Homeಮುಖಪುಟಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

- Advertisement -
- Advertisement -

ನರೇಂದ್ರ ಮೋದಿ ಸರಕಾರ ಅದಾನಿ ಸರಕಾರ, ಸಂವಿಧಾನವು ಭಾರತದ ಆತ್ಮ, ಈ ಆತ್ಮ ಮತ್ತು ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಣವನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಬಿಜೆಪಿ ಆಡಳಿತವನ್ನು ಪತನಗೊಳಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನರೇಂದ್ರ ಮೋದಿ ಮತ್ತು ಅದಾನಿ ನೀತಿಗಳು ಎರಡು ಭಾರತಗಳನ್ನು ಸೃಷ್ಟಿಸಿವೆ. ಒಂದು ಕೋಟ್ಯಾಧಿಪತಿಗಳ ಭಾರತ ಮತ್ತು ಇನ್ನೊಂದು ಬಡವರ ಭಾರತ. ಸ್ಟಾಲಿನ್ ರಾಹುಲ್ ಅವರನ್ನು ಪ್ರೀತಿಯ ಸಹೋದರ ಎಂದು ಸ್ವಾಗತಿಸುವ ಮೂಲಕ ಕಾಂಗ್ರೆಸ್ ಮತ್ತು ಆಡಳಿತಾರೂಢ ಡಿಎಂಕೆ ನಡುವಿನ ಬಾಂಧವ್ಯ ಚೆನ್ನಾಗಿದೆ ಎಂದು ಸಂದೇಶವನ್ನು ಸಾರಿದ್ದಾರೆ. ರಾಹುಲ್‌ ಗಾಂಧಿ, ಸ್ಟಾಲಿನ್ ಅವರನ್ನು ಹಿರಿಯ ಸಹೋದರ ಎಂದು ಕರೆದಿದ್ದು, ಎಂದಿಗೂ ನಾನು ಯಾವುದೇ ರಾಜಕಾರಣಿಯನ್ನು ತಮ್ಮ ಸಹೋದರ ಎಂದು ಕರೆದಿಲ್ಲ ಎಂದು ಹೇಳಿದ್ದಾರೆ.

ಸ್ಟಾಲಿನ್‌ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಚುನಾವಣಾ ಹೀರೋ ಎಂದು ಬಣ್ಣಿಸಿದ್ದು, ರಾಹುಲ್ ಅವರನ್ನು ಶ್ಲಾಘಿಸಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಆ ಮೂಲಕ ಪ್ರಣಾಳಿಕೆಯನ್ನು ರಚಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯು ಡಿಎಂಕೆಯ ಸಾಮಾಜಿಕ ನ್ಯಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಬಿರುಗಾಳಿ ಬರಲಿದೆ, ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ. ಮೋದಿ ಸರ್ಕಾರ ವಾಸ್ತವವಾಗಿ ಅದಾನಿ ಸರ್ಕಾರ, ಇದನ್ನು ಅದಾನಿ ಸರ್ಕಾರ ಎಂದು ಕರೆಯಬೇಕು ಮತ್ತು ನರೇಂದ್ರ ಮೋದಿ ಸರ್ಕಾರವಲ್ಲ ಎಂದು ರಾಹುಲ್  ಗಾಂಧಿ ಹೇಳಿದರು. ವಿಮಾನ ನಿಲ್ದಾಣವಾಗಲಿ, ಹೆದ್ದಾರಿಯಾಗಲಿ, ಯಾವುದೇ ಮೂಲಭೂತ ಯೋಜನೆಯಾಗಲಿ, ಎಲ್ಲವನ್ನು ಭಾರತ ಸರ್ಕಾರವು ಅದಾನಿಗೆ ನೀಡುತ್ತದೆ.

ಅದಾನಿ ಮುಂಬೈ ವಿಮಾನ ನಿಲ್ದಾಣವನ್ನು ಬಯಸಿದ್ದರು. ವಿಮಾನ ನಿಲ್ದಾಣದ ಮಾಲೀಕರು ಸಿಬಿಐ ವಿಚಾರಣೆಯನ್ನು ಎದುರಿಸಿದರು. ಕೆಲವು ವಾರಗಳ ನಂತರ ಅವರು ವಿಮಾನ ನಿಲ್ದಾಣವನ್ನು ಅದಾನಿಗೆ ಹಸ್ತಾಂತರಿಸಿದರು ಮತ್ತು ಕೇಂದ್ರೀಯ ಸಂಸ್ಥೆಯ ವಿಚಾರಣೆ ಕಣ್ಮರೆಯಾಯಿತು. ಅದಾನಿ ಏನು ಬಯಸುತ್ತಾನೋ ಅವನು ಅದನ್ನು ಪಡೆಯುತ್ತಾನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದ ನಂತರ ಲೋಕಸಭಾ ಸದಸ್ಯತ್ವವನ್ನು ಕಸಿದುಕೊಳ್ಳಲಾಯಿತು ಮತ್ತು ದೆಹಲಿಯ ಮನೆಯಿಂದ ಹೊರಹಾಕಲಾಯಿತು. ಮತ ಹಾಕಿದರೆ, ಇಂಡಿಯಾ ಮೈತ್ರಿ ಸರಕಾರವು ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸುತ್ತದೆ ಎಂದು ರಾಹುಲ್ ಗಾಂಧಿ ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡಿರುವ ಕಾಂಗ್ರೆಸ್ ಪ್ರಣಾಳಿಕೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಚುನಾವಣೆಯು ಸೈದ್ಧಾಂತಿಕ ಹೋರಾಟವಾಗಿದೆ ಮತ್ತು ಇನ್ನು ಮುಂದೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಎಲ್ಲಾ ಜನರ ಹಕ್ಕುಗಳು, ಅವರ ಇತಿಹಾಸಗಳು, ಭಾಷೆಗಳು ಮತ್ತು ಅವರ ಜೀವನ ವಿಧಾನವನ್ನು ಸಂವಿಧಾನವು ರಕ್ಷಿಸಿದೆ. ಸಂವಿಧಾನವು ಸಾಮಾನ್ಯ ಪುಸ್ತಕವಲ್ಲ, ಅದು ಆತ್ಮ, ಇದು ಭಾರತದ ಜನರ ಧ್ವನಿ. ಆ ಆತ್ಮ ಮತ್ತು ಆ ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಂಡರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು ಬಹಿರಂಗವಾಗಿ ಹೇಳಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದ ಸಂಸ್ಥೆಗಳು ಅದರ ಎಲ್ಲಾ ಜನರಿಗೆ ಸೇರಿವೆ ಮತ್ತು ಅವರು ಆರ್‌ಎಸ್‌ಎಸ್‌ಗೆ ಸೇರಿಲ್ಲ. ವಿಶ್ವವಿದ್ಯಾನಿಲಯಗಳ ಹೆಚ್ಚಿನ ಉಪಕುಲಪತಿಗಳು ಆರೆಸ್ಸೆಸ್‌ನಿಂದ ಬಂದವರು ಮತ್ತು ಕಾನೂನು ಇಲಾಖೆಗಳಲ್ಲಿ ಆರೆಸ್ಸೆಸ್‌ ನುಸುಳಿದೆ, ಇದು ನಮ್ಮ ರಾಷ್ಟ್ರದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಮುಸ್ಲಿಂ ಲೀಗ್ ಟೀಕೆ: ‘ಬಿಜೆಪಿ ನಾಯಕರು ತಮ್ಮ ಪಕ್ಷದ ಇತಿಹಾಸವನ್ನು ಮೊದಲು ಓದಬೇಕು..’ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...