Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...