Homeಮುಖಪುಟಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮಾದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ ಕಾಯಿದೆ, 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

1955ರ ಭಾರತೀಯ ಪೌರತ್ವ ಕಾಯ್ದೆಯ ಪ್ರಕಾರ, ಸಾಗರೋತ್ತರ ಭಾರತೀಯ ಸಂಜಾತರು (ಓವರ್ ಸೀಸ್ ಸಿಟಿಜೆನ್ಸ್ ಆಫ್ ಇಂಡಿಯಾ – ಓಐಸಿ) ಭಾರತೀಯ ಮೂಲದವರಾಗಿದ್ದರೆ ಅವರು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿ ಪೌರತ್ವ ಪಡೆಯಬಹುದು. ಅದಲ್ಲದೆ, ಅವರು ಭಾರತೀಯ ಮೂಲದವರನ್ನು ವಿವಾಹವಾಗಿದ್ದರೆ ಅಂಥವರೂ ಸಹ ಭಾರತೀಯ ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಅಂಥವರು ಭಾರತಕ್ಕೆ ಬಂದು ನೆಲೆಸಲು, ಇಲ್ಲಿ ಶಿಕ್ಷಣವನ್ನು ಪಡೆಯಲು ಅಥವಾ ಉದ್ಯೋಗಗಳನ್ನು ಮಾಡಲು ಅವಕಾಶವಿರುತ್ತದೆ. ಇಂಥವರಿಗಾಗಿ ಓಐಸಿ ಕಾರ್ಡ್ ಗಳನ್ನು ನೀಡಲಾಗುತ್ತದೆ. 2019ರ ತಿದ್ದುಪಡಿಯಲ್ಲಿ, ಹೀಗೆ, ಸಾಗರೋತ್ತರ ಭಾರತೀಯ ಸಂಜಾತರು, ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದಾಗ ಅಂಥವರ ಓಐಸಿ ಕಾರ್ಡ್ ಗಳನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಸಿಎಎ ಜಾರಿಗೊಳಿಸಲು ಪೋರ್ಟಲ್ ಆರಂಭ:

ಸಿಎಎ ಜಾರಿಗೊಳಿಸಲು ಕೇಂದ್ರ ಸರ್ಕಾರ ಪೋರ್ಟಲ್ ಆರಂಭಿಸಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪೌರತ್ವ ನೀಡುವ ಪ್ರಕ್ರಿಯೆಯು ಆನ್‌ಲೈನ್ ಮುಖಾಂತರ ನಡೆಯಲಿದೆ. ಅರ್ಜಿದಾರರು ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಅಲ್ಲಿ ನಮೂದಿಸಬೇಕು. ಮೂಲಗಳ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. ಬಳಿಕ ಗೃಹ ಸಚಿವಾಲಯವು ಅರ್ಜಿಯನ್ನು ಪರಿಶೀಲಿಸಿದ ನಂತರ ಅವರಿಗೆ ಪೌರತ್ವವನ್ನು ನೀಡಲಿದೆ.

2018ರಲ್ಲಿ ಸಿಎಎ ಕಾಯ್ದೆ ವಿರುದ್ಧ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಆರು ಧರ್ಮಗಳಿಗೆ ಮಾತ್ರ ಪೌರತ್ವ ಯಾಕೆ ಮತ್ತು ಮುಸ್ಲಿಮರಿಗೆ ಪೌರತ್ವ ಯಾಕಿಲ್ಲ ಎಂದು ಪೌರತ್ವ ಕಾಯ್ದೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಭಾರತದಲ್ಲಿ ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡವುದು ಸಂವಿಧಾನ ಬಾಹಿರವಾಗಿದೆ. ಇದಲ್ಲದೆ ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ  ಮುಂದಾದರೆ ನಡೆದರೆ ಏನಾಗುತ್ತದೆ ಎಂಬುದು ಜನರಲ್ಲಿ ಭಯ ನೆಲೆಯೂರಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಅದರಲ್ಲಿ ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ಅಧಿಕಾರದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...