Homeಕರ್ನಾಟಕಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

ಪಂಚರಾಜ್ಯ ಚುನಾವಣೆಯ ಸೋಲಿನ ಭಯದಿಂದ ಮೋದಿ ಸರ್ಕಾರ ಐಟಿ ದಾಳಿ ನಡೆಸುತ್ತಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಪಂಚರಾಜ್ಯಗಳಲ್ಲಿನ ಚುನಾವಣೆ ಸೋಲಿನ ಭಯ ಮತ್ತು ಶ್ರೀಮಂತ ಉದ್ಯಮಿ – ಗುತ್ತಿಗೆದಾರರನ್ನು ಬ್ಲಾಕ್ ಮೇಲ್ ಮಾಡುವ ದುರುದ್ದೇಶದ ಕಾರಣಕ್ಕಾಗಿಯೇ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕವೂ ಸೇರಿದಂತೆ ದೇಶದಾದ್ಯಂತ ಐಟಿ- ಇಡಿ ದಾಳಿಗಳನ್ನು ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ”ತಮ್ಮ ದುರುದ್ದೇಶ ಮತ್ತು ಭ್ರಷ್ಟತೆಯನ್ನು ಮುಚ್ಚಿಕೊಳ್ಳುವುದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ ನಡೆಸಲಾಗುತ್ತಿರುವ ಐಟಿ ದಾಳಿಗಳು ಮತ್ತು ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಸಂಬಂಧ ಇಲ್ಲ, ಈ ಬಗ್ಗೆ ಯಾವುದಾದರೂ ಪುರಾವೆಗಳಿದ್ದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಲು ಅವರು ಸ್ವತಂತ್ರರಿದ್ದಾರೆ. ತೆರಿಗೆ ವಂಚಕರ ವಿರುದ್ಧದ ಕ್ರಮಗಳನ್ನು ನಾವು ಸ್ವಾಗತಿಸುತ್ತೇವೆ” ಎಂದಿದ್ದಾರೆ.

ಗುತ್ತಿಗೆದಾರರು ಖೊಟ್ಟಿ ಖರೀದಿ ರಸೀದಿಗಳು ಮತ್ತು ಉಪಗುತ್ತಿಗೆದಾರರಿಂದ ಅಪ್ರಾಮಾಣಿಕವಾದ ಖರ್ಚುವೆಚ್ಚದ ದಾಖಲೆಗಳ ಮೂಲಕ ಅದಾಯವನ್ನು ಕಡಿಮೆಗೊಳಿಸಿ ತೆರಿಗೆ ವಂಚನೆ ಮಾಡಿರುವುದು ದಾಳಿಯಲ್ಲಿ ಪತ್ತೆಯಾಗಿದೆ ಎಂದು ಐಟಿ ಇಲಾಖೆಯೇ ತನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಯಾವುದೇ ರಾಜಕೀಯ ಪಕ್ಷದ ಜೊತೆಗಿನ ವ್ಯವಹಾರದ ಬಗ್ಗೆ ಉಲ್ಲೇಖವನ್ನು ಇಲಾಖೆಯೇ ಮಾಡದೆ ಇರುವಾಗ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಎದೆ ಬಡಿದುಕೊಂಡು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿರುವುದು ಯಾಕೆ? ಇವರದ್ದೇ ಸರ್ಕಾರದ ವರಮಾನ ತೆರಿಗೆ ಇಲಾಖೆಯ ಮೇಲೆಯೂ ಇವರಿಗೆ ನಂಬಿಕೆ ಇಲ್ಲವೇ?” ಎಂದು ಪ್ರಶ್ನೆ ಮಾಡಿದ್ದಾರೆ.

”ಪಂಚರಾಜ್ಯಗಳಲ್ಲಿ ಮಾತ್ರವಲ್ಲ ಮುಂದಿನ ಲೋಕಸಭಾ ಚುನಾವಣೆಯಲ್ಲಿಯೂ ಬಿಜೆಪಿಯ ಸೋಲು ಬಹುತೇಕ ಖಾತರಿಯಾಗಿರುವ ಕಾರಣ ಬಿಜೆಪಿಗೆ ಹಿಂದಿನಂತೆ ಹಣ ಸಂಗ್ರಹವಾಗುತ್ತಿಲ್ಲ, ಕರ್ನಾಟಕದಲ್ಲಿ 40% ಕಮಿಷನ್ ನ ಬಹುದೊಡ್ಡ ಮೂಲ ಕೂಡಾ ನಿಂತುಹೋಗಿದೆ. ಇದಕ್ಕಾಗಿ ಶ್ರೀಮಂತ ಉದ್ಯಮಿಗಳು ಮತ್ತು ಗುತ್ತಿಗದಾರರನ್ನು ಬ್ಲಾಕ್ ಮೇಲ್ ಮಾಡಿ ಬೆದರಿಸಿ ಹಣ ವಸೂಲಿ ಮಾಡಲು ಐಡಿ-ಇಡಿ ದಾಳಿ ನಡೆಸಲಾಗುತ್ತಿದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

”ಇತ್ತೀಚಿನ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿದರೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಶತಸಿದ್ದ. ತನ್ನ ಸೋಲಿಗೆ ಕಾರಣ ಹೇಳಲು ಬಿಜೆಪಿ ಈಗಲೇ ಕುಂಟುನೆಪಗಳನ್ನು ಹುಡುಕುತ್ತಿದೆ. ಕಾಂಗ್ರೆಸ್ ಪಕ್ಷದ ದುಡ್ಡಿನಬಲದಿಂದಾಗಿ ನಾವು ಸೋತುಹೋದೆವು ಎಂದು ಚುನಾವಣೆಯ ಮರುದಿನ ಬಿಜೆಪಿಯಿಂದ ಹೇಳಿಕೆ ಬಂದರೆ ಯಾರೂ ಆಶ್ಚರ್ಯಪಡಬೇಕಾಗಿಲ್ಲ” ಎಂದಿದ್ದಾರೆ.

ತಮ್ಮ ಚುನಾವಣಾ ರಾಜಕೀಯಕ್ಕಾಗಿ ಯಾವ ಪಕ್ಷ ಹಣ ದೋಚುವುದರಲ್ಲಿ ತೊಡಗಿದೆ ಎನ್ನುವುದು ಚುನಾವಣಾ ಬಾಂಡ್ ಗಳ ಮೂಲಕ ಕೇಂದ್ರ ಬಿಜೆಪಿ ಸಂಗ್ರಹಿಸಿದ ಹಣದ ವಿವರವೇ ಸಾಕ್ಷಿಯಾಗಿದೆ. ಮಾರ್ಚ್‌ 2018ರಿಂದ ಜನವರಿ 2023ರ ವರೆಗಿನ ಅವಧಿಯಲ್ಲಿ 12,008 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಗಳು ಮಾರಾಟವಾಗಿದ್ದು ಅದರಲ್ಲಿ ಬಿಜೆಪಿಗೆ ಸೇರಿರುವ ಬಾಂಡ್ ಗಳ ಒಟ್ಟು ಮೌಲ್ಯ 5272 ಕೋಟಿ ರೂಪಾಯಿ. ಈ ಹಣವನ್ನು ಉದ್ಯಮಿಗಳು ಸ್ವಯಿಚ್ಚೆಯಿಂದ ನೀಡಿದರೇ? ಇಲ್ಲವೇ ಬ್ಲಾಕ್ ಮೇಲ್ ನಡೆಸಲಾಗಿತ್ತೇ? ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಹೆಚ್‌ಡಿಕೆ, ನಿಖಿಲ್‌ರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟಿಸಿದ್ದಾರೆ ಎಂಬುದು ಸುಳ್ಳು

ಕೋಟ್ಯಂತರ ರೂಪಾಯಿ ಲಂಚ ಹೊಡೆಯುತ್ತಿದ್ದಾಗಲೆ ಸಿಕ್ಕಿಬಿದ್ದ ಶಾಸಕ ಮಾಡಾಳು ವಿರೂಪಾಕ್ಷಪ್ಪ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾದಾಗ ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ನಡೆಸಿದ್ದ ರಾಜ್ಯ ಬಿಜೆಪಿ ನಾಯಕರು ಈಗ ಯಾವುದೋ ಖಾಸಗಿ ಗುತ್ತಿಗೆದಾರನ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ನಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ಈ ನೈತಿಕತೆ ಬಿಜೆಪಿಗೆ ಇದೆಯೇ?” ಎಂದು ಪ್ರಶ್ನಿಸಿದ್ದಾರೆ.

ರಾಜ್ಯದಲ್ಲಿನ ಭ್ರಷ್ಟಾಚಾರದ ಇತಿಹಾಸವನ್ನು ತಿರುವಿಹಾಕಿದರೆ ಪುಟಪುಟಗಳಲ್ಲಿಯೂ ಬಿಜೆಪಿ ನಾಯಕರ ಮುಖಾರವಿಂದಗಳನ್ನು ಕಾಣಬಹುದಾಗಿದೆ. ಮಾಜಿ ಮುಖ್ಯಮಂತ್ರಿಗಳಾಧ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಕೃಷ್ಣಯ್ಯ ಶೆಟ್ಟಿ, ಮಾಜಿ ಶಾಸಕ ಸಂಪಂಗಿಯಿಂದ ಹಿಡಿದು ಇತ್ತೀಚಿನ ಮಾಡಾಳು ವಿರೂಪಾಕ್ಷಪ್ಪನವರ ವರೆಗೆ ರಾಜ್ಯ ಬಿಜೆಪಿ ನಾಯಕರೆಲ್ಲರೂ ಭ‍್ರಷ್ಟಾಚಾರದ ಆರೋಪದಲ್ಲಿ ಜೈಲು ಸೇರಿದವರಾಗಿದ್ದಾರೆ. ಇವರು ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ, ನಗೆಪಾಟಲಿಗೀಡಾಗಿದ್ದಾರೆ” ಎಂದು ಕಿಚಾಯಿಸಿದ್ದಾರೆ.

”ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಮುನಿರತ್ನ, ಡಾ.ಸುಧಾಕರ್ ಮತ್ತು ಬಿ.ಸಿ.ಪಾಟೀಲ್ ಮೇಲೆ 40% ಕಮಿಷನ್ ಆರೋಪ ಇದೆ. ಬಿಟ್ ಕಾಯಿನ್ ಹಗರಣದದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೆಸರು ಕೇಳಿಬಂದಿದೆ. ಪಿಎಸ್ ಐ ನೇಮಕಾತಿ ಹಗರಣದಲ್ಲಿ ಡಾ.ಅಶ್ವತನಾರಾಯಣ, ಬಿ.ವೈ.ವಿಜಯೇಂದ್ರ ಮತ್ತು ಆರಗ ಜ್ಞಾನೇಂದ್ರ ಷಾಮೀಲಾಗಿರುವ ಆರೋಪ ಎದುರಿಸುತ್ತಿದ್ದಾರೆ. ಚುನಾವಣಾ ಟಿಕೆಟ್ ವಂಚನೆ ಪ್ರಕರಣದಲ್ಲಿ ಬಿ.ಎಲ್.ಸಂತೋಷ್, ಸುನೀಲ್ ಕುಮಾರ್ ಕಾರ್ಕಳ ಮತ್ತು ಸಿ.ಟಿ.ರವಿ ಅವರ ಹೆಸರುಗಳನ್ನು ಆರೋಪಿಗಳೇ ಉಲ್ಲೇಖಿಸಿದ್ದಾರೆ. ಇವರೆಲ್ಲರೂ ಸೇರಿ ನಮ್ಮ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದವಾಗಿದೆ” ಎಂದಿದ್ದಾರೆ.

”ಗುತ್ತಿಗೆದಾರರೊಬ್ಬರನ್ನು ಹಣಕ್ಕಾಗಿ ಪೀಡಿಸಿ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದ್ದ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪನವರು ಮತ್ತು ಭ್ರಷ್ಟಾಚಾರದ ಆರೋಪದ ಮೇಲೆಯೇ ಜೈಲಿಗೆ ಹೋಗಿ ಬಂದಿರುವ ಬಿ.ಎಸ್.ಯಡಿಯೂರಪ್ಪನವರು ಮತ್ತು ಅವರ ಮಗ ಕೂಡಾ ಸತ್ಯಹರಿಶ್ಚಂದ್ರನಂತೆ ಮಾತನಾಡುತ್ತಿರುವುದು ತಮಾಷೆಯಾಗಿ ಕಾಣುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

”ಕಾರ್ಪೊರೆಟ್‌ ಭ್ರಷ್ಟಾಚಾರದ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಲೂಟಿ ಹೊಡೆದು ದೇಶವನ್ನೇ ಅದಾನಿ ಕೈಗೆ ಒತ್ತೆಯಿಟ್ಟಿರುವ ಈ ಬಿಜೆಪಿಗರು ಇಂದು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದೇ ದೊಡ್ಡ ಕುಚೋದ್ಯ! ಅದಾನಿ ಎನ್ನುವ ಉದ್ಯಮಿಯ ಒಂದೊಂದು ಹಗರಣಗಳು ಲಕ್ಷ ಕೋಟಿಗಳನ್ನು ದಾಟುತ್ತಿವೆ! ಸಾವಿರ ಕೋಟಿಗಳ ಅವ್ಯವಹಾರಕ್ಕೆ ಲೆಕ್ಕವೇ ಇಲ್ಲವಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಪಕ್ಷ ಕೇಳಿರುವ ನೂರು ಪ್ರಶ್ನೆಗಳಲ್ಲಿ ಒಂದಕ್ಕೂ ಉತ್ತರ ಹೇಳಲು ಬಿಜೆಪಿಯ ನಾಯಕರಿಗೆ, ವಿಶೇಷವಾಗಿ ಮೋದಿಯವರಿಗೆ ಈವರೆಗೆ ಸಾಧ್ಯವಾಗಿಲ್ಲ” ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...