Homeಮುಖಪುಟಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

ಸಿಎಎ: ಪೌರತ್ವ ಕಾಯ್ದೆ ಏನು ಹೇಳುತ್ತದೆ?

- Advertisement -
- Advertisement -

ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ 4 ವರ್ಷಗಳ ಬಳಿಕ ಕೇಂದ್ರ ಸರ್ಕಾರ ನಿನ್ನೆ ಪೌರತ್ವ ತಿದ್ದುಪಡಿ ಕಾಯ್ದೆ ಸಿಎಎ ಜಾರಿಗೆ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ (ತಿದ್ದುಪಡಿ) ಮಸೂದೆ-2019ನ್ನು ಡಿಸೆಂಬರ್ 11, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಈ ಮಸೂದೆಯು ಪೌರತ್ವ ಕಾಯ್ದೆ-1955ನ್ನು ತಿದ್ದುಪಡಿ ಮಾಡಿದೆ. ಧರ್ಮಾದ ಆಧಾರದಲ್ಲಿ ವಿದೇಶಿ ಅಕ್ರಮ ವಲಸಿಗರನ್ನು ಭಾರತೀಯ ಪೌರತ್ವಕ್ಕೆ ಅರ್ಹರನ್ನಾಗಿ ಮಾಡಿದ್ದು, ಇದು ವ್ಯಾಪಕವಾದ ವಿರೋಧಕ್ಕೆ ಕಾರಣವಾಗಿತ್ತು.

ಪೌರತ್ವ ಕಾಯಿದೆ, 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

2019ರಲ್ಲಿ ಕೈಗೊಂಡ ತಿದ್ದುಪಡಿಯ ಪ್ರಕಾರ, ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ಬಾಂಗ್ಲಾದೇಶದಿಂದ ಭಾರತಕ್ಕೆ ವಲಸೆ ಬಂದವರಲ್ಲಿ ನಿರ್ದಿಷ್ಟ ಸಮುದಾಯಗಳಿಗೆ ಸೇರಿದವರಿಗೆ ಮಾತ್ರ ಭಾರತದ ಪೌರತ್ವ ನೀಡಬೇಕು ಎಂಬ ಅಂಶವನ್ನು ಸೇರಿಸಲಾಗಿದೆ. ಈ ಸಮುದಾಯಗಳವರು ತಮ್ಮ ದೇಶಗಳಿಂದ ಭಾರತಕ್ಕೆ ಕಾಲಿಟ್ಟ ದಿನಾಂಕದಿಂದಲೇ ಅವರಿಗೆ ಪೌರತ್ವ ಅನ್ವಯವಾಗುತ್ತದೆ. ಭಾರತದ ಕೆಲವು ಪ್ರಾಂತ್ಯಗಳಿಗೆ ಈ ತಿದ್ದುಪಡಿಯಿಂದ ವಿನಾಯ್ತಿ ನೀಡಲಾಗಿದೆ. 2019ರ ಮಸೂದೆಯಲ್ಲೇ ಅದನ್ನು ಉಲ್ಲೇಖಿಸಲಾಗಿತ್ತು. ಸಂವಿಧಾನದ 6ನೇ ಶೆಡ್ಯೂಲ್ ನಲ್ಲಿರುವ ಮೇಘಾಲಯ, ಮಿಜೋರಂ, ಅಸ್ಸಾಂ, ತ್ರಿಪುರಾದಲ್ಲಿ ವಾಸಿಸುತ್ತಿರುವ ಜನರಿಗೆ ಈ ನಿಯಮ ಅನ್ವಯವಾಗುವುದಿಲ್ಲ. 1883ರ ಬಾಂಗ್ಲಾ ಪೂರ್ವ ಗಡಿ ನಿಯಂತ್ರಣಾ ನಿಯಮಗಳಿಗೆ ಅನುಗುಣವಾಗಿ ರೂಪಿಸಲಾಗಿರುವ ಆಂತರಿಕ ಗಡಿ ರೇಖೆಯೊಳಗೆ ಜೀವಿಸುತ್ತಿರುವ ನಾಗರಿಕರಿಗೆ ಇದು ಅನ್ವಯವಾಗುವುದಿಲ್ಲ.

1955ರ ಭಾರತೀಯ ಪೌರತ್ವ ಕಾಯ್ದೆಯ ಪ್ರಕಾರ, ಸಾಗರೋತ್ತರ ಭಾರತೀಯ ಸಂಜಾತರು (ಓವರ್ ಸೀಸ್ ಸಿಟಿಜೆನ್ಸ್ ಆಫ್ ಇಂಡಿಯಾ – ಓಐಸಿ) ಭಾರತೀಯ ಮೂಲದವರಾಗಿದ್ದರೆ ಅವರು ಅದಕ್ಕೆ ಪೂರಕವಾದ ದಾಖಲೆಗಳನ್ನು ಸಲ್ಲಿಸಿ ಪೌರತ್ವ ಪಡೆಯಬಹುದು. ಅದಲ್ಲದೆ, ಅವರು ಭಾರತೀಯ ಮೂಲದವರನ್ನು ವಿವಾಹವಾಗಿದ್ದರೆ ಅಂಥವರೂ ಸಹ ಭಾರತೀಯ ಪೌರತ್ವಕ್ಕೆ ಅರ್ಹರಾಗಿರುತ್ತಾರೆ. ಅಂಥವರು ಭಾರತಕ್ಕೆ ಬಂದು ನೆಲೆಸಲು, ಇಲ್ಲಿ ಶಿಕ್ಷಣವನ್ನು ಪಡೆಯಲು ಅಥವಾ ಉದ್ಯೋಗಗಳನ್ನು ಮಾಡಲು ಅವಕಾಶವಿರುತ್ತದೆ. ಇಂಥವರಿಗಾಗಿ ಓಐಸಿ ಕಾರ್ಡ್ ಗಳನ್ನು ನೀಡಲಾಗುತ್ತದೆ. 2019ರ ತಿದ್ದುಪಡಿಯಲ್ಲಿ, ಹೀಗೆ, ಸಾಗರೋತ್ತರ ಭಾರತೀಯ ಸಂಜಾತರು, ಕೇಂದ್ರ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದಾಗ ಅಂಥವರ ಓಐಸಿ ಕಾರ್ಡ್ ಗಳನ್ನು ರದ್ದುಗೊಳಿಸುವ ಪರಮಾಧಿಕಾರವನ್ನು ಕೇಂದ್ರ ಸರ್ಕಾರಕ್ಕೆ ನೀಡಲಾಗಿದೆ.

ಸಿಎಎ ಜಾರಿಗೊಳಿಸಲು ಪೋರ್ಟಲ್ ಆರಂಭ:

ಸಿಎಎ ಜಾರಿಗೊಳಿಸಲು ಕೇಂದ್ರ ಸರ್ಕಾರ ಪೋರ್ಟಲ್ ಆರಂಭಿಸಿದೆ. ಪೌರತ್ವಕ್ಕಾಗಿ ಅರ್ಜಿ ಸಲ್ಲಿಸುವ ಮತ್ತು ಪೌರತ್ವ ನೀಡುವ ಪ್ರಕ್ರಿಯೆಯು ಆನ್‌ಲೈನ್ ಮುಖಾಂತರ ನಡೆಯಲಿದೆ. ಅರ್ಜಿದಾರರು ದಾಖಲೆಗಳಿಲ್ಲದೆ ಭಾರತವನ್ನು ಪ್ರವೇಶಿಸಿದ ವರ್ಷವನ್ನು ಅಲ್ಲಿ ನಮೂದಿಸಬೇಕು. ಮೂಲಗಳ ಪ್ರಕಾರ, ಅರ್ಜಿ ಸಲ್ಲಿಸಲು ಬಯಸುವವರಿಗೆ ಯಾವುದೇ ದಾಖಲೆಗಳನ್ನು ಕೇಳಲಾಗುವುದಿಲ್ಲ. ಬಳಿಕ ಗೃಹ ಸಚಿವಾಲಯವು ಅರ್ಜಿಯನ್ನು ಪರಿಶೀಲಿಸಿದ ನಂತರ ಅವರಿಗೆ ಪೌರತ್ವವನ್ನು ನೀಡಲಿದೆ.

2018ರಲ್ಲಿ ಸಿಎಎ ಕಾಯ್ದೆ ವಿರುದ್ಧ ವಿರುದ್ಧ ಭಾರತದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಆರು ಧರ್ಮಗಳಿಗೆ ಮಾತ್ರ ಪೌರತ್ವ ಯಾಕೆ ಮತ್ತು ಮುಸ್ಲಿಮರಿಗೆ ಪೌರತ್ವ ಯಾಕಿಲ್ಲ ಎಂದು ಪೌರತ್ವ ಕಾಯ್ದೆ ಬಗ್ಗೆ ಪ್ರಶ್ನೆಗಳು ಉದ್ಭವಿಸಿದ್ದವು. ಭಾರತದಲ್ಲಿ ಧರ್ಮದ ಆಧಾರದಲ್ಲಿ ಪೌರತ್ವವನ್ನು ನೀಡವುದು ಸಂವಿಧಾನ ಬಾಹಿರವಾಗಿದೆ. ಇದಲ್ಲದೆ ಅಸ್ಸಾಂನಲ್ಲಿ ಎನ್‌ಆರ್‌ಸಿಯಂತೆ ನಾಗರಿಕರ ನೋಂದಣಿಯನ್ನು ಮಾಡಲು ರಾಷ್ಟ್ರವ್ಯಾಪಿ  ಮುಂದಾದರೆ ನಡೆದರೆ ಏನಾಗುತ್ತದೆ ಎಂಬುದು ಜನರಲ್ಲಿ ಭಯ ನೆಲೆಯೂರಿತ್ತು. ಅಸ್ಸಾಂನಲ್ಲಿ ಆರಂಭದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರನ್ನು ನಾಗರಿಕರ ಪಟ್ಟಿಯಿಂದ ಹೊರಗಿಡಲಾಗಿತ್ತು, ವರದಿಗಳ ಪ್ರಕಾರ, ಇದರಲ್ಲಿ ಕನಿಷ್ಠ 5 ಲಕ್ಷ ಹಿಂದೂಗಳು ಅದರಲ್ಲಿ ಸೇರಿದ್ದಾರೆ. ಇದರಿಂದಾಗಿ ಸಿಎಎ ಎನ್‌ಆರ್‌ಸಿ ವಿರುದ್ಧ ದೇಶದಾದ್ಯಂತ ವ್ಯಾಪಕವಾದ ಪ್ರತಿಭಟನೆಗಳು ನಡೆದಿದ್ದವು. ಈ ಬಳಿಕ ನಡೆದ ಗಲಭೆಯಲ್ಲಿ 100ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ದೇಶದ ವಿರೋಧ ಪಕ್ಷಗಳು ಮತ್ತು ಬಿಜೆಪಿಯೇತರ ಅಧಿಕಾರದ ರಾಜ್ಯಗಳಲ್ಲಿ ತೀವ್ರ ಪ್ರತಿರೋಧ ವ್ಯಕ್ತವಾಗಿತ್ತು.

ಇದನ್ನು ಓದಿ: ಮುಸ್ಲಿಮರು, ತಮಿಳರಿಗೆ ದ್ರೋಹ ಮಾಡಿ ವಿಭಜನೆಯ ಬೀಜ ಬಿತ್ತಿದ ಬಿಜೆಪಿ : ಸಿಎಎ ಜಾರಿ ಬಗ್ಗೆ ತಮಿಳುನಾಡು ಸಿಎಂ ಆಕ್ರೋಶ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...