Homeಮುಖಪುಟಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮಾದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ ಕಾಯಿದೆ, 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

1955ರ ಭಾರತೀಯ ಪೌರತ್ವ ಕಾಯ್ದೆಯ ಪ್ರಕಾರ, ಸಾಗರೋತ್ತರ ಭಾರತೀಯ ಸಂಜಾತರು (ಓವರ್ ಸೀಸ್ ಸಿಟಿಜೆನ್ಸ್ ಆಫ್ ಇಂಡಿಯಾ – ಓಐಸಿ) ಭಾರತೀಯ ಮೂಲದವರಾಗಿದ್ದರೆ ಅವರು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿ ಪೌರತ್ವ ಪಡೆಯಬಹುದು. ಅದಲ್ಲದೆ, ಅವರು ಭಾರತೀಯ ಮೂಲದವರನ್ನು ವಿವಾಹವಾಗಿದ್ದರೆ ಅಂಥವರೂ ಸಹ ಭಾರತೀಯ ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಅಂಥವರು ಭಾರತಕ್ಕೆ ಬಂದು ನೆಲೆಸಲು, ಇಲ್ಲಿ ಶಿಕ್ಷಣವನ್ನು ಪಡೆಯಲು ಅಥವಾ ಉದ್ಯೋಗಗಳನ್ನು ಮಾಡಲು ಅವಕಾಶವಿರುತ್ತದೆ. ಇಂಥವರಿಗಾಗಿ ಓಐಸಿ ಕಾರ್ಡ್ ಗಳನ್ನು ನೀಡಲಾಗುತ್ತದೆ. 2019ರ ತಿದ್ದುಪಡಿಯಲ್ಲಿ, ಹೀಗೆ, ಸಾಗರೋತ್ತರ ಭಾರತೀಯ ಸಂಜಾತರು, ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದಾಗ ಅಂಥವರ ಓಐಸಿ ಕಾರ್ಡ್ ಗಳನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಸಿಎಎ ಜಾರಿಗೊಳಿಸಲು ಪೋರ್ಟಲ್ ಆರಂಭ:

ಸಿಎಎ ಜಾರಿಗೊಳಿಸಲು ಕೇಂದ್ರ ಸರ್ಕಾರ ಪೋರ್ಟಲ್ ಆರಂಭಿಸಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪೌರತ್ವ ನೀಡುವ ಪ್ರಕ್ರಿಯೆಯು ಆನ್‌ಲೈನ್ ಮುಖಾಂತರ ನಡೆಯಲಿದೆ. ಅರ್ಜಿದಾರರು ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಅಲ್ಲಿ ನಮೂದಿಸಬೇಕು. ಮೂಲಗಳ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. ಬಳಿಕ ಗೃಹ ಸಚಿವಾಲಯವು ಅರ್ಜಿಯನ್ನು ಪರಿಶೀಲಿಸಿದ ನಂತರ ಅವರಿಗೆ ಪೌರತ್ವವನ್ನು ನೀಡಲಿದೆ.

2018ರಲ್ಲಿ ಸಿಎಎ ಕಾಯ್ದೆ ವಿರುದ್ಧ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಆರು ಧರ್ಮಗಳಿಗೆ ಮಾತ್ರ ಪೌರತ್ವ ಯಾಕೆ ಮತ್ತು ಮುಸ್ಲಿಮರಿಗೆ ಪೌರತ್ವ ಯಾಕಿಲ್ಲ ಎಂದು ಪೌರತ್ವ ಕಾಯ್ದೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಭಾರತದಲ್ಲಿ ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡವುದು ಸಂವಿಧಾನ ಬಾಹಿರವಾಗಿದೆ. ಇದಲ್ಲದೆ ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ  ಮುಂದಾದರೆ ನಡೆದರೆ ಏನಾಗುತ್ತದೆ ಎಂಬುದು ಜನರಲ್ಲಿ ಭಯ ನೆಲೆಯೂರಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಅದರಲ್ಲಿ ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ಅಧಿಕಾರದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...