Homeಮುಖಪುಟಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

ಮೋದಿ ಸರ್ಕಾರ ‘ಥರ್ಡ್‌ ಕ್ಲಾಸ್‌’ ರಾಜಕಾರಣ ಮಾಡುತ್ತಿದೆ: ಶಿವಸೇನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ರಾಷ್ಟ್ರದ ಸಮಸ್ಯೆಗಳನ್ನು ಪರಿಹರಿಸುವ ಬದಲು ‘ಥರ್ಡ್‌ ಕ್ಲಾಸ್‌’ ರಾಜಕಾರಣದಲ್ಲಿ ತೊಡಗಿದೆ ಎಂದು ಮಹಾರಾಷ್ಟ್ರದ ಶಿವಸೇನೆ ಆರೋಪಿಸಿದೆ. ಪಕ್ಷದ ಮುಖವಾಣಿ ಸಾಮ್ನಾ ತನ್ನ ಭಾನುವಾರದ ಸಂಪಾದಕೀಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರದೊಂದಿಗೆ ಒಕ್ಕೂಟ ಸರ್ಕಾರ ನಡೆಸುತ್ತಿರುವ ಕಚ್ಚಾಟಗಳನ್ನು ಉಲ್ಲೇಖಿಸಿದೆ.

“ಒಕ್ಕೂಟ-ರಾಜ್ಯ ಸರ್ಕಾರದ ನಡುವೆ ನಡೆಯುತ್ತಿರುವ ಜಗಳವು ಒಕ್ಕೂಟ ಆಡಳಿತ ವ್ಯವಸ್ಥೆಗೆ ಒಂದು ಸವಾಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಇತ್ತೀಚೆಗಷ್ಟೇ ಮುಗಿದ ಚುನಾವಣೆಯಲ್ಲಿ ಬಿಜೆಪಿ ತನ್ನ ಸೋಲಿನಿಂದಾಗಿ ತೀವ್ರ ನೋವನ್ನು ಅನುಭವಿಸಿದೆ ಎಂಬುದು ನಿಜ” ಎಂದು ಶಿವಸೇನೆ ಸಂಸದ ಸಂಜಯ್ ರಾವತ್‌ ತಮ್ಮ ಸಾಪ್ತಾಹಿಕ ಅಂಕಣ ‘ರೋಕ್‌ಥಾಕ್’ನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಟಿಎಂಸಿ ಮುಖಂಡರ ಭೇಟಿ – ಬಂಗಾಳದ ಬಿಜೆಪಿ ನಾಯಕ ರಾಜೀಬ್‌ ಬ್ಯಾನರ್ಜಿ ಮತ್ತೆ ಟಿಎಂಸಿಗೆ?

ಪಶ್ಚಿಮ ಬಂಗಾಳದ ಮಾಜಿ ಮುಖ್ಯ ಕಾರ್ಯದರ್ಶಿ ಅಲಪನ್ ಬಂದೋಪಾಧ್ಯಾಯ ಅವರ ವಿಚಾರವಾಗಿ ಬಂಗಾಳ ಮತ್ತು ಒಕ್ಕೂಟ ಸರ್ಕಾರದ ನಡುವಿನ ಜಗಳವು ‘‘ಸಾರ್ವಜಿನಿಕ ನಳ್ಳಿ ನೀರಿಗಾಗಿ, ಗಲಾಟೆ ಮಾಡುತ್ತಿರುವ ಮಹಿಳೆಯರ ರೀತಿಯಲ್ಲಿ ಕಾಣುತ್ತಿದೆ’’ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಅಲಪನ್‌ ಬಂದೋಪಾಧ್ಯಾಯ ಅವರು ಮೇ 28 ರಂದು ಕಲೈಕುಂಡ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ನಿಗದಿತ ಸಭೆಯನ್ನು ಕೈಬಿಡಲು ನಿರ್ಧರಿಸಿದ ನಂತರ ಬಂದೋಪಾಧ್ಯಾಯ ಅವರು ರಾಜಕೀಯ ಕಚ್ಚಾಟದ ನಡುವೆ ಸಿಲುಕಿ ಬಿದ್ದರು. ಅವರನ್ನು ಒಕ್ಕೂಟ ಸರ್ಕಾರದ ಸೇವೆಗೆ ಹಿಂತಿರುಗಬೇಕೆಂದು ಒಕ್ಕೂಟ ಸರ್ಕಾರ ಹೇಳಿದಾಗ ತನ್ನ ಕೆಲಸಕ್ಕೆ ರಾಜೀನಾಮೆ ಸಲ್ಲಿಸಿದ ಬಂದೋಪಾಧ್ಯಾಯ ಸಿಎಂ ಮಮತಾ ಬ್ಯಾನರ್ಜಿಯ ಮುಖ್ಯ ಸಲಹೆಗಾರರಾಗಿ ಕರ್ತವ್ಯ ವಹಿಸಿಕೊಂಡರು. ಇದರ ನಂತರ ಅವರಿಗೆ ಒಕ್ಕೂಟ ಸರ್ಕಾರವು ಪ್ರಧಾನಿಯೊಂದಿಗಿನ ಸಭೆಗೆ ಭಾಗವಹಿಸದೆ ಇರಲು ಕಾರಣವೇನೆಂದು ತಿಳಿಸಲು ಶೋಕಾಸ್‌ ನೋಟಿಸ್‌ ಕೂಡಾ ನೀಡಿತ್ತು.

ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ರಾಜ್ಯಸಭೆಯ ಮಾಜಿ ಸಂಸದ ಸ್ವಪನ್ ದಾಸ್‌ಗುಪ್ತಾ ಅವರನ್ನು ಮತ್ತೆ ರಾಜ್ಯಸಭೆಗೆ ಮರುನಾಮಕರಣ ಮಾಡಿರುವುದು ಹೊಸ ಬೆಳವಣಿಗೆಯಾಗಿದೆ ಎಂದು ರಾವತ್‌ ಹೇಳಿದ್ದಾರೆ.

ಸ್ವಪನ್ ದಾಸ್‌ಗುಪ್ತಾ ಅವರು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೇಕಾಗಿ ಮಾರ್ಚ್‌ನಲ್ಲಿ ಮೇಲ್ಮನೆಗೆ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಕೊರೋನಾಗೆ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡು ಅನಾಥವಾದ ರಾಜ್ಯದ 42 ಮಕ್ಕಳು

“ದಾಸ್‌ಗುಪ್ತಾ ಅವರನ್ನು ರಾಷ್ಟ್ರಪತಿಗಳು ನಾಮಕರಣ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಈ ವ್ಯಕ್ತಿ ರಾಜ್ಯಸಭೆಗೆ ರಾಜೀನಾಮೆ ನೀಡಿದ್ದರು. ಆದರೆ ಅವರು ಸೋಲನುಭವಿಸಿದರು. ಇದಾಗಿ ಮತ್ತೆ ಒಂದು ತಿಂಗಳೊಳಗೆ ಅವರನ್ನು ನಾಮಕರಣ ಮಾಡಲಾಯಿತು. ಈ ರೀತಿಯ ಘಟನೆಯು ರಾಜ್ಯಸಭೆಯ ಇತಿಹಾಸದಲ್ಲಿ ಎಂದಿಗೂ ಸಂಭವಿಸಿಲ್ಲ” ಎಂದು ರಾವತ್‌ ಹೇಳಿದ್ದಾರೆ.

ರಾಷ್ಟ್ರ ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳನ್ನು ನಿಭಾಯಿಸುವ ಬದಲು ಸೆಂಟ್ರಲ್‌ ವಿಸ್ಟಾ ಯೋಜನೆಗೆ ಸಮಯ ಮತ್ತು ಹಣವನ್ನು ವ್ಯಯಿಸುತ್ತಿದೆ ಎಂದು ರಾವತ್‌ ಒಕ್ಕೂಟ ಸರ್ಕಾರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಪ್ರಧಾನಿ ಮತ್ತು ಉಪರಾಷ್ಟ್ರಪತಿಗೆ ಹೊಸ ನಿವಾಸಗಳನ್ನು ನಿರ್ಮಿಸುವತ್ತ ಒಕ್ಕೂಟ ಸರ್ಕಾರ ಗಮನ ಹರಿಸಿದೆ. ಈ ಇಬ್ಬರು ಹೊಸ ಮನೆಗಳನ್ನು ಪಡೆಯುತ್ತಾರೆ, ಆದರೆ ನಾಗರಿಕರ ಕತೆ ಏನು? ನಾಗರಿಕರು ಬಡತನಕ್ಕೆ ಜಾರಿದ್ದಾರೆ. 2020 ರ ಏಪ್ರಿಲ್‌ನಲ್ಲಿ ಕೊರೊನಾ ಕಾರಣದಿಂದಾಗಿ 130 ದಶಲಕ್ಷ ಜನರು ಉದ್ಯೋಗ ಕಳೆದುಕೊಂಡಿದ್ದಾರೆ” ಎಂದು ರಾವತ್‌ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದ ದೆಹಲಿ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...