Homeಮುಖಪುಟಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮಾದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ ಕಾಯಿದೆ, 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

1955ರ ಭಾರತೀಯ ಪೌರತ್ವ ಕಾಯ್ದೆಯ ಪ್ರಕಾರ, ಸಾಗರೋತ್ತರ ಭಾರತೀಯ ಸಂಜಾತರು (ಓವರ್ ಸೀಸ್ ಸಿಟಿಜೆನ್ಸ್ ಆಫ್ ಇಂಡಿಯಾ – ಓಐಸಿ) ಭಾರತೀಯ ಮೂಲದವರಾಗಿದ್ದರೆ ಅವರು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿ ಪೌರತ್ವ ಪಡೆಯಬಹುದು. ಅದಲ್ಲದೆ, ಅವರು ಭಾರತೀಯ ಮೂಲದವರನ್ನು ವಿವಾಹವಾಗಿದ್ದರೆ ಅಂಥವರೂ ಸಹ ಭಾರತೀಯ ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಅಂಥವರು ಭಾರತಕ್ಕೆ ಬಂದು ನೆಲೆಸಲು, ಇಲ್ಲಿ ಶಿಕ್ಷಣವನ್ನು ಪಡೆಯಲು ಅಥವಾ ಉದ್ಯೋಗಗಳನ್ನು ಮಾಡಲು ಅವಕಾಶವಿರುತ್ತದೆ. ಇಂಥವರಿಗಾಗಿ ಓಐಸಿ ಕಾರ್ಡ್ ಗಳನ್ನು ನೀಡಲಾಗುತ್ತದೆ. 2019ರ ತಿದ್ದುಪಡಿಯಲ್ಲಿ, ಹೀಗೆ, ಸಾಗರೋತ್ತರ ಭಾರತೀಯ ಸಂಜಾತರು, ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದಾಗ ಅಂಥವರ ಓಐಸಿ ಕಾರ್ಡ್ ಗಳನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಸಿಎಎ ಜಾರಿಗೊಳಿಸಲು ಪೋರ್ಟಲ್ ಆರಂಭ:

ಸಿಎಎ ಜಾರಿಗೊಳಿಸಲು ಕೇಂದ್ರ ಸರ್ಕಾರ ಪೋರ್ಟಲ್ ಆರಂಭಿಸಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪೌರತ್ವ ನೀಡುವ ಪ್ರಕ್ರಿಯೆಯು ಆನ್‌ಲೈನ್ ಮುಖಾಂತರ ನಡೆಯಲಿದೆ. ಅರ್ಜಿದಾರರು ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಅಲ್ಲಿ ನಮೂದಿಸಬೇಕು. ಮೂಲಗಳ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. ಬಳಿಕ ಗೃಹ ಸಚಿವಾಲಯವು ಅರ್ಜಿಯನ್ನು ಪರಿಶೀಲಿಸಿದ ನಂತರ ಅವರಿಗೆ ಪೌರತ್ವವನ್ನು ನೀಡಲಿದೆ.

2018ರಲ್ಲಿ ಸಿಎಎ ಕಾಯ್ದೆ ವಿರುದ್ಧ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಆರು ಧರ್ಮಗಳಿಗೆ ಮಾತ್ರ ಪೌರತ್ವ ಯಾಕೆ ಮತ್ತು ಮುಸ್ಲಿಮರಿಗೆ ಪೌರತ್ವ ಯಾಕಿಲ್ಲ ಎಂದು ಪೌರತ್ವ ಕಾಯ್ದೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಭಾರತದಲ್ಲಿ ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡವುದು ಸಂವಿಧಾನ ಬಾಹಿರವಾಗಿದೆ. ಇದಲ್ಲದೆ ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ  ಮುಂದಾದರೆ ನಡೆದರೆ ಏನಾಗುತ್ತದೆ ಎಂಬುದು ಜನರಲ್ಲಿ ಭಯ ನೆಲೆಯೂರಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಅದರಲ್ಲಿ ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ಅಧಿಕಾರದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...