Homeಮುಖಪುಟನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಕೇಂದ್ರದ ವಿರುದ್ಧ ರಾಹುಲ್ ಕಿಡಿ

ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಕೇಂದ್ರದ ವಿರುದ್ಧ ರಾಹುಲ್ ಕಿಡಿ

ಕೊರೊನಾ ಲಾಕ್‌ಡೌನ್ ವೇಳೆ ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ತಿಳಿಸಿದೆ.

- Advertisement -
- Advertisement -

ನಿನ್ನೆ ಆರಂಭವಾಗಿರುವ ಸಂಸತ್ ಅಧಿವೇಶನದಲ್ಲಿ “ಲಾಕ್‌ಡೌನ್ ಸಮಯದಲ್ಲಿ ತಮ್ಮೂರುಗಳಿಗೆ ತಲುಪಲು ನಡೆಯುತ್ತಲೇ ಪ್ರಾಣಬಿಟ್ಟ ವಲಸೆ ಕಾರ್ಮಿಕರ ಮಾಹಿತಿ ನಮ್ಮ ಬಳಿ ಇಲ್ಲ” ಎಂದು ಉತ್ತರಿಸಿದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ. ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಲಾಕ್‌ಡೌನ್ ಸಮಯದಲ್ಲಿ ಎಷ್ಟು ಜನ ವಲಸೆ ಕಾರ್ಮಿಕರು ಮೃತಪಟ್ಟರು, ಎಷ್ಟು ಜನ ಉದ್ಯೋಗ ಕಳೆದುಕೊಂಡರು ಎಂಬುದು ಮೋದಿ ಸರ್ಕಾರಕ್ಕೆ ತಿಳಿದಿಲ್ಲ. ನೀವು ಲೆಕ್ಕ ಹಾಕಿಲ್ಲದಿದ್ದರಿಂದ ಯಾರು ಮೃತಪಟ್ಟಿಲ್ಲವೆ? ಅವರು ಸಾಯುತ್ತಿರುವುದನ್ನು ಇಡೀ ಪ್ರಪಂಚವೇ ನೋಡಿದೆ. ಆದರೆ ಮೋದಿ ಸರ್ಕಾರಕ್ಕೆ ಮಾತ್ರ ಅದರ ಬಗ್ಗೆ ತಿಳಿದಿರಲಿಲ್ಲ. ಜನರ ಜೀವಗಳ ಬಗ್ಗೆ ಈ ಸರ್ಕಾರ ಕಾಳಜಿ ವಹಿಸದಿರುವುದು ದುಃಖದ ವಿಷಯ” ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್ 24ರ ರಾತ್ರಿ ಕೇವಲ ನಾಲ್ಕು ಗಂಟೆಗಳ ಸಮಯ ನೀಡಿ ಏಕಾಏಕಿ ಲಾಕ್‌ಡೌನ್ ವಿಧಿಸಿದ್ದರು. ಉದ್ಯೋಗವೂ ಇಲ್ಲದೆ, ಯಾವುದೇ ಸಾರಿಗೆ ವ್ಯವಸ್ಥೆ ಇಲ್ಲದಿದ್ದರೂ ಲಕ್ಷಾಂತರ ವಲಸೆ ಕಾರ್ಮಿಕರು ಮಹಾನಗರಗಳಿಂದ ತಮ್ಮ ಸ್ವಂತ ಊರುಗಳಿಗೆ ಉರಿವ ಬಿಸಿಲಿನ ನಡುವೆ ಕಾಲ್ನಡಿಗೆಯಲ್ಲಿ ಹೊರಟಿದ್ದರು. ಈ ವೇಳೆ ಊಟ-ನೀರು ಸಿಗದೇ ಸಾವಿರಾರು ಜನ ಮೃತಪಟ್ಟಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು.

ಈ ಕುರಿತು ಸಂಸತ್ ಸದಸ್ಯರೊಬ್ಬರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ “ಕೊರೊನಾ ಲಾಕ್‌ಡೌನ್ ವೇಳೆ ದೇಶದ ಹೆದ್ದಾರಿಗಳಲ್ಲಿ ರಕ್ತ ಸುರಿಸುತ್ತಾ ತಮ್ಮ ಮನೆಗೆ ಹೊರಟವರಲ್ಲಿ, ಮೃತಪಟ್ಟ ವಲಸಿಗರ ಕುರಿತು ತನ್ನ ಬಳಿ ಯಾವುದೇ ಮಾಹಿತಿ ಇಲ್ಲ. ಆದ್ದರಿಂದ ಮೃತಪಟ್ಟ ಕುಟುಂಬಕ್ಕೆ ಪರಿಹಾರ ಒದಗಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ತಿಳಿಸಿದೆ.

ಈ ಕುರಿತು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ರಾಹುಲ್ ಗಾಂಧಿ “ಕೊರೊನಾ ನಿರ್ವಹಣೆಯಲ್ಲಿ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ವಲಸೆ ಕಾರ್ಮಿಕರನ್ನು ಕೀಳಾಗಿ ನಡೆಸಿಕೊಂಡಿದೆ” ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಲಾಕ್‌‌ಡೌನ್‌ ಸಮಯದಲ್ಲಿ ಮೃತಪಟ್ಟ ವಲಸಿಗರ ಮಾಹಿತಿ ಇಲ್ಲ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...