Homeಮುಖಪುಟಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

- Advertisement -
- Advertisement -

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ…

2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು, “ನಾವು ಜನಸಂಖ್ಯಾ ಸ್ಫೋಟದ ಬಗ್ಗೆ ಚಿಂತಿಸಬೇಕಾಗಿದೆ ಮತ್ತು ಅದನ್ನು ನಿಯಂತ್ರಿಸಲು ಯೋಜನೆಗಳ ಅಗತ್ಯವಿದೆ” ಎಂದು ಹೇಳಿದ್ದರು. ನಂತರ ಮುಂದಿನ ವರ್ಷ, ಅಂದರೆ 2020ರಲ್ಲಿ, “ಜನಸಂಖ್ಯಾ ನಿಯಂತ್ರಣವು ದೇಶಭಕ್ತಿಯ ಒಂದು ರೂಪ” ಎಂದು ಹೊಸ ಘೋಷಣೆ ಹೊರಡಿಸಿದ್ದರು. ಸಣ್ಣ ಕುಟುಂಬಗಳನ್ನು ಹೊಂದಿರುವವರು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಅವರು ಶ್ಲಾಘಿಸಿದ್ದರು.

2024ರ ಸಾರ್ವತ್ರಿಕ ಚುನಾವಣೆಗೆ ಕೆಲವೇ ದಿನಗಳ ಮೊದಲು, ಅಂದರೆ, ಫೆಬ್ರವರಿ 1, 2024ರಂದು ಮಧ್ಯಂತರ ಬಜೆಟ್ ಮಂಡಿಸುವಾಗ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡ, “ಹೆಚ್ಚುತ್ತಿರುವ ಜನಸಂಖ್ಯಾ ಬೆಳವಣಿಗೆ ಮತ್ತು ಜನಸಂಖ್ಯಾ ಬದಲಾವಣೆಗಳು ‘ವಿಕಸಿತ ಭಾರತ’ದ ಗುರಿಗಳಿಗೆ ಸವಾಲುಗಳನ್ನು ಒಡ್ಡುತ್ತವೆ” ಎಂದು ಹೇಳಿದ್ದರು.

ಸೀತಾರಾಮನ್ ಅವರು “ವೇಗವಾಗಿ ಬೆಳೆಯುತ್ತಿರುವ ಜನಸಂಖ್ಯೆ ಮತ್ತು ಜನಸಂಖ್ಯಾ ಬದಲಾವಣೆಗಳಿಂದ ಉಂಟಾಗುವ ಸವಾಲುಗಳ ಬಗ್ಗೆ ವ್ಯಾಪಕವಾಗಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು” ಎಂದು ತಿಳಿಸಿದ್ದರು. ಮುಂದುವರೆದು, “ಈ ಸಮಿತಿಯು ಮೇಲೆ ತಿಳಿಸಲಾದ ಸವಾಲುಗಳನ್ನು ಎದುರಿಸಲು ಶಿಫಾರಸುಗಳನ್ನು ಮಾಡುವ ಜವಾಬ್ದಾರಿಯನ್ನು ಹೊಂದಿರುತ್ತದೆ” ಎಂದಿದ್ದರು.

ಸಮಿತಿಯಲ್ಲಿ ಯಾರಿದ್ದಾರೆ ಮತ್ತು ಅವರು ಏನು ಕೆಲಸ ಮಾಡಿದ್ದಾರೆ ಎಂಬುವುದು ಸ್ಪಷ್ಟವಾಗಿಲ್ಲ.

2024ರ ಚುನಾವಣೆಗೆ ತಮ್ಮ ಪಕ್ಷದ ಪರ ಹಿಂದಿ ಭಾಷಿಕ ಪ್ರದೇಶಗಳಲ್ಲಿ ಪ್ರಚಾರ ಮಾಡುವಾಗ ಮೋದಿಯವರು ‘ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂಬ ವಿಷಯವನ್ನು ಹಲವಾರು ಬಾರಿ ಚುನಾವಣಾ ವಿಷಯವನ್ನಾಗಿ ಮಾಡಲು ಪ್ರಯತ್ನಿಸಿದ್ದರು. ರಾಜಸ್ಥಾನದ ಬನ್ಸ್ವಾರಾದಲ್ಲಿ ಮಾತನಾಡುತ್ತಾ, ನಮಗಿಂತ ಮೊದಲು ಇದ್ದ ಸರ್ಕಾರ ‘ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ’ ಹೆಚ್ಚಿನ ಸಂಪನ್ಮೂಲಗಳನ್ನು ನೀಡಲು ಬಯಸಿತ್ತು ಎಂದು ಅವರು (ತಪ್ಪಾಗಿ) ಹೇಳಿದ್ದರು.

ಬಹುಶಃ ಜನಸಂಖ್ಯಾ ಸ್ಫೋಟದ ಘೋಷಣೆಗಳು ಕೇವಲ ಕೆಲವು ನಿರ್ದಿಷ್ಟ ಸಮುದಾಯಗಳನ್ನು ಗುರಿಯಾಗಿಸಿಕೊಂಡು ನೀಡಿದ ಪರೋಕ್ಷ ಸಂಕೇತಗಳಾಗಿದ್ದಿರಬಹುದು. ಏಕೆಂದರೆ, ಗುಜರಾತ್ ಸಿಎಂ ಆಗಿದ್ದ ಕಾಲದಲ್ಲಿ ಅವರು ಗುಜರಾತಿ ಮುಸ್ಲಿಂ ಸಮುದಾಯಗಳನ್ನು ಗುರಿಯಾಗಿಸಿ ಮಾತನಾಡುತ್ತಾ ಹೇಳಿದ “ಹಮ್ ಪಾಂಚ್, ಹಮಾರೆ ಪಚ್ಚೀಸ್” (ನಾವು ಐವರು, ನಮಗೆ ಇಪ್ಪತ್ತೈದು) ಎಂಬ ಮಾತುಗಳು ದಾಖಲೆಗಳಲ್ಲಿವೆ.

ಬಿಜೆಪಿಯ ಸೈದ್ಧಾಂತಿಕ ಗುರುಗಳಾದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು “ಹಿಂದೂ ಕುಟುಂಬಗಳು ಮೂರು (ಅಥವಾ ಅದಕ್ಕಿಂತ ಹೆಚ್ಚು) ಮಕ್ಕಳನ್ನು ಹೊಂದಿರಬೇಕು” (ಹಮ್ ದೋ, ಹಮಾರೆ ತೀನ್) ಎಂದು ನೀಡಿರುವ ನಂತರದ ಹೇಳಿಕೆಗಳು, ಈ ಕಳವಳವು ಅಭಿವೃದ್ಧಿಗೆ ಸಂಬಂಧಿಸಿದ್ದಲ್ಲ ಬದಲಾಗಿ ಸಾಂಪ್ರದಾಯಿಕ ಅಥವಾ ಮತೀಯವಾದದ್ದು ಎಂಬುದನ್ನು ಸ್ಪಷ್ಟಪಡಿಸಿವೆ. ಈ ‘ಕಳವಳ’ವು ಕೇವಲ ಹಿಂದೂಯೇತರ ಕುಟುಂಬಗಳು ತಮ್ಮ ಸಂಖ್ಯೆಯನ್ನು ವೇಗವಾಗಿ ಹೆಚ್ಚಿಸಿಕೊಳ್ಳುತ್ತಿವೆ ಎಂಬ ಆರೋಪದ ಬಗ್ಗೆ ಮಾತ್ರವಾಗಿದೆ. (ಈ ಆರೋಪವು ಕೂಡ 2011ರ ಜನಗಣತಿ ದತ್ತಾಂಶ ಮತ್ತು ನಂತರದ ಅಂಕಿಅಂಶಗಳಿಂದ ಸುಳ್ಳೆಂದು ಸಾಬೀತಾಗಿದೆ.)

ಭಾರತದ ಜನಸಂಖ್ಯೆಯು ಸ್ಫೋಟಗೊಳ್ಳುತ್ತಿಲ್ಲ, ಆದರೆ ಮೋದಿ ಮತ್ತು ಇತರರು ಅದು ಸ್ಫೋಟಗೊಳ್ಳುತ್ತಿದೆ ಎಂದು ಪದೇ ಪದೇ ಹೇಳಲು ಉತ್ಸುಕರಾಗಿದ್ದಾರೆ. 5ನೇ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು (2019-2021) ಭಾರತದ ಫಲವತ್ತತೆ ದರ ಕುಸಿದಿದೆ ಎಂದು ತೋರಿಸುತ್ತದೆ. ಇತರ ದತ್ತಾಂಶಗಳು ಸಹ ಭಾರತದ ಜನಸಂಖ್ಯಾ ಬೆಳವಣಿಗೆಯ ದರವು 2001ರಲ್ಲಿ ಶೇ. 1.73 ರಷ್ಟಿದ್ದುದು 2018ರ ವೇಳೆಗೆ ಶೇ. 1.04ಕ್ಕೆ ಇಳಿಕೆಯಾಗಿದೆ ಎಂದು ತೋರಿಸುತ್ತವೆ.

ಮೋದಿ ಸರ್ಕಾರಕ್ಕೆ ಈ ಹಿಂದೆ ಜನಸಂಖ್ಯೆಯ ಬಗ್ಗೆ ಇದ್ದ ಅತೀವವಾದ ಚಿಂತೆ, ಈಗ ಇದ್ದಕ್ಕಿದ್ದಂತೆ ಸಂಪೂರ್ಣವಾಗಿ ಮಾಯವಾದಂತೆ ಕಾಣುತ್ತಿದೆ. ಇದು ಯಾಕೆ ಹೀಗಾಯಿತು ಎಂದು ಅರ್ಥಮಾಡಿಕೊಳ್ಳುವುದು ಕೂಡ ಕಷ್ಟವಾಗಿದೆ.

ನಾಟಕೀಯ ಬದಲಾವಣೆಯಲ್ಲಿ, ಇದೀಗ ಮೋದಿ ಸರ್ಕಾರ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳಿಗೆ ಕೊಡುಗೆ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಜನಸಂಖ್ಯೆ ಹೆಚ್ಚಿರುವ ರಾಜ್ಯಗಳ ಲೋಕಸಭಾ ಸ್ಥಾನಗಳನ್ನು ಹೆಚ್ಚಿಸಲು ಕ್ಷೇತ್ರಗಳ ಮರುವಿಂಗಡಣೆಗೆ ನಿರ್ಧರಿಸಿದೆ. ಈಗಾಗಲೇ ಕಾನೂನಾಗಿರುವ ಮಹಿಳಾ ಮೀಸಲಾತಿಯನ್ನು ಇದಕ್ಕೆ ಗುರಾಣಿಯಾಗಿ ಬಳಸಿಕೊಳ್ಳುತ್ತಿದೆ. ಒಟ್ಟಾರೆಯಾಗಿ, ಜನಸಂಖ್ಯೆ ನಿಯಂತ್ರಣ ನಿಲುವಿನಿಂದ ಸ್ಥಾನಗಳ ಹೆಚ್ಚಳದತ್ತ ಸರ್ಕಾರ ಬದಲಾಗಿದೆ.

ಕೇಂದ್ರ ಸರ್ಕಾರದ ಹೊಸ ಕ್ಷೇತ್ರ ಮರುವಿಂಗಡನೆಯು ಎಲ್ಲಿ ಜನಸಂಖ್ಯೆ ಹೆಚ್ಚಿದೆಯೋ ಅಂತಹ ರಾಜ್ಯಗಳಿಗೆ ಹೆಚ್ಚಿನ ಲಾಭ ಸಿಗುವಂತಿದೆ. ಅಂದರೆ, ಜನಸಂಖ್ಯೆಯನ್ನು ನಿಯಂತ್ರಿಸದ ರಾಜ್ಯಗಳಿಗೆ ಲೋಕಸಭೆಯಲ್ಲಿ ಹೆಚ್ಚಿನ ಸ್ಥಾನಗಳು ಸಿಗಲಿವೆ.

ಭಾರತದ ವಾಸ್ತವ ಮತ್ತು ಜನಸಂಖ್ಯಾ ಪರಿಸ್ಥಿತಿ ಗಮನಿಸಿದರೆ, ಜನಸಂಖ್ಯಾ ತಜ್ಞರು ಈಗಾಗಲೇ ‘ಜನಸಂಖ್ಯಾ ಸ್ಫೋಟ’ದ ಸಿದ್ಧಾಂತವನ್ನು ತಳ್ಳಿಹಾಕಿದ್ದಾರೆ. ಭಾರತದ ಒಟ್ಟು ಫಲವತ್ತತೆ ದರವು ಅತ್ಯಂತ ವೇಗವಾಗಿ ಮತ್ತು ಗಮನಾರ್ಹವಾಗಿ ಕುಸಿದಿದೆ ಎಂದು ಅವರು ಹೇಳಿದ್ದಾರೆ. ಹಲವು ಪ್ರದೇಶಗಳಲ್ಲಿ ಈ ದರವು 2.1ಕ್ಕಿಂತಲೂ ಕೆಳಗಿದೆ (ಜನಸಂಖ್ಯೆಯನ್ನು ಸ್ಥಿರವಾಗಿಡಲು ಅಥವಾ ಸಮತೋಲನ ಕಾಯ್ದುಕೊಳ್ಳಲು 2.1 ದರವು ಅತ್ಯಗತ್ಯ).

ಪಾಪ್ಯುಲೇಷನ್ ಫೌಂಡೇಶನ್ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕಿ ಪೂನಂ ಮುತ್ರೇಜಾ ಅವರು, “ದೇಶದಲ್ಲಿ ಜನಸಂಖ್ಯಾ ಸ್ಫೋಟವಾಗುತ್ತಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಭಾರತದಲ್ಲಿ ಈಗ ಜನಸಂಖ್ಯಾ ಸ್ಥಿತ್ಯಂತರ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಮುಂದುವರಿದು “ಭಾರತದ ಜನಗಣತಿ ದತ್ತಾಂಶವು 1991-2011ರ ಅವಧಿಯಲ್ಲಿ ಶೇ. 21.5ರಷ್ಟಿದ್ದ ಜನಸಂಖ್ಯಾ ಬೆಳವಣಿಗೆಯ ದರವು, 2001-2011ರ ಅವಧಿಯಲ್ಲಿ ಶೇ. 17.7ಕ್ಕೆ ಇಳಿಕೆಯಾಗಿದೆ ಎಂಬುದನ್ನು ಖಚಿತಪಡಿಸುತ್ತದೆ. ಭಾರತದ ಒಟ್ಟು ಫಲವತ್ತತೆ ದರವು ಸಹ 2000ದಲ್ಲಿ 3.2ರಷ್ಟಿದ್ದುದು, 2018ರ ಸ್ಯಾಂಪಲ್ ರಿಜಿಸ್ಟ್ರೇಶನ್ ಸಿಸ್ಟಮ್ ಪ್ರಕಾರ 2.2ಕ್ಕೆ ಗಣನೀಯವಾಗಿ ಇಳಿದಿದೆ” ಎಂದು ತಿಳಿಸಿದ್ದಾರೆ.

Courtesy : thewire.in

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...