Homeಮುಖಪುಟಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

- Advertisement -
- Advertisement -

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ…

2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು, “ನಾವು ಜನಸಂಖ್ಯಾ ಸ್ಫೋಟದ ಬಗ್ಗೆ ಚಿಂತಿಸಬೇಕಾಗಿದೆ ಮತ್ತು ಅದನ್ನು ನಿಯಂತ್ರಿಸಲು ಯೋಜನೆಗಳ ಅಗತ್ಯವಿದೆ” ಎಂದು ಹೇಳಿದ್ದರು. ನಂತರ ಮುಂದಿನ ವರ್ಷ, ಅಂದರೆ 2020ರಲ್ಲಿ, “ಜನಸಂಖ್ಯಾ ನಿಯಂತ್ರಣವು ದೇಶಭಕ್ತಿಯ ಒಂದು ರೂಪ” ಎಂದು ಹೊಸ ಘೋಷಣೆ ಹೊರಡಿಸಿದ್ದರು. ಸಣ್ಣ ಕುಟುಂಬಗಳನ್ನು ಹೊಂದಿರುವವರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದ್ದರು.

2024ರ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳ ಮೊದಲು, ಅಂದರೆ, ಫೆಬ್ರವರಿ 1, 2024ರಂದು ಮಧ್ಯಂತರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ, “ಹೆಚ್ಚುತ್ತಿರುವ ಜನಸಂಖ್ಯಾ ಬೆಳವಣಿಗೆ ಮತ್ತು ಜನಸಂಖ್ಯಾ ಬದಲಾವಣೆಗಳು ‘ವಿಕಸಿತ ಭಾರತ’ದ ಗುರಿಗಳಿಗೆ ಸವಾಲುಗಳನ್ನು ಒಡ್ಡುತ್ತವೆ” ಎಂದು ಹೇಳಿದ್ದರು.

ಸೀತಾರಾಮನ್ ಅವರು “ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಜನಸಂಖ್ಯಾ ಬದಲಾವಣೆಗಳಿಂದ ಉಂಟಾಗುವ ಸವಾಲುಗಳ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು” ಎಂದು ತಿಳಿಸಿದ್ದರು. ಮುಂದುವರೆದು, “ಈ ಸಮಿತಿಯು ಮೇಲೆ ತಿಳಿಸಲಾದ ಸವಾಲುಗಳನ್ನು ಎದುರಿಸಲು ಶಿಫಾರಸುಗಳನ್ನು ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತದೆ” ಎಂದಿದ್ದರು.

ಸಮಿತಿಯಲ್ಲಿ ಯಾರಿದ್ದಾರೆ ಮತ್ತು ಅವರು ಏನು ಕೆಲಸ ಮಾಡಿದ್ದಾರೆ ಎಂಬುವುದು ಸ್ಪಷ್ಟವಾಗಿಲ್ಲ.

2024ರ ಚುನಾವಣೆಗೆ ತಮ್ಮ ಪಕ್ಷದ ಪರ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಪ್ರಚಾರ ಮಾಡುವಾಗ ಮೋದಿಯವರು ‘ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ವಿಷಯವನ್ನು ಹಲವಾರು ಬಾರಿ ಚುನಾವಣಾ ವಿಷಯವನ್ನಾಗಿ ಮಾಡಲು ಪ್ರಯತ್ನಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡುತ್ತಾ, ನಮಗಿಂತ ಮೊದಲು ಇದ್ದ ಸರ್ಕಾರ ‘ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ’ ಹೆಚ್ಚಿನ ಸಂಪನ್ಮೂಲಗಳನ್ನು ನೀಡಲು ಬಯಸಿತ್ತು ಎಂದು ಅವರು (ತಪ್ಪಾಗಿ) ಹೇಳಿದ್ದರು.

ಬಹುಶಃ ಜನಸಂಖ್ಯಾ ಸ್ಫೋಟದ ಘೋಷಣೆಗಳು ಕೇವಲ ಕೆಲವು ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನೀಡಿದ ಪರೋಕ್ಷ ಸಂಕೇತಗಳಾಗಿದ್ದಿರಬಹುದು. ಏಕೆಂದರೆ, ಗುಜರಾತ್ ಸಿಎಂ ಆಗಿದ್ದ ಕಾಲದಲ್ಲಿ ಅವರು ಗುಜರಾತಿ ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿ ಮಾತನಾಡುತ್ತಾ ಹೇಳಿದ “ಹಮ್ ಪಾಂಚ್, ಹಮಾರೆ ಪಚ್ಚೀಸ್” (ನಾವು ಐವರು, ನಮಗೆ ಇಪ್ಪತ್ತೈದು) ಎಂಬ ಮಾತುಗಳು ದಾಖಲೆಗಳಲ್ಲಿವೆ.

ಬಿಜೆಪಿಯ ಸೈದ್ಧಾಂತಿಕ ಗುರುಗಳಾದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು “ಹಿಂದೂ ಕುಟುಂಬಗಳು ಮೂರು (ಅಥವಾ ಅದಕ್ಕಿಂತ ಹೆಚ್ಚು) ಮಕ್ಕಳನ್ನು ಹೊಂದಿರಬೇಕು” (ಹಮ್ ದೋ, ಹಮಾರೆ ತೀನ್) ಎಂದು ನೀಡಿರುವ ನಂತರದ ಹೇಳಿಕೆಗಳು, ಈ ಕಳವಳವು ಅಭಿವೃದ್ಧಿಗೆ ಸಂಬಂಧಿಸಿದ್ದಲ್ಲ ಬದಲಾಗಿ ಸಾಂಪ್ರದಾಯಿಕ ಅಥವಾ ಮತೀಯವಾದದ್ದು ಎಂಬುದನ್ನು ಸ್ಪಷ್ಟಪಡಿಸಿವೆ. ಈ ‘ಕಳವಳ’ವು ಕೇವಲ ಹಿಂದೂಯೇತರ ಕುಟುಂಬಗಳು ತಮ್ಮ ಸಂಖ್ಯೆಯನ್ನು ವೇಗವಾಗಿ ಹೆಚ್ಚಿಸಿಕೊಳ್ಳುತ್ತಿವೆ ಎಂಬ ಆರೋಪದ ಬಗ್ಗೆ ಮಾತ್ರವಾಗಿದೆ. (ಈ ಆರೋಪವು ಕೂಡ 2011ರ ಜನಗಣತಿ ದತ್ತಾಂಶ ಮತ್ತು ನಂತರದ ಅಂಕಿಅಂಶಗಳಿಂದ ಸುಳ್ಳೆಂದು ಸಾಬೀತಾಗಿದೆ.)

ಭಾರತದ ಜನಸಂಖ್ಯೆಯು ಸ್ಫೋಟಗೊಳ್ಳುತ್ತಿಲ್ಲ, ಆದರೆ ಮೋದಿ ಮತ್ತು ಇತರರು ಅದು ಸ್ಫೋಟಗೊಳ್ಳುತ್ತಿದೆ ಎಂದು ಪದೇ ಪದೇ ಹೇಳಲು ಉತ್ಸುಕರಾಗಿದ್ದಾರೆ. 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು (2019-2021) ಭಾರತದ ಫಲವತ್ತತೆ ದರ ಕುಸಿದಿದೆ ಎಂದು ತೋರಿಸುತ್ತದೆ. ಇತರ ದತ್ತಾಂಶಗಳು ಸಹ ಭಾರತದ ಜನಸಂಖ್ಯಾ ಬೆಳವಣಿಗೆಯ ದರವು 2001ರಲ್ಲಿ ಶೇ. 1.73 ರಷ್ಟಿದ್ದುದು 2018ರ ವೇಳೆಗೆ ಶೇ. 1.04ಕ್ಕೆ ಇಳಿಕೆಯಾಗಿದೆ ಎಂದು ತೋರಿಸುತ್ತವೆ.

ಮೋದಿ ಸರ್ಕಾರಕ್ಕೆ ಈ ಹಿಂದೆ ಜನಸಂಖ್ಯೆಯ ಬಗ್ಗೆ ಇದ್ದ ಅತೀವವಾದ ಚಿಂತೆ, ಈಗ ಇದ್ದಕ್ಕಿದ್ದಂತೆ ಸಂಪೂರ್ಣವಾಗಿ ಮಾಯವಾದಂತೆ ಕಾಣುತ್ತಿದೆ. ಇದು ಯಾಕೆ ಹೀಗಾಯಿತು ಎಂದು ಅರ್ಥಮಾಡಿಕೊಳ್ಳುವುದು ಕೂಡ ಕಷ್ಟವಾಗಿದೆ.

ನಾಟಕೀಯ ಬದಲಾವಣೆಯಲ್ಲಿ, ಇದೀಗ ಮೋದಿ ಸರ್ಕಾರ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳಿಗೆ ಕೊಡುಗೆ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಲು ಕ್ಷೇತ್ರಗಳ ಮರುವಿಂಗಡಣೆಗೆ ನಿರ್ಧರಿಸಿದೆ. ಈಗಾಗಲೇ ಕಾನೂನಾಗಿರುವ ಮಹಿಳಾ ಮೀಸಲಾತಿಯನ್ನು ಇದಕ್ಕೆ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ. ಒಟ್ಟಾರೆಯಾಗಿ, ಜನಸಂಖ್ಯೆ ನಿಯಂತ್ರಣ ನಿಲುವಿನಿಂದ ಸ್ಥಾನಗಳ ಹೆಚ್ಚಳದತ್ತ ಸರ್ಕಾರ ಬದಲಾಗಿದೆ.

ಕೇಂದ್ರ ಸರ್ಕಾರದ ಹೊಸ ಕ್ಷೇತ್ರ ಮರುವಿಂಗಡನೆಯು ಎಲ್ಲಿ ಜನಸಂಖ್ಯೆ ಹೆಚ್ಚಿದೆಯೋ ಅಂತಹ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗುವಂತಿದೆ. ಅಂದರೆ, ಜನಸಂಖ್ಯೆಯನ್ನು ನಿಯಂತ್ರಿಸದ ರಾಜ್ಯಗಳಿಗೆ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಸಿಗಲಿವೆ.

ಭಾರತದ ವಾಸ್ತವ ಮತ್ತು ಜನಸಂಖ್ಯಾ ಪರಿಸ್ಥಿತಿ ಗಮನಿಸಿದರೆ, ಜನಸಂಖ್ಯಾ ತಜ್ಞರು ಈಗಾಗಲೇ ‘ಜನಸಂಖ್ಯಾ ಸ್ಫೋಟ’ದ ಸಿದ್ಧಾಂತವನ್ನು ತಳ್ಳಿಹಾಕಿದ್ದಾರೆ. ಭಾರತದ ಒಟ್ಟು ಫಲವತ್ತತೆ ದರವು ಅತ್ಯಂತ ವೇಗವಾಗಿ ಮತ್ತು ಗಮನಾರ್ಹವಾಗಿ ಕುಸಿದಿದೆ ಎಂದು ಅವರು ಹೇಳಿದ್ದಾರೆ. ಹಲವು ಪ್ರದೇಶಗಳಲ್ಲಿ ಈ ದರವು 2.1ಕ್ಕಿಂತಲೂ ಕೆಳಗಿದೆ (ಜನಸಂಖ್ಯೆಯನ್ನು ಸ್ಥಿರವಾಗಿಡಲು ಅಥವಾ ಸಮತೋಲನ ಕಾಯ್ದುಕೊಳ್ಳಲು 2.1 ದರವು ಅತ್ಯಗತ್ಯ).

ಪಾಪ್ಯುಲೇಷನ್ ಫೌಂಡೇಶನ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ಪೂನಂ ಮುತ್ರೇಜಾ ಅವರು, “ದೇಶದಲ್ಲಿ ಜನಸಂಖ್ಯಾ ಸ್ಫೋಟವಾಗುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಭಾರತದಲ್ಲಿ ಈಗ ಜನಸಂಖ್ಯಾ ಸ್ಥಿತ್ಯಂತರ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಮುಂದುವರಿದು “ಭಾರತದ ಜನಗಣತಿ ದತ್ತಾಂಶವು 1991-2011ರ ಅವಧಿಯಲ್ಲಿ ಶೇ. 21.5ರಷ್ಟಿದ್ದ ಜನಸಂಖ್ಯಾ ಬೆಳವಣಿಗೆಯ ದರವು, 2001-2011ರ ಅವಧಿಯಲ್ಲಿ ಶೇ. 17.7ಕ್ಕೆ ಇಳಿಕೆಯಾಗಿದೆ ಎಂಬುದನ್ನು ಖಚಿತಪಡಿಸುತ್ತದೆ. ಭಾರತದ ಒಟ್ಟು ಫಲವತ್ತತೆ ದರವು ಸಹ 2000ದಲ್ಲಿ 3.2ರಷ್ಟಿದ್ದುದು, 2018ರ ಸ್ಯಾಂಪಲ್ ರಿಜಿಸ್ಟ್ರೇಶನ್ ಸಿಸ್ಟಮ್ ಪ್ರಕಾರ 2.2ಕ್ಕೆ ಗಣನೀಯವಾಗಿ ಇಳಿದಿದೆ” ಎಂದು ತಿಳಿಸಿದ್ದಾರೆ.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...