Homeಮುಖಪುಟಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

ಸಂವಿಧಾನದ ಮೇಲೆ ಆರೆಸ್ಸೆಸ್‌, ಬಿಜೆಪಿ ದಾಳಿ ನಡೆಸುತ್ತಿದೆ: ರಾಹುಲ್‌ ಗಾಂಧಿ

- Advertisement -
- Advertisement -

ನರೇಂದ್ರ ಮೋದಿ ಸರಕಾರ ಅದಾನಿ ಸರಕಾರ, ಸಂವಿಧಾನವು ಭಾರತದ ಆತ್ಮ, ಈ ಆತ್ಮ ಮತ್ತು ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ, ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಬಣವನ್ನು ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಬಿಜೆಪಿ ಆಡಳಿತವನ್ನು ಪತನಗೊಳಿಸಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ನರೇಂದ್ರ ಮೋದಿ ಮತ್ತು ಅದಾನಿ ನೀತಿಗಳು ಎರಡು ಭಾರತಗಳನ್ನು ಸೃಷ್ಟಿಸಿವೆ. ಒಂದು ಕೋಟ್ಯಾಧಿಪತಿಗಳ ಭಾರತ ಮತ್ತು ಇನ್ನೊಂದು ಬಡವರ ಭಾರತ. ಸ್ಟಾಲಿನ್ ರಾಹುಲ್ ಅವರನ್ನು ಪ್ರೀತಿಯ ಸಹೋದರ ಎಂದು ಸ್ವಾಗತಿಸುವ ಮೂಲಕ ಕಾಂಗ್ರೆಸ್ ಮತ್ತು ಆಡಳಿತಾರೂಢ ಡಿಎಂಕೆ ನಡುವಿನ ಬಾಂಧವ್ಯ ಚೆನ್ನಾಗಿದೆ ಎಂದು ಸಂದೇಶವನ್ನು ಸಾರಿದ್ದಾರೆ. ರಾಹುಲ್‌ ಗಾಂಧಿ, ಸ್ಟಾಲಿನ್ ಅವರನ್ನು ಹಿರಿಯ ಸಹೋದರ ಎಂದು ಕರೆದಿದ್ದು, ಎಂದಿಗೂ ನಾನು ಯಾವುದೇ ರಾಜಕಾರಣಿಯನ್ನು ತಮ್ಮ ಸಹೋದರ ಎಂದು ಕರೆದಿಲ್ಲ ಎಂದು ಹೇಳಿದ್ದಾರೆ.

ಸ್ಟಾಲಿನ್‌ ಅವರು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ಚುನಾವಣಾ ಹೀರೋ ಎಂದು ಬಣ್ಣಿಸಿದ್ದು, ರಾಹುಲ್ ಅವರನ್ನು ಶ್ಲಾಘಿಸಿದ್ದಾರೆ. ಭಾರತ್‌ ಜೋಡೋ ಯಾತ್ರೆಯ ಮೂಲಕ ಜನರ ಸಮಸ್ಯೆಗಳನ್ನು ತಿಳಿದುಕೊಂಡು ಆ ಮೂಲಕ ಪ್ರಣಾಳಿಕೆಯನ್ನು ರಚಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಯು ಡಿಎಂಕೆಯ ಸಾಮಾಜಿಕ ನ್ಯಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಹೇಳಿದರು.

ಬಿರುಗಾಳಿ ಬರಲಿದೆ, ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯಲಿದ್ದಾರೆ. ಮೋದಿ ಸರ್ಕಾರ ವಾಸ್ತವವಾಗಿ ಅದಾನಿ ಸರ್ಕಾರ, ಇದನ್ನು ಅದಾನಿ ಸರ್ಕಾರ ಎಂದು ಕರೆಯಬೇಕು ಮತ್ತು ನರೇಂದ್ರ ಮೋದಿ ಸರ್ಕಾರವಲ್ಲ ಎಂದು ರಾಹುಲ್  ಗಾಂಧಿ ಹೇಳಿದರು. ವಿಮಾನ ನಿಲ್ದಾಣವಾಗಲಿ, ಹೆದ್ದಾರಿಯಾಗಲಿ, ಯಾವುದೇ ಮೂಲಭೂತ ಯೋಜನೆಯಾಗಲಿ, ಎಲ್ಲವನ್ನು ಭಾರತ ಸರ್ಕಾರವು ಅದಾನಿಗೆ ನೀಡುತ್ತದೆ.

ಅದಾನಿ ಮುಂಬೈ ವಿಮಾನ ನಿಲ್ದಾಣವನ್ನು ಬಯಸಿದ್ದರು. ವಿಮಾನ ನಿಲ್ದಾಣದ ಮಾಲೀಕರು ಸಿಬಿಐ ವಿಚಾರಣೆಯನ್ನು ಎದುರಿಸಿದರು. ಕೆಲವು ವಾರಗಳ ನಂತರ ಅವರು ವಿಮಾನ ನಿಲ್ದಾಣವನ್ನು ಅದಾನಿಗೆ ಹಸ್ತಾಂತರಿಸಿದರು ಮತ್ತು ಕೇಂದ್ರೀಯ ಸಂಸ್ಥೆಯ ವಿಚಾರಣೆ ಕಣ್ಮರೆಯಾಯಿತು. ಅದಾನಿ ಏನು ಬಯಸುತ್ತಾನೋ ಅವನು ಅದನ್ನು ಪಡೆಯುತ್ತಾನೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಸಂಸತ್ತಿನಲ್ಲಿ ಅದಾನಿ ವಿಷಯವನ್ನು ಪ್ರಸ್ತಾಪಿಸಿದ ನಂತರ ಲೋಕಸಭಾ ಸದಸ್ಯತ್ವವನ್ನು ಕಸಿದುಕೊಳ್ಳಲಾಯಿತು ಮತ್ತು ದೆಹಲಿಯ ಮನೆಯಿಂದ ಹೊರಹಾಕಲಾಯಿತು. ಮತ ಹಾಕಿದರೆ, ಇಂಡಿಯಾ ಮೈತ್ರಿ ಸರಕಾರವು ಐತಿಹಾಸಿಕ ಕ್ರಮಗಳನ್ನು ತೆಗೆದುಕೊಳ್ಳಲು ನಿರ್ಧರಿಸುತ್ತದೆ ಎಂದು ರಾಹುಲ್ ಗಾಂಧಿ ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಯನ್ನು ಒಳಗೊಂಡಿರುವ ಕಾಂಗ್ರೆಸ್ ಪ್ರಣಾಳಿಕೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಚುನಾವಣೆಯು ಸೈದ್ಧಾಂತಿಕ ಹೋರಾಟವಾಗಿದೆ ಮತ್ತು ಇನ್ನು ಮುಂದೆ ಸಾಮಾನ್ಯ ಚುನಾವಣೆಯಲ್ಲ. ದೇಶದ ಎಲ್ಲಾ ಜನರ ಹಕ್ಕುಗಳು, ಅವರ ಇತಿಹಾಸಗಳು, ಭಾಷೆಗಳು ಮತ್ತು ಅವರ ಜೀವನ ವಿಧಾನವನ್ನು ಸಂವಿಧಾನವು ರಕ್ಷಿಸಿದೆ. ಸಂವಿಧಾನವು ಸಾಮಾನ್ಯ ಪುಸ್ತಕವಲ್ಲ, ಅದು ಆತ್ಮ, ಇದು ಭಾರತದ ಜನರ ಧ್ವನಿ. ಆ ಆತ್ಮ ಮತ್ತು ಆ ಧ್ವನಿಯ ಮೇಲೆ ಪ್ರಧಾನಿ ಮತ್ತು ಆರೆಸ್ಸೆಸ್ ದಾಳಿ ನಡೆಸುತ್ತಿದೆ. ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಂಡರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ಸಂಸದರು ಬಹಿರಂಗವಾಗಿ ಹೇಳಿದ್ದಾರೆ ಎಂದು ರಾಹುಲ್ ಹೇಳಿದರು.

ಭಾರತದ ಸಂಸ್ಥೆಗಳು ಅದರ ಎಲ್ಲಾ ಜನರಿಗೆ ಸೇರಿವೆ ಮತ್ತು ಅವರು ಆರ್‌ಎಸ್‌ಎಸ್‌ಗೆ ಸೇರಿಲ್ಲ. ವಿಶ್ವವಿದ್ಯಾನಿಲಯಗಳ ಹೆಚ್ಚಿನ ಉಪಕುಲಪತಿಗಳು ಆರೆಸ್ಸೆಸ್‌ನಿಂದ ಬಂದವರು ಮತ್ತು ಕಾನೂನು ಇಲಾಖೆಗಳಲ್ಲಿ ಆರೆಸ್ಸೆಸ್‌ ನುಸುಳಿದೆ, ಇದು ನಮ್ಮ ರಾಷ್ಟ್ರದ ಕಲ್ಪನೆಯ ಮೇಲಿನ ದಾಳಿಯಾಗಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ಮುಸ್ಲಿಂ ಲೀಗ್ ಟೀಕೆ: ‘ಬಿಜೆಪಿ ನಾಯಕರು ತಮ್ಮ ಪಕ್ಷದ ಇತಿಹಾಸವನ್ನು ಮೊದಲು ಓದಬೇಕು..’ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...