Homeಮುಖಪುಟಮೋದಿಯ ಕೊರೋನ "ಪ್ಯಾಕೇಜ್" : ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ - ಪಿ. ಸಾಯಿನಾಥ್

ಮೋದಿಯ ಕೊರೋನ “ಪ್ಯಾಕೇಜ್” : ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ – ಪಿ. ಸಾಯಿನಾಥ್

- Advertisement -
- Advertisement -

ಭಾಗ-1

…..
ಕೋವಿಡ್-19 ಉಂಟುಮಾಡಿರುವ ಮಹಾಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ನರೇಂದ್ರ ಮೋದಿ ಸರಕಾರ ಘೋಷಿಸಿರುವ “ಪ್ಯಾಕೇಜ್” ಎಂಬುದು ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ ಎನ್ನುತ್ತಾರೆ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, ಜಗತ್ಪ್ರಸಿದ್ಧ ಗ್ರಾಮೀಣ ಪತ್ರಕರ್ತ ಪಿ. ಸಾಯಿನಾಥ್. ಅವರು, ಈ ಪ್ಯಾಕೇಜ್ ಕಣ್ಕಟ್ಟನ್ನು ಉದಾಹರಣೆ ಸಹಿತ ಬಯಲಿಗೆಳೆದಿದ್ದಾರೆ.
…..

ಅನುವಾದ: ನಿಖಿಲ್ ಕೋಲ್ಪೆ

ಕೊರೋನ ವೈರಸ್ ಕುರಿತ ತನ್ನ ಮೊದಲ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜನರು ತಮ್ಮ ಬಟ್ಟಲು, ಜಾಗಟೆ ಬಾರಿಸಿ, ದುಷ್ಟ ಶಕ್ತಿಗಳನ್ನು ಬೆದರಿ ತತ್ತರಿಸುವಂತೆ ಮಾಡಿದರು. ತನ್ನ ಎರಡನೇ ಭಾಷಣದಲ್ಲಿ ನಾವೆಲ್ಲರೂ ಬೆದರಿ ತತ್ತರಿಸುವಂತೆ ಮಾಡಿದ್ದಾರೆ.

ಮುಂಬರುವ ವಾರಗಳಲ್ಲಿ ಜನರು, ಅದರಲ್ಲೂ ಮುಖ್ಯವಾಗಿ ಬಡವರು, ಆಹಾರ ಮತ್ತು ಇತರ ಅತ್ಯಗತ್ಯ ವಸ್ತುಗಳನ್ನು ಹೇಗೆ ಪಡೆಯಬೇಕು ಎಂಬ ಕುರಿತು ಒಂದೇ ಒಂದು ಶಬ್ದವನ್ನು ಆಡದೇ ಇರುವ ಮೂಲಕ, ಆಗಲೇ ಸ್ಫೋಟಿಸಲು ಕಾಯುತ್ತಿದ್ದ ದಿಗಿಲಿಗೆ ಕಿಡಿಹಚ್ಚಿದರು. ಮಧ್ಯಮ ವರ್ಗದವರು ಖರೀದಿಗಾಗಿ ಅಂಗಡಿಗಳು ಮತ್ತು ಮಾರುಕಟ್ಟೆಗಳಲ್ಲಿ ಗುಂಪುಗುಂಪಾಗಿ ನುಗ್ಗಿದರು- ಇದು ಬಡವರಿಗೆ ಸುಲಭವಲ್ಲ. ದೊಡ್ಡ ವ್ಯಾಪಾರಿಗಳಿಂದ ಖರೀದಿಸಿ ಮಾರುವ ಸಣ್ಣಪುಟ್ಟ ವ್ಯಾಪಾರಿಗಳು, ಮನೆಗೆಲಸದವರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರಿಗೆ ಇದು ಸುಲಭವಲ್ಲ. ರಾಬಿ ಫಸಲಿನ ಕೊಯ್ಲಿಗೆ ಕಾಯುತ್ತಿರುವ ಅಥವಾ ಕೊಯ್ಲು ಮುಗಿಸಿದರೂ ಫಸಲನ್ನು ಮಾರಲಾಗದ ರೈತರಿಗೂ ಇದು ಸುಲಭವಲ್ಲ. ಕಡೆಗಣಿಸಲ್ಪಟ್ಟ ಕೋಟ್ಯಂತರ ಭಾರತೀಯರಿಗಂತೂ ಇದು ಸಾಧ್ಯವೇ ಇಲ್ಲ.

ಹಣಕಾಸು ಮಂತ್ರಿ ಘೋಷಿಸಿದ ಪ್ಯಾಕೇಜ್‌ನಲ್ಲಿ ಒಂದೇ ಒಂದು ಒಳ್ಳೆಯ ಅಂಶವಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಕೊಡಲಾಗುತ್ತಿರುವ ಪ್ರತೀ ವ್ಯಕ್ತಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿಗೆ ಹೆಚ್ಚುವರಿಯಾಗಿ, ಮೂರು ತಿಂಗಳುಗಳ ಕಾಲ ಐದು ಕೆಜಿ ಉಚಿತ. ಅಲ್ಲಿಯೂ, ಹಿಂದೆ ಇದ್ದ ಐದು ಕೆಜಿ ಕೂಡಾ ಉಚಿತವೇ ಅಥವಾ ಅದಕ್ಕೆ ಪಾವತಿ ಮಾಡಬೇಕೇ ಎಂಬುದು ಸ್ಪಷ್ಟವೇ ಆಗಿಲ್ಲ. ಅದಕ್ಕೂ ಪಾವತಿ ಮಾಡಬೇಕೆಂದಾದರೆ, ಅದು ಪ್ರಯೋಜನವಿಲ್ಲ.

ಈ ಪ್ಯಾಕೇಜ್‌ನಲ್ಲಿರುವ ಅಂಶಗಳಿಗೆ ಒದಗಿಸಲಾಗಿರುವ ಮೊತ್ತವು ಈಗಾಗಲೇ ಅಸ್ತಿತ್ವದಲ್ಲಿರುವ ಯೋಜನೆಗಳಿಗೆ ನಿಗದಿಪಡಿಸಿದ್ದಾಗಿದೆ. ಉದ್ಯೋಗ ಖಾತರಿ ಯೋಜನೆ (ಮಹಾತ್ಮಾ ಗಾಂಧಿ ಎನ್‌ಆರ್‌ಇಜಿಎ)ಯ ಕೂಲಿಯನ್ನು 20 ರೂ. ಹೆಚ್ಚು ಮಾಡಲಾಗಿದ್ದು, ಅದು ಇಲ್ಲದಿದ್ದರೂ ವಾರ್ಷಿಕವಾಗಿ ಆಗಲೇಬೇಕಾದುದು. ಕೆಲಸಗಳ ದಿನಗಳನ್ನೇನಾದರೂ ಹೆಚ್ಚು ಮಾಡಲಾಗಿದೆಯೇ? (ಇಲ್ಲ!). ತಕ್ಷಣಕ್ಕೆ ಅವರು ಯಾವ ಕೆಲಸ ಮಾಡಿಸುತ್ತಾರೆ? ಯಾವ ರೀತಿಯ ಕೆಲಸ ಮಾಡಿಸುತ್ತಾರೆ? ಸಾಮಾಜಿಕ ಅಂತರ ಕಾಯ್ದುಕೊಳ್ಳುವ (social distancing) ನಿಯಮಗಳನ್ನು ಹೇಗೆ ಪಾಲಿಸುತ್ತಾರೆ? (ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ). ಇದಕ್ಕಾಗಿ ಬೇಕಾದ ಪ್ರಮಾಣದಲ್ಲಿ ಕೆಲಸಗಳನ್ನು ರೂಪಿಸಲು ಬೇಕಾಗಿರುವ ಹಲವಾರು ವಾರಗಳ ತನಕ ಜನರು ಏನು ಮಾಡಬೇಕು? ಹೇಗೆ ಬದುಕಬೇಕು? ಅವರ ಆರೋಗ್ಯ ಕೆಲಸಕ್ಕೆ ತಕ್ಕುದಾಗಿ ಇರುವುದೆ? ಕೆಲಸವಿರಲಿ, ಇಲ್ಲದೆಯೇ ಇರಲಿ, ನಾವು ಉದ್ಯೋಗ ಖಾತರಿ ಯೋಜನೆಯ ಕೂಲಿಯನ್ನು ಪ್ರತಿಯೊಬ್ಬ ಕಾರ್ಮಿಕ ಮತ್ತು ರೈತರಿಗೆ ಈ ಬಿಕ್ಕಟ್ಟು ಮುಂದುವರಿಯುವ ವರೆಗೆ ಕೊಡಬೇಕಾಗಿದೆ.

ಪ್ಯಾಕೇಜಿನಲ್ಲಿ ಪ್ರಸ್ತಾಪಿಸಲಾಗಿರುವ ಪ್ರಧಾನಮಂತ್ರಿ-ಕಿಸಾನ್ ಯೋಜನೆಯ ಅಡಿಯಲ್ಲಿ 2,000 ರೂ. ಈಗಾಗಲೇ ಇದ್ದು, ವಿತರಿಸುವ ಸಮಯ ಬಂದಿದೆ- ಹೀಗಿರುವಾಗ ಹೆಚ್ಚುವರಿಯಾಗಿರುವುದು ಏನು? ಪ್ರತೀ ನಾಲ್ಕನೇ ತಿಂಗಳಲ್ಲಿ ಕೊಡಬೇಕಾದನ್ನು ಸ್ವಲ್ಪ ಬೇಗ- ಮೊದಲ ತಿಂಗಳಿಗೆ ಹಿಂದೂಡಲಾಗಿದೆ ಅಷ್ಟೇ. ಹಣಕಾಸು ಸಚಿವರು ಎಲ್ಲಿಯೂ ಈ 1.7 ಲಕ್ಷ ಕೋಟಿ ರೂ. ಪ್ಯಾಕೇಜಿನ ವಿಷಯವಾರು ವಿವರಗಳನ್ನು ಈ ಪಿಡುಗು ಮತ್ತು ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ನೀಡಿಲ್ಲ. ಹೀಗಿರುವಾಗ ಇದರಲ್ಲಿರುವ ಹೊಸ ಅಂಶಗಳೇನು? ಪ್ಯಾಕೇಜ್ ಮೊತ್ತದ ಎಷ್ಟು ಮೊತ್ತವನ್ನು ಹಳೆಯ ಮತ್ತು ಈಗಿರುವ ಯೋಜನೆಗಳನ್ನು ಹೊಲಿಗೆ ಹಾಕುವ ಮೂಲಕ ಅಂಕಿಅಂಶಗಳ ಕಸರತ್ತು ಮಾಡಲಾಗಿದೆ? ಇವು ಖಂಡಿತವಾಗಿಯೂ ತುರ್ತು ಪರಿಹಾರ ಕ್ರಮಗಳೆಂದು ಕರೆಸಿಕೊಳ್ಳಲು ಅರ್ಹವಲ್ಲ!

ಅದಲ್ಲದೇ ಪಿಂಚಣಿದಾರರು, ವಿಧವೆಯರು, ಅಂಗವಿಕಲರು ಒಂದು ಸಲ ಮಾತ್ರ ನೀಡಲಾಗುವ 1,000 ರೂ.ಗಳನ್ನು ಮುಂದಿನ ಮೂರು ತಿಂಗಳುಗಳಲ್ಲಿ ಎರಡು ಕಂತುಗಳಲ್ಲಿ ಪಡೆಯಲಿದ್ದಾರೆ. ಜನ ಧನ ಯೋಜನೆಯಲ್ಲಿ ಖಾತೆ ಹೊಂದಿರುವ 20 ಕೋಟಿ ಮಹಿಳೆಯರಿಗೆ ಮೂರು ತಿಂಗಳುಗಳಲ್ಲಿ ತಲಾ ಕೇವಲ 500 ರೂ. ಸಿಗಲಿದೆ. ಇದು ನೌಟಂಕಿಗಿಂತಲೂ ಕೆಳಮಟ್ಟದ್ದು ಮತ್ತು ನಾಚಿಕೆಗೇಡಿನದ್ದು.

ಈಗ ನಿಗದಿಪಡಿಸಲಾಗಿರುವ ಸಾಲವನ್ನು ಪಡೆಯುವುದೇ ಒಂದು ದುಃಸ್ವಪ್ನವಾಗಿರುವಾಗ, ಸಾಲದ ಮಿತಿಯನ್ನು ಬರೇ ಏರಿಸುವುದರಿಂದ ಸ್ವಸಹಾಯ ಗುಂಪುಗಳಿಗೆ ಹೇಗೆ ನೆರವಾಗುತ್ತದೆ? ದೂರದೂರದ ಊರುಗಳಲ್ಲಿ ಸಿಕ್ಕಿಬಿದ್ದು, ತಮ್ಮ ಗ್ರಾಮಗಳಿಗೆ ಮರಳಲು ಯತ್ನಿಸುತ್ತಿರುವ ಲೆಕ್ಕವಿಲ್ಲದಷ್ಟು ವಲಸೆ ಕಾರ್ಮಿಕರಿಗೆ ಈ ಪ್ಯಾಕೇಜ್ ನಿರ್ದಿಷ್ಟವಾಗಿ ಹೇಗೆ ನೆರವಾಗಲಿದೆ? ಇದು ವಲಸೆ ಕಾರ್ಮಿಕರಿಗೆ ನೆರವಾಗಲಿದೆ ಎಂಬ ಬಾಯ್ಮಾತಿನ ದಾವೆಗೆ ಆಧಾರಗಳೇ ಇಲ್ಲ. ಒಂದು ಗಂಭೀರವಾದ ತುರ್ತು ಕ್ರಮಗಳ ಸರಣಿಯನ್ನು ನೀಡಲು ಈ ಪ್ಯಾಕೇಜಿನ ವೈಫಲ್ಯವು ದಿಗಿಲು ಹುಟ್ಟಿಸುವಂತಿದ್ದರೆ, ಈ ಪ್ಯಾಕೇಜನ್ನು ನೀಡಿದವರ ಮನೋಸ್ಥಿತಿ ಭಯಂಕರವಾಗಿದೆ. ನೆಲಮಟ್ಟದ ಪರಿಸ್ಥಿತಿಯ ಕುರಿತು ಅವರಿಗೆ ಯಾವುದೇ ತಿಳುವಳಿಕೆ ಇದ್ದಂತೆ ಕಾಣುವುದಿಲ್ಲ.

ಯಾವುದೇ ಗಂಭೀರವಾದ ಸಾಮಾಜಿಕ ಬೆಂಬಲ ಅಥವಾ ಯೋಜನೆ ಇಲ್ಲದಿರುವಾಗ- ನಾವು ಅನುಭವಿಸುತ್ತಿರುವ ಲಾಕ್‌ಡೌನ್‌ಗಳು ಹಿಮ್ಮುಖ ವಲಸೆ (reverse migrations, ಅಂದರೆ, ನಗರದಿಂದ ಹಳ್ಳಿಗೆ)ಗಳಿಗೆ ಕಾರಣವಾಗಬಹುದು ಅಥವಾ ಈಗಾಗಲೇ ಕಾರಣವಾಗಿದೆ. ನಿರ್ದಿಷ್ಟವಾಗಿ ಈ ವಲಸೆಗಳ ಪ್ರಮಾಣ ಮತ್ತು ತೀವ್ರತೆಗಳ ಸ್ಪಷ್ಟ ಚಿತ್ರಣವನ್ನು ಪಡೆಯುವುದು ಅಸಾಧ್ಯ. ತಾವು ಕೆಲಸಮಾಡುವ ನಗರ ಪಟ್ಟಣಗಳು ಸಂಪೂರ್ಣ ಲಾಕ್‌ಡೌನ್‌ಗೆ ಒಳಗಾಗುತ್ತಿರುವಂತೆ, ದೊಡ್ಡ ಸಂಖ್ಯೆಯ ಜನರು ತಮ್ಮತಮ್ಮ ಹಳ್ಳಿಗಳಿಗೆ ಮರಳುತ್ತಿದ್ದಾರೆ ಎಂದು ಹಲವಾರು ರಾಜ್ಯಗಳಿಂದ ಬರುತ್ತಿರುವ ವರದಿಗಳು ಸೂಚಿಸುತ್ತಿವೆ.

ಸಾವಿರಾರು ಜನರು ಈಗ ತಮಗೆ ಲಭ್ಯವಿರುವ ಏಕೈಕ ಸಾರಿಗೆಯನ್ನು ಬಳಸುತ್ತಿದ್ದಾರೆ- ಅದೆಂದರೆ, ತಮ್ಮ ಸ್ವಂತ ಕಾಲುಗಳು. ಕೆಲವರು ಸೈಕಲ್‌ಗಳಲ್ಲಿ ಮನೆಗೆ ಹೊರಟಿದ್ದಾರೆ. ರೈಲು, ಬಸ್ಸು, ವ್ಯಾನ್‌ಗಳು ಏಕಾಏಕಿ ನಿಂತುದರಿಂದ ಸಾವಿರಾರು ಜನರು ಅರ್ಧ ದಾರಿಯಲ್ಲಿಯೇ ಸಿಕ್ಕಿಬಿದ್ದಿದ್ದಾರೆ. ಇದು ಭಯ ಹುಟ್ಟಿಸುವಂತದ್ದು. ಈ ಬಿಕ್ಕಟ್ಟು ತೀವ್ರಗೊಂಡರೆ, ನರಕವೇ ತಲೆಯ ಮೇಲೆ ಕಳಚಿ ಬೀಳಬಹುದು.

ಗುಜರಾತಿನ ನಗರಗಳಿಂದ ರಾಜಸ್ತಾನದ ಗ್ರಾಮಗಳಿಗೆ; ಹೈದರಾಬಾದಿನಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶಗಳ ದೂರದೂರದ ಹಳ್ಳಿಗಳಿಗೆ; ದಿಲ್ಲಿಯಿಂದ ಉತ್ತರ ಪ್ರದೇಶ ಮಾತ್ರವಲ್ಲ, ಬಿಹಾರಕ್ಕೂ; ಮುಂಬಯಿಯಿಂದ… ಯಾರಿಗೂ ಗೊತ್ತಿಲ್ಲ ಎಲ್ಲೆಲ್ಲಿಗೆಂದು- ದೊಡ್ಡದೊಡ್ಡ ಗುಂಪುಗಳು ನಡೆದು ಹೋಗುತ್ತಿರುವುದನ್ನು ಊಹಿಸಿ ನೋಡಿ. ಅವರಿಗೆ ನೆರವು, ಆಹಾರ, ನೀರು ಸಿಗದೇ ಹೋದಲ್ಲಿ ಮಹಾದುರಂತವೇ ಸಂಭವಿಸಬಹುದು. ಅವರ ಶೌಚದ ಮಹಾಸಮಸ್ಯೆಯನ್ನೂ ಊಹಿಸಿನೋಡಿ. ಅವರು ಅತಿಸಾರ (diarrhoea), ಕಾಲರಾ (cholera) ಮುಂತಾದ ಹಳೆಕಾಲದ ರೋಗಗಳಿಗೇ ಬಲಿಯಾಗಬಹುದು; ಕೊರೋನವೇ ಆಗಬೇಕೆಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...