Homeಅಂಕಣಗಳುಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

ಮೋದಿ ಆಡಳಿತಕ್ಕೆ ಆರು ವರ್ಷ : ಸೂತಕದ ಮನೆಯಲ್ಲಿ ಸಂಭ್ರಮ

- Advertisement -
- Advertisement -

ಈ ಸಂಚಿಕೆಯನ್ನು ನಾವು ಅಂತಿಮಗೊಳಿಸುತ್ತಿರುವ ಹೊತ್ತಿನಲ್ಲಿ ಯಡಿಯೂರಪ್ಪನವರು ಯಲಹಂಕ ಫ್ಲೈಓವರ್‌ಗೆ ಮರುನಾಮಕರಣ ಮಾಡಲು ಸಿದ್ಧರಾಗುತ್ತಿರುವ ಸುದ್ದಿ ಬಂದಿದೆ. ಅದೇ ಸಮಯದಲ್ಲಿ ದೆಹಲಿಯ ಸಿಂಹಾಸನದಲ್ಲಿ ಕುಳಿತಿರುವವರು ಎರಡನೆ ಸಾರಿ ಪಟ್ಟಾಭಿಷಕ್ತರಾಗಿ ಒಂದು ವರ್ಷ ಕಳೆಯುತ್ತಿದ್ದು, ಒಟ್ಟು ಆರು ವರ್ಷಗಳ ಸಂಭ್ರಮಕ್ಕೆ ಛೇ ಸಾಲ್ ಬೇಮಿಸಾಲ್ ಎಂಬ ಘೋಷಣೆ, ಹ್ಯಾಷ್‍ಟ್ಯಾಗ್‍ಅನ್ನು ಅಂತಿಮಗೊಳಿಸುತ್ತಿದ್ದಾರೆಂದು ಹೇಳಲಾಗಿದೆ.

ಇಲ್ಲೇ ಕರ್ನಾಟಕದಲ್ಲಿ ಜಾರ್ಖಂಡ್‍ನಿಂದ ಇಲ್ಲಿಗೆ ‘ಬಂದಿರುವ’ ಇಬ್ಬರು ವಲಸೆ ಕಾರ್ಮಿಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಲಾಗಿದೆಯೆಂದು ನೆರವು ನೀಡಲು ಹೋದ ಜನಶಕ್ತಿ ಮತ್ತು ಸ್ವಾನ್ ಕಾರ್ಯಕರ್ತರಿಗೆ ಅದು ‘ಅತ್ಯಾಚಾರ, ಮಾನವ ಕಳ್ಳಸಾಗಾಣಿಕೆ, ಅಕ್ರಮ ಬಂಧನ ಹಾಗೂ ಜೀತದ ದುಡಿಮೆ’ಯ ಪ್ರಕರಣವೆಂದು ಗೊತ್ತಾಗಿದೆ. ಆ ಮಹಿಳೆಯರಿಗೆ ಅಕಸ್ಮಾತ್ತಾಗಿ ಪರಿಚಯವಾದ್ದರಿಂದ ನೆರವು ನೀಡಲು ಇಲ್ಲೇ ಉಳಿದುಕೊಂಡ ನಿಕೊಲಸ್ ಮುರ್ಮು ಎಂಬ ಸಂತಾಲಿ ಯುವಕ ಈಗ ತಾನೇ ನಮ್ಮ ಕಚೇರಿಗೆ ಬಂದು ಹೋದರು.

ಆ ನಿಕೊಲಸ್ ಮುರ್ಮುವನ್ನು ನಾನೊಂದು ಪ್ರಶ್ನೆ ಕೇಳಿದೆ, ‘ನಿಮಗೆ ಸಿದ್ದು ಮುರ್ಮು ಗೊತ್ತಾ?’. ಆತ ನೀಡಿದ ಉತ್ತರ ನನಗೆ ಅಚ್ಚರಿ ಮೂಡಿಸಿತು. ‘ಅಂಗ್ರೇಜಿಗಳ ವಿರುದ್ಧ ನಮ್ಮ ಸಂತಾಲರು ನಡೆಸಿದ ಸಂಗ್ರಾಮದ ನಾಯಕನಾತ. ನಮಗೆ ಸ್ವಾತಂತ್ರ್ಯ ಬಂದಿತೆಂದು ಹೇಳುತ್ತಾರೆ. ನಮಗಂತೂ ಬಂದಿಲ್ಲ. ಬಂದಿದ್ದರೆ ಹೀಗೇಕಾಗುತ್ತಿತ್ತು?’ ಪಕ್ಕದಲ್ಲೇ ಕೂತಿದ್ದ ಅತ್ಯಾಚಾರವನ್ನು ಎದುರಿಸಿ ಗಟ್ಟಿಯಾಗಿ ನಿಂತಿರುವ ಮಹಿಳೆಯನ್ನು ತೋರಿಸಿ ಹೇಳಿದರು. ಕಳೆದ ನಾಲ್ಕು ದಿನಗಳಿಂದ ಸತತವಾಗಿ ಪೊಲೀಸ್ ಸ್ಟೇಷನ್ನುಗಳನ್ನು ಸುತ್ತುತ್ತಾ ಇದ್ದ ಆಕೆ ತನ್ನನ್ನು ಬಾಧಿಸುತ್ತಿರುವ ಕಿವಿ ನೋವಿಗೆ ಪರಿಹಾರ ಕೇಳಲು ಬಂದಿದ್ದರು.

ಇಂತಹ ನೂರಲ್ಲ, ಸಾವಿರವಲ್ಲ, ಕೋಟಿ ಕಥೆಗಳು ಈ ದೇಶದ ವಲಸೆ ಕಾರ್ಮಿಕರದ್ದಿದೆ ಎಂದು ಕಳೆದ ಒಂದು ತಿಂಗಳಿಂದ ಗೊತ್ತಾಗುತ್ತಿದೆ. ಹಸಿವಿನಿಂದ ರೈಲಿನಲ್ಲೇ ಸತ್ತ ಮಗು, ನಡೆದೂ ನಡೆದೂ ಸತ್ತ ವಯಸ್ಕರು, ಬಹುಶಃ ದಿಕ್ಕೇಡಿಗಳಾಗಿರುವ ವೃದ್ಧರು ಇಂತಹ ಎಷ್ಟೋ ಎಷ್ಟೋ ಕಥೆಗಳು. ಕನಿಷ್ಠ ಸಂವೇದನೆಯಿರುವವರು ಯಾರಾಗಿದ್ದರೂ ಅವರಿಗೆ ನಾವು ಗಾಢ ಸೂತಕದ ಮಧ್ಯೆ ಇದ್ದೇವೆ ಎನಿಸಬೇಕು. ಆದರೆ ಹ್ಯಾಷ್‍ಟ್ಯಾಗ್‍ಗಳನ್ನು ಅಂತಿಮಗೊಳಿಸಿಕೊಂಡು ಸಂಭ್ರಮಿಸಲು ಯತ್ನಿಸುತ್ತಿರುವವರಿಗೆ ಅದು ತಟ್ಟಿದಂತೆ ಕಾಣುತ್ತಿಲ್ಲ.

ಅಂತಹುದೇ ಮನಸ್ಥಿತಿಯ ಭಾಗವಾಗಿ ಕರ್ನಾಟಕದ ಮುಖ್ಯಮಂತ್ರಿಯೂ ಫ್ಲೈಓವರ್ ಮರುನಾಮಕರಣಕ್ಕೆ ಮುಂದಾಗಿದ್ದಾರೆಯೇ? ಅಷ್ಟೇ ಇದ್ದಂತೆ ಕಾಣುತ್ತಿಲ್ಲ. ಸಾವರ್ಕರ್ ಹೆಸರನ್ನು ಇಡುವ ಘೋಷಣೆ ಮಾಡಿದಾಕ್ಷಣ ಅದರ ಬಗ್ಗೆ ಚರ್ಚೆ ಶುರುವಾಗುತ್ತದೆ. ಅಲ್ಲಿಗೆ ಕರ್ನಾಟಕಕ್ಕೆ ಕೇಂದ್ರದಿಂದಾದ ಅನ್ಯಾಯ, ವಲಸೆ ಕಾರ್ಮಿಕರ ಬವಣೆ, ರಾಜ್ಯದ ಆರ್ಥಿಕ ಪರಿಸ್ಥಿತಿ ಚಿಂತಾಜನಕವಾಗಿರುವುದು ಎಲ್ಲವೂ ಪಕ್ಕಕ್ಕೆ ಸರಿಯುತ್ತದೆ. ಇನ್ನು ಮುಂದೆ ಶ್ರಮಿಕರು ಕೆಲಸವಿಲ್ಲದೇ ಮತ್ತಷ್ಟು ಅಗ್ಗವಾಗುವುದು, ವ್ಯಾಪಾರಸ್ಥರು ವ್ಯಾಪಾರ ಕಡಿಮೆಯಾಗಿ ಕಂಗೆಡುವುದು ಇವ್ಯಾವುವೂ ಚರ್ಚೆಯ ವಿಷಯಗಳಾಗದಿರಬೇಕೆಂದರೆ ಇಂತಹ ವಿವಾದಗಳು ಮೇಲಿಂದ ಮೇಲೆ ಏಳುತ್ತಿರಬೇಕು.

ಹೀಗಿರುವಾಗ ಮಾಧ್ಯಮಗಳು ಆಳುವವರನ್ನು ಪ್ರಶ್ನಿಸುವ ಬದಲು, ತುತ್ತೂರಿಗಳಾಗಲಿವೆ ಎಂಬುದರಲ್ಲಿ ಅನುಮಾನವೇ ಇಲ್ಲ. ಕೇಂದ್ರ ಸರ್ಕಾರ ಮಾಡಿದ ಸರಿಯನ್ನು, ಸರಿಯೆಂದೂ, ತಪ್ಪನ್ನು ತಪ್ಪೆಂದೂ ಹೇಳುವ ಧೈರ್ಯವಾಗಲೀ, ವೃತ್ತಿ ಬದ್ಧತೆಯಾಗಲೀ ಇಲ್ಲವೇ ಇಲ್ಲ. ಹೀಗಾಗಿ ಪತ್ರಿಕೆಯಲ್ಲಿ ಈ ಸಾರಿ ಒಂದು ವರ್ಷದ ಕೇಂದ್ರ ಸರ್ಕಾರದ ಸಾಧನೆಯನ್ನು ಒರೆಗೆ ಹಚ್ಚಲು ಪ್ರಯತ್ನಿಸಲಾಗಿದೆ.

ಹಲವಾರು ತಜ್ಞರನ್ನು ಈ ಕುರಿತ ಲೇಖನಗಳನ್ನು ಬರೆದುಕೊಡಲು ಕೇಳಿದೆವು. ಕೆಲವರಿಗೆ 5 ವರ್ಷಗಳಲ್ಲಿ ನಡೆದದ್ದಕ್ಕೂ ಈ ಒಂದು ವರ್ಷಕ್ಕೂ ವ್ಯತ್ಯಾಸವಿದೆಯೆನಿಸಿದರೆ, ಇನ್ನು ಕೆಲವರಿಗೆ 5 ವರ್ಷಗಳಲ್ಲಿ ಮಾಡಲು ಯತ್ನಿಸಿ ವಿಫಲವಾದದ್ದಕ್ಕೆಲ್ಲಾ ಈಗ ಒಂದು ರೂಪ ಕೊಡುತ್ತಿದ್ದಾರೆ ಎನಿಸಿದೆ. ಆದರೆ, ಕೊರೊನಾ ಬಿಕ್ಕಟ್ಟನ್ನು ಸರ್ಕಾರವು ಜನವಿರೋಧಿ ನೀತಿಗಳನ್ನು ತರಲು ಬಳಸುತ್ತಿದೆ ಎಂಬ ವಿಚಾರದಲ್ಲಿ ಯಾರಿಗೂ ಅನುಮಾನವಿಲ್ಲ. ಉಳಿದೆಲ್ಲಾ ದೇಶಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ತಮ್ಮ ಎಂದಿನ ನೀತಿಗಳನ್ನು ಮಾರ್ಪಡಿಸಿಕೊಂಡು ಜನಪರವಾದ ಕೆಲವು ನೀತಿಗಳನ್ನು ಜಾರಿಗೆ ತರಲು ಮುಂದಾಗಿದ್ದರೆ, ಭಾರತವು ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಸಾಗಿದೆ.

ರೈತರು-ಕೃಷಿ ಕ್ಷೇತ್ರ, ಕಾರ್ಮಿಕರು-ಉದ್ದಿಮೆಗಳ ಕ್ಷೇತ, ಪರಿಸರ-ಅರಣ್ಯ ಒಳಗೊಂಡಂತೆ ಎಲ್ಲಾ ಕಡೆ ಒಂದೇ ಹಾಡು. ದೇಶದ ಆಡಳಿತದ ಚುಕ್ಕಾಣಿ ಹಿಡಿದವರಿಗೆ ಇದೊಂದು ರೀತಿಯ ಸಂಭ್ರಮವಿದ್ದಂತೆ ಕಾಣುತ್ತಿದೆ. ಎಲ್ಲವೂ ಸೂತಕದ ಮನೆಯ ಸಂಭ್ರಮವಲ್ಲದೇ ಇನ್ನೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...