Homeಮುಖಪುಟಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

ಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

- Advertisement -
- Advertisement -

-ಸಂಜಯ್ ಬಸು ಮತ್ತು ಉಜ್ವಲ್ ಚೌಧರಿ

ಕನ್ನಡಕ್ಕೆ: ಮಲ್ಲನಗೌಡರ್ ಪಿ.ಕೆ

ಒಂದು ಕಡೆ ಸಾರ್ವಜನಿಕ ತನಿಖಾ ಸಂಸ್ಥೆಗಳನ್ನು ಬಿಜೆಪಿಯ ಏಜೆಂಟರನ್ನಾಗಿ ಪರಿವರ್ತಿಸಿದ ಮೋದಿ ಸರ್ಕಾರ, ಇನ್ನೊಂದು ಕಡೆ ಸಾರ್ವಜನಿಕ ಸೇವೆ ನೀಡುವ ಸರ್ಕಾರಿ ಇಲಾಖೆ, ಸಂಸ್ಥೆಗಳನ್ನು ಹಳ್ಳ ಹಿಡಿಸುತ್ತ ಬಂದಿತು. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಅನ್ನು, ಮುಖೇಶ್ ಅಂಬಾನಿಗಾಗಿ ಬಿಎಸ್‍ಎನ್‍ಎಲ್‍ನ್ನು ವಂಚಿಸಿದ ಮೋದಿ ಸರ್ಕಾರ ರೈಲ್ವೇ ಇಲಾಖೆಗೂ ಒಂದು ದುರ್ಗತಿ ಕಾಣಿಸಿಯೇ ಬಿಟ್ಟಿದೆ…..

ಭಾರತದ ಜೀವನಾಡಿ ಎಂದೇ ಹೆಸರು ಪಡೆದ ರೈಲ್ವೇ ವ್ಯವಸ್ಥೆಯನ್ನು ಈ ಐದು ವರ್ಷಗಳಲ್ಲಿ ಹಳಿ ತಪ್ಪಿಸಿದ ‘ಕೀರ್ತಿ’ಯನ್ನು ಮೋದಿ ಸರ್ಕಾರ ಹೊತ್ತುಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಲ್ಲಿ ದೊರೆತ ಮತ್ತು ಲೋಕಸಭೆಗೆ ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಗಳೆರಡೂ ಇದನ್ನು ಪುಷ್ಟಿಕರಿಸುತ್ತಿವೆ.

ವರ್ಷದಲ್ಲಿ 8 ಬಿಲಿಯನ್ (8 ಶತಕೋಟಿ) ಪ್ರಯಾಣಿಕರನ್ನು ಸಾಗಿಸುವ ವಿಶ್ವದ ನಾಲ್ಕನೇ ದೊಡ್ಡ ನೆಟ್‍ವರ್ಕ್, ಚೀನಾದ ನಂತರ ಸಾಮರ್ಥಯದಲ್ಲಿ ಎರಡನೇ ಸ್ಥಾನ ಹೊಂದಿರುವ ಭಾರತೀಯ ರೈಲ್ವೇ ಇವತ್ತು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಈ ಸರ್ಕಾರ ಬಂದ ಮೊದಲ ವರ್ಷ 2014-15ರಲ್ಲೇ 135 ರೈಲು ಅಪಘಾತ ಸಂಭವಿಸಿದವು, ಅದು ಕ್ರಮೇಣ ಇಳಿಯುತ್ತ ಬಂದು 2017-18ರಲ್ಲಿ 78ಕ್ಕೆ ಇಳಿದಿತು. 2018ರ ನವೆಂಬರರನಲ್ಲಿ ಆರ್‍ಟಿಐ ಅಡಿ ಸಿಕ್ಕ ಮಾಹಿತಿಯಿದು. ಆದರೆ ಅಪಘತಗಳ ಸಂಖ್ಯೆ ಇಳಿಮುಖಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಸುರಕ್ಷತಾ ಕ್ರಮಗಳು ಕಾರಣವಲ್ಲ, ಅದಕ್ಕೆ ಇತರ ಹಲವು ಕಾರಣಗಳಿವೆ.

ಡಿಸೆಂಬರ್ 2018ರಲ್ಲಿ ಇಲಾಖೆ ನೀಡಿದ ಇನ್ನೊಂದು ಉತ್ತರದ ಪ್ರಕಾರ, 2014-15ರಲ್ಲಿ 3,591 ಟ್ರೇನುಗಳು ರದ್ದಾಗಿದ್ದರೆ, 2017-18ರಲ್ಲಿ 21,053 ಟ್ರೇನುಗಳು (ಏಳು ಪಟ್ಟು!) ರದ್ದಾಗಿದ್ದವು! ಟ್ರೇನುಗಳ ಓಡಾಟವೇ ಕುಸಿದ ಮೇಲೆ ಅಪಘಾತ ಸಂಖ್ಯೆ ಸಹಜವಾಗಿ ಕಡಿಮೆ ತಾನೇ? ರೈಲ್ವೇ ¸ಹಾಯಕ ಸಚಿವ ರಾಜೇನ ಗೋಹೆನ್ ಸಂಸತ್ತಿಗೆ ಕೊಟ್ಟ ವಿವರಗಳೂ ಇದನ್ನು ಪುಷ್ಟಿಕರಿಸಿವೆ. 2014-15ರಲ್ಲಿ 8.317 ಬಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದರೆ, 2016-17ರಲ್ಲಿ ಈ ಸಂಖ್ಯೆ 8.116 ಬಿಲಿಯನ್. 2017-18ರಲ್ಲಿ ಶೇ. 30ರಷ್ಟು ಟ್ರೇನುಗಳು ತಡಾವಾಗಿ ಚಲಿಸಿವೆ. ನಇದು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಬಂದಿದೆ.

ಮಾರ್ಗ ನವೀಕರಣ ಮತ್ತು ವಿದ್ಯುದೀಕರಣ
ಮಾರ್ಗ ನವೀಕರಣ ಮತ್ತು ವಿದ್ಯುದೀಕರಣದಲ್ಲೂ ಈ ಸರ್ಕಾರದ ಸಾಧನೆ ತೀರಾ ಕಳಪೆಯಾಗಿದೆ. ರೈಲ್ವೇ ಸುರಕ್ಷತೆಗೆ ಮಾರ್ಗ ನವೀಕರಣ ಅತ್ಯಂತ ಮುಖ್ಯವಾದ ಕ್ರಮ. ಫೆಬ್ರುವರಿ 2019ರಲ್ಲಿ ಆರ್‍ಟಿಐನಲ್ಲಿ ನೀಡಿದ ಮಾಹಿತಿ ಪ್ರಕಾರ, ಯುಪಿಎ ಸರ್ಕಾರ 2009-10ರಲ್ಲಿ ಮಾಡಿದ್ದ ಮಾರ್ಗ ನವೀಕರಣಗಳ ಸಂಖ್ಯೆಯನ್ನು 2017-18ರಲ್ಲಿ ಈ ಸರ್ಕಾರ ತಲುಪಿದೆ.

1 ಲಕ್ಷ 17 ಸಾವಿರ ಮಾರ್ಗ (ಟ್ರ್ಯಾಕ್)ವನ್ನು ರೈಲ್ವೆ ಹೊಂದಿದ್ದು, ಇದರಲ್ಲಿ ಬಹುಪಾಲು ಮಾರ್ಗಗಳು ತುಂಬ ಹಳೆಯವು ಇಲ್ಲವೇ ಓವರ್‍ಲೋಡ್‍ನಿಂದ ತತ್ತರಿಸುತ್ತಿರುವ ಸುವ ಮಾರ್ಗಗಳು. ಈ ಸರ್ಕಾರದ ಅವಧಿಯಲ್ಲಿ ಕೇವಲ 4 ಸಾವಿರ ಕಿ.ಮೀ (ಅಂದರೆ ಕೇವಲ ಶೇ. 3.57) ಮಾರ್ಗಗದ ನವೀಕರಣವಾಗಿದೆ! ಮೋದಿ ಸರ್ಕಾರದ ಮೊದಲ ಮೂರು ವರ್ಷಗಳಲ್ಲಿ ವಿದ್ಯುದೀಕರಣಪ್ರಕ್ರಿಯೆಯೇ ನಡೆಯಲಿಲ್ಲ. 2017-18ರಲ್ಲಿ ಕೇವಲ 4.087 ಕಿ.ಮೀ( 4 ಕಿಮೀ ಅನ್ನಿ) ಮಾರ್ಗದ ವಿದ್ಯುದೀಕರಣವಾಗಿದೆ!

ರೈಲ್ವೇಯನ್ನು ಸಶಕ್ತಗೊಳಿಸಲು ಹೊಸ ಹೊಸ ಲೈನ್‍ಗಳ ಸ್ಥಾಪನೆಯ ಅಗತ್ಯವಿದೆ. 2016-17ರಲ್ಲಿ 953 ಕಿಮೀ ಹೊಸ ಲೈನ್ ನಿರ್ಮಿಸಿದ ಮೋದಿ ಸರ್ಕಾರ, 2017-18ರಲ್ಲಿ ನಿರ್ಮಿಸಿದ್ದು ಕೇವಲ 409 ಕಿಮೀ!. ದಿನಕ್ಕೆ ಕೇವಲ 1.75 ಕೀಮೀ ಹೊಸ ಲೈನ್ ಮಾಡಿದ್ದನ್ನು ಸಾಧನೆ ಎನ್ನಲಾದೀತೆ?

ಫಂಡೂ ಇಲ್ಲ, ಬಾಂಡೂ ಇಲ್ಲ

ಆರಂಭಶೂರತ್ವ ತೋರಿದಂತೆ ಮಾಡಿದ ಸರ್ಕಾರ ರೈಲ್ವೆಗೆ ಅಗತ್ಯವಾದ ಬೃಹತ್ ಅನುದಾನ ಒದಗಿಸಲು ಎಲ್‍ಐಸಿಯೊಂದಿಗೆ ಒಪ್ಪಂದ ಮಾಡಿಕೊಂಡಿತು. ಇದರ ಪ್ರಕಾರ ಎಲ್‍ಐಸಿ ಒಂದೂವರೆ ಲಕ್ಷ ಕೋಟಿ ರೂ ಒದಗಿಸಬೇಕಿತ್ತು. ಅಕ್ಟೋಬರ್ 25, 2015ರಂದು ಸಿಕ್ಕ ಮಾಹಿತಿ ಪ್ರಕಾರ, ಎಲ್‍ಐಸಿ ಮೊದಲ ಕಂತಾಗಿ 2 ಸಾವಿರ ಕೋಟಿ ನೀಡಿತ್ತು. ನಂತರ ಮಾರ್ಚ್ 26, 2018ರ ಮಾಹಿತಿ ಪ್ರಕಾರ, ನಂತರ ಅದು ಯಾವುದೇ ಫಂಡ್ ಬಿಡುಗಡೆ ಮಾಡಲೇ ಇಲ್ಲ. ಬಾಂಡ್‍ಗಳ ಮೂಲಕ ಎಲ್‍ಐಸಿ ನೆರವು ನೀಡಲಿದೆ ಎಂದು ಸರ್ಕಾರ ಹೇಳಿತು. ಹಾಗೇ ನೀಡಿದರೂ ಅದು 7 ಸಾವಿರ ದಾಟಲ್ಲ. ಒಂದೂವರೆ ಕೋಟಿ ಲಕ್ಷದಲ್ಲಿ ಉಳಿದ ಹಣ ಏಕೆ ಬರಲಿಲ್ಲ?

ಸರ್ಕಾರ ಹಲವು ಸ್ಟೇಷನ್‍ಗಳನ್ನು ನಿರ್ಮಿಸಲು ಖಾಸಗಿ-ಸಾರ್ವಜನಿಕ ಭಾಗವಹಿಸುವಿಕೆಯ (ಪಿಪಿಪಿ) ಮೊರೆ ಹೋಗಿತು. 13 ಸ್ಟೇಷನ್‍ಗಳ ಮರು ನಿರ್ಮಾಣದ ಘೋಷಣೆ ಮಾಡಲಾಗಿತು. ಇವತ್ತಿಗೂ ಒಂದೂ ಜಾರಿಗೆ ಬಂದಿಲ್ಲ!

ಮೋದಿಯ ವಿದೇಶಿ ನೆರವು!
ವಿದೇಶಗಳಿಗೆ ಹೋದಾಗ ಆ ದೇಶಗಳೊಂದಿಗೆ ರೈಲ್ವೇ ನವೀಕರಣ, ಅಭಿವೃದ್ಧಿಯ ಯೋಜನೆಗಳಿಗೆ ಮೋದಿ ಸಾಹೇಬರು ಸಹಿ ಹಾಕಿದ್ದಷ್ಟೇ ಬಂತು. ಯಾವವೂ ಅನುಷ್ಠಾನಕ್ಕೆ ಬgಲೇ ಇಲ್ಲ. ಏಪ್ರಿಲ್ 2015ರಲ್ಲಿ, ಫ್ರಾನ್ಸ್, ಮೇ 2015ರಲ್ಲಿ ಚೀನಾ ಮತ್ತು ಅಕ್ಟೋಬರ್ 2018ರಲ್ಲಿ ರಷ್ಯಾಗಳಿಗೆ ಭೇಟಿ ನೀಡಿದಾಗ ಮೋದಿ ರೈಲ್ವೇ ಅಭಿವೃದ್ಧಿಗೆ ಆ ದೇಶಗಳ ಜೊತೆಗೆ ಒಪ್ಪಂದ (ಒoU)ಗಳನ್ನು ಮಾಡಿಕೊಂಡು ಬಂದಿದ್ದರು. ಅವೆಲ್ಲ ಬರೀ ಶೋ ಆಗಿದ್ದವಷ್ಟೇ!
ಒಟ್ಟಿನಲ್ಲಿ ರೈಲ್ವೇ ವ್ಯವಸ್ಥೆಯನ್ನೇ ಹಳಿ ತಪ್ಪಿಸಿದ ಮೋದಿ ಸರ್ಕಾರ, ಕಾಲಕಾಲಕ್ಕೆ ಭಾರಿ ಸುಧಾರಣೆ ಎಂಬ ಹೆಡ್‍ಲೈನ್ಸ್ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತ ಬಂದಿದೆ.
(ಕೃಪೆ: ಡೆಕ್ಕನ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...