Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...

ಬಾರಾಮತಿ ಉಪ ಚುನಾವಣಾ ಕಣದಿಂದ ಹಿಂದೆ ಸರಿದ ಕಾಂಗ್ರೆಸ್ ; ಸುನೇತ್ರಾ ಪವಾರ್ ಗೆಲುವು ಖಚಿತ

ಬಾರಾಮತಿ ಕ್ಷೇತ್ರದ ಉಪಚುನಾವಣಾ ಕಣದಿಂದ ಕಾಂಗ್ರೆಸ್ ಪಕ್ಷ ಹಿಂದೆ ಸರಿದ ಕಾರಣ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಸುನೇತ್ರಾ ಪವಾರ್ ಅವರ ಗೆಲುವು ಖಚಿತವಾಗಿದೆ. ಬಾರಾಮತಿ ವಿಮಾನ ದುರಂತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್...

ಗಿಗ್ ಕಾರ್ಮಿಕರ ಹಿನ್ನೆಲೆ ಪರಿಶೀಲನೆ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಸರ್ಕಾರ

ದಾಖಲೆರಹಿತ ವಲಸಿಗರ ಒಳನುಸುಳುವಿಕೆ ಆರೋಪದ ರಾಜಕೀಯ ವಿವಾದದ ನಡುವೆ, ಮುಂಬೈ ಮತ್ತು ಮುಂಬೈ ಮೆಟ್ರೋಪಾಲಿಟನ್ ಪ್ರದೇಶದಾದ್ಯಂತ (ಎಂಎಂಆರ್‌) ಲಕ್ಷಾಂತರ ಗಿಗ್ ಮತ್ತು ವಿತರಣಾ ಕಾರ್ಮಿಕರಿಗೆ ಕಠಿಣ, ಕಡ್ಡಾಯ ಪರಿಶೀಲನಾ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ...

ಪಶ್ಚಿಮ ಬಂಗಾಳ| ಎಸ್‌ಐಆರ್‌ ತೀರ್ಪಿನ ನಂತರ ಒಂದೇ ಗ್ರಾಮದ 3,700 ಹೆಸರುಗಳು ಡಿಲೀಟ್!

ಪಶ್ಚಿಮ ಬಂಗಾಳದ ಮಾಲ್ಡಾದ ಹಳ್ಳಿಯೊಂದರ ಸುಮಾರು 4,000 ಮತದಾರರ ಭವಿಷ್ಯವು ತೂಗುಯ್ಯಾಲೆಯಲ್ಲಿದೆ. ಮೊದಲ ಹಂತದ ಮತದಾರರ ಪಟ್ಟಿ ಈಗಾಗಲೇ ಸ್ಥಗಿತಗೊಂಡಿದ್ದು, ಇದರಿಂದಾಗಿ ಅವರು ರಾಜ್ಯಾದ್ಯಂತ ಲಕ್ಷಾಂತರ ಜನರಂತೆ ಏಪ್ರಿಲ್ 23 ರಂದು...

ದಲಿತ ಯುವಕನ ಕಸ್ಟಡಿ ಸಾವು ಆರೋಪ : ರಾಜ್ಯ ಸರ್ಕಾರ, ಪೊಲೀಸರು, ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ನೋಟಿಸ್

ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್‌) ಕರ್ನಾಟಕ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ (ಏ.8) ರಾಜ್ಯ ಸರ್ಕಾರ, ಪೊಲೀಸರು ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ...

ಇಬ್ಬರು ಮಕ್ಕಳ ಸಾವಿನ ಬಳಿಕ ಮಣಿಪುರದಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು ಪ್ರಯೋಗಿಸಿದ ಪೊಲೀಸರು

ಏಪ್ರಿಲ್ 7 ರಂದು ಬಿಷ್ಣುಪುರ ಜಿಲ್ಲೆಯಲ್ಲಿ ಬಾಂಬ್ ದಾಳಿಯಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳು ಸಾವನ್ನಪ್ಪಿದ ನಂತರ ಕಣಿವೆ ರಾಜ್ಯದಲ್ಲಿ ವ್ಯಾಪಕ ಪ್ರತಿಭಟನೆಗಳು ಭುಗಿಲೆದ್ದ ಕಾರಣ ಬುಧವಾರ (ಏಪ್ರಿಲ್ 8) ಮಣಿಪುರದಾದ್ಯಂತ ಉದ್ವಿಗ್ನತೆ ಉಂಟಾಗಿತ್ತು....

ಮತಕ್ಕಾಗಿ ನಗದು ಪ್ರಕರಣ: ಪಾಲಕ್ಕಾಡ್‌ನಲ್ಲಿ ಎನ್‌ಡಿಎ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಮತದಾನದ ಒಂದು ದಿನಕ್ಕೆ ಮುಂಚಿತವಾಗಿ ಮತದಾರರಿಗೆ ಲಂಚ ನೀಡಿದ ಆರೋಪದ ಮೇಲೆ ಪಾಲಕ್ಕಾಡ್ ಕ್ಷೇತ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿನಿಧಿಗಳ ವಿರುದ್ಧ ಬುಧವಾರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಏಪ್ರಿಲ್ 8 ರಂದು ಬೆಳಿಗ್ಗೆ 10...