Homeಮುಖಪುಟಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ: ರಾಹುಲ್ ಗಾಂಧಿ

ಕೇಂದ್ರ ಬಜೆಟ್ ವಿರುದ್ದ ರಾಹುಲ್ ಗಾಂಧಿ ಟೀಕೆ

- Advertisement -
- Advertisement -

ಇಂದು ಕೇಂದ್ರ ಬಜೆಟ್ ಮಂಡನೆಯ ದಿನ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ. ಭಾರತದ ಸಂಪತ್ತನ್ನು ಮೋದಿ ತನ್ನ ಕ್ರೋನಿ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಧಾರೆಯೆರೆಯುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು “ಜನರ ಕೈಗೆ ಹಣ ನೀಡುವುದನ್ನು ಮರೆತುಬಿಡಿ, ಮೋದಿ ಸರ್ಕಾರ ತನ್ನ ಕ್ಯಾಪಿಟಲಿಸ್ಟ್‌ ಗೆಳೆಯರಿಗೆ ಇಡೀ ಭಾರತದ ಸಂಪತನ್ನು ಧಾರೆಯೆರೆಯಲು ಯೋಜಿಸುತ್ತಿದೆ” ಎಂದು ರಾಹುಲ್ ಕಿಡಿಕಾರಿದ್ದಾರೆ.

ಎಂಎಸ್‌ಎಂಇಗಳು, ರೈತರು ಮತ್ತು ಕಾರ್ಮಿಕರಿಗೆ ಉದ್ಯೋಗ ಸೃಷ್ಟಿಸಲು ಬೆಂಬಲ ನೀಡಿ. ಜೀವ ಉಳಿಸಲು ಆರೋಗ್ಯ ವೆಚ್ಚವನ್ನು ಹೆಚ್ಚಿಸಿ. ಗಡಿಗಳನ್ನು ಕಾಪಾಡಲು ರಕ್ಷಣಾ ವೆಚ್ಚವನ್ನು ಹೆಚ್ಚಿಸಿ ಎಂದು ಇಂದು ಬೆಳಗ್ಗೆ ರಾಹುಲ್ ಗಾಂಧಿ ಒತ್ತಾಯಿಸಿದ್ದರು.

ರೈತರ ಆದಾಯವನ್ನು ಹೆಚ್ಚಿಸಲು ಬಜೆಟ್ ಗಮನಹರಿಸುತ್ತದೆ, ಈ ದಿಕ್ಕಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ರೈತರಿಗೆ ಸುಲಭವಾಗಿ ಸಾಲ ಪಡೆಯಲು ಸಾಧ್ಯವಾಗುತ್ತದೆ. ಕೃಷಿ ಮೂಲಸೌಕರ್ಯ ನಿಧಿಯ ಸಹಾಯದಿಂದ ಎಪಿಎಂಸಿ ಮಾರುಕಟ್ಟೆಗಳನ್ನು ಬಲಪಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಪಿಎಂ ನರೇಂದ್ರ ಮೋದಿ ತಿಳಿಸಿದ್ದಾರೆ.

2021-2022ನೇ ಸಾಲಿನ ಕೇಂದ್ರ ಆಯವ್ಯಯವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಸಂಸತ್ತಿನಲ್ಲಿ ಮಂಡಿಸಿದ್ದು, ಮುಖ್ಯಾಂಶಗಳು ಇಲ್ಲಿವೆ.

  • ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಕೃಷಿ ಮೂಲಭೂತ ಸೌಕರ್ಯ  ಹಾಗೂ ಅಭಿವೃದ್ದಿ ಸೆಸ್ (ಎಐಡಿಸಿ) ಅನ್ನು ವಿಧಿಸುವ ಪ್ರಸ್ತಾವ ಮುಂದಿಟ್ಟಿದ್ದಾರೆ. ಪೆಟ್ರೋಲ್ ಮೇಲೆ ಲೀಟರ್ ಗೆ 2.50 ರೂ. ಹಾಗೂ ಡೀಸೆಲ್ ಮೇಲೆ 4 ರೂ. ಕೃಷಿ ಸೆಸ್ ವಿಧಿಸಲಾಗುತ್ತದೆ. ಈ ಸೆಸ್ ಫೆಬ್ರವರಿ 2ರಿಂದಲೇ  ಅನ್ವಯವಾಗಲಿದೆ.
  • ಕೈಗೆಟುಕುವ ಮನೆ ಖರೀದಿಸಲು ಸಿಗುವ 1.5 ಲಕ್ಷ ರೂ. ಸಾಲ ಸೌಲಭ್ಯ ಇನ್ನೂ ಒಂದು ವರ್ಷ ವಿಸ್ತರಣೆ
  • ಕೋವಿಡ್ ಸೆಸ್ ವಿಧಿಸದಿರಲು ನಿರ್ಧಾರ
  • 75 ವರ್ಷ ಮೇಲ್ಪಟ್ಟವರು ತೆರಿಗೆ ಪಾವತಿಸುವ ಅಗತ್ಯವಿಲ್ಲ
  • ಎಲ್ಲಾ ವರ್ಗದ ಕಾರ್ಮಿಕರಿಗೆ ಇನ್ನುಮುಂದೆ ಕನಿಷ್ಠ ವೇತನ ಅನ್ವಯವಾಗಲಿದೆ. ಸಮರ್ಪಕ ರಕ್ಷಣೆಯೊಂದಿಗೆ ಎಲ್ಲಾ ವಿಭಾಗಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೆ ಅವಕಾಶ ನೀಡಬೇಕು: ನಿರ್ಮಲಾ ಸೀತಾರಾಮನ್
  • ಒಂದೇ ದೇಶ, ಒಂದೇ ರೇಶನ್ ಕಾ‍ರ್ಡ್ ಪರಿಕಲ್ಪನೆ ಜಾರಿಗೆ
    69 ಕೋಟಿ ಜನ ಅಂದರೆ 86% ಫಲಾನುಭವಿಗಳು ಒಂದು ರಾಷ್ಟ್ರ, ಒಂದು ಪಡಿತರ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.
  • ಗ್ರಾಮೀಣ ಮೂಲ ಅಭಿವೃದ್ಧಿ ನಿಧಿಗೆ 30,000 ಕೋಟಿಯಿಂದ 40,000 ಕೋಟಿ ರೂ. ಮತ್ತು ಐದು ಪ್ರಮುಖ ಮೀನುಗಾರಿಕೆ ಬಂದರುಗಳನ್ನು ಆರ್ಥಿಕ ಚಟುವಟಿಕೆಯ ಕೇಂದ್ರಗಳಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಹೊಂದಲಾಗಿದೆ.
  • ಕೃಷಿ ಸಾಲ ಗುರಿಯನ್ನು 16.5 ಲಕ್ಷ ಕೋ.ಗೆ ಹೆಚ್ಚಿಸಲು ವಿತ್ತ ಸಚಿವರ ಪ್ರಸ್ತಾವ
    ಕೃಷಿ ಕ್ಷೇತ್ರದ ಸಂವರ್ಧನೆಗಾಗಿ 2022 ರ ಹಣಕಾಸು ವರ್ಷದಲ್ಲಿ ಕೃಷಿ ಸಾಲದ ಗುರಿಯನ್ನು ವಿಸ್ತರಿಸಲಾಗುತ್ತದೆ. ಇದಕ್ಕಾಗಿ ಹಲವು ಕಲ್ಯಾಣ ಯೋಜನೆಗಳನ್ನು ನವೀಕರಣಗೊಳಿಸಲಾಗಿದೆ: ನಿರ್ಮಲಾ ಸೀತಾರಾಮನ್
  • 2022 ರ  ಹಣಕಾಸು ವರ್ಷದಲ್ಲಿ 2 ಪಿಎಸ್‌ಯು ಬ್ಯಾಂಕುಗಳು ಮತ್ತು ಒಂದು ಸಾಮಾನ್ಯ ವಿಮಾ ಕಂಪನಿಯನ್ನು ಖಾಸಗೀಕರಣಗೊಳಿಸಲು ಸರ್ಕಾರ ನಿರ್ಧರಿಸಿದೆ: ನಿರ್ಮಲಾ ಸೀತಾರಾಮನ್
  • 1 ಕೋಟಿ ಜನರಿಗೆ ಉಜ್ವಲಾ ಯೋಜನೆ ವಿಸ್ತರಣೆ. ಮುಂದಿನ ಮೂರು ವರ್ಷಗಳಲ್ಲಿ 100 ಜಿಲ್ಲೆಗಳು ಯೋಜನೆ ವ್ಯಾಪ್ತಿಗೆ
  • 1.15 ಲಕ್ಷ ಕೋಟಿ ರೂ. ರೈಲ್ವೆ ಇಲಾಖೆ ಮತ್ತು ವಿಮಾನಗಳ ಖಾಸಗೀಕರಣಕ್ಕೆ ವಿನಿಯೋಗ 2 ಮತ್ತು ಮೂರನೇ ಹಂತದ ನಗರಗಳಲ್ಲಿ ವಿಮಾನಗಳ ಖಾಸಗೀಕರಣ
  • ಮಾರ್ಚ್‌ 2022ರ ಹೊತ್ತಿಗೆ 8500 ಕಿ.ಮೀ. ಹೆದ್ದಾರಿ ನಿರ್ಮಾಣ, ತಮಿಳುನಾಡಿನಲ್ಲಿ 3500 ಕಿ.ಮೀ. ಕಾರಿಡಾರ್‌, ಕೇರಳದಲ್ಲಿ 65,000 ಕೋಟಿ ರೂ.ಗಳ 1100 ಕಿ.ಮೀ. ಉದ್ದದ ಹೆದ್ದಾರಿ, ಪಶ್ಚಿಮ ಬಂಗಾಳದಲ್ಲಿ 95,000 ಕೋಟಿ ರೂ. ವೆಚ್ಚದ 675 ಕಿ.ಮೀ. ಹೆದ್ದಾರಿ ಮತ್ತು ಮುಂದಿನ 3 ವರ್ಷಗಳಲ್ಲಿ ಅಸ್ಸಾಮ್‌ನಲ್ಲಿ 1300. ಕಿ.ಮೀ.
  • 61,000 ಕೋಟಿ ರೂ.ಗಳ ಹೊಸ ಆರೋಗ್ಯ ಮೂಲ ಸೌಕರ್ಯಗಳ ಯೋಜನೆ
    17,000 ಗ್ರಾಮೀಣ ಮತ್ತು 11000 ನಗರ ಆರೋಗ್ಯ ಕೇಂದ್ರಗಳ ಆರಂಭ.
  • ಮುಂದಿನ ಆರು ವರ್ಷಗಳಿಗೆ ಆರೋಗ್ಯ ಸೇವೆಗೆ 64,180 ಕೋಟಿ ರೂ.ಗಳು ಈ ಮೊತ್ತ ಮೂರು ಹಂತಗಳಲ್ಲಿ ವಿನಿಯೋಗಿಸಲಾಗುತ್ತದೆ. ರಾಷ್ಟ್ರೀಯ ಆರೋಗ್ಯ ಮಿಷನ್‌ ಆಡಿಯಲ್ಲಿ ಕಾರ್ಯಚಟುವಟಿಕೆಗಳು
  • ಬಜೆಟ್‌ ಮೊದಲ ಭಾರತ ಆತ್ಮನಿರ್ಭರ ಭಾರತಕ್ಕೆ ಒತ್ತು,
  • ಇಲ್ಲಿಯವರೆಗೆ ಕೋವಿಡ್‌ ಪರಿಹಾರಕ್ಕೆ 27.1 ಲಕ್ಷ ಕೋಟಿ (GDP ಯ 13%) ಘೋಷಣೆ
    ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ 2021-22ರ ಕೇಂದ್ರ ಆಯವ್ಯಯ ಮಂಡನೆ

ಇದನ್ನೂ ಓದಿ: ಫ್ಯಾಕ್ಟ್ ಚೆಕ್: ಕೇಜ್ರಿವಾಲ್ ಕೃಷಿ ಕಾಯ್ದೆ ಪರ ಮಾತನಾಡಿದರೆಂದು ಎಡಿಟ್ ವಿಡಿಯೋ ಹಂಚಿಕೊಂಡ ಬಿಜೆಪಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...