Homeಮುಖಪುಟಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

ಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

- Advertisement -
- Advertisement -

-ಸಂಜಯ್ ಬಸು ಮತ್ತು ಉಜ್ವಲ್ ಚೌಧರಿ

ಕನ್ನಡಕ್ಕೆ: ಮಲ್ಲನಗೌಡರ್ ಪಿ.ಕೆ

ಒಂದು ಕಡೆ ಸಾರ್ವಜನಿಕ ತನಿಖಾ ಸಂಸ್ಥೆಗಳನ್ನು ಬಿಜೆಪಿಯ ಏಜೆಂಟರನ್ನಾಗಿ ಪರಿವರ್ತಿಸಿದ ಮೋದಿ ಸರ್ಕಾರ, ಇನ್ನೊಂದು ಕಡೆ ಸಾರ್ವಜನಿಕ ಸೇವೆ ನೀಡುವ ಸರ್ಕಾರಿ ಇಲಾಖೆ, ಸಂಸ್ಥೆಗಳನ್ನು ಹಳ್ಳ ಹಿಡಿಸುತ್ತ ಬಂದಿತು. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಅನ್ನು, ಮುಖೇಶ್ ಅಂಬಾನಿಗಾಗಿ ಬಿಎಸ್‍ಎನ್‍ಎಲ್‍ನ್ನು ವಂಚಿಸಿದ ಮೋದಿ ಸರ್ಕಾರ ರೈಲ್ವೇ ಇಲಾಖೆಗೂ ಒಂದು ದುರ್ಗತಿ ಕಾಣಿಸಿಯೇ ಬಿಟ್ಟಿದೆ…..

ಭಾರತದ ಜೀವನಾಡಿ ಎಂದೇ ಹೆಸರು ಪಡೆದ ರೈಲ್ವೇ ವ್ಯವಸ್ಥೆಯನ್ನು ಈ ಐದು ವರ್ಷಗಳಲ್ಲಿ ಹಳಿ ತಪ್ಪಿಸಿದ ‘ಕೀರ್ತಿ’ಯನ್ನು ಮೋದಿ ಸರ್ಕಾರ ಹೊತ್ತುಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಲ್ಲಿ ದೊರೆತ ಮತ್ತು ಲೋಕಸಭೆಗೆ ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಗಳೆರಡೂ ಇದನ್ನು ಪುಷ್ಟಿಕರಿಸುತ್ತಿವೆ.

ವರ್ಷದಲ್ಲಿ 8 ಬಿಲಿಯನ್ (8 ಶತಕೋಟಿ) ಪ್ರಯಾಣಿಕರನ್ನು ಸಾಗಿಸುವ ವಿಶ್ವದ ನಾಲ್ಕನೇ ದೊಡ್ಡ ನೆಟ್‍ವರ್ಕ್, ಚೀನಾದ ನಂತರ ಸಾಮರ್ಥಯದಲ್ಲಿ ಎರಡನೇ ಸ್ಥಾನ ಹೊಂದಿರುವ ಭಾರತೀಯ ರೈಲ್ವೇ ಇವತ್ತು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಈ ಸರ್ಕಾರ ಬಂದ ಮೊದಲ ವರ್ಷ 2014-15ರಲ್ಲೇ 135 ರೈಲು ಅಪಘಾತ ಸಂಭವಿಸಿದವು, ಅದು ಕ್ರಮೇಣ ಇಳಿಯುತ್ತ ಬಂದು 2017-18ರಲ್ಲಿ 78ಕ್ಕೆ ಇಳಿದಿತು. 2018ರ ನವೆಂಬರರನಲ್ಲಿ ಆರ್‍ಟಿಐ ಅಡಿ ಸಿಕ್ಕ ಮಾಹಿತಿಯಿದು. ಆದರೆ ಅಪಘತಗಳ ಸಂಖ್ಯೆ ಇಳಿಮುಖಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಸುರಕ್ಷತಾ ಕ್ರಮಗಳು ಕಾರಣವಲ್ಲ, ಅದಕ್ಕೆ ಇತರ ಹಲವು ಕಾರಣಗಳಿವೆ.

ಡಿಸೆಂಬರ್ 2018ರಲ್ಲಿ ಇಲಾಖೆ ನೀಡಿದ ಇನ್ನೊಂದು ಉತ್ತರದ ಪ್ರಕಾರ, 2014-15ರಲ್ಲಿ 3,591 ಟ್ರೇನುಗಳು ರದ್ದಾಗಿದ್ದರೆ, 2017-18ರಲ್ಲಿ 21,053 ಟ್ರೇನುಗಳು (ಏಳು ಪಟ್ಟು!) ರದ್ದಾಗಿದ್ದವು! ಟ್ರೇನುಗಳ ಓಡಾಟವೇ ಕುಸಿದ ಮೇಲೆ ಅಪಘಾತ ಸಂಖ್ಯೆ ಸಹಜವಾಗಿ ಕಡಿಮೆ ತಾನೇ? ರೈಲ್ವೇ ¸ಹಾಯಕ ಸಚಿವ ರಾಜೇನ ಗೋಹೆನ್ ಸಂಸತ್ತಿಗೆ ಕೊಟ್ಟ ವಿವರಗಳೂ ಇದನ್ನು ಪುಷ್ಟಿಕರಿಸಿವೆ. 2014-15ರಲ್ಲಿ 8.317 ಬಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದರೆ, 2016-17ರಲ್ಲಿ ಈ ಸಂಖ್ಯೆ 8.116 ಬಿಲಿಯನ್. 2017-18ರಲ್ಲಿ ಶೇ. 30ರಷ್ಟು ಟ್ರೇನುಗಳು ತಡಾವಾಗಿ ಚಲಿಸಿವೆ. ನಇದು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಬಂದಿದೆ.

ಮಾರ್ಗ ನವೀಕರಣ ಮತ್ತು ವಿದ್ಯುದೀಕರಣ
ಮಾರ್ಗ ನವೀಕರಣ ಮತ್ತು ವಿದ್ಯುದೀಕರಣದಲ್ಲೂ ಈ ಸರ್ಕಾರದ ಸಾಧನೆ ತೀರಾ ಕಳಪೆಯಾಗಿದೆ. ರೈಲ್ವೇ ಸುರಕ್ಷತೆಗೆ ಮಾರ್ಗ ನವೀಕರಣ ಅತ್ಯಂತ ಮುಖ್ಯವಾದ ಕ್ರಮ. ಫೆಬ್ರುವರಿ 2019ರಲ್ಲಿ ಆರ್‍ಟಿಐನಲ್ಲಿ ನೀಡಿದ ಮಾಹಿತಿ ಪ್ರಕಾರ, ಯುಪಿಎ ಸರ್ಕಾರ 2009-10ರಲ್ಲಿ ಮಾಡಿದ್ದ ಮಾರ್ಗ ನವೀಕರಣಗಳ ಸಂಖ್ಯೆಯನ್ನು 2017-18ರಲ್ಲಿ ಈ ಸರ್ಕಾರ ತಲುಪಿದೆ.

1 ಲಕ್ಷ 17 ಸಾವಿರ ಮಾರ್ಗ (ಟ್ರ್ಯಾಕ್)ವನ್ನು ರೈಲ್ವೆ ಹೊಂದಿದ್ದು, ಇದರಲ್ಲಿ ಬಹುಪಾಲು ಮಾರ್ಗಗಳು ತುಂಬ ಹಳೆಯವು ಇಲ್ಲವೇ ಓವರ್‍ಲೋಡ್‍ನಿಂದ ತತ್ತರಿಸುತ್ತಿರುವ ಸುವ ಮಾರ್ಗಗಳು. ಈ ಸರ್ಕಾರದ ಅವಧಿಯಲ್ಲಿ ಕೇವಲ 4 ಸಾವಿರ ಕಿ.ಮೀ (ಅಂದರೆ ಕೇವಲ ಶೇ. 3.57) ಮಾರ್ಗಗದ ನವೀಕರಣವಾಗಿದೆ! ಮೋದಿ ಸರ್ಕಾರದ ಮೊದಲ ಮೂರು ವರ್ಷಗಳಲ್ಲಿ ವಿದ್ಯುದೀಕರಣಪ್ರಕ್ರಿಯೆಯೇ ನಡೆಯಲಿಲ್ಲ. 2017-18ರಲ್ಲಿ ಕೇವಲ 4.087 ಕಿ.ಮೀ( 4 ಕಿಮೀ ಅನ್ನಿ) ಮಾರ್ಗದ ವಿದ್ಯುದೀಕರಣವಾಗಿದೆ!

ರೈಲ್ವೇಯನ್ನು ಸಶಕ್ತಗೊಳಿಸಲು ಹೊಸ ಹೊಸ ಲೈನ್‍ಗಳ ಸ್ಥಾಪನೆಯ ಅಗತ್ಯವಿದೆ. 2016-17ರಲ್ಲಿ 953 ಕಿಮೀ ಹೊಸ ಲೈನ್ ನಿರ್ಮಿಸಿದ ಮೋದಿ ಸರ್ಕಾರ, 2017-18ರಲ್ಲಿ ನಿರ್ಮಿಸಿದ್ದು ಕೇವಲ 409 ಕಿಮೀ!. ದಿನಕ್ಕೆ ಕೇವಲ 1.75 ಕೀಮೀ ಹೊಸ ಲೈನ್ ಮಾಡಿದ್ದನ್ನು ಸಾಧನೆ ಎನ್ನಲಾದೀತೆ?

ಫಂಡೂ ಇಲ್ಲ, ಬಾಂಡೂ ಇಲ್ಲ

ಆರಂಭಶೂರತ್ವ ತೋರಿದಂತೆ ಮಾಡಿದ ಸರ್ಕಾರ ರೈಲ್ವೆಗೆ ಅಗತ್ಯವಾದ ಬೃಹತ್ ಅನುದಾನ ಒದಗಿಸಲು ಎಲ್‍ಐಸಿಯೊಂದಿಗೆ ಒಪ್ಪಂದ ಮಾಡಿಕೊಂಡಿತು. ಇದರ ಪ್ರಕಾರ ಎಲ್‍ಐಸಿ ಒಂದೂವರೆ ಲಕ್ಷ ಕೋಟಿ ರೂ ಒದಗಿಸಬೇಕಿತ್ತು. ಅಕ್ಟೋಬರ್ 25, 2015ರಂದು ಸಿಕ್ಕ ಮಾಹಿತಿ ಪ್ರಕಾರ, ಎಲ್‍ಐಸಿ ಮೊದಲ ಕಂತಾಗಿ 2 ಸಾವಿರ ಕೋಟಿ ನೀಡಿತ್ತು. ನಂತರ ಮಾರ್ಚ್ 26, 2018ರ ಮಾಹಿತಿ ಪ್ರಕಾರ, ನಂತರ ಅದು ಯಾವುದೇ ಫಂಡ್ ಬಿಡುಗಡೆ ಮಾಡಲೇ ಇಲ್ಲ. ಬಾಂಡ್‍ಗಳ ಮೂಲಕ ಎಲ್‍ಐಸಿ ನೆರವು ನೀಡಲಿದೆ ಎಂದು ಸರ್ಕಾರ ಹೇಳಿತು. ಹಾಗೇ ನೀಡಿದರೂ ಅದು 7 ಸಾವಿರ ದಾಟಲ್ಲ. ಒಂದೂವರೆ ಕೋಟಿ ಲಕ್ಷದಲ್ಲಿ ಉಳಿದ ಹಣ ಏಕೆ ಬರಲಿಲ್ಲ?

ಸರ್ಕಾರ ಹಲವು ಸ್ಟೇಷನ್‍ಗಳನ್ನು ನಿರ್ಮಿಸಲು ಖಾಸಗಿ-ಸಾರ್ವಜನಿಕ ಭಾಗವಹಿಸುವಿಕೆಯ (ಪಿಪಿಪಿ) ಮೊರೆ ಹೋಗಿತು. 13 ಸ್ಟೇಷನ್‍ಗಳ ಮರು ನಿರ್ಮಾಣದ ಘೋಷಣೆ ಮಾಡಲಾಗಿತು. ಇವತ್ತಿಗೂ ಒಂದೂ ಜಾರಿಗೆ ಬಂದಿಲ್ಲ!

ಮೋದಿಯ ವಿದೇಶಿ ನೆರವು!
ವಿದೇಶಗಳಿಗೆ ಹೋದಾಗ ಆ ದೇಶಗಳೊಂದಿಗೆ ರೈಲ್ವೇ ನವೀಕರಣ, ಅಭಿವೃದ್ಧಿಯ ಯೋಜನೆಗಳಿಗೆ ಮೋದಿ ಸಾಹೇಬರು ಸಹಿ ಹಾಕಿದ್ದಷ್ಟೇ ಬಂತು. ಯಾವವೂ ಅನುಷ್ಠಾನಕ್ಕೆ ಬgಲೇ ಇಲ್ಲ. ಏಪ್ರಿಲ್ 2015ರಲ್ಲಿ, ಫ್ರಾನ್ಸ್, ಮೇ 2015ರಲ್ಲಿ ಚೀನಾ ಮತ್ತು ಅಕ್ಟೋಬರ್ 2018ರಲ್ಲಿ ರಷ್ಯಾಗಳಿಗೆ ಭೇಟಿ ನೀಡಿದಾಗ ಮೋದಿ ರೈಲ್ವೇ ಅಭಿವೃದ್ಧಿಗೆ ಆ ದೇಶಗಳ ಜೊತೆಗೆ ಒಪ್ಪಂದ (ಒoU)ಗಳನ್ನು ಮಾಡಿಕೊಂಡು ಬಂದಿದ್ದರು. ಅವೆಲ್ಲ ಬರೀ ಶೋ ಆಗಿದ್ದವಷ್ಟೇ!
ಒಟ್ಟಿನಲ್ಲಿ ರೈಲ್ವೇ ವ್ಯವಸ್ಥೆಯನ್ನೇ ಹಳಿ ತಪ್ಪಿಸಿದ ಮೋದಿ ಸರ್ಕಾರ, ಕಾಲಕಾಲಕ್ಕೆ ಭಾರಿ ಸುಧಾರಣೆ ಎಂಬ ಹೆಡ್‍ಲೈನ್ಸ್ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತ ಬಂದಿದೆ.
(ಕೃಪೆ: ಡೆಕ್ಕನ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...