Homeಮುಖಪುಟಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

ಮೋದಿ ಸರಕಾರದ 89 ಕಾರ್ಯದರ್ಶಿಗಳಲ್ಲಿ ಕೇವಲ ಮೂವರು ಎಸ್‌ಟಿ, ಒಬ್ಬ ದಲಿತ, ಒಬಿಸಿ ಇಲ್ಲವೇ ಇಲ್ಲ

- Advertisement -
- Advertisement -

ದೇಶದಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಬುಡಕಟ್ಟು ಮತ್ತು ಹಿಂದುಳಿದ ಜಾತಿಗಳವರ ಪ್ರಾತಿನಿಧ್ಯ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಇಲ್ಲವೇ ಇಲ್ಲವೆನ್ನುವಷ್ಟು ನಗಣ್ಯವಾಗಿದ್ದು, ಅಲ್ಪಸಂಖ್ಯಾತರಾಗಿರುವ ಮೇಲ್ಜಾತಿಯ ಅಧಿಕಾರಿಗಳದ್ದೇ ಕಾರುಬಾರು ನಡೆಯುತ್ತಿರುವುದು ದೇಶದ ಸಾಮಾಜಿಕ ಅಸಮಾನತೆಗೆ ಹಿಡಿದ ಕನ್ನಡಿಯಾಗಿದೆ.

ಕೇಂದ್ರ ಸರಕಾರದ 89 ಕಾರ್ಯದರ್ಶಿಗಳಲ್ಲಿ ಪರಿಶಿಷ್ಟ ಜಾತಿಯ ಒಬ್ಬರೇ ಒಬ್ಬರು ಇದ್ದಾರೆ. ಕೇವಲ ಮೂವರು ಪರಿಶಿಷ್ಟ ಬುಡಕಟ್ಟುಗಳವರಿದ್ದು, ಇತರ ಹಿಂದುಳಿದ ಜಾತಿಗಳ ಒಬ್ಬರೇ ಒಬ್ಬರು ಇಲ್ಲ! ಇದು ಸಂಸತ್ತಿನಲ್ಲಿ ಮಂಡಿಸಲಾದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆ ಮತ್ತು ಪಿಂಚಣಿ ಇಲಾಖೆಯ ಇತ್ತೀಚಿನ ಅಂಕಿಅಂಶಗಳಿಂದ ಸ್ಪಷ್ಟವಾಗುತ್ತದೆ. ಈ ಕಾರ್ಯದರ್ಶಿಗಳಲ್ಲಿ ಬಹುತೇಕರು ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್)ಗೆ ಸೇರಿದವರು. ಎಸ್‌ಸಿ, ಎಸ್‌ಟಿ, ಒಬಿಸಿ ಪ್ರಾತಿನಿಧ್ಯವು ಕೇಂದ್ರ ಸರಕಾರಿ ಇಲಾಖೆ/ಸಚಿವಾಲಯಗಳಲ್ಲಿ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಮತ್ತು ನಿರ್ದೇಶಕರ ಮಟ್ಟದಲ್ಲಿಯೂ ತೀರಾ ನಗಣ್ಯವಾಗಿದೆ.

ಉದಾಹರಣೆಗೆ 93 ಮಂದಿ ಹೆಚ್ಚುವರಿ ಕಾರ್ಯದರ್ಶಿಗಳ ಪೈಕಿ ಕೇವಲ ಆರು ಮಂದಿ ಎಸ್‌ಸಿಯವರಿದ್ದಾರೆ ಐವರು ಎಸ್‌ಟಿಯವರು ಇಲ್ಲಿಯೂ ಒಬ್ಬರೇ ಒಬ್ಬರು ಒಬಿಸಿಯವರಿಲ್ಲ. ಒಟ್ಟು 275 ಜಂಟಿ ಕಾರ್ಯದರ್ಶಿಗಳಲ್ಲಿ 13 ( 4.73 ಶೇಕಡಾ) ಎಸ್‌ಸಿಗಳಿದ್ದರೆ, ಒಂಬತ್ತು ಮಂದಿ (3.27 ಶೇಕಡಾ) ಎಸ್‌ಟಿಯವರಿದ್ದು, ಕೇವಲ 19 ಮಂದಿ ಮಾತ್ರ ಒಬಿಸಿಯವರಿದ್ದಾರೆ.

ಎಸ್‌ಸಿ, ಎಸ್‌ಟಿ, ಒಬಿಸಿಯವರು ಸೇವೆಗೆ ಪ್ರವೇಶಿಸುವ ವಯಸ್ಸಿನ ಸರಾಸರಿ ಹೆಚ್ಚಾಗಿರುವುದರಿಂದ ಅವರ ಬ್ಯಾಚ್ ಕೇಂದ್ರ ಸರಕಾರದ ಕಾರ್ಯದರ್ಶಿ ಹುದ್ದೆಯ ಪರಿಗಣನೆಗೆ ಬರುವ ಮೊದಲೇ ಅವರು ನಿವೃತ್ತರಾಗುತ್ತಾರೆ ಎಂದು ಕೇಂದ್ರ ಮಂತ್ರಿ ಜಿತೇಂದ್ರ ಸಿಂಗ್ ಲೋಕಸಭೆಗೆ ತಿಳಿಸಿದ್ದಾರೆ.

ಸಚಿವಾಲಯವು 1993ರಿಂದ ಅಂದರೆ ಒಬಿಸಿ ಮೀಸಲಾತಿಯನ್ನು ಆರಂಭಿಸಿದಂದಿನಿಂದ ಒಬಿಸಿ ಕುರಿತ ಅಂಕಿಅಂಶಗಳನ್ನು ಇಟ್ಟುಕೊಳ್ಳುತ್ತಿದೆ. ಮಂಡಲ್ ಆಯೋಗದ ಶಿಫಾರಸಿನ ಪ್ರಕಾರ ಸರಕಾರಿ ಉದ್ಯೋಗಗಳಲ್ಲಿ ಒಬಿಸಿಯವರಿಗೆ 27.5 ಶೇಕಡಾ, ಎಸ್‌ಸಿಯವರಿಗೆ 15 ಶೇಕಡಾ ಮತ್ತು ಎಸ್‌ಟಿಯವರಿಗೆ 7.5 ಶೇಕಡಾ ಮೀಸಲಾತಿ ಕಡ್ಡಾಯವಾಗಿದೆ. ಈ ಕುರಿತು ‘ದಿ ಪ್ರಿಂಟ್’ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯನ್ನು ಅಧಿಕೃತ ಹೇಳಿಕೆಗಾಗಿ ದೂರವಾಣಿ ಮೂಲಕ ಸಂಪರ್ಕಿಸಿದಾಗ ಯಾವುದೇ ಪ್ರತಿಕ್ರಿಯೆ ಲಭ್ಯವಾಗಲಿಲ್ಲ.

ಪ್ರವೇಶದ ವಯಸ್ಸು ಹೆಚ್ಚು

ತೃಣಮೂಲ ಕಾಂಗ್ರೆಸ್‌ನ ನಾಯಕ ದಿಬ್ಯೇಂದು ಅಧಿಕಾರಿಯವರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಿಬ್ಬಂದಿ ಸಚಿವಾಲದ ರಾಜ್ಯ ಸಚಿವ ಜಿತೇಂದ್ರ ಸಿಂಗ್, ಮೀಸಲಾತಿ ವಿಭಾಗಗಳಿಗೆ ಸೇರಿದವರಲ್ಲಿ ಹೆಚ್ಚಿನವರು ಸೇವೆಯನ್ನು ಪ್ರವೇಶಿಸುವಾಗಲೇ ಹೆಚ್ಚು ವಯಸ್ಸಾಗಿರುವುದರಿಂದ ಹೆಚ್ಚುವರಿ ಕಾರ್ಯದರ್ಶಿ ಮತ್ತು ಕಾರ್ಯದರ್ಶಿ ಹುದ್ದೆಗೆ ಪರಿಗಣಿಸುವ ಮೊದಲೇ ನಿವೃತ್ತರಾಗುತ್ತಾರೆ ಎಂದು ತಿಳಿಸಿದ್ದಾರೆ. ಇದರ ಪರಿಣಾಮವಾಗಿ ಭಾರತ ಸರಕಾರದ ಉನ್ನತ ಸ್ಥಾನಗಳಲ್ಲಿ ಅವರ ಪ್ರಾತಿನಿಧ್ಯ ಹೋಲಿಕೆಯಲ್ಲಿ ಕಡಿಮೆಯಾಗಿದೆ. ಆದರೆ, ಪರಿಗಣನೆಗೆ ಬರುವ ಮೀಸಲಾತಿ ವಿಭಾಗದ ಅಧಿಕಾರಿಗಳಲ್ಲಿ ಸಾಧ್ಯವಿದ್ದಷ್ಟು ಹೆಚ್ಚಿನ ಪ್ರಾತಿನಿಧ್ಯ ನೀಡಲು ಯತ್ನಿಸಲಾಗುತ್ತಿದೆ ಎಂದು ಅವರು ಹೇಳಿದರು.

‘ಮೇಲೇರಲು ಅವಕಾಶ ನಿರಾಕರಣೆ’ 
ಆದರೆ ಪರಿಶಿಷ್ಟ ಜಾತಿಗೆ ಸೇರಿದ, ಹಿಂದೆ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಿಂದೆ ಬಿಜೆಪಿಯಲ್ಲಿದ್ದ ಸಂಸದ ಉದಿತ್ ರಾಜ್ ಅವರು ಮಾತನಾಡಿ, ಎಸ್‌ಸಿ ಮತ್ತು ಎಸ್‌ಟಿ ವಿಭಾಗಗಳಿಗೆ ಸೇರಿದ ಅಧಿಕಾರಿಗಳನ್ನು ಬಹುತೇಕ ಸಲ ಗುರಿಮಾಡಿಕೊಂಡು ಅವರು ಮೇಲಿನ ಹುದ್ದೆಗಳಿಗೆ ಬರದಂತೆ ತಡೆಯಲಾಗುತ್ತಿದೆ ಎಂದು ಆರೋಪಿಸಿದರು.

“ದಲಿತನಾದ ಮಾಜಿ ಭಾರತೀಯ ಕಂದಾಯ ಸೇವಾ ಅಧಿಕಾರಿಯಾಗಿ ನಾನು ನನ್ನ ಅನುಭವದಿಂದ ಹೇಳಬಲ್ಲೆ. ಚಿಕ್ಕಪುಟ್ಟ ಕಾರಣಗಳಿಗಾಗಿ ಎಸ್‌ಸಿ/ಎಸ್‌ಟಿ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲಾಗುತ್ತದೆ ಮತ್ತು ಮೇಲಾಧಿಕಾರಿಗಳು ಅವರ ಸೇವಾದಾಖಲೆಯನ್ನು ಬೇಕೆಂದೇ ಹಾಳುಗೆಡವುತ್ತಾರೆ” ಎಂದು ಲೋಕಸಭಾ ಚುನಾವಣೆಗೆ ಮೊದಲು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಉದಿತ್ ರಾಜ್ ಹೇಳಿದರು.

“ನಾನು ಹಿಂದೆ ಬಿಜೆಪಿಯಲ್ಲಿದ್ದಾಗ ಹಿರಿಯ ಅಧಿಕಾರಿವರ್ಗದಲ್ಲಿ ಎಸ್‌ಸಿ, ಎಸ್‌ಟಿ ಪ್ರಾತಿನಿಧ್ಯ ಕಡಿಮೆ ಇರುವುದರ ಬಗ್ಗೆ ಪ್ರತಿಭಟಿಸಿದ್ದೆ. ಆದರೆ, ಯಾರೂ ಅದಕ್ಕೆ ಯಾವುದೇ ಗಮನ ಕೊಡಲಿಲ್ಲ. ಆದರೆ, ಈ ಪ್ರಶ್ನೆ  ಎತ್ತಿದ್ದಕ್ಕಾಗಿ ನಾನು ಬೆಲೆ ತೆರಬೇಕಾಯಿತು” ಎಂದು ಅವರು ಹೇಳಿದರು.
ಇತರ ಕಾರಣಗಳು ಈ ತಾರತಮ್ಯದ ಪ್ರಾತಿನಿಧ್ಯ್ಯಕ್ಕೆ ಮುಖ್ಯ ಕಾರಣವೆಂದರೆ ಕೇಂದ್ರ ನಿಯೋಜನೆಗೆ ಅಧಿಕಾರಿಗಳನ್ನು ಆಯ್ಕೆ ಮಾಡುವಾಗ ಮೀಸಲಾತಿಯನ್ನು ಪರಿಗಣನೆಗೆ ಬರದೇ ಇರುವುದು ಎಂದು ಮಾಜಿ ಐಎಎಸ್ ಅಧಿಕಾರಿಯೊಬ್ಬರು ‘ದಿ ಪ್ರಿಂಟ್’ಗೆ ತಿಳಿಸಿದರು.

“ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ಹುದ್ದೆಗಳಿಗೆ ಅಧಿಕಾರಿಗಳ ವೃಂದದಿಂದ ಆಯ್ಕೆ ಮಾಡಲಾಗುತ್ತದೆ. ಆ ವೃಂದದಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಅಧಿಕಾರಿಗಳ ಸಂಖ್ಯೆ ಕಡಿಮೆ ಇದ್ದಲ್ಲಿ ಸಹಜವಾಗಿಯೇ ಅವರ ಪ್ರಾತಿನಿಧ್ಯ ಕಡಿಮೆಯಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲು ನಿರಾಕರಿಸಿದ ಈ ಅಧಿಕಾರಿ ಹೇಳಿದರು.

“ಕೆಲವು ಸಲ ಐಎಎಸ್ ಅಧಿಕಾರಿಗಳು ನಿಯೋಜನೆ ಮೇರೆಗೆ ಕೇಂದ್ರ ಸರಕಾರದ ಸೇವೆಗೆ ಬರಲು ಇಚ್ಛಿಸುವುದಿಲ್ಲ ಇಲ್ಲವೇ ರಾಜ್ಯ ಸರಕಾರಗಳು ಅವರನ್ನು ಸೇವೆಯಿಂದ ಬಿಡುಗಡೆ ಮಾಡುವುದಿಲ್ಲವಾದುದರಿಂದ ಕೇಂದ್ರ ಸರಕಾರದ ಉನ್ನತ ಹುದ್ದೆಗಳಲ್ಲಿ ಎಸ್‌ಸಿ/ಎಸ್‌ಟಿ/ ಒಬಿಸಿ ಪ್ರಾತಿನಿಧ್ಯ ಕಡಿಮೆ ಇದೆ ಎಂದು ಸದ್ಯ ಸೇವೆ ಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಯೊಬ್ಬರು ಹೇಳಿದರು.

ಆಧಾರ; ದಿ ಪ್ರಿಂಟ್

ಮರುನಿರೂಪನೆ: ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...