Homeಮುಖಪುಟಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕೇಂದ್ರ ಬಜೆಟ್ ವಿರುದ್ದ ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆಯ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಜನರ ಕೈಗೆ ಹಣ ನೀಡುವುದನ್ನು ಮರೆತುಬಿಡಿ, ಮೋದಿ ಸರ್ಕಾರ ತನ್ನ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಇಡೀ ಭಾರತದ ಸಂಪತನ್ನು ಧಾರೆಯೆರೆಯಲು ಯೋಜಿಸುತ್ತಿದೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

ಎಂಎಸ್‌ಎಂಇಗಳು, ರೈತರು ಮತ್ತು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಬೆಂಬಲ ನೀಡಿ. ಜೀವ ಉಳಿಸಲು ಆರೋಗ್ಯ ವೆಚ್ಚವನ್ನು ಹೆಚ್ಚಿಸಿ. ಗಡಿಗಳನ್ನು ಕಾಪಾಡಲು ರಕ್ಷಣಾ ವೆಚ್ಚವನ್ನು ಹೆಚ್ಚಿಸಿ ಎಂದು ಇಂದು ಬೆಳಗ್ಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು.

ರೈತರ ಆದಾಯವನ್ನು ಹೆಚ್ಚಿಸಲು ಬಜೆಟ್ ಗಮನಹರಿಸುತ್ತದೆ, ಈ ದಿಕ್ಕಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರೈತರಿಗೆ ಸುಲಭವಾಗಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಂ ನರೇಂದ್ರ ಮೋದಿ ತಿಳಿಸಿದ್ದಾರೆ.

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.
  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ
  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ
  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ
  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್
  • ಒಂದೇ ದೇಶ, ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ
    69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.
  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.
  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ
    ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್
  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್
  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ
  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ
  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.
  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ
    17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.
  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು
  • ಬಜೆಟ್‌ ಮೊದಲ ಭಾರತ ಆತ್ಮನಿರ್ಭರ ಭಾರತಕ್ಕೆ ಒತ್ತು,
  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ
    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...