Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...