Homeಕರ್ನಾಟಕಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ – ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ತಮ್ಮ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.

ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡಾ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಡಿ-ಇಡಿ ದಾಳಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ” ಎಂದಿದ್ದಾರೆ.

ತಮ್ಮ ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಕೇಂದ್ರ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್‌ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು

ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ರಾಜ್ಯ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ” ಎಂದು ಕಿಚಾಯಿಸಿದ್ದಾರೆ.

”ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಷಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಕಾರ್ಕಳ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದಿದ್ದಾರೆ.

”ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

”ಕಾರ್ಪೊರೆಟ್‌ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...