Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...