Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...