Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...