗಳನ್ನು ಮಾತ್ರ ನೀಡಿದೆ. ಇವೆಲ್ಲವೂ ಜಾಗತಿಕ ಆದೇಶಗಳ 1% ವೂ ಇಲ್ಲ. ನೆರೆಯ ಪಾಕಿಸ್ತಾನ 489 ಆದೇಶಗಳನ್ನು ನೀಡಿದ್ದು, ಜಾಗತಿಕವಾಗಿ 1% ಆದೇಶಗಳನ್ನು ನೀಡಿದೆ. ಬಾಂಗ್ಲಾದೇಶ ಟ್ವಿಟರ್ ಖಾತೆ ಅಮಾನತು ಹಾಗೂ ವಿಷಯ ತೆಗೆದುಹಾಕುವಿಕೆ ಕುರಿತಂತೆ ಯಾವುದೇ ಆದೇಶವನ್ನೂ ನೀಡಿಲ್ಲ. ಅದೇ ವೇಳೆ, ಭಾರತ ಸರ್ಕಾರವು 12,919 ಖಾತೆಗಳನ್ನು ನಿಷ್ಕ್ರಿಯಗೊಳಿಸಲು ಆದೇಶಿಸಿದೆ ಎಂದು ಸಾಕೇತ್ ಗೋಖಲೆ ತಿಳಿಸಿದ್ದಾರೆ.

ಈ ಡೇಟಾಗಳ ಪ್ರಕಾರ ಸಿಎಎ ವಿರೋಧಿ ಹಾಗೂ ರೈತರ ಆಂದೋಲನದ ಸಂದರ್ಭದಲ್ಲಿ ಮೋದಿ ಸರ್ಕಾರವು ಟ್ವಿಟರ್ ಖಾತೆದಾರರ ಮಾಹಿತಿ ನೀಡುವಂತೆ ಹಾಗೂ ಖಾತೆಗಳ ನಿಷೇಧಕ್ಕೆ ಒತ್ತಡ ಹೇರಿದೆ ಎನ್ನುವುದು ಖಚಿತವಾಗಿದೆ. ಕೋಮುವಾದಿ ದ್ವೇಷ ಹರಡುವಿಕೆ, ಮಹಿಳಾ ಖಾತೆದಾರರ ಮೇಲೆ ಸೈಬರ್ ನಿಂದನೆ ದಾಳಿ, ಬಿಜೆಪಿ ಐಟಿ ಸೆಲ್ ಗಳು ಮುಕ್ತವಾಗಿ ಸುಳ್ಳು ಸುದ್ದಿ ಹರಡುತ್ತಿರುವ ಸಂದರ್ಭದಲ್ಲೇ ಮೋದಿ ಸರ್ಕಾರವು ಇಷ್ಟೆಲ್ಲಾ ಆದೇಶಗಳನ್ನು ನೀಡಿದೆ. ಬಿಜೆಪಿ ನಾಯಕರ ಟ್ವಿಟ್‌ಗಳನ್ನು ‘ತಿರುಚಿದ ಸುದ್ದಿ’ ಎಂದು ಸ್ವತಃ ಟ್ವಿಟರ್ ಫ್ಲ್ಯಾಗ್ ಮಾಡಿದ್ದರೂ ಸಹ ಅವುಗಳನ್ನು ತೆಗೆದುಹಾಕಿರಲಿಲ್ಲ. ಮೋದಿ ಸರಕಾರ ಟೀಕೆಗಳನ್ನು ಹತ್ತಿಕ್ಕುತ್ತದೆ ಎಂಬುದು ಈ ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಈ ಅಧಿಕೃತ ಡೇಟಾವನ್ನು ನಿರಾಕರಿಸುವ ಮತ್ತು ಆರೋಪಗಳನ್ನು “ಸುಳ್ಳು” ಮತ್ತು “ವಿದೇಶಿ ಪಿತೂರಿ” ಎಂದು ಹೇಳುವ ಧೈರ್ಯವನ್ನು ಮೋದಿ ಸರ್ಕಾರ ಹೊಂದಿದೆಯೇ? ಸಚಿವ ರಾಜೀವ್ ಅವರೇ ನಿಮ್ಮ ಉತ್ತರಕ್ಕಾಗಿ ಕಾಯುತ್ತಿದ್ದೇನೆ ಏಕೆಂದರೆ ಈಗ ನೀವು ಸುಳ್ಳು ಹೇಳಲು ಸಾಧ್ಯವಿಲ್ಲ ಎಂದು ಸಾಕೇತ್ ಗೋಖಲೆ ಟ್ವಿಟ್ ನಲ್ಲಿ ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...