Homeಮುಖಪುಟಮೋದಿಯ ಕೊರೋನ "ಪ್ಯಾಕೇಜ್" : ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ - ಪಿ. ಸಾಯಿನಾಥ್

ಮೋದಿಯ ಕೊರೋನ “ಪ್ಯಾಕೇಜ್” : ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ – ಪಿ. ಸಾಯಿನಾಥ್

- Advertisement -
- Advertisement -

ಭಾಗ-1

…..
ಕೋವಿಡ್-19 ಉಂಟುಮಾಡಿರುವ ಮಹಾಬಿಕ್ಕಟ್ಟಿಗೆ ಪ್ರತಿಕ್ರಿಯೆಯಾಗಿ ನರೇಂದ್ರ ಮೋದಿ ಸರಕಾರ ಘೋಷಿಸಿರುವ “ಪ್ಯಾಕೇಜ್” ಎಂಬುದು ಕಲ್ಲೆದೆ ಮತ್ತು ಅಜ್ಞಾನಗಳ ಮಿಶ್ರಣ ಎನ್ನುತ್ತಾರೆ ಮ್ಯಾಗ್ಸೇಸೆ ಪ್ರಶಸ್ತಿ ವಿಜೇತ, ಜಗತ್ಪ್ರಸಿದ್ಧ ಗ್ರಾಮೀಣ ಪತ್ರಕರ್ತ ಪಿ. ಸಾಯಿನಾಥ್. ಅವರು, ಈ ಪ್ಯಾಕೇಜ್ ಕಣ್ಕಟ್ಟನ್ನು ಉದಾಹರಣೆ ಸಹಿತ ಬಯಲಿಗೆಳೆದಿದ್ದಾರೆ.
…..

ಅನುವಾದ: ನಿಖಿಲ್ ಕೋಲ್ಪೆ

ಕೊರೋನ ವೈರಸ್ ಕುರಿತ ತನ್ನ ಮೊದಲ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ, ಜನರು ತಮ್ಮ ಬಟ್ಟಲು, ಜಾಗಟೆ ಬಾರಿಸಿ, ದುಷ್ಟ ಶಕ್ತಿಗಳನ್ನು ಬೆದರಿ ತತ್ತರಿಸುವಂತೆ ಮಾಡಿದರು. ತನ್ನ ಎರಡನೇ ಭಾಷಣದಲ್ಲಿ ನಾವೆಲ್ಲರೂ ಬೆದರಿ ತತ್ತರಿಸುವಂತೆ ಮಾಡಿದ್ದಾರೆ.

ಮುಂಬರುವ ವಾರಗಳಲ್ಲಿ ಜನರು, ಅದರಲ್ಲೂ ಮುಖ್ಯವಾಗಿ ಬಡವರು, ಆಹಾರ ಮತ್ತು ಇತರ ಅತ್ಯಗತ್ಯ ವಸ್ತುಗಳನ್ನು ಹೇಗೆ ಪಡೆಯಬೇಕು ಎಂಬ ಕುರಿತು ಒಂದೇ ಒಂದು ಶಬ್ದವನ್ನು ಆಡದೇ ಇರುವ ಮೂಲಕ, ಆಗಲೇ ಸ್ಫೋಟಿಸಲು ಕಾಯುತ್ತಿದ್ದ ದಿಗಿಲಿಗೆ ಕಿಡಿಹಚ್ಚಿದರು. ಮಧ್ಯಮ ವರ್ಗದವರು ಖರೀದಿಗಾಗಿ ಅಂಗಡಿಗಳು ಮತ್ತು ಮಾರುಕಟ್ಟೆಗಳಲ್ಲಿ ಗುಂಪುಗುಂಪಾಗಿ ನುಗ್ಗಿದರು- ಇದು ಬಡವರಿಗೆ ಸುಲಭವಲ್ಲ. ದೊಡ್ಡ ವ್ಯಾಪಾರಿಗಳಿಂದ ಖರೀದಿಸಿ ಮಾರುವ ಸಣ್ಣಪುಟ್ಟ ವ್ಯಾಪಾರಿಗಳು, ಮನೆಗೆಲಸದವರು, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರಿಗೆ ಇದು ಸುಲಭವಲ್ಲ. ರಾಬಿ ಫಸಲಿನ ಕೊಯ್ಲಿಗೆ ಕಾಯುತ್ತಿರುವ ಅಥವಾ ಕೊಯ್ಲು ಮುಗಿಸಿದರೂ ಫಸಲನ್ನು ಮಾರಲಾಗದ ರೈತರಿಗೂ ಇದು ಸುಲಭವಲ್ಲ. ಕಡೆಗಣಿಸಲ್ಪಟ್ಟ ಕೋಟ್ಯಂತರ ಭಾರತೀಯರಿಗಂತೂ ಇದು ಸಾಧ್ಯವೇ ಇಲ್ಲ.

ಹಣಕಾಸು ಮಂತ್ರಿ ಘೋಷಿಸಿದ ಪ್ಯಾಕೇಜ್‌ನಲ್ಲಿ ಒಂದೇ ಒಂದು ಒಳ್ಳೆಯ ಅಂಶವಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಕೊಡಲಾಗುತ್ತಿರುವ ಪ್ರತೀ ವ್ಯಕ್ತಿಗೆ ಐದು ಕೆಜಿ ಅಕ್ಕಿ ಅಥವಾ ಗೋಧಿಗೆ ಹೆಚ್ಚುವರಿಯಾಗಿ, ಮೂರು ತಿಂಗಳುಗಳ ಕಾಲ ಐದು ಕೆಜಿ ಉಚಿತ. ಅಲ್ಲಿಯೂ, ಹಿಂದೆ ಇದ್ದ ಐದು ಕೆಜಿ ಕೂಡಾ ಉಚಿತವೇ ಅಥವಾ ಅದಕ್ಕೆ ಪಾವತಿ ಮಾಡಬೇಕೇ ಎಂಬುದು ಸ್ಪಷ್ಟವೇ ಆಗಿಲ್ಲ. ಅದಕ್ಕೂ ಪಾವತಿ ಮಾಡಬೇಕೆಂದಾದರೆ, ಅದು ಪ್ರಯೋಜನವಿಲ್ಲ.

ಈ ಪ್ಯಾಕೇಜ್‌ನಲ್ಲಿರುವ ಅಂಶಗಳಿಗೆ ಒದಗಿಸಲಾಗಿರುವ ಮೊತ್ತವು ಈಗಾಗಲೇ ಅಸ್ತಿತ್ವದಲ್ಲಿರುವ ಯೋಜನೆಗಳಿಗೆ ನಿಗದಿಪಡಿಸಿದ್ದಾಗಿದೆ. ಉದ್ಯೋಗ ಖಾತರಿ ಯೋಜನೆ (ಮಹಾತ್ಮಾ ಗಾಂಧಿ ಎನ್‌ಆರ್‌ಇಜಿಎ)ಯ ಕೂಲಿಯನ್ನು 20 ರೂ. ಹೆಚ್ಚು ಮಾಡಲಾಗಿದ್ದು, ಅದು ಇಲ್ಲದಿದ್ದರೂ ವಾರ್ಷಿಕವಾಗಿ ಆಗಲೇಬೇಕಾದುದು. ಕೆಲಸಗಳ ದಿನಗಳನ್ನೇನಾದರೂ ಹೆಚ್ಚು ಮಾಡಲಾಗಿದೆಯೇ? (ಇಲ್ಲ!). ತಕ್ಷಣಕ್ಕೆ ಅವರು ಯಾವ ಕೆಲಸ ಮಾಡಿಸುತ್ತಾರೆ? ಯಾವ ರೀತಿಯ ಕೆಲಸ ಮಾಡಿಸುತ್ತಾರೆ? ಸಾಮಾಜಿಕ ಅಂತರ ಕಾಯ್ದುಕೊಳ್ಳುವ (social distancing) ನಿಯಮಗಳನ್ನು ಹೇಗೆ ಪಾಲಿಸುತ್ತಾರೆ? (ಸಂಪೂರ್ಣ ಲಾಕ್‌ಡೌನ್ ಸಂದರ್ಭದಲ್ಲಿ). ಇದಕ್ಕಾಗಿ ಬೇಕಾದ ಪ್ರಮಾಣದಲ್ಲಿ ಕೆಲಸಗಳನ್ನು ರೂಪಿಸಲು ಬೇಕಾಗಿರುವ ಹಲವಾರು ವಾರಗಳ ತನಕ ಜನರು ಏನು ಮಾಡಬೇಕು? ಹೇಗೆ ಬದುಕಬೇಕು? ಅವರ ಆರೋಗ್ಯ ಕೆಲಸಕ್ಕೆ ತಕ್ಕುದಾಗಿ ಇರುವುದೆ? ಕೆಲಸವಿರಲಿ, ಇಲ್ಲದೆಯೇ ಇರಲಿ, ನಾವು ಉದ್ಯೋಗ ಖಾತರಿ ಯೋಜನೆಯ ಕೂಲಿಯನ್ನು ಪ್ರತಿಯೊಬ್ಬ ಕಾರ್ಮಿಕ ಮತ್ತು ರೈತರಿಗೆ ಈ ಬಿಕ್ಕಟ್ಟು ಮುಂದುವರಿಯುವ ವರೆಗೆ ಕೊಡಬೇಕಾಗಿದೆ.

ಪ್ಯಾಕೇಜಿನಲ್ಲಿ ಪ್ರಸ್ತಾಪಿಸಲಾಗಿರುವ ಪ್ರಧಾನಮಂತ್ರಿ-ಕಿಸಾನ್ ಯೋಜನೆಯ ಅಡಿಯಲ್ಲಿ 2,000 ರೂ. ಈಗಾಗಲೇ ಇದ್ದು, ವಿತರಿಸುವ ಸಮಯ ಬಂದಿದೆ- ಹೀಗಿರುವಾಗ ಹೆಚ್ಚುವರಿಯಾಗಿರುವುದು ಏನು? ಪ್ರತೀ ನಾಲ್ಕನೇ ತಿಂಗಳಲ್ಲಿ ಕೊಡಬೇಕಾದನ್ನು ಸ್ವಲ್ಪ ಬೇಗ- ಮೊದಲ ತಿಂಗಳಿಗೆ ಹಿಂದೂಡಲಾಗಿದೆ ಅಷ್ಟೇ. ಹಣಕಾಸು ಸಚಿವರು ಎಲ್ಲಿಯೂ ಈ 1.7 ಲಕ್ಷ ಕೋಟಿ ರೂ. ಪ್ಯಾಕೇಜಿನ ವಿಷಯವಾರು ವಿವರಗಳನ್ನು ಈ ಪಿಡುಗು ಮತ್ತು ಲಾಕ್‌ಡೌನ್‌ಗೆ ಸಂಬಂಧಿಸಿದಂತೆ ನೀಡಿಲ್ಲ. ಹೀಗಿರುವಾಗ ಇದರಲ್ಲಿರುವ ಹೊಸ ಅಂಶಗಳೇನು? ಪ್ಯಾಕೇಜ್ ಮೊತ್ತದ ಎಷ್ಟು ಮೊತ್ತವನ್ನು ಹಳೆಯ ಮತ್ತು ಈಗಿರುವ ಯೋಜನೆಗಳನ್ನು ಹೊಲಿಗೆ ಹಾಕುವ ಮೂಲಕ ಅಂಕಿಅಂಶಗಳ ಕಸರತ್ತು ಮಾಡಲಾಗಿದೆ? ಇವು ಖಂಡಿತವಾಗಿಯೂ ತುರ್ತು ಪರಿಹಾರ ಕ್ರಮಗಳೆಂದು ಕರೆಸಿಕೊಳ್ಳಲು ಅರ್ಹವಲ್ಲ!

ಅದಲ್ಲದೇ ಪಿಂಚಣಿದಾರರು, ವಿಧವೆಯರು, ಅಂಗವಿಕಲರು ಒಂದು ಸಲ ಮಾತ್ರ ನೀಡಲಾಗುವ 1,000 ರೂ.ಗಳನ್ನು ಮುಂದಿನ ಮೂರು ತಿಂಗಳುಗಳಲ್ಲಿ ಎರಡು ಕಂತುಗಳಲ್ಲಿ ಪಡೆಯಲಿದ್ದಾರೆ. ಜನ ಧನ ಯೋಜನೆಯಲ್ಲಿ ಖಾತೆ ಹೊಂದಿರುವ 20 ಕೋಟಿ ಮಹಿಳೆಯರಿಗೆ ಮೂರು ತಿಂಗಳುಗಳಲ್ಲಿ ತಲಾ ಕೇವಲ 500 ರೂ. ಸಿಗಲಿದೆ. ಇದು ನೌಟಂಕಿಗಿಂತಲೂ ಕೆಳಮಟ್ಟದ್ದು ಮತ್ತು ನಾಚಿಕೆಗೇಡಿನದ್ದು.

ಈಗ ನಿಗದಿಪಡಿಸಲಾಗಿರುವ ಸಾಲವನ್ನು ಪಡೆಯುವುದೇ ಒಂದು ದುಃಸ್ವಪ್ನವಾಗಿರುವಾಗ, ಸಾಲದ ಮಿತಿಯನ್ನು ಬರೇ ಏರಿಸುವುದರಿಂದ ಸ್ವಸಹಾಯ ಗುಂಪುಗಳಿಗೆ ಹೇಗೆ ನೆರವಾಗುತ್ತದೆ? ದೂರದೂರದ ಊರುಗಳಲ್ಲಿ ಸಿಕ್ಕಿಬಿದ್ದು, ತಮ್ಮ ಗ್ರಾಮಗಳಿಗೆ ಮರಳಲು ಯತ್ನಿಸುತ್ತಿರುವ ಲೆಕ್ಕವಿಲ್ಲದಷ್ಟು ವಲಸೆ ಕಾರ್ಮಿಕರಿಗೆ ಈ ಪ್ಯಾಕೇಜ್ ನಿರ್ದಿಷ್ಟವಾಗಿ ಹೇಗೆ ನೆರವಾಗಲಿದೆ? ಇದು ವಲಸೆ ಕಾರ್ಮಿಕರಿಗೆ ನೆರವಾಗಲಿದೆ ಎಂಬ ಬಾಯ್ಮಾತಿನ ದಾವೆಗೆ ಆಧಾರಗಳೇ ಇಲ್ಲ. ಒಂದು ಗಂಭೀರವಾದ ತುರ್ತು ಕ್ರಮಗಳ ಸರಣಿಯನ್ನು ನೀಡಲು ಈ ಪ್ಯಾಕೇಜಿನ ವೈಫಲ್ಯವು ದಿಗಿಲು ಹುಟ್ಟಿಸುವಂತಿದ್ದರೆ, ಈ ಪ್ಯಾಕೇಜನ್ನು ನೀಡಿದವರ ಮನೋಸ್ಥಿತಿ ಭಯಂಕರವಾಗಿದೆ. ನೆಲಮಟ್ಟದ ಪರಿಸ್ಥಿತಿಯ ಕುರಿತು ಅವರಿಗೆ ಯಾವುದೇ ತಿಳುವಳಿಕೆ ಇದ್ದಂತೆ ಕಾಣುವುದಿಲ್ಲ.

ಯಾವುದೇ ಗಂಭೀರವಾದ ಸಾಮಾಜಿಕ ಬೆಂಬಲ ಅಥವಾ ಯೋಜನೆ ಇಲ್ಲದಿರುವಾಗ- ನಾವು ಅನುಭವಿಸುತ್ತಿರುವ ಲಾಕ್‌ಡೌನ್‌ಗಳು ಹಿಮ್ಮುಖ ವಲಸೆ (reverse migrations, ಅಂದರೆ, ನಗರದಿಂದ ಹಳ್ಳಿಗೆ)ಗಳಿಗೆ ಕಾರಣವಾಗಬಹುದು ಅಥವಾ ಈಗಾಗಲೇ ಕಾರಣವಾಗಿದೆ. ನಿರ್ದಿಷ್ಟವಾಗಿ ಈ ವಲಸೆಗಳ ಪ್ರಮಾಣ ಮತ್ತು ತೀವ್ರತೆಗಳ ಸ್ಪಷ್ಟ ಚಿತ್ರಣವನ್ನು ಪಡೆಯುವುದು ಅಸಾಧ್ಯ. ತಾವು ಕೆಲಸಮಾಡುವ ನಗರ ಪಟ್ಟಣಗಳು ಸಂಪೂರ್ಣ ಲಾಕ್‌ಡೌನ್‌ಗೆ ಒಳಗಾಗುತ್ತಿರುವಂತೆ, ದೊಡ್ಡ ಸಂಖ್ಯೆಯ ಜನರು ತಮ್ಮತಮ್ಮ ಹಳ್ಳಿಗಳಿಗೆ ಮರಳುತ್ತಿದ್ದಾರೆ ಎಂದು ಹಲವಾರು ರಾಜ್ಯಗಳಿಂದ ಬರುತ್ತಿರುವ ವರದಿಗಳು ಸೂಚಿಸುತ್ತಿವೆ.

ಸಾವಿರಾರು ಜನರು ಈಗ ತಮಗೆ ಲಭ್ಯವಿರುವ ಏಕೈಕ ಸಾರಿಗೆಯನ್ನು ಬಳಸುತ್ತಿದ್ದಾರೆ- ಅದೆಂದರೆ, ತಮ್ಮ ಸ್ವಂತ ಕಾಲುಗಳು. ಕೆಲವರು ಸೈಕಲ್‌ಗಳಲ್ಲಿ ಮನೆಗೆ ಹೊರಟಿದ್ದಾರೆ. ರೈಲು, ಬಸ್ಸು, ವ್ಯಾನ್‌ಗಳು ಏಕಾಏಕಿ ನಿಂತುದರಿಂದ ಸಾವಿರಾರು ಜನರು ಅರ್ಧ ದಾರಿಯಲ್ಲಿಯೇ ಸಿಕ್ಕಿಬಿದ್ದಿದ್ದಾರೆ. ಇದು ಭಯ ಹುಟ್ಟಿಸುವಂತದ್ದು. ಈ ಬಿಕ್ಕಟ್ಟು ತೀವ್ರಗೊಂಡರೆ, ನರಕವೇ ತಲೆಯ ಮೇಲೆ ಕಳಚಿ ಬೀಳಬಹುದು.

ಗುಜರಾತಿನ ನಗರಗಳಿಂದ ರಾಜಸ್ತಾನದ ಗ್ರಾಮಗಳಿಗೆ; ಹೈದರಾಬಾದಿನಿಂದ ತೆಲಂಗಾಣ ಮತ್ತು ಆಂಧ್ರಪ್ರದೇಶಗಳ ದೂರದೂರದ ಹಳ್ಳಿಗಳಿಗೆ; ದಿಲ್ಲಿಯಿಂದ ಉತ್ತರ ಪ್ರದೇಶ ಮಾತ್ರವಲ್ಲ, ಬಿಹಾರಕ್ಕೂ; ಮುಂಬಯಿಯಿಂದ… ಯಾರಿಗೂ ಗೊತ್ತಿಲ್ಲ ಎಲ್ಲೆಲ್ಲಿಗೆಂದು- ದೊಡ್ಡದೊಡ್ಡ ಗುಂಪುಗಳು ನಡೆದು ಹೋಗುತ್ತಿರುವುದನ್ನು ಊಹಿಸಿ ನೋಡಿ. ಅವರಿಗೆ ನೆರವು, ಆಹಾರ, ನೀರು ಸಿಗದೇ ಹೋದಲ್ಲಿ ಮಹಾದುರಂತವೇ ಸಂಭವಿಸಬಹುದು. ಅವರ ಶೌಚದ ಮಹಾಸಮಸ್ಯೆಯನ್ನೂ ಊಹಿಸಿನೋಡಿ. ಅವರು ಅತಿಸಾರ (diarrhoea), ಕಾಲರಾ (cholera) ಮುಂತಾದ ಹಳೆಕಾಲದ ರೋಗಗಳಿಗೇ ಬಲಿಯಾಗಬಹುದು; ಕೊರೋನವೇ ಆಗಬೇಕೆಂದಿಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...