Homeಮುಖಪುಟಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

ಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

- Advertisement -
- Advertisement -

-ಸಂಜಯ್ ಬಸು ಮತ್ತು ಉಜ್ವಲ್ ಚೌಧರಿ

ಕನ್ನಡಕ್ಕೆ: ಮಲ್ಲನಗೌಡರ್ ಪಿ.ಕೆ

ಒಂದು ಕಡೆ ಸಾರ್ವಜನಿಕ ತನಿಖಾ ಸಂಸ್ಥೆಗಳನ್ನು ಬಿಜೆಪಿಯ ಏಜೆಂಟರನ್ನಾಗಿ ಪರಿವರ್ತಿಸಿದ ಮೋದಿ ಸರ್ಕಾರ, ಇನ್ನೊಂದು ಕಡೆ ಸಾರ್ವಜನಿಕ ಸೇವೆ ನೀಡುವ ಸರ್ಕಾರಿ ಇಲಾಖೆ, ಸಂಸ್ಥೆಗಳನ್ನು ಹಳ್ಳ ಹಿಡಿಸುತ್ತ ಬಂದಿತು. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಅನ್ನು, ಮುಖೇಶ್ ಅಂಬಾನಿಗಾಗಿ ಬಿಎಸ್‍ಎನ್‍ಎಲ್‍ನ್ನು ವಂಚಿಸಿದ ಮೋದಿ ಸರ್ಕಾರ ರೈಲ್ವೇ ಇಲಾಖೆಗೂ ಒಂದು ದುರ್ಗತಿ ಕಾಣಿಸಿಯೇ ಬಿಟ್ಟಿದೆ…..

ಭಾರತದ ಜೀವನಾಡಿ ಎಂದೇ ಹೆಸರು ಪಡೆದ ರೈಲ್ವೇ ವ್ಯವಸ್ಥೆಯನ್ನು ಈ ಐದು ವರ್ಷಗಳಲ್ಲಿ ಹಳಿ ತಪ್ಪಿಸಿದ ‘ಕೀರ್ತಿ’ಯನ್ನು ಮೋದಿ ಸರ್ಕಾರ ಹೊತ್ತುಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಲ್ಲಿ ದೊರೆತ ಮತ್ತು ಲೋಕಸಭೆಗೆ ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಗಳೆರಡೂ ಇದನ್ನು ಪುಷ್ಟಿಕರಿಸುತ್ತಿವೆ.

ವರ್ಷದಲ್ಲಿ 8 ಬಿಲಿಯನ್ (8 ಶತಕೋಟಿ) ಪ್ರಯಾಣಿಕರನ್ನು ಸಾಗಿಸುವ ವಿಶ್ವದ ನಾಲ್ಕನೇ ದೊಡ್ಡ ನೆಟ್‍ವರ್ಕ್, ಚೀನಾದ ನಂತರ ಸಾಮರ್ಥಯದಲ್ಲಿ ಎರಡನೇ ಸ್ಥಾನ ಹೊಂದಿರುವ ಭಾರತೀಯ ರೈಲ್ವೇ ಇವತ್ತು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಈ ಸರ್ಕಾರ ಬಂದ ಮೊದಲ ವರ್ಷ 2014-15ರಲ್ಲೇ 135 ರೈಲು ಅಪಘಾತ ಸಂಭವಿಸಿದವು, ಅದು ಕ್ರಮೇಣ ಇಳಿಯುತ್ತ ಬಂದು 2017-18ರಲ್ಲಿ 78ಕ್ಕೆ ಇಳಿದಿತು. 2018ರ ನವೆಂಬರರನಲ್ಲಿ ಆರ್‍ಟಿಐ ಅಡಿ ಸಿಕ್ಕ ಮಾಹಿತಿಯಿದು. ಆದರೆ ಅಪಘತಗಳ ಸಂಖ್ಯೆ ಇಳಿಮುಖಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಸುರಕ್ಷತಾ ಕ್ರಮಗಳು ಕಾರಣವಲ್ಲ, ಅದಕ್ಕೆ ಇತರ ಹಲವು ಕಾರಣಗಳಿವೆ.

ಡಿಸೆಂಬರ್ 2018ರಲ್ಲಿ ಇಲಾಖೆ ನೀಡಿದ ಇನ್ನೊಂದು ಉತ್ತರದ ಪ್ರಕಾರ, 2014-15ರಲ್ಲಿ 3,591 ಟ್ರೇನುಗಳು ರದ್ದಾಗಿದ್ದರೆ, 2017-18ರಲ್ಲಿ 21,053 ಟ್ರೇನುಗಳು (ಏಳು ಪಟ್ಟು!) ರದ್ದಾಗಿದ್ದವು! ಟ್ರೇನುಗಳ ಓಡಾಟವೇ ಕುಸಿದ ಮೇಲೆ ಅಪಘಾತ ಸಂಖ್ಯೆ ಸಹಜವಾಗಿ ಕಡಿಮೆ ತಾನೇ? ರೈಲ್ವೇ ¸ಹಾಯಕ ಸಚಿವ ರಾಜೇನ ಗೋಹೆನ್ ಸಂಸತ್ತಿಗೆ ಕೊಟ್ಟ ವಿವರಗಳೂ ಇದನ್ನು ಪುಷ್ಟಿಕರಿಸಿವೆ. 2014-15ರಲ್ಲಿ 8.317 ಬಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದರೆ, 2016-17ರಲ್ಲಿ ಈ ಸಂಖ್ಯೆ 8.116 ಬಿಲಿಯನ್. 2017-18ರಲ್ಲಿ ಶೇ. 30ರಷ್ಟು ಟ್ರೇನುಗಳು ತಡಾವಾಗಿ ಚಲಿಸಿವೆ. ನಇದು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಬಂದಿದೆ.

ಮಾರ್ಗ ನವೀಕರಣ ಮತ್ತು ವಿದ್ಯುದೀಕರಣ
ಮಾರ್ಗ ನವೀಕರಣ ಮತ್ತು ವಿದ್ಯುದೀಕರಣದಲ್ಲೂ ಈ ಸರ್ಕಾರದ ಸಾಧನೆ ತೀರಾ ಕಳಪೆಯಾಗಿದೆ. ರೈಲ್ವೇ ಸುರಕ್ಷತೆಗೆ ಮಾರ್ಗ ನವೀಕರಣ ಅತ್ಯಂತ ಮುಖ್ಯವಾದ ಕ್ರಮ. ಫೆಬ್ರುವರಿ 2019ರಲ್ಲಿ ಆರ್‍ಟಿಐನಲ್ಲಿ ನೀಡಿದ ಮಾಹಿತಿ ಪ್ರಕಾರ, ಯುಪಿಎ ಸರ್ಕಾರ 2009-10ರಲ್ಲಿ ಮಾಡಿದ್ದ ಮಾರ್ಗ ನವೀಕರಣಗಳ ಸಂಖ್ಯೆಯನ್ನು 2017-18ರಲ್ಲಿ ಈ ಸರ್ಕಾರ ತಲುಪಿದೆ.

1 ಲಕ್ಷ 17 ಸಾವಿರ ಮಾರ್ಗ (ಟ್ರ್ಯಾಕ್)ವನ್ನು ರೈಲ್ವೆ ಹೊಂದಿದ್ದು, ಇದರಲ್ಲಿ ಬಹುಪಾಲು ಮಾರ್ಗಗಳು ತುಂಬ ಹಳೆಯವು ಇಲ್ಲವೇ ಓವರ್‍ಲೋಡ್‍ನಿಂದ ತತ್ತರಿಸುತ್ತಿರುವ ಸುವ ಮಾರ್ಗಗಳು. ಈ ಸರ್ಕಾರದ ಅವಧಿಯಲ್ಲಿ ಕೇವಲ 4 ಸಾವಿರ ಕಿ.ಮೀ (ಅಂದರೆ ಕೇವಲ ಶೇ. 3.57) ಮಾರ್ಗಗದ ನವೀಕರಣವಾಗಿದೆ! ಮೋದಿ ಸರ್ಕಾರದ ಮೊದಲ ಮೂರು ವರ್ಷಗಳಲ್ಲಿ ವಿದ್ಯುದೀಕರಣಪ್ರಕ್ರಿಯೆಯೇ ನಡೆಯಲಿಲ್ಲ. 2017-18ರಲ್ಲಿ ಕೇವಲ 4.087 ಕಿ.ಮೀ( 4 ಕಿಮೀ ಅನ್ನಿ) ಮಾರ್ಗದ ವಿದ್ಯುದೀಕರಣವಾಗಿದೆ!

ರೈಲ್ವೇಯನ್ನು ಸಶಕ್ತಗೊಳಿಸಲು ಹೊಸ ಹೊಸ ಲೈನ್‍ಗಳ ಸ್ಥಾಪನೆಯ ಅಗತ್ಯವಿದೆ. 2016-17ರಲ್ಲಿ 953 ಕಿಮೀ ಹೊಸ ಲೈನ್ ನಿರ್ಮಿಸಿದ ಮೋದಿ ಸರ್ಕಾರ, 2017-18ರಲ್ಲಿ ನಿರ್ಮಿಸಿದ್ದು ಕೇವಲ 409 ಕಿಮೀ!. ದಿನಕ್ಕೆ ಕೇವಲ 1.75 ಕೀಮೀ ಹೊಸ ಲೈನ್ ಮಾಡಿದ್ದನ್ನು ಸಾಧನೆ ಎನ್ನಲಾದೀತೆ?

ಫಂಡೂ ಇಲ್ಲ, ಬಾಂಡೂ ಇಲ್ಲ

ಆರಂಭಶೂರತ್ವ ತೋರಿದಂತೆ ಮಾಡಿದ ಸರ್ಕಾರ ರೈಲ್ವೆಗೆ ಅಗತ್ಯವಾದ ಬೃಹತ್ ಅನುದಾನ ಒದಗಿಸಲು ಎಲ್‍ಐಸಿಯೊಂದಿಗೆ ಒಪ್ಪಂದ ಮಾಡಿಕೊಂಡಿತು. ಇದರ ಪ್ರಕಾರ ಎಲ್‍ಐಸಿ ಒಂದೂವರೆ ಲಕ್ಷ ಕೋಟಿ ರೂ ಒದಗಿಸಬೇಕಿತ್ತು. ಅಕ್ಟೋಬರ್ 25, 2015ರಂದು ಸಿಕ್ಕ ಮಾಹಿತಿ ಪ್ರಕಾರ, ಎಲ್‍ಐಸಿ ಮೊದಲ ಕಂತಾಗಿ 2 ಸಾವಿರ ಕೋಟಿ ನೀಡಿತ್ತು. ನಂತರ ಮಾರ್ಚ್ 26, 2018ರ ಮಾಹಿತಿ ಪ್ರಕಾರ, ನಂತರ ಅದು ಯಾವುದೇ ಫಂಡ್ ಬಿಡುಗಡೆ ಮಾಡಲೇ ಇಲ್ಲ. ಬಾಂಡ್‍ಗಳ ಮೂಲಕ ಎಲ್‍ಐಸಿ ನೆರವು ನೀಡಲಿದೆ ಎಂದು ಸರ್ಕಾರ ಹೇಳಿತು. ಹಾಗೇ ನೀಡಿದರೂ ಅದು 7 ಸಾವಿರ ದಾಟಲ್ಲ. ಒಂದೂವರೆ ಕೋಟಿ ಲಕ್ಷದಲ್ಲಿ ಉಳಿದ ಹಣ ಏಕೆ ಬರಲಿಲ್ಲ?

ಸರ್ಕಾರ ಹಲವು ಸ್ಟೇಷನ್‍ಗಳನ್ನು ನಿರ್ಮಿಸಲು ಖಾಸಗಿ-ಸಾರ್ವಜನಿಕ ಭಾಗವಹಿಸುವಿಕೆಯ (ಪಿಪಿಪಿ) ಮೊರೆ ಹೋಗಿತು. 13 ಸ್ಟೇಷನ್‍ಗಳ ಮರು ನಿರ್ಮಾಣದ ಘೋಷಣೆ ಮಾಡಲಾಗಿತು. ಇವತ್ತಿಗೂ ಒಂದೂ ಜಾರಿಗೆ ಬಂದಿಲ್ಲ!

ಮೋದಿಯ ವಿದೇಶಿ ನೆರವು!
ವಿದೇಶಗಳಿಗೆ ಹೋದಾಗ ಆ ದೇಶಗಳೊಂದಿಗೆ ರೈಲ್ವೇ ನವೀಕರಣ, ಅಭಿವೃದ್ಧಿಯ ಯೋಜನೆಗಳಿಗೆ ಮೋದಿ ಸಾಹೇಬರು ಸಹಿ ಹಾಕಿದ್ದಷ್ಟೇ ಬಂತು. ಯಾವವೂ ಅನುಷ್ಠಾನಕ್ಕೆ ಬgಲೇ ಇಲ್ಲ. ಏಪ್ರಿಲ್ 2015ರಲ್ಲಿ, ಫ್ರಾನ್ಸ್, ಮೇ 2015ರಲ್ಲಿ ಚೀನಾ ಮತ್ತು ಅಕ್ಟೋಬರ್ 2018ರಲ್ಲಿ ರಷ್ಯಾಗಳಿಗೆ ಭೇಟಿ ನೀಡಿದಾಗ ಮೋದಿ ರೈಲ್ವೇ ಅಭಿವೃದ್ಧಿಗೆ ಆ ದೇಶಗಳ ಜೊತೆಗೆ ಒಪ್ಪಂದ (ಒoU)ಗಳನ್ನು ಮಾಡಿಕೊಂಡು ಬಂದಿದ್ದರು. ಅವೆಲ್ಲ ಬರೀ ಶೋ ಆಗಿದ್ದವಷ್ಟೇ!
ಒಟ್ಟಿನಲ್ಲಿ ರೈಲ್ವೇ ವ್ಯವಸ್ಥೆಯನ್ನೇ ಹಳಿ ತಪ್ಪಿಸಿದ ಮೋದಿ ಸರ್ಕಾರ, ಕಾಲಕಾಲಕ್ಕೆ ಭಾರಿ ಸುಧಾರಣೆ ಎಂಬ ಹೆಡ್‍ಲೈನ್ಸ್ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತ ಬಂದಿದೆ.
(ಕೃಪೆ: ಡೆಕ್ಕನ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...