Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...