Homeಮುಖಪುಟಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆರೋಪಿಸಿದೆ. ಪಕ್ಷದ ಮುಖವಾಣಿ ಸಾಮ್ನಾ ತನ್ನ ಭಾನುವಾರದ ಸಂಪಾದಕೀಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಒಕ್ಕೂಟ ಸರ್ಕಾರ ನಡೆಸುತ್ತಿರುವ ಕಚ್ಚಾಟಗಳನ್ನು ಉಲ್ಲೇಖಿಸಿದೆ.

“ಒಕ್ಕೂಟ-ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಜಗಳವು ಒಕ್ಕೂಟ ಆಡಳಿತ ವ್ಯವಸ್ಥೆಗೆ ಒಂದು ಸವಾಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಮುಗಿದ ಚುನಾವಣೆಯಲ್ಲಿ ಬಿಜೆಪಿ ತನ್ನ ಸೋಲಿನಿಂದಾಗಿ ತೀವ್ರ ನೋವನ್ನು ಅನುಭವಿಸಿದೆ ಎಂಬುದು ನಿಜ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್‌ ತಮ್ಮ ಸಾಪ್ತಾಹಿಕ ಅಂಕಣ ‘ರೋಕ್‌ಥಾಕ್’ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ಅವರ ವಿಚಾರವಾಗಿ ಬಂಗಾಳ ಮತ್ತು ಒಕ್ಕೂಟ ಸರ್ಕಾರದ ನಡುವಿನ ಜಗಳವು ‘‘ಸಾರ್ವಜಿನಿಕ ನಳ್ಳಿ ನೀರಿಗಾಗಿ, ಗಲಾಟೆ ಮಾಡುತ್ತಿರುವ ಮಹಿಳೆಯರ ರೀತಿಯಲ್ಲಿ ಕಾಣುತ್ತಿದೆ’’ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಲಪನ್‌ ಬಂದೋಪಾಧ್ಯಾಯ ಅವರು ಮೇ 28 ರಂದು ಕಲೈಕುಂಡ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಿಗದಿತ ಸಭೆಯನ್ನು ಕೈಬಿಡಲು ನಿರ್ಧರಿಸಿದ ನಂತರ ಬಂದೋಪಾಧ್ಯಾಯ ಅವರು ರಾಜಕೀಯ ಕಚ್ಚಾಟದ ನಡುವೆ ಸಿಲುಕಿ ಬಿದ್ದರು. ಅವರನ್ನು ಒಕ್ಕೂಟ ಸರ್ಕಾರದ ಸೇವೆಗೆ ಹಿಂತಿರುಗಬೇಕೆಂದು ಒಕ್ಕೂಟ ಸರ್ಕಾರ ಹೇಳಿದಾಗ ತನ್ನ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ ಬಂದೋಪಾಧ್ಯಾಯ ಸಿಎಂ ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ಕರ್ತವ್ಯ ವಹಿಸಿಕೊಂಡರು. ಇದರ ನಂತರ ಅವರಿಗೆ ಒಕ್ಕೂಟ ಸರ್ಕಾರವು ಪ್ರಧಾನಿಯೊಂದಿಗಿನ ಸಭೆಗೆ ಭಾಗವಹಿಸದೆ ಇರಲು ಕಾರಣವೇನೆಂದು ತಿಳಿಸಲು ಶೋಕಾಸ್‌ ನೋಟಿಸ್‌ ಕೂಡಾ ನೀಡಿತ್ತು.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ರಾಜ್ಯಸಭೆಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರನ್ನು ಮತ್ತೆ ರಾಜ್ಯಸಭೆಗೆ ಮರುನಾಮಕರಣ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ ಎಂದು ರಾವತ್‌ ಹೇಳಿದ್ದಾರೆ.

ಸ್ವಪನ್ ದಾಸ್‌ಗುಪ್ತಾ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾಗಿ ಮಾರ್ಚ್‌ನಲ್ಲಿ ಮೇಲ್ಮನೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

“ದಾಸ್‌ಗುಪ್ತಾ ಅವರನ್ನು ರಾಷ್ಟ್ರಪತಿಗಳು ನಾಮಕರಣ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ವ್ಯಕ್ತಿ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದರು. ಆದರೆ ಅವರು ಸೋಲನುಭವಿಸಿದರು. ಇದಾಗಿ ಮತ್ತೆ ಒಂದು ತಿಂಗಳೊಳಗೆ ಅವರನ್ನು ನಾಮಕರಣ ಮಾಡಲಾಯಿತು. ಈ ರೀತಿಯ ಘಟನೆಯು ರಾಜ್ಯಸಭೆಯ ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ” ಎಂದು ರಾವತ್‌ ಹೇಳಿದ್ದಾರೆ.

ರಾಷ್ಟ್ರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ನಿಭಾಯಿಸುವ ಬದಲು ಸೆಂಟ್ರಲ್‌ ವಿಸ್ಟಾ ಯೋಜನೆಗೆ ಸಮಯ ಮತ್ತು ಹಣವನ್ನು ವ್ಯಯಿಸುತ್ತಿದೆ ಎಂದು ರಾವತ್‌ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮತ್ತು ಉಪರಾಷ್ಟ್ರಪತಿಗೆ ಹೊಸ ನಿವಾಸಗಳನ್ನು ನಿರ್ಮಿಸುವತ್ತ ಒಕ್ಕೂಟ ಸರ್ಕಾರ ಗಮನ ಹರಿಸಿದೆ. ಈ ಇಬ್ಬರು ಹೊಸ ಮನೆಗಳನ್ನು ಪಡೆಯುತ್ತಾರೆ, ಆದರೆ ನಾಗರಿಕರ ಕತೆ ಏನು? ನಾಗರಿಕರು ಬಡತನಕ್ಕೆ ಜಾರಿದ್ದಾರೆ. 2020 ರ ಏಪ್ರಿಲ್‌ನಲ್ಲಿ ಕೊರೊನಾ ಕಾರಣದಿಂದಾಗಿ 130 ದಶಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....