Homeಮುಖಪುಟಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

ಟ್ರ್ಯಾಕ್ ರೆಕಾರ್ಡ್ ಹೇಳುವ ಸತ್ಯ : ರೈಲ್ವೆಯನ್ನೂ ಹಳಿ ತಪ್ಪಿಸಿದ ಮೋದಿ ಸರ್ಕಾರ!

- Advertisement -
- Advertisement -

-ಸಂಜಯ್ ಬಸು ಮತ್ತು ಉಜ್ವಲ್ ಚೌಧರಿ

ಕನ್ನಡಕ್ಕೆ: ಮಲ್ಲನಗೌಡರ್ ಪಿ.ಕೆ

ಒಂದು ಕಡೆ ಸಾರ್ವಜನಿಕ ತನಿಖಾ ಸಂಸ್ಥೆಗಳನ್ನು ಬಿಜೆಪಿಯ ಏಜೆಂಟರನ್ನಾಗಿ ಪರಿವರ್ತಿಸಿದ ಮೋದಿ ಸರ್ಕಾರ, ಇನ್ನೊಂದು ಕಡೆ ಸಾರ್ವಜನಿಕ ಸೇವೆ ನೀಡುವ ಸರ್ಕಾರಿ ಇಲಾಖೆ, ಸಂಸ್ಥೆಗಳನ್ನು ಹಳ್ಳ ಹಿಡಿಸುತ್ತ ಬಂದಿತು. ಅನಿಲ್ ಅಂಬಾನಿಗಾಗಿ ಎಚ್‍ಎಎಲ್ ಅನ್ನು, ಮುಖೇಶ್ ಅಂಬಾನಿಗಾಗಿ ಬಿಎಸ್‍ಎನ್‍ಎಲ್‍ನ್ನು ವಂಚಿಸಿದ ಮೋದಿ ಸರ್ಕಾರ ರೈಲ್ವೇ ಇಲಾಖೆಗೂ ಒಂದು ದುರ್ಗತಿ ಕಾಣಿಸಿಯೇ ಬಿಟ್ಟಿದೆ…..

ಭಾರತದ ಜೀವನಾಡಿ ಎಂದೇ ಹೆಸರು ಪಡೆದ ರೈಲ್ವೇ ವ್ಯವಸ್ಥೆಯನ್ನು ಈ ಐದು ವರ್ಷಗಳಲ್ಲಿ ಹಳಿ ತಪ್ಪಿಸಿದ ‘ಕೀರ್ತಿ’ಯನ್ನು ಮೋದಿ ಸರ್ಕಾರ ಹೊತ್ತುಕೊಂಡಿದೆ. ಮಾಹಿತಿ ಹಕ್ಕು ಕಾಯ್ದೆಯಲ್ಲಿ ದೊರೆತ ಮತ್ತು ಲೋಕಸಭೆಗೆ ಕೇಂದ್ರ ಸರ್ಕಾರವೇ ನೀಡಿದ ಮಾಹಿತಿಗಳೆರಡೂ ಇದನ್ನು ಪುಷ್ಟಿಕರಿಸುತ್ತಿವೆ.

ವರ್ಷದಲ್ಲಿ 8 ಬಿಲಿಯನ್ (8 ಶತಕೋಟಿ) ಪ್ರಯಾಣಿಕರನ್ನು ಸಾಗಿಸುವ ವಿಶ್ವದ ನಾಲ್ಕನೇ ದೊಡ್ಡ ನೆಟ್‍ವರ್ಕ್, ಚೀನಾದ ನಂತರ ಸಾಮರ್ಥಯದಲ್ಲಿ ಎರಡನೇ ಸ್ಥಾನ ಹೊಂದಿರುವ ಭಾರತೀಯ ರೈಲ್ವೇ ಇವತ್ತು ಅತ್ಯಂತ ಕೆಟ್ಟ ಸ್ಥಿತಿಯಲ್ಲಿದೆ. ಈ ಸರ್ಕಾರ ಬಂದ ಮೊದಲ ವರ್ಷ 2014-15ರಲ್ಲೇ 135 ರೈಲು ಅಪಘಾತ ಸಂಭವಿಸಿದವು, ಅದು ಕ್ರಮೇಣ ಇಳಿಯುತ್ತ ಬಂದು 2017-18ರಲ್ಲಿ 78ಕ್ಕೆ ಇಳಿದಿತು. 2018ರ ನವೆಂಬರರನಲ್ಲಿ ಆರ್‍ಟಿಐ ಅಡಿ ಸಿಕ್ಕ ಮಾಹಿತಿಯಿದು. ಆದರೆ ಅಪಘತಗಳ ಸಂಖ್ಯೆ ಇಳಿಮುಖಕ್ಕೆ ಕೇಂದ್ರ ಸರ್ಕಾರ ಕೈಗೊಂಡ ಸುರಕ್ಷತಾ ಕ್ರಮಗಳು ಕಾರಣವಲ್ಲ, ಅದಕ್ಕೆ ಇತರ ಹಲವು ಕಾರಣಗಳಿವೆ.

ಡಿಸೆಂಬರ್ 2018ರಲ್ಲಿ ಇಲಾಖೆ ನೀಡಿದ ಇನ್ನೊಂದು ಉತ್ತರದ ಪ್ರಕಾರ, 2014-15ರಲ್ಲಿ 3,591 ಟ್ರೇನುಗಳು ರದ್ದಾಗಿದ್ದರೆ, 2017-18ರಲ್ಲಿ 21,053 ಟ್ರೇನುಗಳು (ಏಳು ಪಟ್ಟು!) ರದ್ದಾಗಿದ್ದವು! ಟ್ರೇನುಗಳ ಓಡಾಟವೇ ಕುಸಿದ ಮೇಲೆ ಅಪಘಾತ ಸಂಖ್ಯೆ ಸಹಜವಾಗಿ ಕಡಿಮೆ ತಾನೇ? ರೈಲ್ವೇ ¸ಹಾಯಕ ಸಚಿವ ರಾಜೇನ ಗೋಹೆನ್ ಸಂಸತ್ತಿಗೆ ಕೊಟ್ಟ ವಿವರಗಳೂ ಇದನ್ನು ಪುಷ್ಟಿಕರಿಸಿವೆ. 2014-15ರಲ್ಲಿ 8.317 ಬಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದರೆ, 2016-17ರಲ್ಲಿ ಈ ಸಂಖ್ಯೆ 8.116 ಬಿಲಿಯನ್. 2017-18ರಲ್ಲಿ ಶೇ. 30ರಷ್ಟು ಟ್ರೇನುಗಳು ತಡಾವಾಗಿ ಚಲಿಸಿವೆ. ನಇದು ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಬಂದಿದೆ.

ಮಾರ್ಗ ನವೀಕರಣ ಮತ್ತು ವಿದ್ಯುದೀಕರಣ
ಮಾರ್ಗ ನವೀಕರಣ ಮತ್ತು ವಿದ್ಯುದೀಕರಣದಲ್ಲೂ ಈ ಸರ್ಕಾರದ ಸಾಧನೆ ತೀರಾ ಕಳಪೆಯಾಗಿದೆ. ರೈಲ್ವೇ ಸುರಕ್ಷತೆಗೆ ಮಾರ್ಗ ನವೀಕರಣ ಅತ್ಯಂತ ಮುಖ್ಯವಾದ ಕ್ರಮ. ಫೆಬ್ರುವರಿ 2019ರಲ್ಲಿ ಆರ್‍ಟಿಐನಲ್ಲಿ ನೀಡಿದ ಮಾಹಿತಿ ಪ್ರಕಾರ, ಯುಪಿಎ ಸರ್ಕಾರ 2009-10ರಲ್ಲಿ ಮಾಡಿದ್ದ ಮಾರ್ಗ ನವೀಕರಣಗಳ ಸಂಖ್ಯೆಯನ್ನು 2017-18ರಲ್ಲಿ ಈ ಸರ್ಕಾರ ತಲುಪಿದೆ.

1 ಲಕ್ಷ 17 ಸಾವಿರ ಮಾರ್ಗ (ಟ್ರ್ಯಾಕ್)ವನ್ನು ರೈಲ್ವೆ ಹೊಂದಿದ್ದು, ಇದರಲ್ಲಿ ಬಹುಪಾಲು ಮಾರ್ಗಗಳು ತುಂಬ ಹಳೆಯವು ಇಲ್ಲವೇ ಓವರ್‍ಲೋಡ್‍ನಿಂದ ತತ್ತರಿಸುತ್ತಿರುವ ಸುವ ಮಾರ್ಗಗಳು. ಈ ಸರ್ಕಾರದ ಅವಧಿಯಲ್ಲಿ ಕೇವಲ 4 ಸಾವಿರ ಕಿ.ಮೀ (ಅಂದರೆ ಕೇವಲ ಶೇ. 3.57) ಮಾರ್ಗಗದ ನವೀಕರಣವಾಗಿದೆ! ಮೋದಿ ಸರ್ಕಾರದ ಮೊದಲ ಮೂರು ವರ್ಷಗಳಲ್ಲಿ ವಿದ್ಯುದೀಕರಣಪ್ರಕ್ರಿಯೆಯೇ ನಡೆಯಲಿಲ್ಲ. 2017-18ರಲ್ಲಿ ಕೇವಲ 4.087 ಕಿ.ಮೀ( 4 ಕಿಮೀ ಅನ್ನಿ) ಮಾರ್ಗದ ವಿದ್ಯುದೀಕರಣವಾಗಿದೆ!

ರೈಲ್ವೇಯನ್ನು ಸಶಕ್ತಗೊಳಿಸಲು ಹೊಸ ಹೊಸ ಲೈನ್‍ಗಳ ಸ್ಥಾಪನೆಯ ಅಗತ್ಯವಿದೆ. 2016-17ರಲ್ಲಿ 953 ಕಿಮೀ ಹೊಸ ಲೈನ್ ನಿರ್ಮಿಸಿದ ಮೋದಿ ಸರ್ಕಾರ, 2017-18ರಲ್ಲಿ ನಿರ್ಮಿಸಿದ್ದು ಕೇವಲ 409 ಕಿಮೀ!. ದಿನಕ್ಕೆ ಕೇವಲ 1.75 ಕೀಮೀ ಹೊಸ ಲೈನ್ ಮಾಡಿದ್ದನ್ನು ಸಾಧನೆ ಎನ್ನಲಾದೀತೆ?

ಫಂಡೂ ಇಲ್ಲ, ಬಾಂಡೂ ಇಲ್ಲ

ಆರಂಭಶೂರತ್ವ ತೋರಿದಂತೆ ಮಾಡಿದ ಸರ್ಕಾರ ರೈಲ್ವೆಗೆ ಅಗತ್ಯವಾದ ಬೃಹತ್ ಅನುದಾನ ಒದಗಿಸಲು ಎಲ್‍ಐಸಿಯೊಂದಿಗೆ ಒಪ್ಪಂದ ಮಾಡಿಕೊಂಡಿತು. ಇದರ ಪ್ರಕಾರ ಎಲ್‍ಐಸಿ ಒಂದೂವರೆ ಲಕ್ಷ ಕೋಟಿ ರೂ ಒದಗಿಸಬೇಕಿತ್ತು. ಅಕ್ಟೋಬರ್ 25, 2015ರಂದು ಸಿಕ್ಕ ಮಾಹಿತಿ ಪ್ರಕಾರ, ಎಲ್‍ಐಸಿ ಮೊದಲ ಕಂತಾಗಿ 2 ಸಾವಿರ ಕೋಟಿ ನೀಡಿತ್ತು. ನಂತರ ಮಾರ್ಚ್ 26, 2018ರ ಮಾಹಿತಿ ಪ್ರಕಾರ, ನಂತರ ಅದು ಯಾವುದೇ ಫಂಡ್ ಬಿಡುಗಡೆ ಮಾಡಲೇ ಇಲ್ಲ. ಬಾಂಡ್‍ಗಳ ಮೂಲಕ ಎಲ್‍ಐಸಿ ನೆರವು ನೀಡಲಿದೆ ಎಂದು ಸರ್ಕಾರ ಹೇಳಿತು. ಹಾಗೇ ನೀಡಿದರೂ ಅದು 7 ಸಾವಿರ ದಾಟಲ್ಲ. ಒಂದೂವರೆ ಕೋಟಿ ಲಕ್ಷದಲ್ಲಿ ಉಳಿದ ಹಣ ಏಕೆ ಬರಲಿಲ್ಲ?

ಸರ್ಕಾರ ಹಲವು ಸ್ಟೇಷನ್‍ಗಳನ್ನು ನಿರ್ಮಿಸಲು ಖಾಸಗಿ-ಸಾರ್ವಜನಿಕ ಭಾಗವಹಿಸುವಿಕೆಯ (ಪಿಪಿಪಿ) ಮೊರೆ ಹೋಗಿತು. 13 ಸ್ಟೇಷನ್‍ಗಳ ಮರು ನಿರ್ಮಾಣದ ಘೋಷಣೆ ಮಾಡಲಾಗಿತು. ಇವತ್ತಿಗೂ ಒಂದೂ ಜಾರಿಗೆ ಬಂದಿಲ್ಲ!

ಮೋದಿಯ ವಿದೇಶಿ ನೆರವು!
ವಿದೇಶಗಳಿಗೆ ಹೋದಾಗ ಆ ದೇಶಗಳೊಂದಿಗೆ ರೈಲ್ವೇ ನವೀಕರಣ, ಅಭಿವೃದ್ಧಿಯ ಯೋಜನೆಗಳಿಗೆ ಮೋದಿ ಸಾಹೇಬರು ಸಹಿ ಹಾಕಿದ್ದಷ್ಟೇ ಬಂತು. ಯಾವವೂ ಅನುಷ್ಠಾನಕ್ಕೆ ಬgಲೇ ಇಲ್ಲ. ಏಪ್ರಿಲ್ 2015ರಲ್ಲಿ, ಫ್ರಾನ್ಸ್, ಮೇ 2015ರಲ್ಲಿ ಚೀನಾ ಮತ್ತು ಅಕ್ಟೋಬರ್ 2018ರಲ್ಲಿ ರಷ್ಯಾಗಳಿಗೆ ಭೇಟಿ ನೀಡಿದಾಗ ಮೋದಿ ರೈಲ್ವೇ ಅಭಿವೃದ್ಧಿಗೆ ಆ ದೇಶಗಳ ಜೊತೆಗೆ ಒಪ್ಪಂದ (ಒoU)ಗಳನ್ನು ಮಾಡಿಕೊಂಡು ಬಂದಿದ್ದರು. ಅವೆಲ್ಲ ಬರೀ ಶೋ ಆಗಿದ್ದವಷ್ಟೇ!
ಒಟ್ಟಿನಲ್ಲಿ ರೈಲ್ವೇ ವ್ಯವಸ್ಥೆಯನ್ನೇ ಹಳಿ ತಪ್ಪಿಸಿದ ಮೋದಿ ಸರ್ಕಾರ, ಕಾಲಕಾಲಕ್ಕೆ ಭಾರಿ ಸುಧಾರಣೆ ಎಂಬ ಹೆಡ್‍ಲೈನ್ಸ್ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತ ಬಂದಿದೆ.
(ಕೃಪೆ: ಡೆಕ್ಕನ್ ಹೆರಾಲ್ಡ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...